Homeಮುಖಪುಟಸಾಯುತ್ತೇವೆ ವಿನಃ ಹೋರಾಟದಿಂದ ಹಿಂದೆ ಸರಿಯುವುದಿಲ್ಲ: ಲಾಲು ಪ್ರಸಾದ್ ಯಾದವ್

ಸಾಯುತ್ತೇವೆ ವಿನಃ ಹೋರಾಟದಿಂದ ಹಿಂದೆ ಸರಿಯುವುದಿಲ್ಲ: ಲಾಲು ಪ್ರಸಾದ್ ಯಾದವ್

- Advertisement -
- Advertisement -

ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌‌ ಯಾದವ್ ಜೈಲಿನಿಂದ ಬಡುಗಡೆಯಾದ ನಂತರ ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿ, ತಮ್ಮ ಮಗ ತೇಜಸ್ವಿ ಯಾದವ್ ಅವರ ಕಾರಣದಿಂದಾಗಿ ತಾನು ಜೀವಂತವಾಗಿದ್ದೇನೆ ಎಂದು ಹೇಳಿದ್ದಾರೆ. ತಾನು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧದ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ.

ತಾನು ಸ್ಥಾಪಿಸಿದ ರಾಷ್ಟ್ರೀಯ ಜನತಾದಳ(ಆರ್‌ಜೆಡಿ) ಪಕ್ಷದ 25 ನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಲಾಲು ಪ್ರಸಾದ್‌ ಯಾದವ್‌‌, ಕಳೆದ ವರ್ಷ ಬಿಹಾರ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸಿದ ರೀತಿಗೆ, ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಅವರನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಬಿಹಾರ: ನನ್ನವರೇ ನನಗೆ ದ್ರೋಹ ಬಗೆದಿದ್ದಾರೆ ಎಂದ ಚಿರಾಗ್ ಪಾಸ್ವಾನ್

“ನಿಜವಾಗಿಯು ಹೇಳಬೇಕೆಂದರೆ, ನಾನು ಇದನ್ನು ತೇಜಸ್ವಿಯಿಂದ ಎಂದಿಗೂ ನಿರೀಕ್ಷಿಸಿರಲಿಲ್ಲ. ತೇಜಸ್ವಿ ಸುರಕ್ಷಿತವಾಗಿ ಆರ್‌ಜೆಡಿಯ ದೋಣಿಯನ್ನು ಮುನ್ನಡೆಸಿದ. ಆರ್‌ಜೆಡಿಗೆ ಉಜ್ವಲ ಭವಿಷ್ಯವಿದೆ” ಎಂದು ಲಾಲು ಪ್ರಸಾದ್ ಹೇಳಿದ್ದಾರೆ.

ತಾನು ಶೀಘ್ರದಲ್ಲೇ ರಾಜಕೀಯಕ್ಕೆ ಮರಳಲಿದ್ದೇನೆ ಎಂದು ತಮ್ಮ ಪಕ್ಷಕ್ಕೆ ಭರವಸೆ ನೀಡಿದ ಅವರು, “ನಾವು ಸಾಯುತ್ತೇವೆ ವಿನಃ ಹೋರಾಟದಿಂದ ಹಿಂದೆ ಸರಿಯುವುದಿಲ್ಲ” ಎಂದು ಘೋಷಿಸಿದ್ದಾರೆ.

ಲಾಲು ಪ್ರಸಾದ್‌ ಇಲ್ಲದೆ ಮೊದಲ ಬಾರಿಗೆ ಚುನಾವಣೆಯಲ್ಲಿ ಹೋರಾಡಿದ ಆರ್‌ಜೆಡಿ, ಬಿಹಾರ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನವನ್ನು ಗಳಿಸಿತ್ತು. ಆದರೆ ಬಹುಮತವಿಲ್ಲದೆ ಇದ್ದರಿಂದ ಬಿಜೆಪಿ ಮತ್ತು ನಿತೀಶ್ ಕುಮಾರ್ ಅವರ ಎನ್‌ಡಿಎ ಒಕ್ಕೂಟವು ಸರ್ಕಾರ ರಚಿಸುವಂತಾಯಿತು.

