Homeಕರ್ನಾಟಕಅಂಬೇಡ್ಕರ್ ಕನಸಿನ ಭೂ ಹಂಚಿಕೆ ಜಾರಿಯಾಗಲಿ: ನೂರ್ ಶ್ರೀಧರ್

ಅಂಬೇಡ್ಕರ್ ಕನಸಿನ ಭೂ ಹಂಚಿಕೆ ಜಾರಿಯಾಗಲಿ: ನೂರ್ ಶ್ರೀಧರ್

ದೇವರಾಜ ಅರಸುರವರು ಜಾರಿಗೆ ತಂದಿದ್ದ ಭೂ ಸುಧಾರಣೆ ಕಾಯ್ದೆಯ ಕಣ್ಣು, ಮಿದುಳು, ಬಾಯಿ ಎಲ್ಲವನ್ನೂ ಕಿತ್ತುಕೊಂಡಾಗಿದೆ. ಈಗ ಜಠರಕ್ಕೆ ಕೈ ಹಾಕಿದೆ. ನಾವು ಇನ್ನೂ ಎಚ್ಚೆತ್ತುಕೊಳ್ಳದಿದ್ದರೇ, ನಮಗೆ ಉಳಿಗಾಲವಿಲ್ಲ” ಎಂದು ಆರ್ ಮಾನಸಯ್ಯ ತಿಳಿಸಿದರು.

- Advertisement -
- Advertisement -

ಭೂಮಿಗಾಗಿನ ಈ ಹೋರಾಟ ಇಂದು ನಿನ್ನೆಯದಲ್ಲ. ಇದಕ್ಕೆ 100 ವರ್ಷಗಳ ಹೋರಾಟದ ಪರಂಪರೆಯಿದೆ. 1932 ರಲ್ಲಿ ಲಾಹೋರ್‌ನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಭೂಸುಧಾರಣೆಯ ನಿರ್ಧಾರವನ್ನು ಕೈಗೊಂಡು, ಉಳುವವನೇ ಭೂ ಒಡೆಯ ಎಂಬ ತೀರ್ಮಾನಕ್ಕೆ ಬರಲಾಗಿತ್ತು. ಇಡೀ ಭೂಮಿಯನ್ನು ರಾಷ್ಟ್ರೀಕರಣಗೊಳಿಸಿ, ಬಡಜನರಿಗೆ ಸಮಾನವಾಗಿ ಹಂಚಬೇಕು ಎಂಬುದು ಅಂಬೇಡ್ಕರ್ ಅವರ ಆಶಯವಾಗಿತ್ತು. ಅದಕ್ಕಾಗಿ ಇಂದಿಗೂ ಹೋರಾಟ ಮುಂದುವರೆದಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೂರ್ ಶ್ರೀಧರ್ ತಿಳಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಿನ್ನೆಯಿಂದ ನಡೆಯುತ್ತಿರುವ ರೈತ, ದಲಿತ ಮತ್ತು ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡಿರುವ ಐಕ್ಯ ಹೋರಾಟದ ಎರಡನೇ ದಿನವಾದ ಇಂದು ಪರ್ಯಾಯ ಜನತಾ ಅಧಿವೇಶನದಲ್ಲಿ ಅವರು, ‘ರಾಜ್ಯದ ಬಡಜನರ ಭೂಮಿ ಮತ್ತು ವಸತಿ ಸಮಸ್ಯೆ’ ಎಂಬ ವಿಷಯದ ಕುರಿತು ಮಾತನಾಡಿದರು.

