Homeಮುಖಪುಟನಾವು ಪುಟಿದೆದ್ದು ಬರುತ್ತೇವೆ, ಭಾರತ್ ಜೋಡೋ ಯಾತ್ರೆ ಬಿಜೆಪಿಯನ್ನು ಅಲ್ಲಾಡಿಸಿದೆ: ಕಾಂಗ್ರೆಸ್

ನಾವು ಪುಟಿದೆದ್ದು ಬರುತ್ತೇವೆ, ಭಾರತ್ ಜೋಡೋ ಯಾತ್ರೆ ಬಿಜೆಪಿಯನ್ನು ಅಲ್ಲಾಡಿಸಿದೆ: ಕಾಂಗ್ರೆಸ್

- Advertisement -
- Advertisement -

ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಕನ್ಯಾಕುಮಾರಿಯಿಂದ ಆರಂಭಗೊಂಡಿದೆ. ದೇಶದ ಬಹುದೊಡ್ಡ ಪಾದಾಯಾತ್ರೆಯು ಕಾಂಗ್ರೆಸ್ ಪಕ್ಷಕ್ಕೆ ಸಂಜೀಜಿವಿಯಾಗಿದ್ದು, ನಾವು ಮತ್ತೆ ಪುಟಿದೆದ್ದು ಬರುತ್ತೇವೆ. ಈ ಯಾತ್ರೆಯು ಬಿಜೆಪಿಯನ್ನು ಅಲ್ಲಾಡಿಸಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ತಿಳಿಸಿದ್ದಾರೆ.

ರಾಹುಲ್ ಗಾಂಧಿಯವರಿಗೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ರವರು ಭಾರತದ ತ್ರಿವರ್ಣ ಧ್ವಜವನ್ನು ಹಸ್ತಾಂತರಿಸುವ ಮೂಲಕ ಪಾದಯಾತ್ರೆ ಆರಂಭಗೊಂಡಿದೆ. 113 ಭಾರತ್ ಯಾತ್ರಿಗಳೊಂದಿಗೆ ಪಾದಯಾತ್ರೆ ಆರಂಭಿಸಿರುವ ರಾಹುಲ್ ಗಾಂಧಿ ಆತ್ಮಹತ್ಯೆ ಮಾಡಿಕೊಂಡ ನೀಟ್ ಆಕಾಂಕ್ಷಿ ಅನಿತಾರವರ ತಂದೆ ಮತ್ತು ಸಹೋದರನನ್ನು ಭೇಟಿ ಮಾಡಿ ಸಂತಾಪ ಸೂಚಿಸಿದ್ದಾರೆ.

ಇಂದು ಭಾರತವು ತನ್ನ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ದೇಶ ಇಂದು ದುರಂತದತ್ತ ಸಾಗುತ್ತಿದೆ. ಬೆರಳೆಣಿಕೆಯಷ್ಟು ದೊಡ್ಡ ಉದ್ಯಮಿಗಳು ಇಡೀ ದೇಶವನ್ನು ನಿಯಂತ್ರಿಸುತ್ತಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತವನ್ನು ಈಸ್ಟ್ ಇಂಡಿಯಾ ಕಂಪನಿ ನಿಯಂತ್ರಿಸುತ್ತಿತ್ತು. ಇಂದು ಇಡೀ ಭಾರತವನ್ನು 3-4 ದೊಡ್ಡ ಕಂಪನಿಗಳು ನಿಯಂತ್ರಿಸುತ್ತಿವೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

“ಭಾರತದ ತ್ರಿವರ್ಣ ಧ್ವಜ ಪ್ರತಿಯೊಂದು ರಾಜ್ಯ ಮತ್ತು ಭಾಷೆಗೆ ಸೇರಿದೆ. ಆದರೆ ಇಂದು ತ್ರಿವರ್ಣ ಧ್ವಜವು ಧರ್ಮ, ಭಾಷೆಯ ಆಧಾರದ ಮೇಲೆ ಭಾರತವನ್ನು ವಿಭಜಿಸುತ್ತಿರುವ ಬಿಜೆಪಿ ಮತ್ತು ಆ‌ರ್‌ಎಸ್‌ಎಸ್‌ನ ದಾಳಿಗೆ ಒಳಗಾಗುತ್ತಿದೆ. ನಾವು ಆಯ್ಕೆ ಮಾಡಿಕೊಂಡ ಧರ್ಮವನ್ನು ಆಚರಿಸುವಂತೆ ನಮ್ಮತ್ರಿವರ್ಣ ಧ್ವಜ ಹೇಳುತ್ತದೆ. ಆದರೆ ಇಂದು ಹಾಗೆ ಹೇಳುವ ಧ್ವಜ ದಾಳಿಗೆ ಒಳಗಾಗಿದೆ” ಎಂದಿದ್ದಾರೆ.

