Homeಮುಖಪುಟಒಬಿಸಿಗಳಿಗೆ ರಾಜಕೀಯ ಮೀಸಲಾತಿ ನೀಡಿಯೇ ಚುನಾವಣೆಗೆ ಹೋಗುತ್ತೇವೆ: ಯೋಗಿ ಆದಿತ್ಯನಾಥ್

ಒಬಿಸಿಗಳಿಗೆ ರಾಜಕೀಯ ಮೀಸಲಾತಿ ನೀಡಿಯೇ ಚುನಾವಣೆಗೆ ಹೋಗುತ್ತೇವೆ: ಯೋಗಿ ಆದಿತ್ಯನಾಥ್

- Advertisement -
- Advertisement -

“ಉತ್ತರ ಪ್ರದೇಶ ರಾಜ್ಯವು ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿಗಳಿಗೆ) ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡಲಿದೆ ಮತ್ತು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಅಡಿಯಲ್ಲಿ ಸಮೀಕ್ಷೆ ನಡೆಸಲಾಗುತ್ತದೆ” ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

“ಸಮೀಕ್ಷೆ ಮತ್ತು ಮೀಸಲಾತಿ ನೀಡುವ ಮೊದಲು ಚುನಾವಣೆ ನಡೆಸುವುದಿಲ್ಲ. ಅಗತ್ಯ ಬಿದ್ದರೆ ರಾಜ್ಯವು ತಕ್ಷಣವೇ ಚುನಾವಣೆ ಅಧಿಸೂಚನೆಗೆ ಅಲಹಾಬಾದ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಹೋಗಲಿದೆ” ಎಂದಿದ್ದಾರೆ.

“ನಾವು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಆಧಾರದ ಮೇಲೆ ಒಬಿಸಿಗಳ ಸಮೀಕ್ಷೆ ನಡೆಸುವ ಆಯೋಗವನ್ನು ರಚಿಸುತ್ತೇವೆ. ಒಬಿಸಿಗಳಿಗೆ ಮೀಸಲಾತಿ ನೀಡದೆ ನಾವು ಚುನಾವಣೆಗೆ ಹೋಗುವುದಿಲ್ಲ. ಅಗತ್ಯವಿದ್ದರೆ, ಹೈಕೋರ್ಟ್ ಆದೇಶದ ವಿರುದ್ಧ ನಾವು ಸುಪ್ರೀಂ ಕೋರ್ಟ್ಗೆ ಹೋಗುತ್ತೇವೆ” ಎಂದು ಆದಿತ್ಯನಾಥ್ ಹೇಳಿದ್ದಾರೆ.

ಸುಪ್ರೀಂಕೋರ್ಟ್ ಆದೇಶದ ಅನ್ವಯ ಒಬಿಸಿಗಳಿಗೆ ಮೀಸಲಾತಿ ಹಂಚದೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಸಂಬಂಧ ಹೊರಡಿಸಲಾಗಿದ್ದ ರಾಜ್ಯ ಸರ್ಕಾರದ ಕರಡು ಅಧಿಸೂಚನೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಅಲಹಾಬಾದ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳಾದ ಡಿ.ಕೆ.ಉಪಾಧ್ಯಾಯ, ಸೌರವ್ ಲಾವಾನಿಯಾ ಅವರ ವಿಭಾಗೀಯ ಪೀಠವು ಒಬಿಸಿಗಳಿಗೆ ಸುಪ್ರೀಂಕೋರ್ಟ್ ಆದೇಶದಂತೆ ಮೀಸಲಾತಿ ನೀಡಬೇಕೆಂದು ಹೇಳಿದೆ. ಡಿಸೆಂಬರ್ 5 ರ ರಾಜ್ಯದ ಕರಡು ಅಧಿಸೂಚನೆಯನ್ನು ವಜಾಗೊಳಿಸಿದೆ.

ರಾಜ್ಯದ 17 ಮುನ್ಸಿಪಲ್ ಕಾರ್ಪೊರೇಷನ್‌ಗಳ ಮೇಯರ್‌ಗಳು, 200 ಮುನ್ಸಿಪಲ್ ಕೌನ್ಸಿಲ್‌ಗಳು ಮತ್ತು 545 ನಗರ ಪಂಚಾಯತ್‌ಗಳ ಅಧ್ಯಕ್ಷರಿಗೆ ಮೀಸಲಾತಿ ಸ್ಥಾನಗಳ ತಾತ್ಕಾಲಿಕ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿತು. 2017ರ ಚುನಾವಣೆಗಳಲ್ಲಿ ಒದಗಿಸಿದಂತೆ ಸುಮಾರು 30 ಪ್ರತಿಶತದಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿತ್ತು.

