Homeಮುಖಪುಟಕುಸ್ತಿಪಟುಗಳಿಗೆ ನ್ಯಾಯ ಸಿಗುವವರೆಗೂ ಹೋರಾಡುತ್ತೇವೆ: ರೈತ ನಾಯಕರ ಘೋಷಣೆ

ಕುಸ್ತಿಪಟುಗಳಿಗೆ ನ್ಯಾಯ ಸಿಗುವವರೆಗೂ ಹೋರಾಡುತ್ತೇವೆ: ರೈತ ನಾಯಕರ ಘೋಷಣೆ

- Advertisement -
- Advertisement -

“ನಾಳೆ ಹರಿಯಾಣದಲ್ಲಿ ನಡೆಯಲಿರುವ ಸಭೆಯಲ್ಲಿ ಕುಸ್ತಿಪಟುಗಳ ಪ್ರತಿಭಟನೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು” ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಹರಿಯಾಣದ ರೈತರು ಮತ್ತು ಖಾಪ್‌ ಪಂಚಾಯಿತಿಗಳ ಮುಖಂಡರು ಕುಸ್ತಿಪಟುಗಳಿಗೆ ಬೆಂಬಲವನ್ನು ನೀಡುತ್ತಿದ್ದು, ಮುಂದೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ನಿರ್ಧರಿಸುವುದು ಬಾಕಿ ಇದೆ.

ಸೋಮವಾರ ತಮ್ಮ ಪದಕಗಳನ್ನು ಗಂಗಾ ನದಿಗೆ ಎಸೆಯಲು ಮುಂದಾಗಿದ್ದ ಕುಸ್ತಿಪಟುಗಳ ಮನವೊಲಿಸಿದ ಟಿಕಾಯತ್‌ ಅವರು ಇಂದು ಮುಜಾಫರ್‌ನಗರದಲ್ಲಿ ನಡೆದ ಬೃಹತ್ ಸಭೆಯಲ್ಲಿ ಮಾತನಾಡಿದ್ದು, “ಅಗತ್ಯವಿದ್ದರೆ ನಾವು ಭಾರತದ ರಾಷ್ಟ್ರಪತಿಗಳ ಬಳಿಗೆ ಹೋಗುತ್ತೇವೆ. ನಾವು ನಿಮ್ಮೊಂದಿಗಿದ್ದೇವೆ, ನೀವು ಚಿಂತಿಸಬೇಕಾಗಿಲ್ಲ” ಎಂದು ಗುಡುಗಿದ್ದಾರೆ.

“ಗಂಗೆಯಲ್ಲಿ ಪದಕಗಳನ್ನು ಮುಳುಗಿಸಬೇಡಿ, ಹರಾಜಿಗೆ ಇರಿಸಿ ಎಂದು ನಾನು ಅವರಿಗೆ ಹೇಳಿದ್ದೇನೆ, ಇಡೀ ವಿಶ್ವವೇ ಮುಂದೆ ಬಂದು ಹರಾಜು ನಿಲ್ಲಿಸುವಂತೆ ಕೇಳುತ್ತದೆ” ಎಂದು ಅವರು ತಿಳಿಸಿದ್ದಾರೆ.

ರೈತರು ಮತ್ತು ಖಾಪ್ ಮುಖಂಡರು ಕುಸ್ತಿಪಟುಗಳಿಗೆ ಏಕೆ ಬೆಂಬಲ ನೀಡುತ್ತಿದ್ದಾರೆ ಎಂಬುದರ ಕುರಿತು ಪ್ರತಿಕ್ರಿಯಿಸಿರುವ ಟಿಕಾಯತ್, “ನಮ್ಮ ಪರಿವಾರ ದೊಡ್ಡದಾಗಿದ್ದರೆ ಒಳ್ಳೆಯದು” ಎಂದಿದ್ದಾರೆ.

“ಕೇಂದ್ರ ಸರ್ಕಾರ ಏನು ಮಾಡುತ್ತಿದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳಬೇಕು. ಅವರು ಬಿಹಾರದಲ್ಲಿ ಲಾಲು ಯಾದವ್ ಅವರ ಕುಟುಂಬವನ್ನು ಒಡೆದರು. ಮುಲಾಯಂ ಸಿಂಗ್ ಯಾದವ್ ಅವರ ಕುಟುಂಬದೊಂದಿಗೆ ಅವರು ಏನು ಮಾಡಿದ್ದಾರೆಂದು ನೋಡಿ. ರಾಜಸ್ಥಾನದಲ್ಲಿ ಅದೇ ರಾಜಕೀಯ ನಡೆಯುತ್ತಿದೆ” ಎಂದು ಸಭೆಯಲ್ಲಿದ್ದ ರೈತರಿಗೆ ತಿಳಿಸಿದ್ದಾರೆ.