“ಬಿಜೆಪಿಯವರು ಸಿಬಿಐ, ಇಡಿ ಹಾಗೂ ಐಟಿ ಬಳಸಿ ಪ್ರತಿಪಕ್ಷಗಳನ್ನು ಹೆದರಿಸಬಹುದು ಎಂದು ಭಾವಿಸುತ್ತಾರೆ. ಸಮಸ್ಯೆಯೆಂದರೆ ಅವರು ಭಾರತೀಯರನ್ನು ಅರ್ಥಮಾಡಿಕೊಂಡಿಲ್ಲ. ಒಬ್ಬ ವಿಪಕ್ಷ ನಾಯಕನೂ ಬಿಜೆಪಿಗೆ ಹೆದರುವುದಿಲ್ಲ”ಎಂದು ರಾಹುಲ್ ಗಾಂಧಿ ಹೇಳಿದರು.

ಐಕ್ಯ ಭಾರತದ ಉದ್ದೇಶದೊಂದಿಗೆ ದಕ್ಷಿಣದ ಕನ್ಯಾಕುಮಾರಿಯಿಂದ ಉತ್ತರದ ಕಾಶ್ಮೀರದವರೆಗೆ ಬರೋಬ್ಬರಿ 3,570 ಕಿ.ಮೀ ಹೆಜ್ಜೆಹಾಕುವ ಭಾರತ್ ಜೋಡೋ ಯಾತ್ರೆಯನ್ನು (ಭಾರತ ಐಕ್ಯತಾ ಯಾತ್ರೆ) ಸೆಪ್ಟಂಬರ್ 07ರಿಂದ ಆರಂಭವಾಗಿದ್ದು, ಸುಮಾರು 148 ದಿನಗಳ ನಡೆಯಲಿದೆ. ಈ ಯಾತ್ರೆಗೆ ಉತ್ತಮ ಸ್ಪಂದನೆ ದೊರೆತಿದ್ದು ಕಾಂಗ್ರೆಸ್ ಮಾತ್ರವಲ್ಲದೆ ಇತರ ಪಕ್ಷಗಳ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರ ಸಹ ಬೆಂಬಲ ಘೋಷಿಸಿದ್ದಾರೆ.

4 ತಿಂಗಳುಗಳ ಕಾಲ ನಡೆಯುವ ಸುಧೀರ್ಘ ಪಾದಯಾತ್ರೆಯಲ್ಲಿ ಪ್ರತಿ ದಿನ 25 ಕಿ.ಮೀ ನಡೆಯುವ ಗುರಿ ಹೊಂದಲಾಗಿದ್ದು, 12 ರಾಜ್ಯಗಳು ಮತ್ತು 02 ಕೇಂದ್ರಾಡಳಿತ ಪ್ರದೇಶಗಳನ್ನು ಯಾತ್ರೆ ತಲುಪಲಿದೆ. ಕರ್ನಾಟಕದಲ್ಲಿ 21 ದಿನಗಳ ಕಾಲ ಯಾತ್ರೆ ನಡೆಯಲಿದ್ದು, ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಸ್ವಾಗತಿಸಿ ರಾಯಚೂರು ಜಿಲ್ಲೆ ನಂತರ ತೆಲಂಗಾಣಕ್ಕೆ ಕಳಿಸಿಕೊಡಲಾಗುತ್ತದೆ ಎನ್ನಲಾಗಿದೆ.

