Homeಕರ್ನಾಟಕ‘ನೋಯ್ಡಾ ಟ್ವಿನ್ ಟವರ್ ಶೈಲಿಯಲ್ಲಿ ಕೆಡವುತ್ತೇವೆ’: ಬೆಂಗಳೂರು ಕಟ್ಟಡಗಳ ಬಗ್ಗೆ ಸಚಿವ ಆರ್‌‌. ಅಶೋಕ್‌

‘ನೋಯ್ಡಾ ಟ್ವಿನ್ ಟವರ್ ಶೈಲಿಯಲ್ಲಿ ಕೆಡವುತ್ತೇವೆ’: ಬೆಂಗಳೂರು ಕಟ್ಟಡಗಳ ಬಗ್ಗೆ ಸಚಿವ ಆರ್‌‌. ಅಶೋಕ್‌

- Advertisement -
- Advertisement -

ಅಕ್ರಮ ಕಟ್ಟಡಗಳ ತೆರವು ಕುರಿತು ನಡೆಯುತ್ತಿರುವ ಕೋಲಾಹಲದ ನಡುವೆ, ರಾಜ್ಯ ಕಂದಾಯ ಸಚಿವ ಆರ್. ಅಶೋಕ್,“ಬೆಂಗಳೂರು ತೀವ್ರ ಜಲಾವೃತಕ್ಕೆ ಒಳಗಾಗುವುದರಿಂದ ಮುಂದಿನ ಮಳೆಗಾಲದ ವೇಳೆಗೆ ನೋಯ್ಡಾ ಅವಳಿ ಗೋಪುರದ ಶೈಲಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಕಟ್ಟಡಗಳನ್ನು ಕೆಡವಲಾಗುವುದು” ಎಂದು ಮಂಗಳವಾರ ಹೇಳಿದ್ದಾರೆ.

ಕಳೆದ ತಿಂಗಳು ದೇಶದ ಗಮನ ಸೆಳೆದಿದ್ದ ನೋಯ್ಡಾ ಸೂಪರ್‌ಟೆಕ್ ಅವಳಿ ಗೋಪುರಗಳ ನೆಲಸಮವನ್ನು ಉಲ್ಲೇಖಿಸಿದ ಅಶೋಕ್‌,“ಮುಂದಿನ ಮಳೆಗಾಲದ ವೇಳೆಗೆ ನಾವು ಬಾಕಿ ಉಳಿದಿರುವ ಎಲ್ಲಾ ನೆಲಸಮವನ್ನು ತೆರವುಗೊಳಿಸಬೇಕು. ನೋಯ್ಡಾದಂತೆ ಎಲ್ಲಾ ಅಪಾರ್ಟ್‌ಮೆಂಟ್‌ಗಳನ್ನು ಕೆಡವಲಾಗುವುದು” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಧಿಕಾರಿಗಳು-ಬಿಲ್ಡರ್‌ಗಳ ವಿರುದ್ಧ ಕ್ರಮ ಮತ್ತು ಪ್ರವಾಹದಂತಹ ಪರಿಸ್ಥಿತಿಯ ಕುರಿತು ಈಗಾಗಲೇ ವಿಧಾನಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಅವರು ಹೇಳಿದ್ದಾಗಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರು ಮಳೆ: ವಿದ್ಯುತ್‌ ಸ್ಪರ್ಶದಿಂದ ಯುವತಿ ಸಾವು; ಕಾಂಗ್ರೆಸ್ ಕಾರಣ ಎಂದ ಬೊಮ್ಮಯಿ

ಈ ನಡುವೆ ಬೆಂಗಳೂರಿನ ಮುನೇನಕೊಳಲು ಪ್ರದೇಶದಲ್ಲಿ ಬಿಬಿಎಂಪಿ ಕಟ್ಟಡಗಳನ್ನು ಕೆಡವುತ್ತಿದೆ. ಆದರೆ ಈ ವರೆಗೂ ಯಾವುದೆ ದೊಡ್ಡ ಕಟ್ಟಡಗಳು ಮತ್ತು ಐಟಿ ಪಾರ್ಕ್‌ಗಳಿಗೆ ಯಾವುದೆ ಹಾನಿ ಮಾಡಲಾಗಿಲ್ಲ ಎಂದು ವರದಿಯಾಗಿದೆ.

ರಾಜಾ ಕಾಲುವೆಯಲ್ಲಿ ಮುಕ್ತವಾಗಿ ನೀರು ಹರಿದು ಹೋಗಲು ಸಮಸ್ಯೆ ಉಂಟು ಮಾಡಿ ಮನೆ ಕಟ್ಟಿಕೊಂಡಿರುವವರಿಗೆ ಒತ್ತುವರಿ ತೆರವು ನೋಟಿಸ್‌ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ತಿಳಿಸಿದ್ದರು.

ಕಳೆದ ಕೆಲವು ವಾರಗಳಿಂದ ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಂಗಳೂರು ತೀವ್ರ ಜಲಾವೃತದಿಂದ ತತ್ತರಿಸಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಪ್ರಯಾಣಿಕರು ಹಲವಾರು ಗಂಟೆಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿಕೊಳ್ಳುವಂತೆ ಆಗಿತ್ತು. ರಸ್ತೆಯಲ್ಲಿ ನೀರು ನಿಂತ ವೇಳೆ ವಿದ್ಯುತ್ ಸ್ಪರ್ಶದಿಂದಾಗಿ ಯುವತಿಯೊಬ್ಬರು ಮೃತಪಟ್ಟಿದ್ದರು.

ಇದನ್ನೂ ಓದಿ: ಬೆಂಗಳೂರು ಮುಳುಗುತ್ತಿರುವಾಗ ‘ಬೆಣ್ಣೆ ದೋಸೆ ಮಾರಿದ’ ಬಿಜೆಪಿ ಸಂಸದ ತೇಜಸ್ವಿ ಸೂರ್ಯ!

ಹಿಂದಿನ ಸರ್ಕಾರ ತನ್ನ ಅಧಿಕಾರಾವಧಿಯಲ್ಲಿ ಅಕ್ರಮ ನಿರ್ಮಾಣಗಳಿಗೆ ಅವಕಾಶ ಮಾಡಿಕೊಟ್ಟಿದೆ ಎಂದು ಬಿಜೆಪಿ ಸರ್ಕಾರ ಪರಿಸ್ಥಿತಿಗೆ ಕಾಂಗ್ರೆಸ್‌ ಪಕ್ಷವನ್ನು ದೂರಿಕೊಂಡಿತ್ತು. ಆದರೆ ವಿರೋಧ ಪಕ್ಷದ ನಾಯಕರು ಮೂಲಸೌಕರ್ಯಗಳ ನಿರ್ಲಕ್ಷ್ಯಕ್ಕಾಗಿ ಆಡಳಿತಾರೂಢ ಬಿಜೆಪಿಯ ಮೇಲೆ ಹರಿಹಾಯ್ದಿದ್ದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮದೇ ಆದ ಯಾವುದೇ ಶೈಲಿ ಇಲ್ಲವೇ ಎಲ್ಲಾ UP ಮಾಡೆಲ್ ಹೇಳುತ್ತ ಇರುತ್ತೀರಿ ನಾವು ಕರ್ನಾಟಕದವರು ಕಾನೂನು ಕ್ರಮ ಕೈಗೊಲ್ಲಲು UP ಯಿಂದ ಕಲಿಯ ಬೇಕೆ 🙏

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....