Homeಕರ್ನಾಟಕಅಂಬೇಡ್ಕರ್ ಕನಸಿನ ಭೂ ಹಂಚಿಕೆ ಜಾರಿಯಾಗಲಿ: ನೂರ್ ಶ್ರೀಧರ್

ಅಂಬೇಡ್ಕರ್ ಕನಸಿನ ಭೂ ಹಂಚಿಕೆ ಜಾರಿಯಾಗಲಿ: ನೂರ್ ಶ್ರೀಧರ್

ದೇವರಾಜ ಅರಸುರವರು ಜಾರಿಗೆ ತಂದಿದ್ದ ಭೂ ಸುಧಾರಣೆ ಕಾಯ್ದೆಯ ಕಣ್ಣು, ಮಿದುಳು, ಬಾಯಿ ಎಲ್ಲವನ್ನೂ ಕಿತ್ತುಕೊಂಡಾಗಿದೆ. ಈಗ ಜಠರಕ್ಕೆ ಕೈ ಹಾಕಿದೆ. ನಾವು ಇನ್ನೂ ಎಚ್ಚೆತ್ತುಕೊಳ್ಳದಿದ್ದರೇ, ನಮಗೆ ಉಳಿಗಾಲವಿಲ್ಲ” ಎಂದು ಆರ್ ಮಾನಸಯ್ಯ ತಿಳಿಸಿದರು.

- Advertisement -
- Advertisement -

ಭೂಮಿಗಾಗಿನ ಈ ಹೋರಾಟ ಇಂದು ನಿನ್ನೆಯದಲ್ಲ. ಇದಕ್ಕೆ 100 ವರ್ಷಗಳ ಹೋರಾಟದ ಪರಂಪರೆಯಿದೆ. 1932 ರಲ್ಲಿ ಲಾಹೋರ್‌ನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಭೂಸುಧಾರಣೆಯ ನಿರ್ಧಾರವನ್ನು ಕೈಗೊಂಡು, ಉಳುವವನೇ ಭೂ ಒಡೆಯ ಎಂಬ ತೀರ್ಮಾನಕ್ಕೆ ಬರಲಾಗಿತ್ತು. ಇಡೀ ಭೂಮಿಯನ್ನು ರಾಷ್ಟ್ರೀಕರಣಗೊಳಿಸಿ, ಬಡಜನರಿಗೆ ಸಮಾನವಾಗಿ ಹಂಚಬೇಕು ಎಂಬುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಅದಕ್ಕಾಗಿ ಇಂದಿಗೂ ಹೋರಾಟ ಮುಂದುವರೆದಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೂರ್ ಶ್ರೀಧರ್ ತಿಳಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಿನ್ನೆಯಿಂದ ನಡೆಯುತ್ತಿರುವ ರೈತ, ದಲಿತ ಮತ್ತು ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡಿರುವ ಐಕ್ಯ ಹೋರಾಟದ ಎರಡನೇ ದಿನವಾದ ಇಂದು ಪರ್ಯಾಯ ಜನತಾ ಅಧಿವೇಶನದಲ್ಲಿ ಅವರು, ‘ರಾಜ್ಯದ ಬಡಜನರ ಭೂಮಿ ಮತ್ತು ವಸತಿ ಸಮಸ್ಯೆ’ ಎಂಬ ವಿಷಯದ ಕುರಿತು ಮಾತನಾಡಿದರು.

“ಇಂದು ಅಥವಾ ನಾಳೆಯೊಳಗೆ ಭೂಸುಧಾರಣಾ ತಿದ್ದುಪಡಿ ಕಾಯ್ದೆಯಂತಹ ಬಡಜನ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡಲು ಸರ್ಕಾರ ಹೊರಟಿದೆ. ಆದರೆ ವಿರೋಧ ಪಕ್ಷಗಳು ಇದನ್ನು ಜಾರಿ ಮಾಡಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿವೆ. ಜೊತೆಗೆ ಈ ಕಾಯ್ದೆಗಳನ್ನು ಜಾರಿಗೆ ತರಕೂಡದು ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದೆ. ಈ ಸಂದರ್ಭದಲ್ಲಿ ನಾವು ಪರ್ಯಾಯ ಅಧಿವೇಶನ ನಡೆಸುತ್ತಿದ್ದೇವೆ. ಹಾಗಾಗಿ ಇದು ಅತ್ಯಂತ ಮಹತ್ವವುಳ್ಳದ್ದಾಗಿದೆ” ಎಂದು ನೂರ್ ಶ್ರೀಧರ್ ಹೇಳಿದ್ದಾರೆ.

