Homeಮುಖಪುಟನಾವು ಪುಟಿದೆದ್ದು ಬರುತ್ತೇವೆ, ಭಾರತ್ ಜೋಡೋ ಯಾತ್ರೆ ಬಿಜೆಪಿಯನ್ನು ಅಲ್ಲಾಡಿಸಿದೆ: ಕಾಂಗ್ರೆಸ್

ನಾವು ಪುಟಿದೆದ್ದು ಬರುತ್ತೇವೆ, ಭಾರತ್ ಜೋಡೋ ಯಾತ್ರೆ ಬಿಜೆಪಿಯನ್ನು ಅಲ್ಲಾಡಿಸಿದೆ: ಕಾಂಗ್ರೆಸ್

- Advertisement -
- Advertisement -

ಕಾಂಗ್ರೆಸ್ ಮುಖಂಡ, ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಕನ್ಯಾಕುಮಾರಿಯಿಂದ ಆರಂಭಗೊಂಡಿದೆ. ದೇಶದ ಬಹುದೊಡ್ಡ ಪಾದಾಯಾತ್ರೆಯು ಕಾಂಗ್ರೆಸ್ ಪಕ್ಷಕ್ಕೆ ಸಂಜೀಜಿವಿಯಾಗಿದ್ದು, ನಾವು ಮತ್ತೆ ಪುಟಿದೆದ್ದು ಬರುತ್ತೇವೆ. ಈ ಯಾತ್ರೆಯು ಬಿಜೆಪಿಯನ್ನು ಅಲ್ಲಾಡಿಸಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ತಿಳಿಸಿದ್ದಾರೆ.

ರಾಹುಲ್ ಗಾಂಧಿಯವರಿಗೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ರವರು ಭಾರತದ ತ್ರಿವರ್ಣ ಧ್ವಜವನ್ನು ಹಸ್ತಾಂತರಿಸುವ ಮೂಲಕ ಪಾದಯಾತ್ರೆ ಆರಂಭಗೊಂಡಿದೆ. 113 ಭಾರತ್ ಯಾತ್ರಿಗಳೊಂದಿಗೆ ಪಾದಯಾತ್ರೆ ಆರಂಭಿಸಿರುವ ರಾಹುಲ್ ಗಾಂಧಿ ಆತ್ಮಹತ್ಯೆ ಮಾಡಿಕೊಂಡ ನೀಟ್ ಆಕಾಂಕ್ಷಿ ಅನಿತಾರವರ ತಂದೆ ಮತ್ತು ಸಹೋದರನನ್ನು ಭೇಟಿ ಮಾಡಿ ಸಂತಾಪ ಸೂಚಿಸಿದ್ದಾರೆ.

ಇಂದು ಭಾರತವು ತನ್ನ ಕೆಟ್ಟ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ದೇಶ ಇಂದು ದುರಂತದತ್ತ ಸಾಗುತ್ತಿದೆ. ಬೆರಳೆಣಿಕೆಯಷ್ಟು ದೊಡ್ಡ ಉದ್ಯಮಿಗಳು ಇಡೀ ದೇಶವನ್ನು ನಿಯಂತ್ರಿಸುತ್ತಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಭಾರತವನ್ನು ಈಸ್ಟ್ ಇಂಡಿಯಾ ಕಂಪನಿ ನಿಯಂತ್ರಿಸುತ್ತಿತ್ತು. ಇಂದು ಇಡೀ ಭಾರತವನ್ನು 3-4 ದೊಡ್ಡ ಕಂಪನಿಗಳು ನಿಯಂತ್ರಿಸುತ್ತಿವೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