ತಮ್ಮ ಪ್ರತಿಭಟನೆಯ ವೇಳೆ ದಿಲ್ಲಿ ಪೋಲೀಸರು ದಬ್ಬಾಳಿಕೆ ನಡೆಸಿದ ಒಂದು ದಿನದ ನಂತರ, ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾದಲ್ಲಿ ಎಸೆಯಲು ನಿರ್ಧರಿಸಿ ಹರಿದ್ವಾರಕ್ಕೆ ತೆರಳಿದ್ದರು. ಆದರೆ ಭಾರತೀಯ ಕಿಸಾನ್ ಒಕ್ಕೂಟದ ಮುಖ್ಯಸ್ಥರಾದ ಟಿಕಾಯತ್‌ ಮತ್ತು ಹರಿಯಾಣದ ಖಾಪ್ ನಾಯಕರ ಮಧ್ಯಸ್ಥಿಕೆಯ ನಂತರ ತಮ್ಮ ನಿರ್ಧಾರದಿಂದ ಕುಸ್ತಿಪಟುಗಳು ಹಿಂದೆ ಸರಿದರು.

ಅಪ್ರಾಪ್ತ ಯುವತಿ ಸೇರಿದಂತೆ ಏಳು ಅಥ್ಲೀಟ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎರಡು ಪ್ರಕರಣ ದಾಖಲಾಗಿವೆ. ಆತನ ಬಂಧನಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ಹೋರಾಡುತ್ತಿದ್ದಾರೆ.

ಇದನ್ನೂ ಓದಿರಿ: ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

ಬಿಜೆಪಿ ಸಂಸದರೂ ಆಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಪ್ರತಿಕ್ರಿಯಿಸಿದ್ದು, “ನನ್ನ ವಿರುದ್ಧದ ಆರೋಪ ಸಾಬೀತಾದರೆ ಯಾವುದೇ ಶಿಕ್ಷೆಯನ್ನು ಸ್ವೀಕರಿಸುತ್ತೇನೆ. ನನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ, ನಿಮ್ಮ ಬಳಿ (ಕುಸ್ತಿಪಟುಗಳು) ಏನಾದರೂ ಸಾಕ್ಷ್ಯಾಧಾರಗಳಿದ್ದರೆ ಅದನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಯಾವುದೇ ಶಿಕ್ಷೆಯನ್ನು ಸ್ವೀಕರಿಸಲು ನಾನು ಸಿದ್ಧನಿದ್ದೇನೆ” ಎಂದಿದ್ದಾರೆ.

ಈ ವಿಷಯದ ಬಗ್ಗೆ ತನ್ನ ಮೊದಲ ಪ್ರತಿಕ್ರಿಯೆ ನೀಡಿರುವ ಸರ್ಕಾರವು, ಕುಸ್ತಿಪಟುಗಳ ವಿರುದ್ಧ ಯಾವುದೇ ಕ್ಷಿಪ್ರ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನಿನ್ನೆ ನೀಡಿದೆ. ಪೊಲೀಸ್ ತನಿಖೆಯ ಪೂರ್ಣಗೊಳ್ಳುವವರೆಗೂ ಕಾಯಬೇಕು ಎಂದು ತಿಳಿಸಿದೆ.

“ದೆಹಲಿ ಪೊಲೀಸರ ತನಿಖೆ ಮುಗಿಯುವವರೆಗೂ ಕಾಯಬೇಕೆಂದು ನಾನು ಕ್ರೀಡಾಪಟುಗಳಲ್ಲಿ ಕೇಳಿಕೊಳ್ಳುತ್ತೇನೆ. ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ ಮತ್ತು ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ದಾಖಲಿಸಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೆ, ಆಟಗಾರರು ಮತ್ತು ಕ್ರೀಡೆಗೆ ಹಾನಿಯಾಗುವ ಯಾವುದೇ ಕ್ರಮವನ್ನು ತೆಗೆದುಕೊಳ್ಳಬಾರದು” ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...