“ಇಂದು ಅಥವಾ ನಾಳೆಯೊಳಗೆ ಭೂಸುಧಾರಣಾ ತಿದ್ದುಪಡಿ ಕಾಯ್ದೆಯಂತಹ ಬಡಜನ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡಲು ಸರ್ಕಾರ ಹೊರಟಿದೆ. ಆದರೆ ವಿರೋಧ ಪಕ್ಷಗಳು ಇದನ್ನು ಜಾರಿ ಮಾಡಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿವೆ. ಜೊತೆಗೆ ಈ ಕಾಯ್ದೆಗಳನ್ನು ಜಾರಿಗೆ ತರಕೂಡದು ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದೆ. ಈ ಸಂದರ್ಭದಲ್ಲಿ ನಾವು ಪರ್ಯಾಯ ಅಧಿವೇಶನ ನಡೆಸುತ್ತಿದ್ದೇವೆ. ಹಾಗಾಗಿ ಇದು ಅತ್ಯಂತ ಮಹತ್ವವುಳ್ಳದ್ದಾಗಿದೆ” ಎಂದು ನೂರ್ ಶ್ರೀಧರ್ ಹೇಳಿದ್ದಾರೆ.

ಸಂವಿಧಾನದಲ್ಲಿ ದೇಶದ ಬಡವರಿಗೆ ಭೂಮಿ ನೀಡಬೇಕು ಎಂದು ಹೇಳಲಾಗಿದೆ. ಪ್ರತಿ ಕುಟುಂಬಕ್ಕೆ ಶಕ್ತ್ಯಾನುಸಾರ ಭೂಮಿ ಕೊಡಬೇಕು ಎಂಬ ವಿಷಯವನ್ನು ಸಂವಿಧಾನದಲ್ಲಿ ಸೇರಿಸಲಾಗಿದೆ. ಆದರೆ ಆಳುವ ಸರ್ಕಾರಗಳ ಹುನ್ನಾರದಿಂದ ಇದು ಇಂದಿಗೂ ನೆರೆವೇರಲ್ಲ. ಆದರೂ  ಭೂಮಿ ಬಂಡವಾಳಶಾಹಿಗಳ ಕೈಗೆ ಹೋಗಬಾರದು ಎಂದು ನಿರ್ಣಯಿಸಲಾಗಿತ್ತು. ಇದರ ನಂತರ ದೇಶದಾದ್ಯಂತ ಸಾಕಷ್ಟು ಹೋರಾಟ ನಡೆದು, ದೇವರಾಜ ಅರಸು ಕಾಲದಲ್ಲಿ ಭೂ ಸುಧಾರಣೆಗಳ ಪರ್ವ ಆರಂಭವಾಯಿತು ಎಂದರು.

ಅರಸುರವರ ಕಾಲದಲ್ಲಿ ಎರಡು ಪ್ರಮುಖ ವಿಷಯಗಳನ್ನು ಜಾರಿಗೆ ತರಬೇಕು ಎಂದು ಯೋಜನೆ ರೂಪಿಸಲಾಯಿತು. ಮೊದಲನೆಯದು, ಗೇಣಿಪದ್ದತಿಯನ್ನ ರದ್ದು ಮಾಡಿ, ಉಳುವವನಿಗೆ ಭೂಮಿ ನೀಡಬೇಕು ಎನ್ನುವುದು. ಎರಡನೆಯದು ಭೂ ಒಡೆತನಕ್ಕೆ ಮಿತಿಯನ್ನು ತಂದು, ಹೆಚ್ಚುವರಿ ಭೂಮಿ ವಶಪಡಿಸಿಕೊಂಡು ಇಲ್ಲದವರಿಗೆ ಕೊಡಬೇಕು ಎಂಬುದು. ಆದರೆ ಮೊದಲನೆಯದು ಸ್ವಲ್ಪಮಟ್ಟಿಗೆ ಯಶಸ್ವಿಯಾಯಿತು. ಹಾಗಾಗಿ ಇತರೆ ಹಿಂದುಳಿದವರಿಗೆ ಸ್ವಲ್ಪ ಭೂಮಿ ಸಿಕ್ಕಿತು. ಎರಡನೆಯದು ಯಶಸ್ವಿಯಾಗಲಿಲ್ಲ. ಹಾಗಾಗಿ ದಲಿತರಿಗೆ, ಆದಿವಾಸಿಗಳಿಗೆ ಭೂಮಿ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಭೂ ಸುಧಾರಣಾ ಚಳುವಳಿಯಲ್ಲಿದ್ದ ಕಾಗೋಡು ತಿಮ್ಮಪ್ಪರವರಿಂದಲೂ ಜನರಿಗೆ ಭೂಮಿ ಕೊಡಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಈ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಆರಂಭವಾಯಿತು. ಇದಕ್ಕೆ ಎಚ್.ಎಸ್ ದೊರೆಸ್ವಾಮಿಯವರು ನೇತೃತ್ವ ವಹಿಸಿದರು. 2016ರಲ್ಲಿ ಅಂದು ಈ ಹೋರಾಟ ನಡೆದಿದ್ದು, ಬಿಜೆಪಿ ಪಕ್ಷದ ವಿರುದ್ದವಲ್ಲ, ಬದಲಿಗೆ ಕಾಂಗ್ರೆಸ್ ಸರ್ಕಾರದ ವಿರುದ್ದ. ನಮ್ಮ ಹೋರಾಟ ಯಾವುದೇ ಪಕ್ಷದ ವಿರುದ್ಧವಲ್ಲ. ಜನವಿರೋಧಿ ನೀತಿಯ ವಿರುದ್ದ. ಆದರೂ ಇಂದು ನಾವು ಹೋರಾಟ ಮಾಡುತ್ತಿರುವುದು ಕಾಂಗ್ರೆಸ್ ಪರ ಎಂದು ಹಲವರು ಬಿಂಬಿಸುತ್ತಿದ್ದಾರೆ. ನಾವು ಯಾವಾಗಲೂ ಆಳುವವರ ವಿರುದ್ಧವೇ ಹೊರತು ಪರವಲ್ಲ ಎಂಬುದಕ್ಕೆ ನಮ್ಮ ಹಿಂದಿನ ಮತ್ತು ಇಂದಿನ ಹೋರಾಟಗಳೇ ಸಾಕ್ಷಿ ಎಂದರು.

