Homeಕರ್ನಾಟಕಮತ್ತೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುತ್ತೇವೆ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿ ಡಿಕೆಶಿ ಪ್ರತಿಜ್ಞೆ

ಮತ್ತೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುತ್ತೇವೆ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿ ಡಿಕೆಶಿ ಪ್ರತಿಜ್ಞೆ

- Advertisement -
- Advertisement -

ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಸವಾಲಾಗಿ ಸ್ವೀಕರಿಸುತ್ತೇನೆ. ಮತ್ತೆ ಕಾಂಗ್ರೆಸ್ ಶಾಸಕರು ವಿಧಾನಸೌಧದ ಮೂರನೇ ಮಹಡಿ ಹತ್ತುವಂತೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಜ್ಞೆ ಮಾಡಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಇಂದು ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷದ ಮುಖಂಡರೆಲ್ಲಾ ಸೇರಿ ತೆಗೆದುಕೊಂಡಿರುವ ನಿರ್ಧಾರ ನನಗೆ ಸಂತಸ ತಂದಿದೆ. ಈ ಸ್ಥಾನಕ್ಕೆ ಆಕಾಂಕ್ಷಿಯಲ್ಲದಿದ್ದರೂ ಸಹ ಇದು ನನ್ನ ಕರ್ತವ್ಯವೆಂದು ಭಾವಿಸಿ ನೀಡಿರುವ ಜವಾಬ್ದಾರಿಯನ್ನು ಒಂದು ಸವಾಲಾಗಿ ಸ್ವೀಕರಿಸುತ್ತೇನೆ ಎಂದಿದ್ದಾರೆ.

ವಿದ್ಯಾರ್ಥಿ ದೆಸೆಯಿಂದಲೂ ಹೋರಾಟಗಳಲ್ಲಿ ಭಾಗವಹಿಸುತ್ತಾ ಇಂದಿರಾಗಾಂಧಿಯವರಿಂದ ಪ್ರಭಾವಿತನಾಗಿ ಸಿಕ್ಕ ಅವಕಾಶಗಳನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡು ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಹಲವಾರು ರಾಜಕೀಯ ಧುರೀಣರೊಂದಿಗೆ ಕೆಲಸ ಮಾಡಿದ್ದೇನೆ. ಈ ಸಂದರ್ಭದಲ್ಲಿ ಸಾಕಷ್ಟು ತೊಂದರೆಗಳನ್ನು ಮೆಟ್ಟಿ ಇಂದು ಈ ಮಟ್ಟಕ್ಕೆ ಬಂದಿದ್ದೇನೆ. ಈಗಲೂ ತೊಂದರೆಯಿದೆ. ಆದರೆ ಆದಾವುದಕ್ಕೂ ಬಗ್ಗದೇ ಪಕ್ಷದ ಸಿದ್ಧಾಂತ ಮತ್ತು ಆದರ್ಶ ಹಾಗೂ ಏಳಿಗೆಗಾಗಿ ಶ್ರಮಿಸುತ್ತೇನೆ. ಎಲ್ಲರೂ ಒಟ್ಟಿಗೆ ಶ್ರಮಿಸೋಣ ಎಂದು ಪಕ್ಷದ ನಿಷ್ಠಾವಂತರಿಗೆ ಕರೆ ನೀಡಿದರು.

16 ಸಾವಿರ ಜಾಗಗಳಲ್ಲಿ ಲಕ್ಷಾಂತರ ಜನರು ಪದಗ್ರಹಣ ಕಾರ್ಯಕ್ರಮ ನೋಡಿದ್ದಾರೆ. ಇದು ಒಬ್ಬ ವ್ಯಕ್ತಿಯ ಕಾರ್ಯಕ್ರಮವಲ್ಲ. ಇದು ಪಕ್ಷದ ಕಾರ್ಯಕ್ರಮ. ಇಡೀ ವಿಶ್ವವೇ ಕಾರ್ಯಕ್ರಮ ನೋಡಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ನಾನು ದೊಡ್ಡ ವಿದ್ಯಾವಂತ ಅಲ್ಲ, ನನಗೆ ಇರುವ ತಿಳಿವಳಿಕೆಯಲ್ಲಿ ಕಾರ್ಯಕ್ರಮ ಮಾಡಿದ್ದೇವೆ. ನಮ್ಮ ಕಾರ್ಯಕರ್ತರು ಆಶೀರ್ವದಿಸಿದ್ದಾರೆ. ಇದು ನನಗೆ ದೊಡ್ಡ ಜವಾಬ್ದಾರಿ. ಅವರ ನಂಬಿಕೆ ವಿಶ್ವಾಸ ಉಳಿಸಿಕೊಳ್ಳುತ್ತೇನೆ. ಜನರ ಭಾವನೆ ಅರಿತು ಕೆಲಸ ಮಾಡುತ್ತೇವೆ. ವಿಧಾನಸೌಧ ಚಪ್ಪಡಿ ಕಲ್ಲಿನಂತೆ ಜನರ ಸೇವೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮಾತನಾಡಿ, “ಧರ್ಮಗಳನ್ನು ಎತ್ತಿಕಟ್ಟುವ, ರೋಗದಲ್ಲೂ ಧರ್ಮದ ವಿಷ ಬೀಜ ಬಿತ್ತುವ, ದೇಶದ ಸಂವಿಧಾನದ ಬಗ್ಗೆ ಬದ್ಧತೆ ಇಲ್ಲದ ನರೇಂದ್ರ ಮೋದಿ ಪ್ರಧಾನಿಯಾಗಿ ಮುಂದುವರೆಯಲು ನಾಲಾಯಕ್” ಎಂದಿದ್ದಾರೆ.

