Homeಮುಖಪುಟಒಬಿಸಿಗಳಿಗೆ ರಾಜಕೀಯ ಮೀಸಲಾತಿ ನೀಡಿಯೇ ಚುನಾವಣೆಗೆ ಹೋಗುತ್ತೇವೆ: ಯೋಗಿ ಆದಿತ್ಯನಾಥ್

ಒಬಿಸಿಗಳಿಗೆ ರಾಜಕೀಯ ಮೀಸಲಾತಿ ನೀಡಿಯೇ ಚುನಾವಣೆಗೆ ಹೋಗುತ್ತೇವೆ: ಯೋಗಿ ಆದಿತ್ಯನಾಥ್

- Advertisement -
- Advertisement -

“ಉತ್ತರ ಪ್ರದೇಶ ರಾಜ್ಯವು ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿಗಳಿಗೆ) ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡಲಿದೆ ಮತ್ತು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಅಡಿಯಲ್ಲಿ ಸಮೀಕ್ಷೆ ನಡೆಸಲಾಗುತ್ತದೆ” ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

“ಸಮೀಕ್ಷೆ ಮತ್ತು ಮೀಸಲಾತಿ ನೀಡುವ ಮೊದಲು ಚುನಾವಣೆ ನಡೆಸುವುದಿಲ್ಲ. ಅಗತ್ಯ ಬಿದ್ದರೆ ರಾಜ್ಯವು ತಕ್ಷಣವೇ ಚುನಾವಣೆ ಅಧಿಸೂಚನೆಗೆ ಅಲಹಾಬಾದ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಹೋಗಲಿದೆ” ಎಂದಿದ್ದಾರೆ.

“ನಾವು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಆಧಾರದ ಮೇಲೆ ಒಬಿಸಿಗಳ ಸಮೀಕ್ಷೆ ನಡೆಸುವ ಆಯೋಗವನ್ನು ರಚಿಸುತ್ತೇವೆ. ಒಬಿಸಿಗಳಿಗೆ ಮೀಸಲಾತಿ ನೀಡದೆ ನಾವು ಚುನಾವಣೆಗೆ ಹೋಗುವುದಿಲ್ಲ. ಅಗತ್ಯವಿದ್ದರೆ, ಹೈಕೋರ್ಟ್ ಆದೇಶದ ವಿರುದ್ಧ ನಾವು ಸುಪ್ರೀಂ ಕೋರ್ಟ್ಗೆ ಹೋಗುತ್ತೇವೆ” ಎಂದು ಆದಿತ್ಯನಾಥ್ ಹೇಳಿದ್ದಾರೆ.

ಸುಪ್ರೀಂಕೋರ್ಟ್ ಆದೇಶದ ಅನ್ವಯ ಒಬಿಸಿಗಳಿಗೆ ಮೀಸಲಾತಿ ಹಂಚದೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಸಂಬಂಧ ಹೊರಡಿಸಲಾಗಿದ್ದ ರಾಜ್ಯ ಸರ್ಕಾರದ ಕರಡು ಅಧಿಸೂಚನೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಅಲಹಾಬಾದ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳಾದ ಡಿ.ಕೆ.ಉಪಾಧ್ಯಾಯ, ಸೌರವ್ ಲಾವಾನಿಯಾ ಅವರ ವಿಭಾಗೀಯ ಪೀಠವು ಒಬಿಸಿಗಳಿಗೆ ಸುಪ್ರೀಂಕೋರ್ಟ್ ಆದೇಶದಂತೆ ಮೀಸಲಾತಿ ನೀಡಬೇಕೆಂದು ಹೇಳಿದೆ. ಡಿಸೆಂಬರ್ 5 ರ ರಾಜ್ಯದ ಕರಡು ಅಧಿಸೂಚನೆಯನ್ನು ವಜಾಗೊಳಿಸಿದೆ.

ರಾಜ್ಯದ 17 ಮುನ್ಸಿಪಲ್ ಕಾರ್ಪೊರೇಷನ್‌ಗಳ ಮೇಯರ್‌ಗಳು, 200 ಮುನ್ಸಿಪಲ್ ಕೌನ್ಸಿಲ್‌ಗಳು ಮತ್ತು 545 ನಗರ ಪಂಚಾಯತ್‌ಗಳ ಅಧ್ಯಕ್ಷರಿಗೆ ಮೀಸಲಾತಿ ಸ್ಥಾನಗಳ ತಾತ್ಕಾಲಿಕ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿತು. 2017ರ ಚುನಾವಣೆಗಳಲ್ಲಿ ಒದಗಿಸಿದಂತೆ ಸುಮಾರು 30 ಪ್ರತಿಶತದಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿತ್ತು.

