Homeಮುಖಪುಟಅಕ್ರಮ ವಲಸಿಗರ ಹೆಸರು ಎನ್‌ಆರ್‌ಸಿಯಲ್ಲಿದ್ದರೂ ಅವರನ್ನು ಗಡಿಪಾರು ಮಾಡುತ್ತೇವೆ: ಅಸ್ಸಾಂ ಸಿಎಂ

ಅಕ್ರಮ ವಲಸಿಗರ ಹೆಸರು ಎನ್‌ಆರ್‌ಸಿಯಲ್ಲಿದ್ದರೂ ಅವರನ್ನು ಗಡಿಪಾರು ಮಾಡುತ್ತೇವೆ: ಅಸ್ಸಾಂ ಸಿಎಂ

- Advertisement -
- Advertisement -

“ಅಕ್ರಮ ವಲಸಿಗರು” ಎಂದು ಹೇಳಲಾದವರನ್ನು ರಾಷ್ಟ್ರೀಯ ನಾಗರಿಕರ ನೋಂದಣಿಯಲ್ಲಿ ಹೆಸರಿಸಿದ್ದರೂ ಸಹ ಬಾಂಗ್ಲಾದೇಶಕ್ಕೆ “ಗಡಿಪಾರು” ಮಾಡಲಿದ್ದೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬುಧವಾರ ಹೇಳಿದ್ದಾರೆ. “ಅವರು ಅಕ್ರಮ ವಲಸಿಗರು ಎಂದು ನಮಗೆ ಖಚಿತವಾಗಿದ್ದರೆ, ನಾವು ಅವರನ್ನು ತಕ್ಷಣವೇ ಗಡಿಪಾರು ಮಾಲಿದ್ದೇವೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಅಕ್ರಮ ವಲಸಿಗರ ಹೆಸರು

ಅಸ್ಸಾಂನಲ್ಲಿ ಭಾರತೀಯ ನಾಗರಿಕರನ್ನು ರಾಜ್ಯದಲ್ಲಿ ವಾಸಿಸುವ ದಾಖಲೆರಹಿತ ವಲಸಿಗರಿಂದ ಬೇರ್ಪಡಿಸುವ ಉದ್ದೇಶದಿಂದ ಆಗಸ್ಟ್ 2019 ರಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು ಪ್ರಕಟಿಸಲಾಯಿತು. ಪಟ್ಟಿಯಲ್ಲಿ ಸೇರಿಸಬೇಕಾದರೆ ನಿವಾಸಿಗಳು ಮಾರ್ಚ್ 24, 1971 ರ ಮಧ್ಯರಾತ್ರಿಯ ಮೊದಲು ಅಸ್ಸಾಂಗೆ ಪ್ರವೇಶಿಸಿದ್ದಾರೆ ಎಂದು ಸಾಬೀತುಪಡಿಸಬೇಕಾಗಿತ್ತು.

19 ಲಕ್ಷಕ್ಕೂ ಹೆಚ್ಚು ಜನರು, ಅಥವಾ ಅರ್ಜಿದಾರರಲ್ಲಿ 5.77% ರಷ್ಟು ಜನರನ್ನು ಅಂತಿಮ ಪಟ್ಟಿಯಿಂದ ಹೊರಗಿಡಲಾಗಿದೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮತ್ತು ಅಸ್ಸಾಂ ರಾಷ್ಟ್ರೀಯತಾವಾದಿ ಗುಂಪುಗಳು ಮರುಪರಿಶೀಲನೆಗೆ ಒತ್ತಾಯಿಸಿದ ನಂತರ ಕೇಂದ್ರ ಸರ್ಕಾರವು NRC ಗೆ ಅಧಿಸೂಚನೆ ಹೊರಡಿಸಿಲ್ಲ.

ರಾಜ್ಯ ಸರ್ಕಾರವು ಮಂಗಳವಾರ 19 “ಅಕ್ರಮ ವಲಸಿಗರನ್ನು” ಗಡಿಪಾರು ಮಾಡಿದೆ ಮತ್ತು ಬುಧವಾರ ಇನ್ನೂ ಒಂಬತ್ತು ಜನರನ್ನು ಗಡಿಪಾರು ಮಾಡಲಿದೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಸಿಎಂ ಹೇಳಿದ್ದಾರೆ.

“ಹಲವು ಹೆಸರುಗಳನ್ನು ವಂಚನೆಯಿಂದ NRC [ನಾಗರಿಕರ ರಾಷ್ಟ್ರೀಯ ನೋಂದಣಿ]ಯಲ್ಲಿ ಸೇರಿಸಲಾಗಿದೆ. NRC ಪ್ರಕ್ರಿಯೆಯನ್ನು ನಡೆಸಿದ ರೀತಿ ಗಂಭೀರ ಅನುಮಾನಗಳು ಮತ್ತು ಕಳವಳಗಳನ್ನು ಹುಟ್ಟುಹಾಕಿದೆ. ಯಾರನ್ನಾದರೂ ಅಕ್ರಮ ವಲಸಿಗರಲ್ಲ ಎಂದು ನಿರ್ಧರಿಸಲು ರಿಜಿಸ್ಟರ್‌ನಲ್ಲಿ ಹೆಸರಿರುವುದು ಮಾತ್ರ ಸಾಕಾಗುವುದಿಲ್ಲ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ವಿದೇಶಿಯರೆಂದು ಘೋಷಿಸಲ್ಪಟ್ಟ ವ್ಯಕ್ತಿಗಳನ್ನು ಕಾನೂನು ಚೌಕಟ್ಟಿನ ಅಡಿಯಲ್ಲಿ ಬಾಂಗ್ಲಾದೇಶಕ್ಕೆ “ಹಿಂದಕ್ಕೆ ತಳ್ಳಲಾಗುತ್ತಿದೆ” ಎಂದು ಸಿಎಂ ಹೇಳಿಕೊಂಡ ನಾಲ್ಕು ದಿನಗಳ ನಂತರ ಈ ಹೇಳಿಕೆ ಬಂದಿದೆ.