“ಭಾರತದ ತ್ರಿವರ್ಣ ಧ್ವಜ ಪ್ರತಿಯೊಂದು ರಾಜ್ಯ ಮತ್ತು ಭಾಷೆಗೆ ಸೇರಿದೆ. ಆದರೆ ಇಂದು ತ್ರಿವರ್ಣ ಧ್ವಜವು ಧರ್ಮ, ಭಾಷೆಯ ಆಧಾರದ ಮೇಲೆ ಭಾರತವನ್ನು ವಿಭಜಿಸುತ್ತಿರುವ ಬಿಜೆಪಿ ಮತ್ತು ಆ‌ರ್‌ಎಸ್‌ಎಸ್‌ನ ದಾಳಿಗೆ ಒಳಗಾಗುತ್ತಿದೆ. ನಾವು ಆಯ್ಕೆ ಮಾಡಿಕೊಂಡ ಧರ್ಮವನ್ನು ಆಚರಿಸುವಂತೆ ನಮ್ಮತ್ರಿವರ್ಣ ಧ್ವಜ ಹೇಳುತ್ತದೆ. ಆದರೆ ಇಂದು ಹಾಗೆ ಹೇಳುವ ಧ್ವಜ ದಾಳಿಗೆ ಒಳಗಾಗಿದೆ” ಎಂದಿದ್ದಾರೆ.

“ಬಿಜೆಪಿಯವರು ಸಿಬಿಐ, ಇಡಿ ಹಾಗೂ ಐಟಿ ಬಳಸಿ ಪ್ರತಿಪಕ್ಷಗಳನ್ನು ಹೆದರಿಸಬಹುದು ಎಂದು ಭಾವಿಸುತ್ತಾರೆ. ಸಮಸ್ಯೆಯೆಂದರೆ ಅವರು ಭಾರತೀಯರನ್ನು ಅರ್ಥಮಾಡಿಕೊಂಡಿಲ್ಲ. ಒಬ್ಬ ವಿಪಕ್ಷ ನಾಯಕನೂ ಬಿಜೆಪಿಗೆ ಹೆದರುವುದಿಲ್ಲ”ಎಂದು ರಾಹುಲ್ ಗಾಂಧಿ ಹೇಳಿದರು.

ಐಕ್ಯ ಭಾರತದ ಉದ್ದೇಶದೊಂದಿಗೆ ದಕ್ಷಿಣದ ಕನ್ಯಾಕುಮಾರಿಯಿಂದ ಉತ್ತರದ ಕಾಶ್ಮೀರದವರೆಗೆ ಬರೋಬ್ಬರಿ 3,570 ಕಿ.ಮೀ ಹೆಜ್ಜೆಹಾಕುವ ಭಾರತ್ ಜೋಡೋ ಯಾತ್ರೆಯನ್ನು (ಭಾರತ ಐಕ್ಯತಾ ಯಾತ್ರೆ) ಸೆಪ್ಟಂಬರ್ 07ರಿಂದ ಆರಂಭವಾಗಿದ್ದು, ಸುಮಾರು 148 ದಿನಗಳ ನಡೆಯಲಿದೆ. ಈ ಯಾತ್ರೆಗೆ ಉತ್ತಮ ಸ್ಪಂದನೆ ದೊರೆತಿದ್ದು ಕಾಂಗ್ರೆಸ್ ಮಾತ್ರವಲ್ಲದೆ ಇತರ ಪಕ್ಷಗಳ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರ ಸಹ ಬೆಂಬಲ ಘೋಷಿಸಿದ್ದಾರೆ.

4 ತಿಂಗಳುಗಳ ಕಾಲ ನಡೆಯುವ ಸುಧೀರ್ಘ ಪಾದಯಾತ್ರೆಯಲ್ಲಿ ಪ್ರತಿ ದಿನ 25 ಕಿ.ಮೀ ನಡೆಯುವ ಗುರಿ ಹೊಂದಲಾಗಿದ್ದು, 12 ರಾಜ್ಯಗಳು ಮತ್ತು 02 ಕೇಂದ್ರಾಡಳಿತ ಪ್ರದೇಶಗಳನ್ನು ಯಾತ್ರೆ ತಲುಪಲಿದೆ. ಕರ್ನಾಟಕದಲ್ಲಿ 21 ದಿನಗಳ ಕಾಲ ಯಾತ್ರೆ ನಡೆಯಲಿದ್ದು, ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಸ್ವಾಗತಿಸಿ ರಾಯಚೂರು ಜಿಲ್ಲೆ ನಂತರ ತೆಲಂಗಾಣಕ್ಕೆ ಕಳಿಸಿಕೊಡಲಾಗುತ್ತದೆ ಎನ್ನಲಾಗಿದೆ.