ನಾಲ್ಕು ಮೇಯರ್ ಸ್ಥಾನಗಳು (ಅಲಿಗಢ್, ಮಥುರಾ-ವೃಂದಾವನ, ಮೀರತ್ ಮತ್ತು ಪ್ರಯಾಗ್ರಾಜ್) ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾಗಿತ್ತು. ಅಲ್ಲದೆ, 200 ಮುನಿಸಿಪಲ್ ಕೌನ್ಸಿಲ್‌ಗಳಲ್ಲಿ ಅಧ್ಯಕ್ಷ ಸ್ಥಾನಗಳು ಒಬಿಸಿಗಳಿಗೆ, 545 ನಗರ ಪಂಚಾಯತ್‌ಗಳಲ್ಲಿ 147 ಅಧ್ಯಕ್ಷ ಸ್ಥಾನಗಳನ್ನು ಒಬಿಸಿ ಅಭ್ಯರ್ಥಿಗಳಿಗೆ ಮೀಸಲಿಡಲಾಗಿತ್ತು.

ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ಕಡ್ಡಾಯ ಸಮೀಕ್ಷೆಯಿಲ್ಲದೆ ಒಬಿಸಿಗಳಿಗೆ ಮೀಸಲಾತಿ ನೀಡುವ ಯೋಜನೆಗೆ ವಿರೋಧ ವ್ಯಕ್ತವಾಗಿತ್ತು. ವಿರೋಧ ಪಕ್ಷಗಳಾದ ಎಸ್‌ಪಿ, ಬಿಎಸ್‌ಪಿ ಸರ್ಕಾರದ ನಡೆಯನ್ನು ಟೀಕಿಸಿವೆ.

ಸರ್ಕಾರದ ಕ್ರಮವನ್ನು ಆಕ್ಷೇಪಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಯಿತು. ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನ ಸೂತ್ರವನ್ನು ಅನುಸರಿಸಬೇಕು ಮತ್ತು ಮೀಸಲಾತಿ ನಿಗದಿಪಡಿಸುವ ಮೊದಲು ಒಬಿಸಿಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಲು ಆಯೋಗವನ್ನು ರಚಿಸಬೇಕು ಎಂದು ಅರ್ಜಿದಾರರು ಪ್ರತಿಪಾದಿಸಿದ್ದರು.

ಇದನ್ನೂ ಓದಿರಿ: ತೀರ್ಥಹಳ್ಳಿ: ನಾಡಗೀತೆ ತಿರುಚಿದ ವ್ಯಕ್ತಿಯಿಂದ ಕುವೆಂಪು ಕುರಿತು ಉಪನ್ಯಾಸ; ಕಾರ್ಯಕ್ರಮ ನಡೆಸದಂತೆ ಜನರ ಎಚ್ಚರಿಕೆ

ಒಬಿಸಿ ಕೋಟಾದ ಶೇಕಡಾವಾರು ಪ್ರಮಾಣವನ್ನು ನಿರ್ಧರಿಸುವ ಮೊದಲು ಒಬಿಸಿಗಳ ಕುರಿತು ಸಮಕಾಲೀನ ಡೇಟಾವನ್ನು ಹೊಂದಲು ರಾಜ್ಯಗಳು ‘ಟ್ರಿಪಲ್ ಟೆಸ್ಟ್ ಸಮೀಕ್ಷೆ’ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತು. ರಾಜಕೀಯ ಕೋಟಾದ ಮಾನದಂಡವು ಉದ್ಯೋಗ ಮತ್ತು ಶಿಕ್ಷಣದ ಮಾನದಂಡಕ್ಕಿಂತ ಭಿನ್ನವಾಗಿದೆ. ಹಿಂದುಳಿದಿರುವಿಕೆಯ ಸ್ವರೂಪ ಮತ್ತು ಮಾದರಿಗಳನ್ನು ಸರಿಪಡಿಸಲು ಸಮೀಕ್ಷೆಯ ಅಗತ್ಯವಿದೆ ಎಂದು ವಾದಿಸಲಾಗಿತ್ತು.

ತ್ರಿವಳಿ ಪರೀಕ್ಷಾ ಸೂತ್ರದ ಪ್ರಕಾರ ರಾಜ್ಯಗಳು ಆಯೋಗವನ್ನು ನೇಮಿಸಬೇಕು, ಸಮುದಾಯದ ಮೇಲೆ ಪ್ರಮಾಣೀಕರಿಸಬಹುದಾದ ಡೇಟಾವನ್ನು ಸಂಗ್ರಹಿಸಬೇಕು ಮತ್ತು ಪ್ರತಿ ಸೀಟಿನಲ್ಲಿ ಒಟ್ಟು ಮೀಸಲಾತಿ ಶೇಕಡಾ 50 ಕ್ಕಿಂತ ಹೆಚ್ಚಿಲ್ಲದ ರೀತಿಯಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಹಂಚಬೇಕು.

ತ್ರಿವಳಿ ಪರೀಕ್ಷಾ ಸೂತ್ರದಂತೆ ಕ್ಷಿಪ್ರ ಸಮೀಕ್ಷೆ ನಡೆಸಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಮಾಡಿದ್ದ ವಾದವನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ತಳ್ಳಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...