ಸಂವಿಧಾನದಲ್ಲಿ ದೇಶದ ಬಡವರಿಗೆ ಭೂಮಿ ನೀಡಬೇಕು ಎಂದು ಹೇಳಲಾಗಿದೆ. ಪ್ರತಿ ಕುಟುಂಬಕ್ಕೆ ಶಕ್ತ್ಯಾನುಸಾರ ಭೂಮಿ ಕೊಡಬೇಕು ಎಂಬ ವಿಷಯವನ್ನು ಸಂವಿಧಾನದಲ್ಲಿ ಸೇರಿಸಲಾಗಿದೆ. ಆದರೆ ಆಳುವ ಸರ್ಕಾರಗಳ ಹುನ್ನಾರದಿಂದ ಇದು ಇಂದಿಗೂ ನೆರೆವೇರಲ್ಲ. ಆದರೂ  ಭೂಮಿ ಬಂಡವಾಳಶಾಹಿಗಳ ಕೈಗೆ ಹೋಗಬಾರದು ಎಂದು ನಿರ್ಣಯಿಸಲಾಗಿತ್ತು. ಇದರ ನಂತರ ದೇಶದಾದ್ಯಂತ ಸಾಕಷ್ಟು ಹೋರಾಟ ನಡೆದು, ದೇವರಾಜ ಅರಸು ಕಾಲದಲ್ಲಿ ಭೂ ಸುಧಾರಣೆಗಳ ಪರ್ವ ಆರಂಭವಾಯಿತು ಎಂದರು.

ಅರಸುರವರ ಕಾಲದಲ್ಲಿ ಎರಡು ಪ್ರಮುಖ ವಿಷಯಗಳನ್ನು ಜಾರಿಗೆ ತರಬೇಕು ಎಂದು ಯೋಜನೆ ರೂಪಿಸಲಾಯಿತು. ಮೊದಲನೆಯದು, ಗೇಣಿಪದ್ದತಿಯನ್ನ ರದ್ದು ಮಾಡಿ, ಉಳುವವನಿಗೆ ಭೂಮಿ ನೀಡಬೇಕು ಎನ್ನುವುದು. ಎರಡನೆಯದು ಭೂ ಒಡೆತನಕ್ಕೆ ಮಿತಿಯನ್ನು ತಂದು, ಹೆಚ್ಚುವರಿ ಭೂಮಿ ವಶಪಡಿಸಿಕೊಂಡು ಇಲ್ಲದವರಿಗೆ ಕೊಡಬೇಕು ಎಂಬುದು. ಆದರೆ ಮೊದಲನೆಯದು ಸ್ವಲ್ಪಮಟ್ಟಿಗೆ ಯಶಸ್ವಿಯಾಯಿತು. ಹಾಗಾಗಿ ಇತರೆ ಹಿಂದುಳಿದವರಿಗೆ ಸ್ವಲ್ಪ ಭೂಮಿ ಸಿಕ್ಕಿತು. ಎರಡನೆಯದು ಯಶಸ್ವಿಯಾಗಲಿಲ್ಲ. ಹಾಗಾಗಿ ದಲಿತರಿಗೆ, ಆದಿವಾಸಿಗಳಿಗೆ ಭೂಮಿ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಭೂ ಸುಧಾರಣಾ ಚಳುವಳಿಯಲ್ಲಿದ್ದ ಕಾಗೋಡು ತಿಮ್ಮಪ್ಪರವರಿಂದಲೂ ಜನರಿಗೆ ಭೂಮಿ ಕೊಡಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಈ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಆರಂಭವಾಯಿತು. ಇದಕ್ಕೆ ಎಚ್.ಎಸ್ ದೊರೆಸ್ವಾಮಿಯವರು ನೇತೃತ್ವ ವಹಿಸಿದರು. 2016ರಲ್ಲಿ ಅಂದು ಈ ಹೋರಾಟ ನಡೆದಿದ್ದು, ಬಿಜೆಪಿ ಪಕ್ಷದ ವಿರುದ್ದವಲ್ಲ, ಬದಲಿಗೆ ಕಾಂಗ್ರೆಸ್ ಸರ್ಕಾರದ ವಿರುದ್ದ. ನಮ್ಮ ಹೋರಾಟ ಯಾವುದೇ ಪಕ್ಷದ ವಿರುದ್ಧವಲ್ಲ. ಜನವಿರೋಧಿ ನೀತಿಯ ವಿರುದ್ದ. ಆದರೂ ಇಂದು ನಾವು ಹೋರಾಟ ಮಾಡುತ್ತಿರುವುದು ಕಾಂಗ್ರೆಸ್ ಪರ ಎಂದು ಹಲವರು ಬಿಂಬಿಸುತ್ತಿದ್ದಾರೆ. ನಾವು ಯಾವಾಗಲೂ ಆಳುವವರ ವಿರುದ್ಧವೇ ಹೊರತು ಪರವಲ್ಲ ಎಂಬುದಕ್ಕೆ ನಮ್ಮ ಹಿಂದಿನ ಮತ್ತು ಇಂದಿನ ಹೋರಾಟಗಳೇ ಸಾಕ್ಷಿ ಎಂದರು.

