Homeಮುಖಪುಟಸಾಯುತ್ತೇವೆ ವಿನಃ ಹೋರಾಟದಿಂದ ಹಿಂದೆ ಸರಿಯುವುದಿಲ್ಲ: ಲಾಲು ಪ್ರಸಾದ್ ಯಾದವ್

ಸಾಯುತ್ತೇವೆ ವಿನಃ ಹೋರಾಟದಿಂದ ಹಿಂದೆ ಸರಿಯುವುದಿಲ್ಲ: ಲಾಲು ಪ್ರಸಾದ್ ಯಾದವ್

- Advertisement -
- Advertisement -

ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌‌ ಯಾದವ್ ಜೈಲಿನಿಂದ ಬಡುಗಡೆಯಾದ ನಂತರ ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿ, ತಮ್ಮ ಮಗ ತೇಜಸ್ವಿ ಯಾದವ್ ಅವರ ಕಾರಣದಿಂದಾಗಿ ತಾನು ಜೀವಂತವಾಗಿದ್ದೇನೆ ಎಂದು ಹೇಳಿದ್ದಾರೆ. ತಾನು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧದ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ.

ತಾನು ಸ್ಥಾಪಿಸಿದ ರಾಷ್ಟ್ರೀಯ ಜನತಾದಳ(ಆರ್‌ಜೆಡಿ) ಪಕ್ಷದ 25 ನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಲಾಲು ಪ್ರಸಾದ್‌ ಯಾದವ್‌‌, ಕಳೆದ ವರ್ಷ ಬಿಹಾರ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸಿದ ರೀತಿಗೆ, ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಬಿಹಾರ: ನನ್ನವರೇ ನನಗೆ ದ್ರೋಹ ಬಗೆದಿದ್ದಾರೆ ಎಂದ ಚಿರಾಗ್ ಪಾಸ್ವಾನ್

“ನಿಜವಾಗಿಯು ಹೇಳಬೇಕೆಂದರೆ, ನಾನು ಇದನ್ನು ತೇಜಸ್ವಿಯಿಂದ ಎಂದಿಗೂ ನಿರೀಕ್ಷಿಸಿರಲಿಲ್ಲ. ತೇಜಸ್ವಿ ಸುರಕ್ಷಿತವಾಗಿ ಆರ್‌ಜೆಡಿಯ ದೋಣಿಯನ್ನು ಮುನ್ನಡೆಸಿದ. ಆರ್‌ಜೆಡಿಗೆ ಉಜ್ವಲ ಭವಿಷ್ಯವಿದೆ” ಎಂದು ಲಾಲು ಪ್ರಸಾದ್ ಹೇಳಿದ್ದಾರೆ.

ತಾನು ಶೀಘ್ರದಲ್ಲೇ ರಾಜಕೀಯಕ್ಕೆ ಮರಳಲಿದ್ದೇನೆ ಎಂದು ತಮ್ಮ ಪಕ್ಷಕ್ಕೆ ಭರವಸೆ ನೀಡಿದ ಅವರು, “ನಾವು ಸಾಯುತ್ತೇವೆ ವಿನಃ ಹೋರಾಟದಿಂದ ಹಿಂದೆ ಸರಿಯುವುದಿಲ್ಲ” ಎಂದು ಘೋಷಿಸಿದ್ದಾರೆ.

ಲಾಲು ಪ್ರಸಾದ್‌ ಇಲ್ಲದೆ ಮೊದಲ ಬಾರಿಗೆ ಚುನಾವಣೆಯಲ್ಲಿ ಹೋರಾಡಿದ ಆರ್‌ಜೆಡಿ, ಬಿಹಾರ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನವನ್ನು ಗಳಿಸಿತ್ತು. ಆದರೆ ಬಹುಮತವಿಲ್ಲದೆ ಇದ್ದರಿಂದ ಬಿಜೆಪಿ ಮತ್ತು ನಿತೀಶ್ ಕುಮಾರ್ ಅವರ ಎನ್‌ಡಿಎ ಒಕ್ಕೂಟವು ಸರ್ಕಾರ ರಚಿಸುವಂತಾಯಿತು.

