Homeಕರ್ನಾಟಕಮತ್ತೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುತ್ತೇವೆ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿ ಡಿಕೆಶಿ ಪ್ರತಿಜ್ಞೆ

ಮತ್ತೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುತ್ತೇವೆ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿ ಡಿಕೆಶಿ ಪ್ರತಿಜ್ಞೆ

- Advertisement -
- Advertisement -

ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಸವಾಲಾಗಿ ಸ್ವೀಕರಿಸುತ್ತೇನೆ. ಮತ್ತೆ ಕಾಂಗ್ರೆಸ್ ಶಾಸಕರು ವಿಧಾನಸೌಧದ ಮೂರನೇ ಮಹಡಿ ಹತ್ತುವಂತೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಜ್ಞೆ ಮಾಡಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಇಂದು ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷದ ಮುಖಂಡರೆಲ್ಲಾ ಸೇರಿ ತೆಗೆದುಕೊಂಡಿರುವ ನಿರ್ಧಾರ ನನಗೆ ಸಂತಸ ತಂದಿದೆ. ಈ ಸ್ಥಾನಕ್ಕೆ ಆಕಾಂಕ್ಷಿಯಲ್ಲದಿದ್ದರೂ ಸಹ ಇದು ನನ್ನ ಕರ್ತವ್ಯವೆಂದು ಭಾವಿಸಿ ನೀಡಿರುವ ಜವಾಬ್ದಾರಿಯನ್ನು ಒಂದು ಸವಾಲಾಗಿ ಸ್ವೀಕರಿಸುತ್ತೇನೆ ಎಂದಿದ್ದಾರೆ.

ವಿದ್ಯಾರ್ಥಿ ದೆಸೆಯಿಂದಲೂ ಹೋರಾಟಗಳಲ್ಲಿ ಭಾಗವಹಿಸುತ್ತಾ ಇಂದಿರಾಗಾಂಧಿಯವರಿಂದ ಪ್ರಭಾವಿತನಾಗಿ ಸಿಕ್ಕ ಅವಕಾಶಗಳನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡು ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಹಲವಾರು ರಾಜಕೀಯ ಧುರೀಣರೊಂದಿಗೆ ಕೆಲಸ ಮಾಡಿದ್ದೇನೆ. ಈ ಸಂದರ್ಭದಲ್ಲಿ ಸಾಕಷ್ಟು ತೊಂದರೆಗಳನ್ನು ಮೆಟ್ಟಿ ಇಂದು ಈ ಮಟ್ಟಕ್ಕೆ ಬಂದಿದ್ದೇನೆ. ಈಗಲೂ ತೊಂದರೆಯಿದೆ. ಆದರೆ ಆದಾವುದಕ್ಕೂ ಬಗ್ಗದೇ ಪಕ್ಷದ ಸಿದ್ಧಾಂತ ಮತ್ತು ಆದರ್ಶ ಹಾಗೂ ಏಳಿಗೆಗಾಗಿ ಶ್ರಮಿಸುತ್ತೇನೆ. ಎಲ್ಲರೂ ಒಟ್ಟಿಗೆ ಶ್ರಮಿಸೋಣ ಎಂದು ಪಕ್ಷದ ನಿಷ್ಠಾವಂತರಿಗೆ ಕರೆ ನೀಡಿದರು.

16 ಸಾವಿರ ಜಾಗಗಳಲ್ಲಿ ಲಕ್ಷಾಂತರ ಜನರು ಪದಗ್ರಹಣ ಕಾರ್ಯಕ್ರಮ ನೋಡಿದ್ದಾರೆ. ಇದು ಒಬ್ಬ ವ್ಯಕ್ತಿಯ ಕಾರ್ಯಕ್ರಮವಲ್ಲ. ಇದು ಪಕ್ಷದ ಕಾರ್ಯಕ್ರಮ. ಇಡೀ ವಿಶ್ವವೇ ಕಾರ್ಯಕ್ರಮ ನೋಡಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ನಾನು ದೊಡ್ಡ ವಿದ್ಯಾವಂತ ಅಲ್ಲ, ನನಗೆ ಇರುವ ತಿಳಿವಳಿಕೆಯಲ್ಲಿ ಕಾರ್ಯಕ್ರಮ ಮಾಡಿದ್ದೇವೆ. ನಮ್ಮ ಕಾರ್ಯಕರ್ತರು ಆಶೀರ್ವದಿಸಿದ್ದಾರೆ. ಇದು ನನಗೆ ದೊಡ್ಡ ಜವಾಬ್ದಾರಿ. ಅವರ ನಂಬಿಕೆ ವಿಶ್ವಾಸ ಉಳಿಸಿಕೊಳ್ಳುತ್ತೇನೆ. ಜನರ ಭಾವನೆ ಅರಿತು ಕೆಲಸ ಮಾಡುತ್ತೇವೆ. ವಿಧಾನಸೌಧ ಚಪ್ಪಡಿ ಕಲ್ಲಿನಂತೆ ಜನರ ಸೇವೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮಾತನಾಡಿ, “ಧರ್ಮಗಳನ್ನು ಎತ್ತಿಕಟ್ಟುವ, ರೋಗದಲ್ಲೂ ಧರ್ಮದ ವಿಷ ಬೀಜ ಬಿತ್ತುವ, ದೇಶದ ಸಂವಿಧಾನದ ಬಗ್ಗೆ ಬದ್ಧತೆ ಇಲ್ಲದ ನರೇಂದ್ರ ಮೋದಿ ಪ್ರಧಾನಿಯಾಗಿ ಮುಂದುವರೆಯಲು ನಾಲಾಯಕ್” ಎಂದಿದ್ದಾರೆ.