“ಈ ಯಾತ್ರೆ ನನಗೆ ತಪಸ್ಸು ಇದ್ದಂತೆ. ಭಾರತವನ್ನು ಒಟ್ಟುಗೂಡಿಸುವುದು ಧೀರ್ಘಾವಧಿ ಹೋರಾಟ ಎಂಬುದು ನನಗೆ ತಿಳಿದಿದೆ ಮತ್ತು ಅದಕ್ಕೆ ನಾನು ತಯಾರಾಗಿದ್ದೇನೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ಹೆಜ್ಜೆಗಳು ಜೊತೆಗೂಡಲಿ, ದೇಶ ಒಂದಾಗಲಿ” ಎಂಬ ಟ್ಯಾಗ್‌ಲೈನ್‌ನೊಂದಿಗೆ ನಡೆಯುವ ಈ ಯಾತ್ರೆಯ ಹಲವು ಕಾರ್ಯಕ್ರಮಗಳಿಗೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಾದ್ರ ಜೊತೆಗೂಡಲಿದ್ದಾರೆ ಎನ್ನಲಾಗಿದೆ.

ಯಾತ್ರೆಯು ತಿರುವಂತನಪುರಂ, ಕೊಚ್ಚಿ, ನಿಲಾಂಬುರ್, ಮೈಸೂರು, ಬಳ್ಳಾರಿ, ರಾಯಚೂರು, ವಿಕಾರಾಬಾದ್, ನಾಂದೇಡ್, ಜಾಲಗೂನ್, ಇಂದೋರ್, ಕೋಟಾ, ದುಸ್ಸಾ, ಅಲ್ವರ್, ಬುಲಂದಶಹರ್, ದೆಹಲಿ, ಅಂಬಾಲ, ಜಮ್ಮುಗಳಲ್ಲಿ ಬಹಿರಂಗ ಸಮಾವೇಶಗಳನ್ನು ನಡೆಸುವುದರ ಜೊತೆಗೆ ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಯಾತ್ರೆಯ ಸಮಾರೋಪ ನಡೆಯಲಿದೆ.

ಪಾದಯಾತ್ರೆಗೆ ವಿವಿಧ ಪಕ್ಷದ ಮುಖಂಡರ ಬೆಂಬಲ

ಹಿರಿಯ ಚಿಂತಕ, ರಾಜಕೀಯ ತಜ್ಞ, ಸ್ವರಾಜ್ಯ ಇಂಡಿಯಾ ಪಕ್ಷ ಮತ್ತು ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡರಾಗಿರುವ ಯೋಗೇಂದ್ರ ಯಾದವ್‌, ರಾಮನ್ ಮ್ಯಾಗ್ಸೆಸ್ಸೆ ಪ್ರಶಸ್ತಿ ವಿಜೇತರಾದ ಅರುಣಾ ರಾಯ್‌, ಕನ್ನಡದ ಮಹತ್ವದ ಲೇಖಕರು, ಚಿಂತಕರು ಮತ್ತು ಹೋರಾಟಗಾರರಾದ ದೇವನೂರ ಮಹದೇವ, ಭಾಷಾ ತಜ್ಞರು ಮತ್ತು ಸಾಂಸ್ಕೃತಿಕ ಚಿಂತಕರಾದ ಜಿ.ಎನ್ ದೇವಿಯವರು ಭಾರತ್ ಜೋಡೊ ಯಾತ್ರೆ ಜೊತೆ ಕೈಜೋಡಿಸಿದ್ದಾರೆ.