ನಾಲ್ಕು ಮೇಯರ್ ಸ್ಥಾನಗಳು (ಅಲಿಗಢ್, ಮಥುರಾ-ವೃಂದಾವನ, ಮೀರತ್ ಮತ್ತು ಪ್ರಯಾಗ್ರಾಜ್) ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾಗಿತ್ತು. ಅಲ್ಲದೆ, 200 ಮುನಿಸಿಪಲ್ ಕೌನ್ಸಿಲ್‌ಗಳಲ್ಲಿ ಅಧ್ಯಕ್ಷ ಸ್ಥಾನಗಳು ಒಬಿಸಿಗಳಿಗೆ, 545 ನಗರ ಪಂಚಾಯತ್‌ಗಳಲ್ಲಿ 147 ಅಧ್ಯಕ್ಷ ಸ್ಥಾನಗಳನ್ನು ಒಬಿಸಿ ಅಭ್ಯರ್ಥಿಗಳಿಗೆ ಮೀಸಲಿಡಲಾಗಿತ್ತು.

ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ಕಡ್ಡಾಯ ಸಮೀಕ್ಷೆಯಿಲ್ಲದೆ ಒಬಿಸಿಗಳಿಗೆ ಮೀಸಲಾತಿ ನೀಡುವ ಯೋಜನೆಗೆ ವಿರೋಧ ವ್ಯಕ್ತವಾಗಿತ್ತು. ವಿರೋಧ ಪಕ್ಷಗಳಾದ ಎಸ್‌ಪಿ, ಬಿಎಸ್‌ಪಿ ಸರ್ಕಾರದ ನಡೆಯನ್ನು ಟೀಕಿಸಿವೆ.

ಸರ್ಕಾರದ ಕ್ರಮವನ್ನು ಆಕ್ಷೇಪಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಯಿತು. ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನ ಸೂತ್ರವನ್ನು ಅನುಸರಿಸಬೇಕು ಮತ್ತು ಮೀಸಲಾತಿ ನಿಗದಿಪಡಿಸುವ ಮೊದಲು ಒಬಿಸಿಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಲು ಆಯೋಗವನ್ನು ರಚಿಸಬೇಕು ಎಂದು ಅರ್ಜಿದಾರರು ಪ್ರತಿಪಾದಿಸಿದ್ದರು.

ಇದನ್ನೂ ಓದಿರಿ: ತೀರ್ಥಹಳ್ಳಿ: ನಾಡಗೀತೆ ತಿರುಚಿದ ವ್ಯಕ್ತಿಯಿಂದ ಕುವೆಂಪು ಕುರಿತು ಉಪನ್ಯಾಸ; ಕಾರ್ಯಕ್ರಮ ನಡೆಸದಂತೆ ಜನರ ಎಚ್ಚರಿಕೆ

ಒಬಿಸಿ ಕೋಟಾದ ಶೇಕಡಾವಾರು ಪ್ರಮಾಣವನ್ನು ನಿರ್ಧರಿಸುವ ಮೊದಲು ಒಬಿಸಿಗಳ ಕುರಿತು ಸಮಕಾಲೀನ ಡೇಟಾವನ್ನು ಹೊಂದಲು ರಾಜ್ಯಗಳು ‘ಟ್ರಿಪಲ್ ಟೆಸ್ಟ್ ಸಮೀಕ್ಷೆ’ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತು. ರಾಜಕೀಯ ಕೋಟಾದ ಮಾನದಂಡವು ಉದ್ಯೋಗ ಮತ್ತು ಶಿಕ್ಷಣದ ಮಾನದಂಡಕ್ಕಿಂತ ಭಿನ್ನವಾಗಿದೆ. ಹಿಂದುಳಿದಿರುವಿಕೆಯ ಸ್ವರೂಪ ಮತ್ತು ಮಾದರಿಗಳನ್ನು ಸರಿಪಡಿಸಲು ಸಮೀಕ್ಷೆಯ ಅಗತ್ಯವಿದೆ ಎಂದು ವಾದಿಸಲಾಗಿತ್ತು.

ತ್ರಿವಳಿ ಪರೀಕ್ಷಾ ಸೂತ್ರದ ಪ್ರಕಾರ ರಾಜ್ಯಗಳು ಆಯೋಗವನ್ನು ನೇಮಿಸಬೇಕು, ಸಮುದಾಯದ ಮೇಲೆ ಪ್ರಮಾಣೀಕರಿಸಬಹುದಾದ ಡೇಟಾವನ್ನು ಸಂಗ್ರಹಿಸಬೇಕು ಮತ್ತು ಪ್ರತಿ ಸೀಟಿನಲ್ಲಿ ಒಟ್ಟು ಮೀಸಲಾತಿ ಶೇಕಡಾ 50 ಕ್ಕಿಂತ ಹೆಚ್ಚಿಲ್ಲದ ರೀತಿಯಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಹಂಚಬೇಕು.

ತ್ರಿವಳಿ ಪರೀಕ್ಷಾ ಸೂತ್ರದಂತೆ ಕ್ಷಿಪ್ರ ಸಮೀಕ್ಷೆ ನಡೆಸಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಮಾಡಿದ್ದ ವಾದವನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ತಳ್ಳಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...