Homeಕರ್ನಾಟಕಅಂಬೇಡ್ಕರ್ ಕನಸಿನ ಭೂ ಹಂಚಿಕೆ ಜಾರಿಯಾಗಲಿ: ನೂರ್ ಶ್ರೀಧರ್

ಅಂಬೇಡ್ಕರ್ ಕನಸಿನ ಭೂ ಹಂಚಿಕೆ ಜಾರಿಯಾಗಲಿ: ನೂರ್ ಶ್ರೀಧರ್

ದೇವರಾಜ ಅರಸುರವರು ಜಾರಿಗೆ ತಂದಿದ್ದ ಭೂ ಸುಧಾರಣೆ ಕಾಯ್ದೆಯ ಕಣ್ಣು, ಮಿದುಳು, ಬಾಯಿ ಎಲ್ಲವನ್ನೂ ಕಿತ್ತುಕೊಂಡಾಗಿದೆ. ಈಗ ಜಠರಕ್ಕೆ ಕೈ ಹಾಕಿದೆ. ನಾವು ಇನ್ನೂ ಎಚ್ಚೆತ್ತುಕೊಳ್ಳದಿದ್ದರೇ, ನಮಗೆ ಉಳಿಗಾಲವಿಲ್ಲ” ಎಂದು ಆರ್ ಮಾನಸಯ್ಯ ತಿಳಿಸಿದರು.

- Advertisement -
- Advertisement -

ಭೂಮಿಗಾಗಿನ ಈ ಹೋರಾಟ ಇಂದು ನಿನ್ನೆಯದಲ್ಲ. ಇದಕ್ಕೆ 100 ವರ್ಷಗಳ ಹೋರಾಟದ ಪರಂಪರೆಯಿದೆ. 1932 ರಲ್ಲಿ ಲಾಹೋರ್‌ನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಭೂಸುಧಾರಣೆಯ ನಿರ್ಧಾರವನ್ನು ಕೈಗೊಂಡು, ಉಳುವವನೇ ಭೂ ಒಡೆಯ ಎಂಬ ತೀರ್ಮಾನಕ್ಕೆ ಬರಲಾಗಿತ್ತು. ಇಡೀ ಭೂಮಿಯನ್ನು ರಾಷ್ಟ್ರೀಕರಣಗೊಳಿಸಿ, ಬಡಜನರಿಗೆ ಸಮಾನವಾಗಿ ಹಂಚಬೇಕು ಎಂಬುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಅದಕ್ಕಾಗಿ ಇಂದಿಗೂ ಹೋರಾಟ ಮುಂದುವರೆದಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೂರ್ ಶ್ರೀಧರ್ ತಿಳಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಿನ್ನೆಯಿಂದ ನಡೆಯುತ್ತಿರುವ ರೈತ, ದಲಿತ ಮತ್ತು ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡಿರುವ ಐಕ್ಯ ಹೋರಾಟದ ಎರಡನೇ ದಿನವಾದ ಇಂದು ಪರ್ಯಾಯ ಜನತಾ ಅಧಿವೇಶನದಲ್ಲಿ ಅವರು, ‘ರಾಜ್ಯದ ಬಡಜನರ ಭೂಮಿ ಮತ್ತು ವಸತಿ ಸಮಸ್ಯೆ’ ಎಂಬ ವಿಷಯದ ಕುರಿತು ಮಾತನಾಡಿದರು.

“ಇಂದು ಅಥವಾ ನಾಳೆಯೊಳಗೆ ಭೂಸುಧಾರಣಾ ತಿದ್ದುಪಡಿ ಕಾಯ್ದೆಯಂತಹ ಬಡಜನ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡಲು ಸರ್ಕಾರ ಹೊರಟಿದೆ. ಆದರೆ ವಿರೋಧ ಪಕ್ಷಗಳು ಇದನ್ನು ಜಾರಿ ಮಾಡಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿವೆ. ಜೊತೆಗೆ ಈ ಕಾಯ್ದೆಗಳನ್ನು ಜಾರಿಗೆ ತರಕೂಡದು ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದೆ. ಈ ಸಂದರ್ಭದಲ್ಲಿ ನಾವು ಪರ್ಯಾಯ ಅಧಿವೇಶನ ನಡೆಸುತ್ತಿದ್ದೇವೆ. ಹಾಗಾಗಿ ಇದು ಅತ್ಯಂತ ಮಹತ್ವವುಳ್ಳದ್ದಾಗಿದೆ” ಎಂದು ನೂರ್ ಶ್ರೀಧರ್ ಹೇಳಿದ್ದಾರೆ.