ಅಲ್ಲದೆ ಸಫಾಯಿ ಕರ್ಮಚಾರಿಗಳ ಪರ ಹೋರಾಟ ನಡೆಸಿದ ಬೆಜವಾಡ ವಿಲ್ಸನ್, ಗಾಂಧಿ ಶಾಂತಿ ಪ್ರತಿಷ್ಠಾನದ ಪಿ.ವಿ ರಾಜಗೋಪಾಲ್, ನಿವೃತ್ತ ಐಎಎಸ್ ಅಧಿಕಾರಿ ಶಾರದ್ ಬೆಹರ್, ಮಹಿಳಾವಾದಿ ಹೋರಾಟಗಾರ್ತಿ ಸೈದಾ ಹಮೀದ್, ಆರ್‌ಟಿಐ ಹೋರಾಟಗಾರ್ತಿ ಅಂಜಲಿ ಭಾರದ್ವಾಜ್ ಸೇರಿದಂತೆ ಹಲವರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ರಾಹುಲ್ ಜೊತೆ 100 ಪಾದಯಾತ್ರಿಗಳು ಆರಂಭದಿಂದ ಅಂತ್ಯದವರೆಗೂ ಹೆಜ್ಜೆ ಹಾಕಲಿದ್ದಾರೆ. ಅವರನ್ನು ಭಾರತ್ ಯಾತ್ರಿಗಳು ಎಂದು ಕರೆಯಲಾಗುತ್ತದೆ. ಅಲ್ಲದೆ ಈ ಯಾತ್ರೆ ಯಾವ ರಾಜ್ಯಗಳನ್ನು ತಲುಪುದಿಲ್ಲವೋ ಅಂತಹ ರಾಜ್ಯಗಳಿಂದ ತಲಾ 100 ಜನ ಅತಿಥಿ ಪಾದಯಾತ್ರಿಗಳು ಸಹ ಸೇರಿಕೊಳ್ಳಲಿದ್ದಾರೆ. ಅಲ್ಲದೆ ಪ್ರತಿ ರಾಜ್ಯದ 100 ಪಾದಯಾತ್ರಿಗಳು ಆಯಾ ರಾಜ್ಯದಲ್ಲಿ ಯಾತ್ರೆ ನಡೆಯುವ ಸಂದರ್ಭದಲ್ಲಿ ಜೊತೆಗಿರುತ್ತಾರೆ. ಒಟ್ಟಾರೆಯಾಗಿ ಸ್ಥಳೀಯ ಜನರು, ಹೋರಾಟಗಾರರ ಜೊತೆಗೆ 300 ಜನ ಪಾದಯಾತ್ರಿಗಳು ಪ್ರತಿ ದಿನ ನಡೆಯಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.

ದೇಶದಲ್ಲಿ ದ್ವೇಷ ಹರಡಲಾಗುತ್ತಿದೆ. ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಸಂವಿಧಾನವನ್ನ ಅಪಮಾನಿಸಲಾಗುತ್ತಿದೆ. ಇದನ್ನು ವಿರೋಧಿಸುತ್ತಾ ಆರ್ಥಿಕ ಅಸಮಾನತೆ ನಿವಾರಣೆಗಾಗಿ, ಸಾಮಾಜಿಕ ದ್ರುವೀಕರಣ ತಪ್ಪಿಸಲು ಭಾರತವನ್ನು ಐಕ್ಯ ದೇಶವನ್ನಾಗಿ ಕಟ್ಟಲು ಭಾರತ್ ಜೋಡೋ ಯಾತ್ರೆ ನಡೆಸಲಾಗುತ್ತಿದೆ ಎಂದು ಸಂಸದರಾದ ಜೈರಾಂ ರಮೇಶ್ ತಿಳಿಸಿದ್ದಾರೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಅಥವಾ ರಾಹುಲ್ ಗಾಂಧಿಯವರ ಪಾದಯಾತ್ರೆಯಲ್ಲ ಬದಲಿಗೆ ದೇಶದ ಒಳಿತಿಗಾಗಿ ನಡೆಯುತ್ತಿರುವ ಸರ್ವರ ಯಾತ್ರೆ ಎಂದು ಅವರು ಹೇಳಿದ್ದಾರೆ.

150 ಸಂಘಟನೆಗಳು ಬೆಂಬಲ

ಭಾರತ್ ಜೋಡೋ ಯಾತ್ರೆಗೆ ವಿವಿಧ ಪಕ್ಷಗಳು ಸೇರಿದಂತೆ 150 ಸಂಘಟನೆಗಳು, ವ್ಯಕ್ತಿಗಳು ಬೆಂಬಲ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. ಸಮಾಜದ ವಿವಿಧ ವರ್ಗದ ಜನ ದೇಶದ ಉಳಿವಿಗಾಗಿ ಜೊತೆಗೂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; ಬೆಂಗಳೂರು ವಿ.ವಿ ಕ್ಯಾಂಪಸ್‌ನೊಳಗೆ ದೇವಸ್ಥಾನ ನಿರ್ಮಾಣದ ವಿರುದ್ಧ ಭಾರಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....