Homeಮುಖಪುಟಅಕ್ರಮ ವಲಸಿಗರ ಹೆಸರು ಎನ್‌ಆರ್‌ಸಿಯಲ್ಲಿದ್ದರೂ ಅವರನ್ನು ಗಡಿಪಾರು ಮಾಡುತ್ತೇವೆ: ಅಸ್ಸಾಂ ಸಿಎಂ

ಅಕ್ರಮ ವಲಸಿಗರ ಹೆಸರು ಎನ್‌ಆರ್‌ಸಿಯಲ್ಲಿದ್ದರೂ ಅವರನ್ನು ಗಡಿಪಾರು ಮಾಡುತ್ತೇವೆ: ಅಸ್ಸಾಂ ಸಿಎಂ

- Advertisement -
- Advertisement -

“ಅಕ್ರಮ ವಲಸಿಗರು” ಎಂದು ಹೇಳಲಾದವರನ್ನು ರಾಷ್ಟ್ರೀಯ ನಾಗರಿಕರ ನೋಂದಣಿಯಲ್ಲಿ ಹೆಸರಿಸಿದ್ದರೂ ಸಹ ಬಾಂಗ್ಲಾದೇಶಕ್ಕೆ “ಗಡಿಪಾರು” ಮಾಡಲಿದ್ದೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬುಧವಾರ ಹೇಳಿದ್ದಾರೆ. “ಅವರು ಅಕ್ರಮ ವಲಸಿಗರು ಎಂದು ನಮಗೆ ಖಚಿತವಾಗಿದ್ದರೆ, ನಾವು ಅವರನ್ನು ತಕ್ಷಣವೇ ಗಡಿಪಾರು ಮಾಲಿದ್ದೇವೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಅಕ್ರಮ ವಲಸಿಗರ ಹೆಸರು

ಅಸ್ಸಾಂನಲ್ಲಿ ಭಾರತೀಯ ನಾಗರಿಕರನ್ನು ರಾಜ್ಯದಲ್ಲಿ ವಾಸಿಸುವ ದಾಖಲೆರಹಿತ ವಲಸಿಗರಿಂದ ಬೇರ್ಪಡಿಸುವ ಉದ್ದೇಶದಿಂದ ಆಗಸ್ಟ್ 2019 ರಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು ಪ್ರಕಟಿಸಲಾಯಿತು. ಪಟ್ಟಿಯಲ್ಲಿ ಸೇರಿಸಬೇಕಾದರೆ ನಿವಾಸಿಗಳು ಮಾರ್ಚ್ 24, 1971 ರ ಮಧ್ಯರಾತ್ರಿಯ ಮೊದಲು ಅಸ್ಸಾಂಗೆ ಪ್ರವೇಶಿಸಿದ್ದಾರೆ ಎಂದು ಸಾಬೀತುಪಡಿಸಬೇಕಾಗಿತ್ತು.

19 ಲಕ್ಷಕ್ಕೂ ಹೆಚ್ಚು ಜನರು, ಅಥವಾ ಅರ್ಜಿದಾರರಲ್ಲಿ 5.77% ರಷ್ಟು ಜನರನ್ನು ಅಂತಿಮ ಪಟ್ಟಿಯಿಂದ ಹೊರಗಿಡಲಾಗಿದೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮತ್ತು ಅಸ್ಸಾಂ ರಾಷ್ಟ್ರೀಯತಾವಾದಿ ಗುಂಪುಗಳು ಮರುಪರಿಶೀಲನೆಗೆ ಒತ್ತಾಯಿಸಿದ ನಂತರ ಕೇಂದ್ರ ಸರ್ಕಾರವು NRC ಗೆ ಅಧಿಸೂಚನೆ ಹೊರಡಿಸಿಲ್ಲ.

ರಾಜ್ಯ ಸರ್ಕಾರವು ಮಂಗಳವಾರ 19 “ಅಕ್ರಮ ವಲಸಿಗರನ್ನು” ಗಡಿಪಾರು ಮಾಡಿದೆ ಮತ್ತು ಬುಧವಾರ ಇನ್ನೂ ಒಂಬತ್ತು ಜನರನ್ನು ಗಡಿಪಾರು ಮಾಡಲಿದೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಸಿಎಂ ಹೇಳಿದ್ದಾರೆ.

“ಹಲವು ಹೆಸರುಗಳನ್ನು ವಂಚನೆಯಿಂದ NRC [ನಾಗರಿಕರ ರಾಷ್ಟ್ರೀಯ ನೋಂದಣಿ]ಯಲ್ಲಿ ಸೇರಿಸಲಾಗಿದೆ. NRC ಪ್ರಕ್ರಿಯೆಯನ್ನು ನಡೆಸಿದ ರೀತಿ ಗಂಭೀರ ಅನುಮಾನಗಳು ಮತ್ತು ಕಳವಳಗಳನ್ನು ಹುಟ್ಟುಹಾಕಿದೆ. ಯಾರನ್ನಾದರೂ ಅಕ್ರಮ ವಲಸಿಗರಲ್ಲ ಎಂದು ನಿರ್ಧರಿಸಲು ರಿಜಿಸ್ಟರ್‌ನಲ್ಲಿ ಹೆಸರಿರುವುದು ಮಾತ್ರ ಸಾಕಾಗುವುದಿಲ್ಲ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ವಿದೇಶಿಯರೆಂದು ಘೋಷಿಸಲ್ಪಟ್ಟ ವ್ಯಕ್ತಿಗಳನ್ನು ಕಾನೂನು ಚೌಕಟ್ಟಿನ ಅಡಿಯಲ್ಲಿ ಬಾಂಗ್ಲಾದೇಶಕ್ಕೆ “ಹಿಂದಕ್ಕೆ ತಳ್ಳಲಾಗುತ್ತಿದೆ” ಎಂದು ಸಿಎಂ ಹೇಳಿಕೊಂಡ ನಾಲ್ಕು ದಿನಗಳ ನಂತರ ಈ ಹೇಳಿಕೆ ಬಂದಿದೆ.

