Homeಮುಖಪುಟತ್ರಿಶೂಲವನ್ನು ನೀಡುತ್ತೇವೆ, ಪಡೆಯುತ್ತೇವೆ, ಬಳಸುತ್ತೇವೆ: ಪೊಲೀಸರ ಎದುರೇ ಬಜರಂಗದಳ ಕಾರ್ಯಕರ್ತರ ಘೋಷಣೆ

ತ್ರಿಶೂಲವನ್ನು ನೀಡುತ್ತೇವೆ, ಪಡೆಯುತ್ತೇವೆ, ಬಳಸುತ್ತೇವೆ: ಪೊಲೀಸರ ಎದುರೇ ಬಜರಂಗದಳ ಕಾರ್ಯಕರ್ತರ ಘೋಷಣೆ

- Advertisement -
- Advertisement -

‘ಭಾರತ ಮಾತೆಯ ರಕ್ಷಣೆಗಾಗಿ ತ್ರಿಶೂಲವನ್ನು ನೀಡುತ್ತೇವೆ, ಪಡೆಯುತ್ತೇವೆ, ಬಳಸುತ್ತೇವೆ. ತ್ರಿಶೂಲವೆಂಬುದು ನನ್ನ ಹಕ್ಕು, ನನ್ನ ಹೆಮ್ಮೆ’ ಎಂದು ಬಜರಂಗದಳದ ಕಾರ್ಯಕರ್ತರು ಪೊಲೀಸ್ ಅಧಿಕಾರಿಗಳ ಎದುರೆ ಘೋಷಣೆ ಕೂಗಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಜರುಗಿದೆ.

ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳ ಕಾರ್ಯಕರ್ತರಿಗೆ ಕೊಡಗಿನ ಪೊನ್ನಂಪೇಟೆಯಲ್ಲಿ ತ್ರಿಶೂಲ ದೀಕ್ಷೆ ಹಾಗೂ ಏರ್‌ಗನ್‌ ತರಬೇತಿ ನೀಡಿದರ ಕುರಿತು ವಿವಾದ, ಟೀಕೆಗಳ ಕೇಳಿಬಂದಿರುವುದನ್ನು ವಿರೋಧಿಸಿ ಗುರುವಾರ ಬಜರಂಗದಳದಿಂದ ನಡೆದ ಪ್ರತಿಭಟನೆಯಲ್ಲಿ ಈ ಘೋಷಣೆ ಕೂಗಲಾಗಿದ್ದು, ಅದರ ವಿಡಿಯೋವೊಂದು ವೈರಲ್ ಆಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ವಾರ ಕೊಡಗಿನ ಪೊನ್ನಂಪೇಟೆಯ ಸಾಯಿ ಶಂಕರ ವಿದ್ಯಾಸಂಸ್ಥೆಯಲ್ಲಿ ನಡೆದ ‘ಶೌರ್ಯ ಪ್ರಶಿಕ್ಷಣ ವರ್ಗ’ದಲ್ಲಿ ಬಜರಂಗದಳದ ಕಾರ್ಯಕರ್ತರಿಗೆ ಶಸ್ತ್ರಾಸ್ತ್ರ ತರಬೇತಿ, ತ್ರಿಶೂಲ ದೀಕ್ಷೆ ನೀಡಲಾಗಿತ್ತು. ಸುಮಾರು ಹತ್ತು ದಿನಗಳ ಕಾಲ ನಡೆದ ತರಬೇತಿಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್‌ ಸದಸ್ಯ ಸುಜಾ ಕುಶಾಲಪ್ಪ ಅವರೂ ಪಾಲ್ಗೊಂಡಿದ್ದರೆಂದು ಮೂಲಗಳು ತಿಳಿಸಿರುವುದಾಗಿ ‘ಪ್ರಜಾವಾಣಿ’ ವರದಿ ಮಾಡಿದೆ. ವಿವಿಧ ಜಿಲ್ಲೆಯಿಂದ ಆಗಮಿಸಿದ ಬಜರಂಗದಳ, ವಿಶ್ವ ಹಿಂದೂ ಪರಿಷತ್‌ನ 119 ಶಿಕ್ಷಣಾರ್ಥಿಗಳು ಸೇರಿ 140 ಮಂದಿ ತರಬೇತಿಯಲ್ಲಿ ಹಾಜರಿದ್ದರೆಂದು ವರದಿಯಾಗಿದೆ.

ಶಾಲಾ ಆವರಣದಲ್ಲಿ ಬಂದೂಕು ಹಿಡಿದು ತರಬೇತಿ ಪಡೆಯುತ್ತಿರುವುದು, ಸಂಸ್ಥೆಯ ಸಭಾಂಗಣ ಮತ್ತು ಆವರಣದಲ್ಲಿ ತ್ರಿಶೂಲ ಹಿಡಿದು ದೀಕ್ಷೆ ಪಡೆಯುತ್ತಿರುವುದು, ತ್ರಿಶೂಲಕ್ಕೆ ಪೂಜೆ ಸಲ್ಲಿಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಟೀಕೆಗಳು ವ್ಯಕ್ತವಾಗಿವೆ.

ಇದನ್ನೂ ಓದಿ: ನಿಮ್ಮ ಮಕ್ಕಳು ಏನಾಗಬೇಕು? ತ್ರಿಶೂಲಧಾರಿಗಳಾಬೇಕೆ ಅಥವಾ ತ್ರಿವರ್ಣ ಹಿಡಿದು ಸಾಮರಸ್ಯ ಹಾಡಬೇಕೆ?

