Homeಮುಖಪುಟಅಕ್ರಮ ವಲಸಿಗರ ಹೆಸರು ಎನ್‌ಆರ್‌ಸಿಯಲ್ಲಿದ್ದರೂ ಅವರನ್ನು ಗಡಿಪಾರು ಮಾಡುತ್ತೇವೆ: ಅಸ್ಸಾಂ ಸಿಎಂ

ಅಕ್ರಮ ವಲಸಿಗರ ಹೆಸರು ಎನ್‌ಆರ್‌ಸಿಯಲ್ಲಿದ್ದರೂ ಅವರನ್ನು ಗಡಿಪಾರು ಮಾಡುತ್ತೇವೆ: ಅಸ್ಸಾಂ ಸಿಎಂ

- Advertisement -
- Advertisement -

“ಅಕ್ರಮ ವಲಸಿಗರು” ಎಂದು ಹೇಳಲಾದವರನ್ನು ರಾಷ್ಟ್ರೀಯ ನಾಗರಿಕರ ನೋಂದಣಿಯಲ್ಲಿ ಹೆಸರಿಸಿದ್ದರೂ ಸಹ ಬಾಂಗ್ಲಾದೇಶಕ್ಕೆ “ಗಡಿಪಾರು” ಮಾಡಲಿದ್ದೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬುಧವಾರ ಹೇಳಿದ್ದಾರೆ. “ಅವರು ಅಕ್ರಮ ವಲಸಿಗರು ಎಂದು ನಮಗೆ ಖಚಿತವಾಗಿದ್ದರೆ, ನಾವು ಅವರನ್ನು ತಕ್ಷಣವೇ ಗಡಿಪಾರು ಮಾಲಿದ್ದೇವೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಅಕ್ರಮ ವಲಸಿಗರ ಹೆಸರು

ಅಸ್ಸಾಂನಲ್ಲಿ ಭಾರತೀಯ ನಾಗರಿಕರನ್ನು ರಾಜ್ಯದಲ್ಲಿ ವಾಸಿಸುವ ದಾಖಲೆರಹಿತ ವಲಸಿಗರಿಂದ ಬೇರ್ಪಡಿಸುವ ಉದ್ದೇಶದಿಂದ ಆಗಸ್ಟ್ 2019 ರಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು ಪ್ರಕಟಿಸಲಾಯಿತು. ಪಟ್ಟಿಯಲ್ಲಿ ಸೇರಿಸಬೇಕಾದರೆ ನಿವಾಸಿಗಳು ಮಾರ್ಚ್ 24, 1971 ರ ಮಧ್ಯರಾತ್ರಿಯ ಮೊದಲು ಅಸ್ಸಾಂಗೆ ಪ್ರವೇಶಿಸಿದ್ದಾರೆ ಎಂದು ಸಾಬೀತುಪಡಿಸಬೇಕಾಗಿತ್ತು.

19 ಲಕ್ಷಕ್ಕೂ ಹೆಚ್ಚು ಜನರು, ಅಥವಾ ಅರ್ಜಿದಾರರಲ್ಲಿ 5.77% ರಷ್ಟು ಜನರನ್ನು ಅಂತಿಮ ಪಟ್ಟಿಯಿಂದ ಹೊರಗಿಡಲಾಗಿದೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮತ್ತು ಅಸ್ಸಾಂ ರಾಷ್ಟ್ರೀಯತಾವಾದಿ ಗುಂಪುಗಳು ಮರುಪರಿಶೀಲನೆಗೆ ಒತ್ತಾಯಿಸಿದ ನಂತರ ಕೇಂದ್ರ ಸರ್ಕಾರವು NRC ಗೆ ಅಧಿಸೂಚನೆ ಹೊರಡಿಸಿಲ್ಲ.

ರಾಜ್ಯ ಸರ್ಕಾರವು ಮಂಗಳವಾರ 19 “ಅಕ್ರಮ ವಲಸಿಗರನ್ನು” ಗಡಿಪಾರು ಮಾಡಿದೆ ಮತ್ತು ಬುಧವಾರ ಇನ್ನೂ ಒಂಬತ್ತು ಜನರನ್ನು ಗಡಿಪಾರು ಮಾಡಲಿದೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಸಿಎಂ ಹೇಳಿದ್ದಾರೆ.

“ಹಲವು ಹೆಸರುಗಳನ್ನು ವಂಚನೆಯಿಂದ NRC [ನಾಗರಿಕರ ರಾಷ್ಟ್ರೀಯ ನೋಂದಣಿ]ಯಲ್ಲಿ ಸೇರಿಸಲಾಗಿದೆ. NRC ಪ್ರಕ್ರಿಯೆಯನ್ನು ನಡೆಸಿದ ರೀತಿ ಗಂಭೀರ ಅನುಮಾನಗಳು ಮತ್ತು ಕಳವಳಗಳನ್ನು ಹುಟ್ಟುಹಾಕಿದೆ. ಯಾರನ್ನಾದರೂ ಅಕ್ರಮ ವಲಸಿಗರಲ್ಲ ಎಂದು ನಿರ್ಧರಿಸಲು ರಿಜಿಸ್ಟರ್‌ನಲ್ಲಿ ಹೆಸರಿರುವುದು ಮಾತ್ರ ಸಾಕಾಗುವುದಿಲ್ಲ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ವಿದೇಶಿಯರೆಂದು ಘೋಷಿಸಲ್ಪಟ್ಟ ವ್ಯಕ್ತಿಗಳನ್ನು ಕಾನೂನು ಚೌಕಟ್ಟಿನ ಅಡಿಯಲ್ಲಿ ಬಾಂಗ್ಲಾದೇಶಕ್ಕೆ “ಹಿಂದಕ್ಕೆ ತಳ್ಳಲಾಗುತ್ತಿದೆ” ಎಂದು ಸಿಎಂ ಹೇಳಿಕೊಂಡ ನಾಲ್ಕು ದಿನಗಳ ನಂತರ ಈ ಹೇಳಿಕೆ ಬಂದಿದೆ.