ಮೇವು ಹಗರಣ ಪ್ರಕರಣಗಳಲ್ಲಿ ಶಿಕ್ಷೆಗೊಳಗಾದ ಲಾಲು ಪ್ರಸಾದ್‌ಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಇದನ್ನೂ ಓದಿ: ಉದ್ಯೋಗ ಕೇಳಿದ ಯುವಜನರ ಮೇಲೆ ಲಾಠಿ ಪ್ರಯೋಗಿಸಿದ ಬಿಹಾರ ಸರ್ಕಾರ

2017 ರ ಡಿಸೆಂಬರ್‌ನಿಂದ ಜೈಲಿನಲ್ಲಿರುವ 72 ವರ್ಷದ ಲಾಲು ಪ್ರಸಾದ್‌, ಜಾರ್ಖಂಡ್‌ನ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯಲ್ಲಿ ತನ್ನ ಹೆಚ್ಚಿನ ಜೈಲು ಶಿಕ್ಷೆಯ ಅವಧಿಯನ್ನು ಅನುಭವಿಸಿದ್ದಾರೆ. ಜನವರಿಯಲ್ಲಿ ಅವರ ಆರೋಗ್ಯ ಹದಗೆಟ್ಟಿದ್ದು, ನಂತರ ಅವರನ್ನು ದೆಹಲಿಗೆ ಕರೆತರಲಾಯಿತು.

ವರದಿಗಳ ಪ್ರಕಾರ, ಅವರು ದೆಹಲಿಯಲ್ಲಿರುವ ತಮ್ಮ ಮಗಳು ಮಿಸಾ ಭಾರತಿ ಅವರ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ತಮ್ಮ ಭಾಷಣದಲ್ಲಿ ಅವರು, ಒಕ್ಕೂಟ ಸರ್ಕಾರ ಮತ್ತು ಬಿಹಾರದ ನಿತೀಶ್ ಕುಮಾರ್ ಸರ್ಕಾರದ ಮೇಲೆ ಆಡಳಿತದಲ್ಲಿನ ವೈಫಲ್ಯಗಳಿಗಾಗಿ ವಾಗ್ದಾಳಿ ನಡೆಸಿದ್ದಾರೆ.

“ಜಿಎಸ್ಟಿ ಮತ್ತು ನೋಟು ಅಮಾಣ್ಯೀಕರಣವು ಆರ್ಥಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ. ಈಗ, ಸಾಮಾಜಿಕ ಸಾಮರಸ್ಯವನ್ನು ನಾಶಪಡಿಸುವ ಬೆದರಿಕೆ ಇದೆ. ಅಯೋಧ್ಯೆಯ ನಂತರ, ಕೆಲವರು ಮಥುರಾ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ಲಾಲು ಪ್ರಸಾದ್‌ ಹೇಳಿದ್ದಾರೆ.

“ಐದು ಪ್ರಧಾನ ಮಂತ್ರಿಗಳನ್ನು” ಮಾಡುವಲ್ಲಿ ತಾನು ಪ್ರಮುಖ ಪಾತ್ರ ವಹಿಸಿದ್ದೇನೆ ಎಂದು ಅವರು ಹೇಳಿದ್ದಾರೆ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ತಮ್ಮ ಪಕ್ಷವು ತನ್ನ ಸದಸ್ಯ ಬಲದೊಂದಿಗೆ ಪ್ರಬಲವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ರಾಹುಲ್ ಗಾಂಧಿಯ ವಯನಾಡ್ ಕ್ಷೇತ್ರವಲ್ಲ – ಬಿಹಾರದ ಹಳೆಯ ರಸ್ತೆಯ ಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...