ಶಂಕರ ವಿದ್ಯಾಸಂಸ್ಥೆಯ ಅಧ್ಯಕ್ಷ ಜರು ಗಣಪತಿ ಮಾತನಾಡಿದ್ದು, “ಬಂದೂಕು ತರಬೇತಿ ನೀಡಿರುವ ಕುರಿತು ಮಾಹಿತಿ ಇಲ್ಲ. ಆಯೋಜಕರೇ ಊಟ, ಮತ್ತಿತರ ವ್ಯವಸ್ಥೆ ಮಾಡಿಕೊಂಡಿದ್ದರು. ಇದಕ್ಕೂ ವಿದ್ಯಾಸಂಸ್ಥೆಗೂ ಯಾವುದೇ ಸಂಬಂಧವಿಲ್ಲ. ರಜೆಯಿದ್ದ ಕಾರಣ ಶಿಕ್ಷಕರೂ ಇರಲಿಲ್ಲ. ಈ ಹಿಂದೆ ರಾಷ್ಟ್ರಮಟ್ಟದ ತರಬೇತಿಯೂ ನಡೆದಿತ್ತು. ಹೊರ ರಾಜ್ಯದಿಂದ ಶಿಕ್ಷಣಾರ್ಥಿಗಳುಬಂದಿದ್ದರು” ಎಂದು ಪ್ರತಿಕ್ರಿಯಿಸಿದ್ದರು.

“ಶೌರ್ಯ ಪ್ರಶಿಕ್ಷಣ ವರ್ಗದಲ್ಲಿ ಶಸ್ತ್ರಾಸ್ತ್ರ ತರಬೇತಿ ಕೊಡುವುದಿಲ್ಲ. ಯೋಗ ಕಲಿಸುವ, ಆತ್ಮಸ್ಥೈರ್ಯ ತುಂಬುವ ಕೆಲಸ ನಡೆಯಲಿದೆ” ಎಂದು ವಿಶ್ವ ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಪಿ.ಕೃಷ್ಣಮೂರ್ತಿ ಹೇಳಿದ್ದರು. ಆದರೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರ ಹೇಳಿಕೆ ಇದಕ್ಕೆ ತದ್ವಿರುದ್ಧವಾಗಿದ್ದು, ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ.

“ಪ್ರತಿ ವರ್ಷ ರಾಜ್ಯ ಮತ್ತು ಜಿಲ್ಲೆಗಳಿಂದ ಸ್ವರಕ್ಷಣೆಗಾಗಿ ತರಬೇತಿ ನೀಡಲಾಗುತ್ತದೆ. ಪೊಲೀಸ್ ಇಲಾಖೆಯಿಂದಲೂ ಕೊಡುತ್ತಾರೆ. ಅದರಲ್ಲೇನಿದೆ? ಏರ್‌ಗನ್‌ ಟ್ರೈನಿಂಗ್‌ ಕೊಟ್ಟಿದ್ದಾರೆಯೇ ಹೊರತು ಎ.ಕೆ. 47 ಗನ್‌ ಟ್ರೈನಿಂಗ್ ಕೊಟ್ಟಿಲ್ಲ. ಬಾಂಬ್‌ ಹಾಕುವ ಟ್ರೈನಿಂಗ್ ಕೊಟ್ಟಿಲ್ಲ. ಆತ್ಮರಕ್ಷಣೆಯ ತರಬೇತಿಯನ್ನು ಪೊಲೀಸ್ ಇಲಾಖೆಯೂ ಆಯೋಜನೆ ಮಾಡುತ್ತದೆ, ಬಜರಂಗದಳವೂ ಮಾಡುತ್ತದೆ. ಅದರಲ್ಲೇನಿದೆ ವಿಶೇಷ?”  ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ: ಪೊನ್ನಂಪೇಟೆಯಲ್ಲಿ ಕೊಟ್ಟಿದ್ದು ಏರ್‌ಗನ್‌ ತರಬೇತಿ- ಸಿ.ಟಿ.ರವಿ; ನಡೆದದ್ದು ಯೋಗ ತರಬೇತಿ ಎಂದ ಹಿಂಜಾವೇ ಮುಖಂಡ

ಇದೀಗ ಏರ್‌ಗನ್ ತರಬೇತಿ ನೀಡಿದ್ದನ್ನು ಸಮರ್ಥಿಸಿಕೊಂಡು ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆದಿದೆ. ಅದರಲ್ಲಿ ‘ಭಾರತ ಮಾತೆಯ ರಕ್ಷಣೆಗಾಗಿ ತ್ರಿಶೂಲವನ್ನು ನೀಡುತ್ತೇವೆ, ಪಡೆಯುತ್ತೇವೆ, ಬಳಸುತ್ತೇವೆ. ತ್ರಿಶೂಲವೆಂಬುದು ನನ್ನ ಹಕ್ಕು, ನನ್ನ ಹೆಮ್ಮೆ’ ಎಂದು ಪೊಲೀಸರ್ ಅಧಿಕಾರಗಳ ಎದುರೆ ಘೋಷಣೆ ಕೂಗಲಾಗಿದೆ. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ಮೌನ ವಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...