ಜೂನ್ 7 ರಂದು, 1955 ರ ಪೌರತ್ವ ಕಾಯ್ದೆಯ ಸೆಕ್ಷನ್ 6Aಯ ವಿರುದ್ಧ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸುವ ವೇಳೆ ಸುಪ್ರೀಂಕೋರ್ಟ್, “ವಿದೇಶಿಯರನ್ನು ಗುರುತಿಸಲು ಅಸ್ಸಾಂ ಸರ್ಕಾರವು ಯಾವಾಗಲೂ ನ್ಯಾಯಾಂಗವನ್ನು ಸಂಪರ್ಕಿಸಲು ಯಾವುದೇ ಕಾನೂನು ಅವಶ್ಯಕತೆಯಿಲ್ಲ” ಎಂದು ಹೇಳಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“‘ವಲಸಿಗರ ಹೊರಹಾಕುವ ಆದೇಶ’ ಎಂಬ ಹಳೆಯ ಕಾನೂನು ಅಸ್ತಿತ್ವದಲ್ಲಿದೆ. ಈ ಕಾನೂನು ಇನ್ನೂ ಜಾರಿಯಲ್ಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಕಾನೂನಿನ ಪ್ರಕಾರ, ಜಿಲ್ಲಾಧಿಕಾರಿಗೆ ಆದೇಶ ಹೊರಡಿಸುವ ಮತ್ತು ತಕ್ಷಣದ ನಿರಾಕರಣೆಗೆ ಅವಕಾಶ ನೀಡುವ ಅಧಿಕಾರವಿದೆ.” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ, ಸುಪ್ರೀಂಕೋರ್ಟ್ 1955 ರ ಪೌರತ್ವ ಕಾಯ್ದೆಯ ಸೆಕ್ಷನ್ 6A ಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿತ್ತು.

1985 ರಲ್ಲಿ ಕೇಂದ್ರ ಸರ್ಕಾರ ಮತ್ತು ಅಸ್ಸಾಂ ಚಳವಳಿಯ ನಾಯಕರ ನಡುವೆ ಅಸ್ಸಾಂ ಒಪ್ಪಂದಕ್ಕೆ ಸಹಿ ಹಾಕಿದಾಗ ಕಾಯಿದೆಯಡಿಯಲ್ಲಿ ವಿಶೇಷ ನಿಬಂಧನೆಯಾಗಿ ಸೆಕ್ಷನ್ 6A ಅನ್ನು ಪರಿಚಯಿಸಲಾಯಿತು. ಇದು ಜನವರಿ 1, 1966 ಮತ್ತು ಮಾರ್ಚ್ 25, 1971 ರ ನಡುವೆ ಅಸ್ಸಾಂಗೆ ಬಂದ ವಿದೇಶಿಯರಿಗೆ ಭಾರತೀಯ ಪೌರತ್ವವನ್ನು ಪಡೆಯಲು ಅವಕಾಶ ನೀಡುತ್ತದೆ.

ಅಸ್ಸಾಂನಲ್ಲಿರುವ ಸ್ಥಳೀಯ ಗುಂಪುಗಳು ಕಾಯಿದೆಯಲ್ಲಿನ ಈ ನಿಬಂಧನೆಯು ಬಾಂಗ್ಲಾದೇಶದಿಂದ ವಲಸೆ ಬಂದವರ ಒಳನುಸುಳುವಿಕೆಯನ್ನು ಕಾನೂನುಬದ್ಧಗೊಳಿಸಿದೆ ಎಂದು ಆರೋಪಿಸಿವೆ. ಸೋಮವಾರ ಅಸ್ಸಾಂ ಸರ್ಕಾರವು 303 “ವಿದೇಶಿಯರನ್ನು” “ಹಿಂದಕ್ಕೆ ತಳ್ಳಿದೆ(ಗಡಿಪಾರು ಮಾಡಿದೆ)” ಮತ್ತು 1950 ರ ಅಸ್ಸಾಂನಿಂದ ವಲಸಿಗರ ಹೊರಹಾಕುವಿಕೆ ಕಾಯ್ದೆಯಡಿಯಲ್ಲಿ ಅದನ್ನು ಮುಂದುವರಿಸುತ್ತದೆ ಎಂದು ಸಿಎಂ ಹೇಳಿದ್ದಾರೆ.ಅಕ್ರಮ ವಲಸಿಗರ ಹೆಸರು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...