ಇಂದು ನಾವು 4 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಜನತಾ ಅಧಿವೇಶನದ ಮೂಲಕ ಒತ್ತಾಯಿಸುತ್ತೇವೆ. ಬಡವರಿಗೆ ಭೂಮಿ ಮತ್ತು ಪಟ್ಟಾ ನೀಡಬೇಕು, ಭೂಮಿಯ ಲೆಕ್ಕ ಮಾಡಿ, ಹೆಚ್ಚುವರಿ ಭೂಮಿಯನ್ನು ವಶಪಡಿಸಿಕೊಂಡು ಬಡವರಿಗೆ ಹಂಚಬೇಕು. ಭೂಮಿಗಾಗಿ ಹೊಸ ಅರ್ಜಿ ಹಾಕಲು ಅವಕಾಶ ಮಾಡಿಕೊಡಬೇಕು ಮತ್ತು ಭೂಮಿ ವಸತಿ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಸ್ಸು ಪಡೆಯಬೇಕು” ಎಂದು ಒತ್ತಾಯಿಸಿದರು.

ಜನತಾ ಅಧಿವೇಶನದಲ್ಲಿ ಹಿರಿಯ ಕಾರ್ಮಿಕ ಮುಖಂಡರಾದ ಆರ್‌.ಮಾನಸಯ್ಯನವರು “ಕಂದಾಯ ಭೂಮಿ ಮತ್ತು ಬಗರ್ ಹುಕುಂ ಸಮಸ್ಯೆ” ಎಂಬ ವಿಷಯದ ಕುರಿತು ಮಾತನಾಡಿ “ಸರ್ಕಾರ ಈಗ ಭೂಮಿ ಖಾಸಗೀಕರಣ ಮಾಡಲು ಹೊರಟಿದೆ” ಎಂದು ಆತಂಕ ವ್ಯಕ್ತಪಡಿಸಿದರು.