“ಈ ಯಾತ್ರೆ ನನಗೆ ತಪಸ್ಸು ಇದ್ದಂತೆ. ಭಾರತವನ್ನು ಒಟ್ಟುಗೂಡಿಸುವುದು ಧೀರ್ಘಾವಧಿ ಹೋರಾಟ ಎಂಬುದು ನನಗೆ ತಿಳಿದಿದೆ ಮತ್ತು ಅದಕ್ಕೆ ನಾನು ತಯಾರಾಗಿದ್ದೇನೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

“ಹೆಜ್ಜೆಗಳು ಜೊತೆಗೂಡಲಿ, ದೇಶ ಒಂದಾಗಲಿ” ಎಂಬ ಟ್ಯಾಗ್‌ಲೈನ್‌ನೊಂದಿಗೆ ನಡೆಯುವ ಈ ಯಾತ್ರೆಯ ಹಲವು ಕಾರ್ಯಕ್ರಮಗಳಿಗೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ವಾದ್ರ ಜೊತೆಗೂಡಲಿದ್ದಾರೆ ಎನ್ನಲಾಗಿದೆ.

ಯಾತ್ರೆಯು ತಿರುವಂತನಪುರಂ, ಕೊಚ್ಚಿ, ನಿಲಾಂಬುರ್, ಮೈಸೂರು, ಬಳ್ಳಾರಿ, ರಾಯಚೂರು, ವಿಕಾರಾಬಾದ್, ನಾಂದೇಡ್, ಜಾಲಗೂನ್, ಇಂದೋರ್, ಕೋಟಾ, ದುಸ್ಸಾ, ಅಲ್ವರ್, ಬುಲಂದಶಹರ್, ದೆಹಲಿ, ಅಂಬಾಲ, ಜಮ್ಮುಗಳಲ್ಲಿ ಬಹಿರಂಗ ಸಮಾವೇಶಗಳನ್ನು ನಡೆಸುವುದರ ಜೊತೆಗೆ ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಯಾತ್ರೆಯ ಸಮಾರೋಪ ನಡೆಯಲಿದೆ.

ಪಾದಯಾತ್ರೆಗೆ ವಿವಿಧ ಪಕ್ಷದ ಮುಖಂಡರ ಬೆಂಬಲ

ಹಿರಿಯ ಚಿಂತಕ, ರಾಜಕೀಯ ತಜ್ಞ, ಸ್ವರಾಜ್ಯ ಇಂಡಿಯಾ ಪಕ್ಷ ಮತ್ತು ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡರಾಗಿರುವ ಯೋಗೇಂದ್ರ ಯಾದವ್‌, ರಾಮನ್ ಮ್ಯಾಗ್ಸೆಸ್ಸೆ ಪ್ರಶಸ್ತಿ ವಿಜೇತರಾದ ಅರುಣಾ ರಾಯ್‌, ಕನ್ನಡದ ಮಹತ್ವದ ಲೇಖಕರು, ಚಿಂತಕರು ಮತ್ತು ಹೋರಾಟಗಾರರಾದ ದೇವನೂರ ಮಹದೇವ, ಭಾಷಾ ತಜ್ಞರು ಮತ್ತು ಸಾಂಸ್ಕೃತಿಕ ಚಿಂತಕರಾದ ಜಿ.ಎನ್ ದೇವಿಯವರು ಭಾರತ್ ಜೋಡೊ ಯಾತ್ರೆ ಜೊತೆ ಕೈಜೋಡಿಸಿದ್ದಾರೆ.