ಸಂವಿಧಾನದಲ್ಲಿ ದೇಶದ ಬಡವರಿಗೆ ಭೂಮಿ ನೀಡಬೇಕು ಎಂದು ಹೇಳಲಾಗಿದೆ. ಪ್ರತಿ ಕುಟುಂಬಕ್ಕೆ ಶಕ್ತ್ಯಾನುಸಾರ ಭೂಮಿ ಕೊಡಬೇಕು ಎಂಬ ವಿಷಯವನ್ನು ಸಂವಿಧಾನದಲ್ಲಿ ಸೇರಿಸಲಾಗಿದೆ. ಆದರೆ ಆಳುವ ಸರ್ಕಾರಗಳ ಹುನ್ನಾರದಿಂದ ಇದು ಇಂದಿಗೂ ನೆರೆವೇರಲ್ಲ. ಆದರೂ  ಭೂಮಿ ಬಂಡವಾಳಶಾಹಿಗಳ ಕೈಗೆ ಹೋಗಬಾರದು ಎಂದು ನಿರ್ಣಯಿಸಲಾಗಿತ್ತು. ಇದರ ನಂತರ ದೇಶದಾದ್ಯಂತ ಸಾಕಷ್ಟು ಹೋರಾಟ ನಡೆದು, ದೇವರಾಜ ಅರಸು ಕಾಲದಲ್ಲಿ ಭೂ ಸುಧಾರಣೆಗಳ ಪರ್ವ ಆರಂಭವಾಯಿತು ಎಂದರು.

ಅರಸುರವರ ಕಾಲದಲ್ಲಿ ಎರಡು ಪ್ರಮುಖ ವಿಷಯಗಳನ್ನು ಜಾರಿಗೆ ತರಬೇಕು ಎಂದು ಯೋಜನೆ ರೂಪಿಸಲಾಯಿತು. ಮೊದಲನೆಯದು, ಗೇಣಿಪದ್ದತಿಯನ್ನ ರದ್ದು ಮಾಡಿ, ಉಳುವವನಿಗೆ ಭೂಮಿ ನೀಡಬೇಕು ಎನ್ನುವುದು. ಎರಡನೆಯದು ಭೂ ಒಡೆತನಕ್ಕೆ ಮಿತಿಯನ್ನು ತಂದು, ಹೆಚ್ಚುವರಿ ಭೂಮಿ ವಶಪಡಿಸಿಕೊಂಡು ಇಲ್ಲದವರಿಗೆ ಕೊಡಬೇಕು ಎಂಬುದು. ಆದರೆ ಮೊದಲನೆಯದು ಸ್ವಲ್ಪಮಟ್ಟಿಗೆ ಯಶಸ್ವಿಯಾಯಿತು. ಹಾಗಾಗಿ ಇತರೆ ಹಿಂದುಳಿದವರಿಗೆ ಸ್ವಲ್ಪ ಭೂಮಿ ಸಿಕ್ಕಿತು. ಎರಡನೆಯದು ಯಶಸ್ವಿಯಾಗಲಿಲ್ಲ. ಹಾಗಾಗಿ ದಲಿತರಿಗೆ, ಆದಿವಾಸಿಗಳಿಗೆ ಭೂಮಿ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಭೂ ಸುಧಾರಣಾ ಚಳುವಳಿಯಲ್ಲಿದ್ದ ಕಾಗೋಡು ತಿಮ್ಮಪ್ಪರವರಿಂದಲೂ ಜನರಿಗೆ ಭೂಮಿ ಕೊಡಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಈ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಆರಂಭವಾಯಿತು. ಇದಕ್ಕೆ ಎಚ್.ಎಸ್ ದೊರೆಸ್ವಾಮಿಯವರು ನೇತೃತ್ವ ವಹಿಸಿದರು. 2016ರಲ್ಲಿ ಅಂದು ಈ ಹೋರಾಟ ನಡೆದಿದ್ದು, ಬಿಜೆಪಿ ಪಕ್ಷದ ವಿರುದ್ದವಲ್ಲ, ಬದಲಿಗೆ ಕಾಂಗ್ರೆಸ್ ಸರ್ಕಾರದ ವಿರುದ್ದ. ನಮ್ಮ ಹೋರಾಟ ಯಾವುದೇ ಪಕ್ಷದ ವಿರುದ್ಧವಲ್ಲ. ಜನವಿರೋಧಿ ನೀತಿಯ ವಿರುದ್ದ. ಆದರೂ ಇಂದು ನಾವು ಹೋರಾಟ ಮಾಡುತ್ತಿರುವುದು ಕಾಂಗ್ರೆಸ್ ಪರ ಎಂದು ಹಲವರು ಬಿಂಬಿಸುತ್ತಿದ್ದಾರೆ. ನಾವು ಯಾವಾಗಲೂ ಆಳುವವರ ವಿರುದ್ಧವೇ ಹೊರತು ಪರವಲ್ಲ ಎಂಬುದಕ್ಕೆ ನಮ್ಮ ಹಿಂದಿನ ಮತ್ತು ಇಂದಿನ ಹೋರಾಟಗಳೇ ಸಾಕ್ಷಿ ಎಂದರು.

