Homeಮುಖಪುಟನಾವು ಪುಟಿದೆದ್ದು ಬರುತ್ತೇವೆ, ಭಾರತ್ ಜೋಡೋ ಯಾತ್ರೆ ಬಿಜೆಪಿಯನ್ನು ಅಲ್ಲಾಡಿಸಿದೆ: ಕಾಂಗ್ರೆಸ್

ನಾವು ಪುಟಿದೆದ್ದು ಬರುತ್ತೇವೆ, ಭಾರತ್ ಜೋಡೋ ಯಾತ್ರೆ ಬಿಜೆಪಿಯನ್ನು ಅಲ್ಲಾಡಿಸಿದೆ: ಕಾಂಗ್ರೆಸ್

- Advertisement -
- Advertisement -

ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಕನ್ಯಾಕುಮಾರಿಯಿಂದ ಆರಂಭಗೊಂಡಿದೆ. ದೇಶದ ಬಹುದೊಡ್ಡ ಪಾದಾಯಾತ್ರೆಯು ಕಾಂಗ್ರೆಸ್ ಪಕ್ಷಕ್ಕೆ ಸಂಜೀಜಿವಿಯಾಗಿದ್ದು, ನಾವು ಮತ್ತೆ ಪುಟಿದೆದ್ದು ಬರುತ್ತೇವೆ. ಈ ಯಾತ್ರೆಯು ಬಿಜೆಪಿಯನ್ನು ಅಲ್ಲಾಡಿಸಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ತಿಳಿಸಿದ್ದಾರೆ.

ರಾಹುಲ್ ಗಾಂಧಿಯವರಿಗೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ರವರು ಭಾರತದ ತ್ರಿವರ್ಣ ಧ್ವಜವನ್ನು ಹಸ್ತಾಂತರಿಸುವ ಮೂಲಕ ಪಾದಯಾತ್ರೆ ಆರಂಭಗೊಂಡಿದೆ. 113 ಭಾರತ್ ಯಾತ್ರಿಗಳೊಂದಿಗೆ ಪಾದಯಾತ್ರೆ ಆರಂಭಿಸಿರುವ ರಾಹುಲ್ ಗಾಂಧಿ ಆತ್ಮಹತ್ಯೆ ಮಾಡಿಕೊಂಡ ನೀಟ್ ಆಕಾಂಕ್ಷಿ ಅನಿತಾರವರ ತಂದೆ ಮತ್ತು ಸಹೋದರನನ್ನು ಭೇಟಿ ಮಾಡಿ ಸಂತಾಪ ಸೂಚಿಸಿದ್ದಾರೆ.

ಇಂದು ಭಾರತವು ತನ್ನ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ದೇಶ ಇಂದು ದುರಂತದತ್ತ ಸಾಗುತ್ತಿದೆ. ಬೆರಳೆಣಿಕೆಯಷ್ಟು ದೊಡ್ಡ ಉದ್ಯಮಿಗಳು ಇಡೀ ದೇಶವನ್ನು ನಿಯಂತ್ರಿಸುತ್ತಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತವನ್ನು ಈಸ್ಟ್ ಇಂಡಿಯಾ ಕಂಪನಿ ನಿಯಂತ್ರಿಸುತ್ತಿತ್ತು. ಇಂದು ಇಡೀ ಭಾರತವನ್ನು 3-4 ದೊಡ್ಡ ಕಂಪನಿಗಳು ನಿಯಂತ್ರಿಸುತ್ತಿವೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

“ಭಾರತದ ತ್ರಿವರ್ಣ ಧ್ವಜ ಪ್ರತಿಯೊಂದು ರಾಜ್ಯ ಮತ್ತು ಭಾಷೆಗೆ ಸೇರಿದೆ. ಆದರೆ ಇಂದು ತ್ರಿವರ್ಣ ಧ್ವಜವು ಧರ್ಮ, ಭಾಷೆಯ ಆಧಾರದ ಮೇಲೆ ಭಾರತವನ್ನು ವಿಭಜಿಸುತ್ತಿರುವ ಬಿಜೆಪಿ ಮತ್ತು ಆ‌ರ್‌ಎಸ್‌ಎಸ್‌ನ ದಾಳಿಗೆ ಒಳಗಾಗುತ್ತಿದೆ. ನಾವು ಆಯ್ಕೆ ಮಾಡಿಕೊಂಡ ಧರ್ಮವನ್ನು ಆಚರಿಸುವಂತೆ ನಮ್ಮತ್ರಿವರ್ಣ ಧ್ವಜ ಹೇಳುತ್ತದೆ. ಆದರೆ ಇಂದು ಹಾಗೆ ಹೇಳುವ ಧ್ವಜ ದಾಳಿಗೆ ಒಳಗಾಗಿದೆ” ಎಂದಿದ್ದಾರೆ.