ಇಂದು ನಾವು 4 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಜನತಾ ಅಧಿವೇಶನದ ಮೂಲಕ ಒತ್ತಾಯಿಸುತ್ತೇವೆ. ಬಡವರಿಗೆ ಭೂಮಿ ಮತ್ತು ಪಟ್ಟಾ ನೀಡಬೇಕು, ಭೂಮಿಯ ಲೆಕ್ಕ ಮಾಡಿ, ಹೆಚ್ಚುವರಿ ಭೂಮಿಯನ್ನು ವಶಪಡಿಸಿಕೊಂಡು ಬಡವರಿಗೆ ಹಂಚಬೇಕು. ಭೂಮಿಗಾಗಿ ಹೊಸ ಅರ್ಜಿ ಹಾಕಲು ಅವಕಾಶ ಮಾಡಿಕೊಡಬೇಕು ಮತ್ತು ಭೂಮಿ ವಸತಿ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಸ್ಸು ಪಡೆಯಬೇಕು” ಎಂದು ಒತ್ತಾಯಿಸಿದರು.

ಜನತಾ ಅಧಿವೇಶನದಲ್ಲಿ ಹಿರಿಯ ಕಾರ್ಮಿಕ ಮುಖಂಡರಾದ ಆರ್‌.ಮಾನಸಯ್ಯನವರು “ಕಂದಾಯ ಭೂಮಿ ಮತ್ತು ಬಗರ್ ಹುಕುಂ ಸಮಸ್ಯೆ” ಎಂಬ ವಿಷಯದ ಕುರಿತು ಮಾತನಾಡಿ “ಸರ್ಕಾರ ಈಗ ಭೂಮಿ ಖಾಸಗೀಕರಣ ಮಾಡಲು ಹೊರಟಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಕರ್ನಾಟಕದ ಸಮಸ್ತ ಭೂಮಿಯನ್ನು ಉಳಿಸದ ಹೊರತು, ನಮ್ಮ ಭೂಮಿಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರೀ ಉದ್ಯಮಗಳ ಖಾಸಗೀಕರಣ ಆಯ್ತು, ವಿಮಾನ ನಿಲ್ದಾಣದ ಖಾಸಗೀಕರಣ ಆಯ್ತು, ರೈಲು ಖಾಗೀಕರಣ ಆಯ್ತು. ಈಗ ಸರ್ಕಾರ ಭೂಮಿಯ ಖಾಸಗೀಕರಣ ಮಾಡಲು ಹೊರಟಿದೆ. ಎಲ್ಲರಿಗೂ ಸೇರಿದ ಭೂಮಿಯನ್ನು ಕೆಲವೇ ಜನರ ಕೈಗೆ ಕೊಡಲು ಕಾನೂನು ಮಾಡುತ್ತಿರುವ ಸರ್ಕಾರದ ಮತ್ತು ಆಳುವ ವರ್ಗದ ನೀಚಾತಿ ನೀಚ ಕೆಲಸ ಇದು” ಎಂದು ಕಿಡಿಕಾರಿದರು.