ಬಿಜೆಪಿ ಪಕ್ಷವನ್ನು ಆರ್‌ಎಸ್ಎಸ್ ನಿಯಂತ್ರಿಸುವವರೆಗೆ ದೇಶದಲ್ಲಿ ಬಡವರು, ದಲಿತರು ಮತ್ತು ಅನ್ಯಕೋಮಿನವರ ಬದುಕು ಕಷ್ಟವಾಗಲಿದೆ. ಧರ್ಮವನ್ನು ಎತ್ತಿಕಟ್ಟಿ ಅದರ ಮೂಲಕ ರಾಜಕಾರಣ ಮಾಡುವುದೇ ಇವರು ಗುರಿ ಎಂದು ಕಿಡಿಕಾರಿದ್ದಾರೆ.

ಪ್ರಧಾನಿಯಾಗಿ ನರೇಂದ್ರ ಮೋದಿ ಆರ್‌ಎಸ್ಎಸ್ ಕಾರ್ಯಕ್ರಮಗಳನ್ನಷ್ಟೇ ಜಾರಿ ಮಾಡುತ್ತಿದ್ದಾರೆ. ಕೊರೊನಾ ಹರಡದಂತೆ ತಡೆಯುವಲ್ಲಿ ಮೋದಿ ವಿಫಲರಾಗಿದ್ದಾರೆ. ಈಗ ಮಾಡಬೇಕಾದ ಲಾಕ್‌ಡೌನ್‌ ಆನ್ನು ಮುಂದಾಲೋಚನೆಯಿಲ್ಲದೇ ಆಗಲೇ ಮಾಡಿ ಬಡಜನರು ಕಷ್ಟ ಅನುಭವಿಸುವಂತೆ ಮಾಡಿದರು. ಅವರಿಗೆ ಆಡಳಿತ ಜ್ಞಾನವಿಲ್ಲ ಎಂದಿದ್ದಾರೆ.

ಮೋದಿಯವರು ಇಂಧನ ಬೆಲೆ, ಗ್ಯಾಸ್ ಬೆಲೆಯನ್ನು ಹೆಚ್ಚಿಸುವ ಮೂಲಕ ಜನರ ಸಂಕಷ್ಟದ ಮೇಲೆ ಮತ್ತೆ ಬರೆ ಎಳೆದರು. ವರ್ಷವಿಡೀ ವಿದೇಶ ಪ್ರವಾಸ ಮಾಡಿ ನೆರೆ ರಾಷ್ಟ್ರಗಳ ಜೊತೆಗೆ ವೈಷಮ್ಯ ಹೆಚ್ಚಿಸಿಕೊಂಡರು. ಕೇವಲ ಸುಳ್ಳು ಭರವಸೆಗಳಲ್ಲೇ ಕಾಲ ಕಳೆದರು. ಅಸಲಿಗೆ ಇಷ್ಟೊಂದು ಸುಳ್ಳು ಹೇಳುವ ಪ್ರಧಾನಿಯನ್ನು ಭಾರತ ದೇಶ ಈವರೆಗೆ ಕಂಡಿಲ್ಲ ಎಂದು ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದಾರೆ.

“ಯಡಿಯೂರಪ್ಪ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ಅವರಿಗೆ ಜನ ಆಶೀರ್ವಾದ ಮಾಡಿರಲಿಲ್ಲ. ಹೀಗಾಗಿ ಆಪರೇಷನ್ ಕಮಲದ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಮತ್ತೆ ಕಾಂಗ್ರೆಸ್ ಪಕ್ಷವನ್ನು ನಾವೆಲ್ಲರೂ ಒಟ್ಟಾಗಿ ಅಧಿಕಾರಕ್ಕೆ ತರುತ್ತೇವೆ ಎಂದರು.


ಇದನ್ನೂ ಓದಿ:ಕಾಂಗ್ರೆಸ್ ಪಕ್ಷವನ್ನು ಮೌಲ್ಯಾಧಾರಿತವಾಗಿ ಮರುಕಟ್ಟಲು ಡಿಕೆಶಿ ಮುಂದಾಗಲಿ: ಎಚ್.ಎಸ್ ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...