“ಬಿಜೆಪಿಯವರು ಸಿಬಿಐ, ಇಡಿ ಹಾಗೂ ಐಟಿ ಬಳಸಿ ಪ್ರತಿಪಕ್ಷಗಳನ್ನು ಹೆದರಿಸಬಹುದು ಎಂದು ಭಾವಿಸುತ್ತಾರೆ. ಸಮಸ್ಯೆಯೆಂದರೆ ಅವರು ಭಾರತೀಯರನ್ನು ಅರ್ಥಮಾಡಿಕೊಂಡಿಲ್ಲ. ಒಬ್ಬ ವಿಪಕ್ಷ ನಾಯಕನೂ ಬಿಜೆಪಿಗೆ ಹೆದರುವುದಿಲ್ಲ”ಎಂದು ರಾಹುಲ್ ಗಾಂಧಿ ಹೇಳಿದರು.

ಐಕ್ಯ ಭಾರತದ ಉದ್ದೇಶದೊಂದಿಗೆ ದಕ್ಷಿಣದ ಕನ್ಯಾಕುಮಾರಿಯಿಂದ ಉತ್ತರದ ಕಾಶ್ಮೀರದವರೆಗೆ ಬರೋಬ್ಬರಿ 3,570 ಕಿ.ಮೀ ಹೆಜ್ಜೆಹಾಕುವ ಭಾರತ್ ಜೋಡೋ ಯಾತ್ರೆಯನ್ನು (ಭಾರತ ಐಕ್ಯತಾ ಯಾತ್ರೆ) ಸೆಪ್ಟಂಬರ್ 07ರಿಂದ ಆರಂಭವಾಗಿದ್ದು, ಸುಮಾರು 148 ದಿನಗಳ ನಡೆಯಲಿದೆ. ಈ ಯಾತ್ರೆಗೆ ಉತ್ತಮ ಸ್ಪಂದನೆ ದೊರೆತಿದ್ದು ಕಾಂಗ್ರೆಸ್ ಮಾತ್ರವಲ್ಲದೆ ಇತರ ಪಕ್ಷಗಳ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರ ಸಹ ಬೆಂಬಲ ಘೋಷಿಸಿದ್ದಾರೆ.

4 ತಿಂಗಳುಗಳ ಕಾಲ ನಡೆಯುವ ಸುಧೀರ್ಘ ಪಾದಯಾತ್ರೆಯಲ್ಲಿ ಪ್ರತಿ ದಿನ 25 ಕಿ.ಮೀ ನಡೆಯುವ ಗುರಿ ಹೊಂದಲಾಗಿದ್ದು, 12 ರಾಜ್ಯಗಳು ಮತ್ತು 02 ಕೇಂದ್ರಾಡಳಿತ ಪ್ರದೇಶಗಳನ್ನು ಯಾತ್ರೆ ತಲುಪಲಿದೆ. ಕರ್ನಾಟಕದಲ್ಲಿ 21 ದಿನಗಳ ಕಾಲ ಯಾತ್ರೆ ನಡೆಯಲಿದ್ದು, ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಸ್ವಾಗತಿಸಿ ರಾಯಚೂರು ಜಿಲ್ಲೆ ನಂತರ ತೆಲಂಗಾಣಕ್ಕೆ ಕಳಿಸಿಕೊಡಲಾಗುತ್ತದೆ ಎನ್ನಲಾಗಿದೆ.