ಬಿಜೆಪಿ ಪಕ್ಷವನ್ನು ಆರ್‌ಎಸ್ಎಸ್ ನಿಯಂತ್ರಿಸುವವರೆಗೆ ದೇಶದಲ್ಲಿ ಬಡವರು, ದಲಿತರು ಮತ್ತು ಅನ್ಯಕೋಮಿನವರ ಬದುಕು ಕಷ್ಟವಾಗಲಿದೆ. ಧರ್ಮವನ್ನು ಎತ್ತಿಕಟ್ಟಿ ಅದರ ಮೂಲಕ ರಾಜಕಾರಣ ಮಾಡುವುದೇ ಇವರು ಗುರಿ ಎಂದು ಕಿಡಿಕಾರಿದ್ದಾರೆ.

ಪ್ರಧಾನಿಯಾಗಿ ನರೇಂದ್ರ ಮೋದಿ ಆರ್‌ಎಸ್ಎಸ್ ಕಾರ್ಯಕ್ರಮಗಳನ್ನಷ್ಟೇ ಜಾರಿ ಮಾಡುತ್ತಿದ್ದಾರೆ. ಕೊರೊನಾ ಹರಡದಂತೆ ತಡೆಯುವಲ್ಲಿ ಮೋದಿ ವಿಫಲರಾಗಿದ್ದಾರೆ. ಈಗ ಮಾಡಬೇಕಾದ ಲಾಕ್‌ಡೌನ್‌ ಆನ್ನು ಮುಂದಾಲೋಚನೆಯಿಲ್ಲದೇ ಆಗಲೇ ಮಾಡಿ ಬಡಜನರು ಕಷ್ಟ ಅನುಭವಿಸುವಂತೆ ಮಾಡಿದರು. ಅವರಿಗೆ ಆಡಳಿತ ಜ್ಞಾನವಿಲ್ಲ ಎಂದಿದ್ದಾರೆ.

ಮೋದಿಯವರು ಇಂಧನ ಬೆಲೆ, ಗ್ಯಾಸ್ ಬೆಲೆಯನ್ನು ಹೆಚ್ಚಿಸುವ ಮೂಲಕ ಜನರ ಸಂಕಷ್ಟದ ಮೇಲೆ ಮತ್ತೆ ಬರೆ ಎಳೆದರು. ವರ್ಷವಿಡೀ ವಿದೇಶ ಪ್ರವಾಸ ಮಾಡಿ ನೆರೆ ರಾಷ್ಟ್ರಗಳ ಜೊತೆಗೆ ವೈಷಮ್ಯ ಹೆಚ್ಚಿಸಿಕೊಂಡರು. ಕೇವಲ ಸುಳ್ಳು ಭರವಸೆಗಳಲ್ಲೇ ಕಾಲ ಕಳೆದರು. ಅಸಲಿಗೆ ಇಷ್ಟೊಂದು ಸುಳ್ಳು ಹೇಳುವ ಪ್ರಧಾನಿಯನ್ನು ಭಾರತ ದೇಶ ಈವರೆಗೆ ಕಂಡಿಲ್ಲ ಎಂದು ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದಾರೆ.

“ಯಡಿಯೂರಪ್ಪ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ಅವರಿಗೆ ಜನ ಆಶೀರ್ವಾದ ಮಾಡಿರಲಿಲ್ಲ. ಹೀಗಾಗಿ ಆಪರೇಷನ್ ಕಮಲದ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಮತ್ತೆ ಕಾಂಗ್ರೆಸ್ ಪಕ್ಷವನ್ನು ನಾವೆಲ್ಲರೂ ಒಟ್ಟಾಗಿ ಅಧಿಕಾರಕ್ಕೆ ತರುತ್ತೇವೆ ಎಂದರು.


ಇದನ್ನೂ ಓದಿ:ಕಾಂಗ್ರೆಸ್ ಪಕ್ಷವನ್ನು ಮೌಲ್ಯಾಧಾರಿತವಾಗಿ ಮರುಕಟ್ಟಲು ಡಿಕೆಶಿ ಮುಂದಾಗಲಿ: ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು.ಅವರಿಗೆ 69 ವರ್ಷಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ದೀರ್ಘ ಸಮಯದಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಗಳು ಹೇಳಿವೆ. ಆರೋಗ್ಯದಲ್ಲಿ ಹಠಾತ್...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...