ಜೂನ್ 7 ರಂದು, 1955 ರ ಪೌರತ್ವ ಕಾಯ್ದೆಯ ಸೆಕ್ಷನ್ 6Aಯ ವಿರುದ್ಧ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸುವ ವೇಳೆ ಸುಪ್ರೀಂಕೋರ್ಟ್, “ವಿದೇಶಿಯರನ್ನು ಗುರುತಿಸಲು ಅಸ್ಸಾಂ ಸರ್ಕಾರವು ಯಾವಾಗಲೂ ನ್ಯಾಯಾಂಗವನ್ನು ಸಂಪರ್ಕಿಸಲು ಯಾವುದೇ ಕಾನೂನು ಅವಶ್ಯಕತೆಯಿಲ್ಲ” ಎಂದು ಹೇಳಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“‘ವಲಸಿಗರ ಹೊರಹಾಕುವ ಆದೇಶ’ ಎಂಬ ಹಳೆಯ ಕಾನೂನು ಅಸ್ತಿತ್ವದಲ್ಲಿದೆ. ಈ ಕಾನೂನು ಇನ್ನೂ ಜಾರಿಯಲ್ಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಕಾನೂನಿನ ಪ್ರಕಾರ, ಜಿಲ್ಲಾಧಿಕಾರಿಗೆ ಆದೇಶ ಹೊರಡಿಸುವ ಮತ್ತು ತಕ್ಷಣದ ನಿರಾಕರಣೆಗೆ ಅವಕಾಶ ನೀಡುವ ಅಧಿಕಾರವಿದೆ.” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ, ಸುಪ್ರೀಂಕೋರ್ಟ್ 1955 ರ ಪೌರತ್ವ ಕಾಯ್ದೆಯ ಸೆಕ್ಷನ್ 6A ಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿತ್ತು.

1985 ರಲ್ಲಿ ಕೇಂದ್ರ ಸರ್ಕಾರ ಮತ್ತು ಅಸ್ಸಾಂ ಚಳವಳಿಯ ನಾಯಕರ ನಡುವೆ ಅಸ್ಸಾಂ ಒಪ್ಪಂದಕ್ಕೆ ಸಹಿ ಹಾಕಿದಾಗ ಕಾಯಿದೆಯಡಿಯಲ್ಲಿ ವಿಶೇಷ ನಿಬಂಧನೆಯಾಗಿ ಸೆಕ್ಷನ್ 6A ಅನ್ನು ಪರಿಚಯಿಸಲಾಯಿತು. ಇದು ಜನವರಿ 1, 1966 ಮತ್ತು ಮಾರ್ಚ್ 25, 1971 ರ ನಡುವೆ ಅಸ್ಸಾಂಗೆ ಬಂದ ವಿದೇಶಿಯರಿಗೆ ಭಾರತೀಯ ಪೌರತ್ವವನ್ನು ಪಡೆಯಲು ಅವಕಾಶ ನೀಡುತ್ತದೆ.

ಅಸ್ಸಾಂನಲ್ಲಿರುವ ಸ್ಥಳೀಯ ಗುಂಪುಗಳು ಕಾಯಿದೆಯಲ್ಲಿನ ಈ ನಿಬಂಧನೆಯು ಬಾಂಗ್ಲಾದೇಶದಿಂದ ವಲಸೆ ಬಂದವರ ಒಳನುಸುಳುವಿಕೆಯನ್ನು ಕಾನೂನುಬದ್ಧಗೊಳಿಸಿದೆ ಎಂದು ಆರೋಪಿಸಿವೆ. ಸೋಮವಾರ ಅಸ್ಸಾಂ ಸರ್ಕಾರವು 303 “ವಿದೇಶಿಯರನ್ನು” “ಹಿಂದಕ್ಕೆ ತಳ್ಳಿದೆ(ಗಡಿಪಾರು ಮಾಡಿದೆ)” ಮತ್ತು 1950 ರ ಅಸ್ಸಾಂನಿಂದ ವಲಸಿಗರ ಹೊರಹಾಕುವಿಕೆ ಕಾಯ್ದೆಯಡಿಯಲ್ಲಿ ಅದನ್ನು ಮುಂದುವರಿಸುತ್ತದೆ ಎಂದು ಸಿಎಂ ಹೇಳಿದ್ದಾರೆ.ಅಕ್ರಮ ವಲಸಿಗರ ಹೆಸರು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...