Homeಕರ್ನಾಟಕ‘ನೋಯ್ಡಾ ಟ್ವಿನ್ ಟವರ್ ಶೈಲಿಯಲ್ಲಿ ಕೆಡವುತ್ತೇವೆ’: ಬೆಂಗಳೂರು ಕಟ್ಟಡಗಳ ಬಗ್ಗೆ ಸಚಿವ ಆರ್‌‌. ಅಶೋಕ್‌

‘ನೋಯ್ಡಾ ಟ್ವಿನ್ ಟವರ್ ಶೈಲಿಯಲ್ಲಿ ಕೆಡವುತ್ತೇವೆ’: ಬೆಂಗಳೂರು ಕಟ್ಟಡಗಳ ಬಗ್ಗೆ ಸಚಿವ ಆರ್‌‌. ಅಶೋಕ್‌

- Advertisement -
- Advertisement -

ಅಕ್ರಮ ಕಟ್ಟಡಗಳ ತೆರವು ಕುರಿತು ನಡೆಯುತ್ತಿರುವ ಕೋಲಾಹಲದ ನಡುವೆ, ರಾಜ್ಯ ಕಂದಾಯ ಸಚಿವ ಆರ್. ಅಶೋಕ್,“ಬೆಂಗಳೂರು ತೀವ್ರ ಜಲಾವೃತಕ್ಕೆ ಒಳಗಾಗುವುದರಿಂದ ಮುಂದಿನ ಮಳೆಗಾಲದ ವೇಳೆಗೆ ನೋಯ್ಡಾ ಅವಳಿ ಗೋಪುರದ ಶೈಲಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಕಟ್ಟಡಗಳನ್ನು ಕೆಡವಲಾಗುವುದು” ಎಂದು ಮಂಗಳವಾರ ಹೇಳಿದ್ದಾರೆ.

ಕಳೆದ ತಿಂಗಳು ದೇಶದ ಗಮನ ಸೆಳೆದಿದ್ದ ನೋಯ್ಡಾ ಸೂಪರ್‌ಟೆಕ್ ಅವಳಿ ಗೋಪುರಗಳ ನೆಲಸಮವನ್ನು ಉಲ್ಲೇಖಿಸಿದ ಅಶೋಕ್‌,“ಮುಂದಿನ ಮಳೆಗಾಲದ ವೇಳೆಗೆ ನಾವು ಬಾಕಿ ಉಳಿದಿರುವ ಎಲ್ಲಾ ನೆಲಸಮವನ್ನು ತೆರವುಗೊಳಿಸಬೇಕು. ನೋಯ್ಡಾದಂತೆ ಎಲ್ಲಾ ಅಪಾರ್ಟ್‌ಮೆಂಟ್‌ಗಳನ್ನು ಕೆಡವಲಾಗುವುದು” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಧಿಕಾರಿಗಳು-ಬಿಲ್ಡರ್‌ಗಳ ವಿರುದ್ಧ ಕ್ರಮ ಮತ್ತು ಪ್ರವಾಹದಂತಹ ಪರಿಸ್ಥಿತಿಯ ಕುರಿತು ಈಗಾಗಲೇ ವಿಧಾನಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಅವರು ಹೇಳಿದ್ದಾಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರು ಮಳೆ: ವಿದ್ಯುತ್‌ ಸ್ಪರ್ಶದಿಂದ ಯುವತಿ ಸಾವು; ಕಾಂಗ್ರೆಸ್ ಕಾರಣ ಎಂದ ಬೊಮ್ಮಯಿ

ಈ ನಡುವೆ ಬೆಂಗಳೂರಿನ ಮುನೇನಕೊಳಲು ಪ್ರದೇಶದಲ್ಲಿ ಬಿಬಿಎಂಪಿ ಕಟ್ಟಡಗಳನ್ನು ಕೆಡವುತ್ತಿದೆ. ಆದರೆ ಈ ವರೆಗೂ ಯಾವುದೆ ದೊಡ್ಡ ಕಟ್ಟಡಗಳು ಮತ್ತು ಐಟಿ ಪಾರ್ಕ್‌ಗಳಿಗೆ ಯಾವುದೆ ಹಾನಿ ಮಾಡಲಾಗಿಲ್ಲ ಎಂದು ವರದಿಯಾಗಿದೆ.

ರಾಜಾ ಕಾಲುವೆಯಲ್ಲಿ ಮುಕ್ತವಾಗಿ ನೀರು ಹರಿದು ಹೋಗಲು ಸಮಸ್ಯೆ ಉಂಟು ಮಾಡಿ ಮನೆ ಕಟ್ಟಿಕೊಂಡಿರುವವರಿಗೆ ಒತ್ತುವರಿ ತೆರವು ನೋಟಿಸ್‌ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ತಿಳಿಸಿದ್ದರು.

ಕಳೆದ ಕೆಲವು ವಾರಗಳಿಂದ ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಂಗಳೂರು ತೀವ್ರ ಜಲಾವೃತದಿಂದ ತತ್ತರಿಸಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಪ್ರಯಾಣಿಕರು ಹಲವಾರು ಗಂಟೆಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿಕೊಳ್ಳುವಂತೆ ಆಗಿತ್ತು. ರಸ್ತೆಯಲ್ಲಿ ನೀರು ನಿಂತ ವೇಳೆ ವಿದ್ಯುತ್ ಸ್ಪರ್ಶದಿಂದಾಗಿ ಯುವತಿಯೊಬ್ಬರು ಮೃತಪಟ್ಟಿದ್ದರು.

ಇದನ್ನೂ ಓದಿ: ಬೆಂಗಳೂರು ಮುಳುಗುತ್ತಿರುವಾಗ ‘ಬೆಣ್ಣೆ ದೋಸೆ ಮಾರಿದ’ ಬಿಜೆಪಿ ಸಂಸದ ತೇಜಸ್ವಿ ಸೂರ್ಯ!

ಹಿಂದಿನ ಸರ್ಕಾರ ತನ್ನ ಅಧಿಕಾರಾವಧಿಯಲ್ಲಿ ಅಕ್ರಮ ನಿರ್ಮಾಣಗಳಿಗೆ ಅವಕಾಶ ಮಾಡಿಕೊಟ್ಟಿದೆ ಎಂದು ಬಿಜೆಪಿ ಸರ್ಕಾರ ಪರಿಸ್ಥಿತಿಗೆ ಕಾಂಗ್ರೆಸ್‌ ಪಕ್ಷವನ್ನು ದೂರಿಕೊಂಡಿತ್ತು. ಆದರೆ ವಿರೋಧ ಪಕ್ಷದ ನಾಯಕರು ಮೂಲಸೌಕರ್ಯಗಳ ನಿರ್ಲಕ್ಷ್ಯಕ್ಕಾಗಿ ಆಡಳಿತಾರೂಢ ಬಿಜೆಪಿಯ ಮೇಲೆ ಹರಿಹಾಯ್ದಿದ್ದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮದೇ ಆದ ಯಾವುದೇ ಶೈಲಿ ಇಲ್ಲವೇ ಎಲ್ಲಾ UP ಮಾಡೆಲ್ ಹೇಳುತ್ತ ಇರುತ್ತೀರಿ ನಾವು ಕರ್ನಾಟಕದವರು ಕಾನೂನು ಕ್ರಮ ಕೈಗೊಲ್ಲಲು UP ಯಿಂದ ಕಲಿಯ ಬೇಕೆ 🙏

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...