“ಕರ್ನಾಟಕದ ಸಮಸ್ತ ಭೂಮಿಯನ್ನು ಉಳಿಸದ ಹೊರತು, ನಮ್ಮ ಭೂಮಿಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರೀ ಉದ್ಯಮಗಳ ಖಾಸಗೀಕರಣ ಆಯ್ತು, ವಿಮಾನ ನಿಲ್ದಾಣದ ಖಾಸಗೀಕರಣ ಆಯ್ತು, ರೈಲು ಖಾಗೀಕರಣ ಆಯ್ತು. ಈಗ ಸರ್ಕಾರ ಭೂಮಿಯ ಖಾಸಗೀಕರಣ ಮಾಡಲು ಹೊರಟಿದೆ. ಎಲ್ಲರಿಗೂ ಸೇರಿದ ಭೂಮಿಯನ್ನು ಕೆಲವೇ ಜನರ ಕೈಗೆ ಕೊಡಲು ಕಾನೂನು ಮಾಡುತ್ತಿರುವ ಸರ್ಕಾರದ ಮತ್ತು ಆಳುವ ವರ್ಗದ ನೀಚಾತಿ ನೀಚ ಕೆಲಸ ಇದು” ಎಂದು ಕಿಡಿಕಾರಿದರು.

ನಮಗೆ ಭೂಮಿಯೆಂದರೆ ನಮಗೆ ಕೇವಲ ನಿವೇಶನವಲ್ಲ, ಹೊಲವಲ್ಲ, ಮನೆಯಲ್ಲ, ಅದು ನಮ್ಮ ಬದುಕು. ಹಾಗಾಗಿ ಈ ಹೋರಾಟ ರೈತಾಪಿ ವರ್ಗಕ್ಕೆ ಸ್ವಾತಂತ್ರ ಚಳುವಳಿ ಇದ್ದಂತೆ. ರೈತರಿಗೆ ಸ್ವಾತಂತ್ರ ಚಳುವಳಿಯೆಂದರೆ ಭೂ ಚಳುವಳಿಯೇ ಆಗಿದೆ. ಸ್ವಾತಂತ್ರ ಎಂದರೆ ಏನು, ರೈತರಿಗೆ ಭೂಮಿ ಸಿಗುವುದೇ ಅಲ್ಲವೇ” ಎಂದು ಅವರು ಹೇಳಿದರು.

ದೇವರಾಜ ಅರಸುರವರು ಜಾರಿಗೆ ತಂದಿದ್ದ ಭೂ ಸುಧಾರಣೆ ಕಾಯ್ದೆಯ ಕಣ್ಣು, ಮಿದುಳು, ಬಾಯಿ ಎಲ್ಲವನ್ನೂ ಕಿತ್ತುಕೊಂಡಾಗಿದೆ. ಈಗ ಜಠರಕ್ಕೆ ಕೈ ಹಾಕಿದೆ. ನಾವು ಇನ್ನೂ ಎಚ್ಚೆತ್ತುಕೊಳ್ಳದಿದ್ದರೇ, ನಮಗೆ ಉಳಿಗಾಲವಿಲ್ಲ” ಎಂದು ಆರ್ ಮಾನಸಯ್ಯ ತಿಳಿಸಿದರು.

ಜನತಾ ಅಧಿವೇಶನದ ಸ್ಥಳಕ್ಕೆ ಮಾಜಿ ಸಚಿವರುಗಳಾದ ಹೆಚ್.ಡಿ.ರೇವಣ್ಣ, ಡಿ ಆರ್ ಪಾಟೀಲ್ ಮತ್ತು ಬಿ ಆರ್ ಪಾಟೀಲ್ ಭೇಟಿ ನೀಡಿ
ರೈತ ವಿರೋಧಿ ಸುಗ್ರೀವಾಜ್ಞೆಗಳ‌ ವಿರುದ್ದ ಸದನದಲ್ಲಿ‌ ಮಾತನಾಡುವುದಾಗಿ ಹಾಗೂ ಈ ಹೋರಾಟದಲ್ಲಿ ಜೊತೆಗೂಡುವುದಾಗಿ ಭರವಸೆ ನೀಡಿದರು.


ಇದನ್ನೂ ಓದಿ: ಈ ಸುಗ್ರೀವಾಜ್ಞೆಗಳು ಅಸಾಂವಿಧಾನಿಕವಾಗಿದ್ದು, ರೈತರ ಗುರುತನ್ನೇ ಅಳಿಸಿಹಾಕಲಿವೆ: ಜಸ್ಟೀಸ್ ನಾಗಮೋಹನ್ ದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....