ಇಂದು ನಾವು 4 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಜನತಾ ಅಧಿವೇಶನದ ಮೂಲಕ ಒತ್ತಾಯಿಸುತ್ತೇವೆ. ಬಡವರಿಗೆ ಭೂಮಿ ಮತ್ತು ಪಟ್ಟಾ ನೀಡಬೇಕು, ಭೂಮಿಯ ಲೆಕ್ಕ ಮಾಡಿ, ಹೆಚ್ಚುವರಿ ಭೂಮಿಯನ್ನು ವಶಪಡಿಸಿಕೊಂಡು ಬಡವರಿಗೆ ಹಂಚಬೇಕು. ಭೂಮಿಗಾಗಿ ಹೊಸ ಅರ್ಜಿ ಹಾಕಲು ಅವಕಾಶ ಮಾಡಿಕೊಡಬೇಕು ಮತ್ತು ಭೂಮಿ ವಸತಿ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಸ್ಸು ಪಡೆಯಬೇಕು” ಎಂದು ಒತ್ತಾಯಿಸಿದರು.

ಜನತಾ ಅಧಿವೇಶನದಲ್ಲಿ ಹಿರಿಯ ಕಾರ್ಮಿಕ ಮುಖಂಡರಾದ ಆರ್‌.ಮಾನಸಯ್ಯನವರು “ಕಂದಾಯ ಭೂಮಿ ಮತ್ತು ಬಗರ್ ಹುಕುಂ ಸಮಸ್ಯೆ” ಎಂಬ ವಿಷಯದ ಕುರಿತು ಮಾತನಾಡಿ “ಸರ್ಕಾರ ಈಗ ಭೂಮಿ ಖಾಸಗೀಕರಣ ಮಾಡಲು ಹೊರಟಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಕರ್ನಾಟಕದ ಸಮಸ್ತ ಭೂಮಿಯನ್ನು ಉಳಿಸದ ಹೊರತು, ನಮ್ಮ ಭೂಮಿಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರೀ ಉದ್ಯಮಗಳ ಖಾಸಗೀಕರಣ ಆಯ್ತು, ವಿಮಾನ ನಿಲ್ದಾಣದ ಖಾಸಗೀಕರಣ ಆಯ್ತು, ರೈಲು ಖಾಗೀಕರಣ ಆಯ್ತು. ಈಗ ಸರ್ಕಾರ ಭೂಮಿಯ ಖಾಸಗೀಕರಣ ಮಾಡಲು ಹೊರಟಿದೆ. ಎಲ್ಲರಿಗೂ ಸೇರಿದ ಭೂಮಿಯನ್ನು ಕೆಲವೇ ಜನರ ಕೈಗೆ ಕೊಡಲು ಕಾನೂನು ಮಾಡುತ್ತಿರುವ ಸರ್ಕಾರದ ಮತ್ತು ಆಳುವ ವರ್ಗದ ನೀಚಾತಿ ನೀಚ ಕೆಲಸ ಇದು” ಎಂದು ಕಿಡಿಕಾರಿದರು.