“ಈ ಯಾತ್ರೆ ನನಗೆ ತಪಸ್ಸು ಇದ್ದಂತೆ. ಭಾರತವನ್ನು ಒಟ್ಟುಗೂಡಿಸುವುದು ಧೀರ್ಘಾವಧಿ ಹೋರಾಟ ಎಂಬುದು ನನಗೆ ತಿಳಿದಿದೆ ಮತ್ತು ಅದಕ್ಕೆ ನಾನು ತಯಾರಾಗಿದ್ದೇನೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ಹೆಜ್ಜೆಗಳು ಜೊತೆಗೂಡಲಿ, ದೇಶ ಒಂದಾಗಲಿ” ಎಂಬ ಟ್ಯಾಗ್‌ಲೈನ್‌ನೊಂದಿಗೆ ನಡೆಯುವ ಈ ಯಾತ್ರೆಯ ಹಲವು ಕಾರ್ಯಕ್ರಮಗಳಿಗೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಾದ್ರ ಜೊತೆಗೂಡಲಿದ್ದಾರೆ ಎನ್ನಲಾಗಿದೆ.

ಯಾತ್ರೆಯು ತಿರುವಂತನಪುರಂ, ಕೊಚ್ಚಿ, ನಿಲಾಂಬುರ್, ಮೈಸೂರು, ಬಳ್ಳಾರಿ, ರಾಯಚೂರು, ವಿಕಾರಾಬಾದ್, ನಾಂದೇಡ್, ಜಾಲಗೂನ್, ಇಂದೋರ್, ಕೋಟಾ, ದುಸ್ಸಾ, ಅಲ್ವರ್, ಬುಲಂದಶಹರ್, ದೆಹಲಿ, ಅಂಬಾಲ, ಜಮ್ಮುಗಳಲ್ಲಿ ಬಹಿರಂಗ ಸಮಾವೇಶಗಳನ್ನು ನಡೆಸುವುದರ ಜೊತೆಗೆ ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಯಾತ್ರೆಯ ಸಮಾರೋಪ ನಡೆಯಲಿದೆ.

ಪಾದಯಾತ್ರೆಗೆ ವಿವಿಧ ಪಕ್ಷದ ಮುಖಂಡರ ಬೆಂಬಲ

ಹಿರಿಯ ಚಿಂತಕ, ರಾಜಕೀಯ ತಜ್ಞ, ಸ್ವರಾಜ್ಯ ಇಂಡಿಯಾ ಪಕ್ಷ ಮತ್ತು ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡರಾಗಿರುವ ಯೋಗೇಂದ್ರ ಯಾದವ್‌, ರಾಮನ್ ಮ್ಯಾಗ್ಸೆಸ್ಸೆ ಪ್ರಶಸ್ತಿ ವಿಜೇತರಾದ ಅರುಣಾ ರಾಯ್‌, ಕನ್ನಡದ ಮಹತ್ವದ ಲೇಖಕರು, ಚಿಂತಕರು ಮತ್ತು ಹೋರಾಟಗಾರರಾದ ದೇವನೂರ ಮಹದೇವ, ಭಾಷಾ ತಜ್ಞರು ಮತ್ತು ಸಾಂಸ್ಕೃತಿಕ ಚಿಂತಕರಾದ ಜಿ.ಎನ್ ದೇವಿಯವರು ಭಾರತ್ ಜೋಡೊ ಯಾತ್ರೆ ಜೊತೆ ಕೈಜೋಡಿಸಿದ್ದಾರೆ.