ಅಲ್ಲದೆ ಸಫಾಯಿ ಕರ್ಮಚಾರಿಗಳ ಪರ ಹೋರಾಟ ನಡೆಸಿದ ಬೆಜವಾಡ ವಿಲ್ಸನ್, ಗಾಂಧಿ ಶಾಂತಿ ಪ್ರತಿಷ್ಠಾನದ ಪಿ.ವಿ ರಾಜಗೋಪಾಲ್, ನಿವೃತ್ತ ಐಎಎಸ್ ಅಧಿಕಾರಿ ಶಾರದ್ ಬೆಹರ್, ಮಹಿಳಾವಾದಿ ಹೋರಾಟಗಾರ್ತಿ ಸೈದಾ ಹಮೀದ್, ಆರ್‌ಟಿಐ ಹೋರಾಟಗಾರ್ತಿ ಅಂಜಲಿ ಭಾರದ್ವಾಜ್ ಸೇರಿದಂತೆ ಹಲವರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ರಾಹುಲ್ ಜೊತೆ 100 ಪಾದಯಾತ್ರಿಗಳು ಆರಂಭದಿಂದ ಅಂತ್ಯದವರೆಗೂ ಹೆಜ್ಜೆ ಹಾಕಲಿದ್ದಾರೆ. ಅವರನ್ನು ಭಾರತ್ ಯಾತ್ರಿಗಳು ಎಂದು ಕರೆಯಲಾಗುತ್ತದೆ. ಅಲ್ಲದೆ ಈ ಯಾತ್ರೆ ಯಾವ ರಾಜ್ಯಗಳನ್ನು ತಲುಪುದಿಲ್ಲವೋ ಅಂತಹ ರಾಜ್ಯಗಳಿಂದ ತಲಾ 100 ಜನ ಅತಿಥಿ ಪಾದಯಾತ್ರಿಗಳು ಸಹ ಸೇರಿಕೊಳ್ಳಲಿದ್ದಾರೆ. ಅಲ್ಲದೆ ಪ್ರತಿ ರಾಜ್ಯದ 100 ಪಾದಯಾತ್ರಿಗಳು ಆಯಾ ರಾಜ್ಯದಲ್ಲಿ ಯಾತ್ರೆ ನಡೆಯುವ ಸಂದರ್ಭದಲ್ಲಿ ಜೊತೆಗಿರುತ್ತಾರೆ. ಒಟ್ಟಾರೆಯಾಗಿ ಸ್ಥಳೀಯ ಜನರು, ಹೋರಾಟಗಾರರ ಜೊತೆಗೆ 300 ಜನ ಪಾದಯಾತ್ರಿಗಳು ಪ್ರತಿ ದಿನ ನಡೆಯಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.

ದೇಶದಲ್ಲಿ ದ್ವೇಷ ಹರಡಲಾಗುತ್ತಿದೆ. ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಸಂವಿಧಾನವನ್ನ ಅಪಮಾನಿಸಲಾಗುತ್ತಿದೆ. ಇದನ್ನು ವಿರೋಧಿಸುತ್ತಾ ಆರ್ಥಿಕ ಅಸಮಾನತೆ ನಿವಾರಣೆಗಾಗಿ, ಸಾಮಾಜಿಕ ದ್ರುವೀಕರಣ ತಪ್ಪಿಸಲು ಭಾರತವನ್ನು ಐಕ್ಯ ದೇಶವನ್ನಾಗಿ ಕಟ್ಟಲು ಭಾರತ್ ಜೋಡೋ ಯಾತ್ರೆ ನಡೆಸಲಾಗುತ್ತಿದೆ ಎಂದು ಸಂಸದರಾದ ಜೈರಾಂ ರಮೇಶ್ ತಿಳಿಸಿದ್ದಾರೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಅಥವಾ ರಾಹುಲ್ ಗಾಂಧಿಯವರ ಪಾದಯಾತ್ರೆಯಲ್ಲ ಬದಲಿಗೆ ದೇಶದ ಒಳಿತಿಗಾಗಿ ನಡೆಯುತ್ತಿರುವ ಸರ್ವರ ಯಾತ್ರೆ ಎಂದು ಅವರು ಹೇಳಿದ್ದಾರೆ.

150 ಸಂಘಟನೆಗಳು ಬೆಂಬಲ

ಭಾರತ್ ಜೋಡೋ ಯಾತ್ರೆಗೆ ವಿವಿಧ ಪಕ್ಷಗಳು ಸೇರಿದಂತೆ 150 ಸಂಘಟನೆಗಳು, ವ್ಯಕ್ತಿಗಳು ಬೆಂಬಲ ನೀಡಿದ್ದಾರೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. ಸಮಾಜದ ವಿವಿಧ ವರ್ಗದ ಜನ ದೇಶದ ಉಳಿವಿಗಾಗಿ ಜೊತೆಗೂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ; ಬೆಂಗಳೂರು ವಿ.ವಿ ಕ್ಯಾಂಪಸ್‌ನೊಳಗೆ ದೇವಸ್ಥಾನ ನಿರ್ಮಾಣದ ವಿರುದ್ಧ ಭಾರಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...