ನಮಗೆ ಭೂಮಿಯೆಂದರೆ ನಮಗೆ ಕೇವಲ ನಿವೇಶನವಲ್ಲ, ಹೊಲವಲ್ಲ, ಮನೆಯಲ್ಲ, ಅದು ನಮ್ಮ ಬದುಕು. ಹಾಗಾಗಿ ಈ ಹೋರಾಟ ರೈತಾಪಿ ವರ್ಗಕ್ಕೆ ಸ್ವಾತಂತ್ರ ಚಳುವಳಿ ಇದ್ದಂತೆ. ರೈತರಿಗೆ ಸ್ವಾತಂತ್ರ ಚಳುವಳಿಯೆಂದರೆ ಭೂ ಚಳುವಳಿಯೇ ಆಗಿದೆ. ಸ್ವಾತಂತ್ರ ಎಂದರೆ ಏನು, ರೈತರಿಗೆ ಭೂಮಿ ಸಿಗುವುದೇ ಅಲ್ಲವೇ” ಎಂದು ಅವರು ಹೇಳಿದರು.

ದೇವರಾಜ ಅರಸುರವರು ಜಾರಿಗೆ ತಂದಿದ್ದ ಭೂ ಸುಧಾರಣೆ ಕಾಯ್ದೆಯ ಕಣ್ಣು, ಮಿದುಳು, ಬಾಯಿ ಎಲ್ಲವನ್ನೂ ಕಿತ್ತುಕೊಂಡಾಗಿದೆ. ಈಗ ಜಠರಕ್ಕೆ ಕೈ ಹಾಕಿದೆ. ನಾವು ಇನ್ನೂ ಎಚ್ಚೆತ್ತುಕೊಳ್ಳದಿದ್ದರೇ, ನಮಗೆ ಉಳಿಗಾಲವಿಲ್ಲ” ಎಂದು ಆರ್ ಮಾನಸಯ್ಯ ತಿಳಿಸಿದರು.

ಜನತಾ ಅಧಿವೇಶನದ ಸ್ಥಳಕ್ಕೆ ಮಾಜಿ ಸಚಿವರುಗಳಾದ ಹೆಚ್.ಡಿ.ರೇವಣ್ಣ, ಡಿ ಆರ್ ಪಾಟೀಲ್ ಮತ್ತು ಬಿ ಆರ್ ಪಾಟೀಲ್ ಭೇಟಿ ನೀಡಿ
ರೈತ ವಿರೋಧಿ ಸುಗ್ರೀವಾಜ್ಞೆಗಳ‌ ವಿರುದ್ದ ಸದನದಲ್ಲಿ‌ ಮಾತನಾಡುವುದಾಗಿ ಹಾಗೂ ಈ ಹೋರಾಟದಲ್ಲಿ ಜೊತೆಗೂಡುವುದಾಗಿ ಭರವಸೆ ನೀಡಿದರು.


ಇದನ್ನೂ ಓದಿ: ಈ ಸುಗ್ರೀವಾಜ್ಞೆಗಳು ಅಸಾಂವಿಧಾನಿಕವಾಗಿದ್ದು, ರೈತರ ಗುರುತನ್ನೇ ಅಳಿಸಿಹಾಕಲಿವೆ: ಜಸ್ಟೀಸ್ ನಾಗಮೋಹನ್ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...