ಅಲ್ಲದೆ ಸಫಾಯಿ ಕರ್ಮಚಾರಿಗಳ ಪರ ಹೋರಾಟ ನಡೆಸಿದ ಬೆಜವಾಡ ವಿಲ್ಸನ್, ಗಾಂಧಿ ಶಾಂತಿ ಪ್ರತಿಷ್ಠಾನದ ಪಿ.ವಿ ರಾಜಗೋಪಾಲ್, ನಿವೃತ್ತ ಐಎಎಸ್ ಅಧಿಕಾರಿ ಶಾರದ್ ಬೆಹರ್, ಮಹಿಳಾವಾದಿ ಹೋರಾಟಗಾರ್ತಿ ಸೈದಾ ಹಮೀದ್, ಆರ್‌ಟಿಐ ಹೋರಾಟಗಾರ್ತಿ ಅಂಜಲಿ ಭಾರದ್ವಾಜ್ ಸೇರಿದಂತೆ ಹಲವರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ರಾಹುಲ್ ಜೊತೆ 100 ಪಾದಯಾತ್ರಿಗಳು ಆರಂಭದಿಂದ ಅಂತ್ಯದವರೆಗೂ ಹೆಜ್ಜೆ ಹಾಕಲಿದ್ದಾರೆ. ಅವರನ್ನು ಭಾರತ್ ಯಾತ್ರಿಗಳು ಎಂದು ಕರೆಯಲಾಗುತ್ತದೆ. ಅಲ್ಲದೆ ಈ ಯಾತ್ರೆ ಯಾವ ರಾಜ್ಯಗಳನ್ನು ತಲುಪುದಿಲ್ಲವೋ ಅಂತಹ ರಾಜ್ಯಗಳಿಂದ ತಲಾ 100 ಜನ ಅತಿಥಿ ಪಾದಯಾತ್ರಿಗಳು ಸಹ ಸೇರಿಕೊಳ್ಳಲಿದ್ದಾರೆ. ಅಲ್ಲದೆ ಪ್ರತಿ ರಾಜ್ಯದ 100 ಪಾದಯಾತ್ರಿಗಳು ಆಯಾ ರಾಜ್ಯದಲ್ಲಿ ಯಾತ್ರೆ ನಡೆಯುವ ಸಂದರ್ಭದಲ್ಲಿ ಜೊತೆಗಿರುತ್ತಾರೆ. ಒಟ್ಟಾರೆಯಾಗಿ ಸ್ಥಳೀಯ ಜನರು, ಹೋರಾಟಗಾರರ ಜೊತೆಗೆ 300 ಜನ ಪಾದಯಾತ್ರಿಗಳು ಪ್ರತಿ ದಿನ ನಡೆಯಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.

ದೇಶದಲ್ಲಿ ದ್ವೇಷ ಹರಡಲಾಗುತ್ತಿದೆ. ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಸಂವಿಧಾನವನ್ನ ಅಪಮಾನಿಸಲಾಗುತ್ತಿದೆ. ಇದನ್ನು ವಿರೋಧಿಸುತ್ತಾ ಆರ್ಥಿಕ ಅಸಮಾನತೆ ನಿವಾರಣೆಗಾಗಿ, ಸಾಮಾಜಿಕ ದ್ರುವೀಕರಣ ತಪ್ಪಿಸಲು ಭಾರತವನ್ನು ಐಕ್ಯ ದೇಶವನ್ನಾಗಿ ಕಟ್ಟಲು ಭಾರತ್ ಜೋಡೋ ಯಾತ್ರೆ ನಡೆಸಲಾಗುತ್ತಿದೆ ಎಂದು ಸಂಸದರಾದ ಜೈರಾಂ ರಮೇಶ್ ತಿಳಿಸಿದ್ದಾರೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಅಥವಾ ರಾಹುಲ್ ಗಾಂಧಿಯವರ ಪಾದಯಾತ್ರೆಯಲ್ಲ ಬದಲಿಗೆ ದೇಶದ ಒಳಿತಿಗಾಗಿ ನಡೆಯುತ್ತಿರುವ ಸರ್ವರ ಯಾತ್ರೆ ಎಂದು ಅವರು ಹೇಳಿದ್ದಾರೆ.

150 ಸಂಘಟನೆಗಳು ಬೆಂಬಲ

ಭಾರತ್ ಜೋಡೋ ಯಾತ್ರೆಗೆ ವಿವಿಧ ಪಕ್ಷಗಳು ಸೇರಿದಂತೆ 150 ಸಂಘಟನೆಗಳು, ವ್ಯಕ್ತಿಗಳು ಬೆಂಬಲ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. ಸಮಾಜದ ವಿವಿಧ ವರ್ಗದ ಜನ ದೇಶದ ಉಳಿವಿಗಾಗಿ ಜೊತೆಗೂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; ಬೆಂಗಳೂರು ವಿ.ವಿ ಕ್ಯಾಂಪಸ್‌ನೊಳಗೆ ದೇವಸ್ಥಾನ ನಿರ್ಮಾಣದ ವಿರುದ್ಧ ಭಾರಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...