ಜೂನ್ 7 ರಂದು, 1955 ರ ಪೌರತ್ವ ಕಾಯ್ದೆಯ ಸೆಕ್ಷನ್ 6Aಯ ವಿರುದ್ಧ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸುವ ವೇಳೆ ಸುಪ್ರೀಂಕೋರ್ಟ್, “ವಿದೇಶಿಯರನ್ನು ಗುರುತಿಸಲು ಅಸ್ಸಾಂ ಸರ್ಕಾರವು ಯಾವಾಗಲೂ ನ್ಯಾಯಾಂಗವನ್ನು ಸಂಪರ್ಕಿಸಲು ಯಾವುದೇ ಕಾನೂನು ಅವಶ್ಯಕತೆಯಿಲ್ಲ” ಎಂದು ಹೇಳಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“‘ವಲಸಿಗರ ಹೊರಹಾಕುವ ಆದೇಶ’ ಎಂಬ ಹಳೆಯ ಕಾನೂನು ಅಸ್ತಿತ್ವದಲ್ಲಿದೆ. ಈ ಕಾನೂನು ಇನ್ನೂ ಜಾರಿಯಲ್ಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಕಾನೂನಿನ ಪ್ರಕಾರ, ಜಿಲ್ಲಾಧಿಕಾರಿಗೆ ಆದೇಶ ಹೊರಡಿಸುವ ಮತ್ತು ತಕ್ಷಣದ ನಿರಾಕರಣೆಗೆ ಅವಕಾಶ ನೀಡುವ ಅಧಿಕಾರವಿದೆ.” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ, ಸುಪ್ರೀಂಕೋರ್ಟ್ 1955 ರ ಪೌರತ್ವ ಕಾಯ್ದೆಯ ಸೆಕ್ಷನ್ 6A ಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿತ್ತು.

1985 ರಲ್ಲಿ ಕೇಂದ್ರ ಸರ್ಕಾರ ಮತ್ತು ಅಸ್ಸಾಂ ಚಳವಳಿಯ ನಾಯಕರ ನಡುವೆ ಅಸ್ಸಾಂ ಒಪ್ಪಂದಕ್ಕೆ ಸಹಿ ಹಾಕಿದಾಗ ಕಾಯಿದೆಯಡಿಯಲ್ಲಿ ವಿಶೇಷ ನಿಬಂಧನೆಯಾಗಿ ಸೆಕ್ಷನ್ 6A ಅನ್ನು ಪರಿಚಯಿಸಲಾಯಿತು. ಇದು ಜನವರಿ 1, 1966 ಮತ್ತು ಮಾರ್ಚ್ 25, 1971 ರ ನಡುವೆ ಅಸ್ಸಾಂಗೆ ಬಂದ ವಿದೇಶಿಯರಿಗೆ ಭಾರತೀಯ ಪೌರತ್ವವನ್ನು ಪಡೆಯಲು ಅವಕಾಶ ನೀಡುತ್ತದೆ.

ಅಸ್ಸಾಂನಲ್ಲಿರುವ ಸ್ಥಳೀಯ ಗುಂಪುಗಳು ಕಾಯಿದೆಯಲ್ಲಿನ ಈ ನಿಬಂಧನೆಯು ಬಾಂಗ್ಲಾದೇಶದಿಂದ ವಲಸೆ ಬಂದವರ ಒಳನುಸುಳುವಿಕೆಯನ್ನು ಕಾನೂನುಬದ್ಧಗೊಳಿಸಿದೆ ಎಂದು ಆರೋಪಿಸಿವೆ. ಸೋಮವಾರ ಅಸ್ಸಾಂ ಸರ್ಕಾರವು 303 “ವಿದೇಶಿಯರನ್ನು” “ಹಿಂದಕ್ಕೆ ತಳ್ಳಿದೆ(ಗಡಿಪಾರು ಮಾಡಿದೆ)” ಮತ್ತು 1950 ರ ಅಸ್ಸಾಂನಿಂದ ವಲಸಿಗರ ಹೊರಹಾಕುವಿಕೆ ಕಾಯ್ದೆಯಡಿಯಲ್ಲಿ ಅದನ್ನು ಮುಂದುವರಿಸುತ್ತದೆ ಎಂದು ಸಿಎಂ ಹೇಳಿದ್ದಾರೆ.ಅಕ್ರಮ ವಲಸಿಗರ ಹೆಸರು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...