ನಮಗೆ ಭೂಮಿಯೆಂದರೆ ನಮಗೆ ಕೇವಲ ನಿವೇಶನವಲ್ಲ, ಹೊಲವಲ್ಲ, ಮನೆಯಲ್ಲ, ಅದು ನಮ್ಮ ಬದುಕು. ಹಾಗಾಗಿ ಈ ಹೋರಾಟ ರೈತಾಪಿ ವರ್ಗಕ್ಕೆ ಸ್ವಾತಂತ್ರ ಚಳುವಳಿ ಇದ್ದಂತೆ. ರೈತರಿಗೆ ಸ್ವಾತಂತ್ರ ಚಳುವಳಿಯೆಂದರೆ ಭೂ ಚಳುವಳಿಯೇ ಆಗಿದೆ. ಸ್ವಾತಂತ್ರ ಎಂದರೆ ಏನು, ರೈತರಿಗೆ ಭೂಮಿ ಸಿಗುವುದೇ ಅಲ್ಲವೇ” ಎಂದು ಅವರು ಹೇಳಿದರು.

ದೇವರಾಜ ಅರಸುರವರು ಜಾರಿಗೆ ತಂದಿದ್ದ ಭೂ ಸುಧಾರಣೆ ಕಾಯ್ದೆಯ ಕಣ್ಣು, ಮಿದುಳು, ಬಾಯಿ ಎಲ್ಲವನ್ನೂ ಕಿತ್ತುಕೊಂಡಾಗಿದೆ. ಈಗ ಜಠರಕ್ಕೆ ಕೈ ಹಾಕಿದೆ. ನಾವು ಇನ್ನೂ ಎಚ್ಚೆತ್ತುಕೊಳ್ಳದಿದ್ದರೇ, ನಮಗೆ ಉಳಿಗಾಲವಿಲ್ಲ” ಎಂದು ಆರ್ ಮಾನಸಯ್ಯ ತಿಳಿಸಿದರು.

ಜನತಾ ಅಧಿವೇಶನದ ಸ್ಥಳಕ್ಕೆ ಮಾಜಿ ಸಚಿವರುಗಳಾದ ಹೆಚ್.ಡಿ.ರೇವಣ್ಣ, ಡಿ ಆರ್ ಪಾಟೀಲ್ ಮತ್ತು ಬಿ ಆರ್ ಪಾಟೀಲ್ ಭೇಟಿ ನೀಡಿ
ರೈತ ವಿರೋಧಿ ಸುಗ್ರೀವಾಜ್ಞೆಗಳ‌ ವಿರುದ್ದ ಸದನದಲ್ಲಿ‌ ಮಾತನಾಡುವುದಾಗಿ ಹಾಗೂ ಈ ಹೋರಾಟದಲ್ಲಿ ಜೊತೆಗೂಡುವುದಾಗಿ ಭರವಸೆ ನೀಡಿದರು.


ಇದನ್ನೂ ಓದಿ: ಈ ಸುಗ್ರೀವಾಜ್ಞೆಗಳು ಅಸಾಂವಿಧಾನಿಕವಾಗಿದ್ದು, ರೈತರ ಗುರುತನ್ನೇ ಅಳಿಸಿಹಾಕಲಿವೆ: ಜಸ್ಟೀಸ್ ನಾಗಮೋಹನ್ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...