Homeಮುಖಪುಟಜಮ್ಮು ಕಾಶ್ಮೀರದ 370ನೇ ವಿಧಿಗಾಗಿ ಪ್ರಜಾಸತ್ತಾತ್ಮಕ ಹೋರಾಟ ಮುಂದುವರೆಸುತ್ತೇವೆ: ಒಮರ್ ಅಬ್ದುಲ್ಲಾ ಪ್ರತಿಜ್ಞೆ

ಜಮ್ಮು ಕಾಶ್ಮೀರದ 370ನೇ ವಿಧಿಗಾಗಿ ಪ್ರಜಾಸತ್ತಾತ್ಮಕ ಹೋರಾಟ ಮುಂದುವರೆಸುತ್ತೇವೆ: ಒಮರ್ ಅಬ್ದುಲ್ಲಾ ಪ್ರತಿಜ್ಞೆ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ 370 ನೇ ವಿಧಿಯ ಮರುಸ್ಥಾಪನೆಗಾಗಿ ‘ಪ್ರಜಾಸತ್ತಾತ್ಮಕ, ಸಾಂವಿಧಾನಿಕ ಮತ್ತು ರಾಜಕೀಯವಾಗಿ’ ತಮ್ಮ ಪಕ್ಷ ಹೋರಾಟ ಮುಂದುವರೆಸುತ್ತದೆ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು ಹೇಳಿದ್ದು, 370ನೇ ವಿಧಿಯು ತಮ್ಮ ಹಕ್ಕು ಎಂದು ಅವರು ಪ್ರತಿಪಾದಿಸಿದ್ದಾರೆ.

“ಬಿಟ್ಟುಕೊಡುವವರ ಜೊತೆ ನಾನಿಲ್ಲ. ನಮಗೆ ಸುಪ್ರೀಂ ಕೋರ್ಟ್‌ನಲ್ಲಿ ನಂಬಿಕೆ ಇದೆ. ಆದರೆ ನಮ್ಮ ಏಕೈಕ ವಿನಂತಿಯೆಂದರೆ ಅದು ನಮ್ಮ ಮಾತನ್ನಾದರೂ ಕೇಳಬೇಕು” ಒಮರ್‌ ಅಬ್ದುಲ್ಲಾ ಹೇಳಿದ್ದಾರೆ. ಒಮರ್‌ ಅಬ್ದುಲ್ಲಾ ಅವರು ಪಕ್ಷವೂ 370ನೇ ವಿಧಿಯನ್ನು ರದ್ದುಗೊಳಿಸಿರುವ ಒಕ್ಕೂಟ ಸರ್ಕಾರದ 2019 ಆಗಸ್ಟ್ 5ರ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಪ್ರಕರಣವು ತಮ್ಮ ಪಕ್ಷಕ್ಕೆ ಪ್ರಮುಖ ಹೋರಾಟವಾಗಿದ್ದು, 370 ನೇ ವಿಧಿಯನ್ನು ಮರುಸ್ಥಾಪಿಸಲು ಪಕ್ಷವು ಸಾರ್ವಜನಿಕರನ್ನು ದಾರಿ ತಪ್ಪಿಸುತ್ತಿಲ್ಲ ಅಥವಾ ಕಾನೂನನ್ನು ತನ್ನ ಕೈಗೆ ತೆಗೆದುಕೊಳ್ಳುತ್ತಿಲ್ಲ ಎಂದು ಅವರು ಶನಿವಾರ ಹೇಳಿದ್ದಾರೆ.

ಇದನ್ನೂ ಓದಿ: ಕ್ಷೇತ್ರ ಮರು ವಿಂಗಡಣೆ: ಹಿಂದೂಗಳು ಹೆಚ್ಚಿರುವ ಜಮ್ಮುವಿನಲ್ಲಿ 6 ಹೆಚ್ಚು ಕ್ಷೇತ್ರ ಸೃಷ್ಟಿ, ಮುಸ್ಲಿಮರು ಹೆಚ್ಚಿರುವ ಕಾಶ್ಮೀರಕ್ಕೆ ಕೇವಲ ಒಂದು!

ಒಕ್ಕೂಟ ಸರ್ಕಾರದ ನಿರೀಕ್ಷೆಗಳ ಬಗ್ಗೆ ಮಾತನಾಡಿದ ಒಮರ್‌‌ ಅಬ್ದುಲ್ಲಾ ಅವರು, ಜಮ್ಮು ಕಾಶ್ಮೀರದ 370 ನೇ ವಿಧಿಯ ಅಡಿಯಲ್ಲಿ ವಿಶೇಷ ಸ್ಥಾನಮಾನವನ್ನು ಪುನಃಸ್ಥಾಪಿಸಲು ತಮ್ಮ ಪಕ್ಷವು ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿಲ್ಲ ಎಂದು ಅವರು ಹೇಳಿದ್ದಾರೆ.

“ನಾವು ಈ ಬಗ್ಗೆ ಒಕ್ಕೂಟ ಸರ್ಕಾರಕ್ಕೆ ಬೇಡಿಕೆ ಇಟ್ಟಿಲ್ಲ. ವಿಧಿಯನ್ನು ನಮ್ಮಿಂದ ಕಸಿದುಕೊಂಡವರು ಅವರು, ಅದನ್ನು ನಮಗೆ ಹಿಂದಿರುಗಿಸುತ್ತಾರೆ ಎಂದು ನಾನು ಭಾವಿಸಬೇಕೇ” ಎಂದು ಅವರು ಕೇಳಿದ್ದಾರೆ.

ಒಕ್ಕೂಟ ಸರ್ಕಾರದಲ್ಲಿ ಬೇರೊಂದು ಪಕ್ಷ ಅಧಿಕಾರಕ್ಕೆ ಬಂದರೆ ಕೂಡಾ 370 ನೇ ವಿಧಿಯನ್ನು ಪುನಃಸ್ಥಾಪಿಸಲಾಗುತ್ತದೆ ಎಂಬುವುದನ್ನು ತಾನು ನಿರೀಕ್ಷಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಯಾಕೆಂದರೆ ಕೆಲವೇ ಪಕ್ಷಗಳಷ್ಟೆ ತಮ್ಮ ನಿಲುವುಗಳನ್ನು ಬೆಂಬಲಿಸಿವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಸೆರೆ ಸಿಕ್ಕ ಲಷ್ಕರ್-ಎ-ತೊಯ್ಬಾ ಉಗ್ರ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ!

“ಸರ್ಕಾರ ಬದಲಾಗುತ್ತಿರುವುದರಿಂದ 2024ರ ಚುನಾವಣೆವರೆಗೆ ಕಾಯಲು ನಾನು ಜನರಿಗೆ ಹೇಳುವುದಿಲ್ಲ. ಇದು ನಡೆಯುತ್ತದೆ ಎಂದು ನಾನು ಭಾವಿಸುವುದಿಲ್ಲ. ಇದು ರಾಜಕೀಯ ಹೋರಾಟವಾಗಿದ್ದು, ಇದರಲ್ಲಿ ನಾವು ಗೆಲ್ಲುತ್ತೇವೆ ಎಂಬ ನಂಬಿಕೆಯಿಂದ ಹೋರಾಡುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ನ ಸಿಯುಟಾಕ್ಕೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....