ಮೇವು ಹಗರಣ ಪ್ರಕರಣಗಳಲ್ಲಿ ಶಿಕ್ಷೆಗೊಳಗಾದ ಲಾಲು ಪ್ರಸಾದ್‌ಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಇದನ್ನೂ ಓದಿ: ಉದ್ಯೋಗ ಕೇಳಿದ ಯುವಜನರ ಮೇಲೆ ಲಾಠಿ ಪ್ರಯೋಗಿಸಿದ ಬಿಹಾರ ಸರ್ಕಾರ

2017 ರ ಡಿಸೆಂಬರ್‌ನಿಂದ ಜೈಲಿನಲ್ಲಿರುವ 72 ವರ್ಷದ ಲಾಲು ಪ್ರಸಾದ್‌, ಜಾರ್ಖಂಡ್‌ನ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯಲ್ಲಿ ತನ್ನ ಹೆಚ್ಚಿನ ಜೈಲು ಶಿಕ್ಷೆಯ ಅವಧಿಯನ್ನು ಅನುಭವಿಸಿದ್ದಾರೆ. ಜನವರಿಯಲ್ಲಿ ಅವರ ಆರೋಗ್ಯ ಹದಗೆಟ್ಟಿದ್ದು, ನಂತರ ಅವರನ್ನು ದೆಹಲಿಗೆ ಕರೆತರಲಾಯಿತು.

ವರದಿಗಳ ಪ್ರಕಾರ, ಅವರು ದೆಹಲಿಯಲ್ಲಿರುವ ತಮ್ಮ ಮಗಳು ಮಿಸಾ ಭಾರತಿ ಅವರ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ತಮ್ಮ ಭಾಷಣದಲ್ಲಿ ಅವರು, ಒಕ್ಕೂಟ ಸರ್ಕಾರ ಮತ್ತು ಬಿಹಾರದ ನಿತೀಶ್ ಕುಮಾರ್ ಸರ್ಕಾರದ ಮೇಲೆ ಆಡಳಿತದಲ್ಲಿನ ವೈಫಲ್ಯಗಳಿಗಾಗಿ ವಾಗ್ದಾಳಿ ನಡೆಸಿದ್ದಾರೆ.

“ಜಿಎಸ್ಟಿ ಮತ್ತು ನೋಟು ಅಮಾಣ್ಯೀಕರಣವು ಆರ್ಥಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಈಗ, ಸಾಮಾಜಿಕ ಸಾಮರಸ್ಯವನ್ನು ನಾಶಪಡಿಸುವ ಬೆದರಿಕೆ ಇದೆ. ಅಯೋಧ್ಯೆಯ ನಂತರ, ಕೆಲವರು ಮಥುರಾ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ಲಾಲು ಪ್ರಸಾದ್‌ ಹೇಳಿದ್ದಾರೆ.

“ಐದು ಪ್ರಧಾನ ಮಂತ್ರಿಗಳನ್ನು” ಮಾಡುವಲ್ಲಿ ತಾನು ಪ್ರಮುಖ ಪಾತ್ರ ವಹಿಸಿದ್ದೇನೆ ಎಂದು ಅವರು ಹೇಳಿದ್ದಾರೆ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ತಮ್ಮ ಪಕ್ಷವು ತನ್ನ ಸದಸ್ಯ ಬಲದೊಂದಿಗೆ ಪ್ರಬಲವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ರಾಹುಲ್ ಗಾಂಧಿಯ ವಯನಾಡ್ ಕ್ಷೇತ್ರವಲ್ಲ – ಬಿಹಾರದ ಹಳೆಯ ರಸ್ತೆಯ ಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...