Homeಮುಖಪುಟಒಬಿಸಿಗಳಿಗೆ ರಾಜಕೀಯ ಮೀಸಲಾತಿ ನೀಡಿಯೇ ಚುನಾವಣೆಗೆ ಹೋಗುತ್ತೇವೆ: ಯೋಗಿ ಆದಿತ್ಯನಾಥ್

ಒಬಿಸಿಗಳಿಗೆ ರಾಜಕೀಯ ಮೀಸಲಾತಿ ನೀಡಿಯೇ ಚುನಾವಣೆಗೆ ಹೋಗುತ್ತೇವೆ: ಯೋಗಿ ಆದಿತ್ಯನಾಥ್

- Advertisement -
- Advertisement -

“ಉತ್ತರ ಪ್ರದೇಶ ರಾಜ್ಯವು ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿಗಳಿಗೆ) ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡಲಿದೆ ಮತ್ತು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಅಡಿಯಲ್ಲಿ ಸಮೀಕ್ಷೆ ನಡೆಸಲಾಗುತ್ತದೆ” ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

“ಸಮೀಕ್ಷೆ ಮತ್ತು ಮೀಸಲಾತಿ ನೀಡುವ ಮೊದಲು ಚುನಾವಣೆ ನಡೆಸುವುದಿಲ್ಲ. ಅಗತ್ಯ ಬಿದ್ದರೆ ರಾಜ್ಯವು ತಕ್ಷಣವೇ ಚುನಾವಣೆ ಅಧಿಸೂಚನೆಗೆ ಅಲಹಾಬಾದ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಹೋಗಲಿದೆ” ಎಂದಿದ್ದಾರೆ.

“ನಾವು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಆಧಾರದ ಮೇಲೆ ಒಬಿಸಿಗಳ ಸಮೀಕ್ಷೆ ನಡೆಸುವ ಆಯೋಗವನ್ನು ರಚಿಸುತ್ತೇವೆ. ಒಬಿಸಿಗಳಿಗೆ ಮೀಸಲಾತಿ ನೀಡದೆ ನಾವು ಚುನಾವಣೆಗೆ ಹೋಗುವುದಿಲ್ಲ. ಅಗತ್ಯವಿದ್ದರೆ, ಹೈಕೋರ್ಟ್ ಆದೇಶದ ವಿರುದ್ಧ ನಾವು ಸುಪ್ರೀಂ ಕೋರ್ಟ್ಗೆ ಹೋಗುತ್ತೇವೆ” ಎಂದು ಆದಿತ್ಯನಾಥ್ ಹೇಳಿದ್ದಾರೆ.

ಸುಪ್ರೀಂಕೋರ್ಟ್ ಆದೇಶದ ಅನ್ವಯ ಒಬಿಸಿಗಳಿಗೆ ಮೀಸಲಾತಿ ಹಂಚದೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಸಂಬಂಧ ಹೊರಡಿಸಲಾಗಿದ್ದ ರಾಜ್ಯ ಸರ್ಕಾರದ ಕರಡು ಅಧಿಸೂಚನೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಅಲಹಾಬಾದ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳಾದ ಡಿ.ಕೆ.ಉಪಾಧ್ಯಾಯ, ಸೌರವ್ ಲಾವಾನಿಯಾ ಅವರ ವಿಭಾಗೀಯ ಪೀಠವು ಒಬಿಸಿಗಳಿಗೆ ಸುಪ್ರೀಂಕೋರ್ಟ್ ಆದೇಶದಂತೆ ಮೀಸಲಾತಿ ನೀಡಬೇಕೆಂದು ಹೇಳಿದೆ. ಡಿಸೆಂಬರ್ 5 ರ ರಾಜ್ಯದ ಕರಡು ಅಧಿಸೂಚನೆಯನ್ನು ವಜಾಗೊಳಿಸಿದೆ.

ರಾಜ್ಯದ 17 ಮುನ್ಸಿಪಲ್ ಕಾರ್ಪೊರೇಷನ್‌ಗಳ ಮೇಯರ್‌ಗಳು, 200 ಮುನ್ಸಿಪಲ್ ಕೌನ್ಸಿಲ್‌ಗಳು ಮತ್ತು 545 ನಗರ ಪಂಚಾಯತ್‌ಗಳ ಅಧ್ಯಕ್ಷರಿಗೆ ಮೀಸಲಾತಿ ಸ್ಥಾನಗಳ ತಾತ್ಕಾಲಿಕ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿತು. 2017ರ ಚುನಾವಣೆಗಳಲ್ಲಿ ಒದಗಿಸಿದಂತೆ ಸುಮಾರು 30 ಪ್ರತಿಶತದಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿತ್ತು.

ನಾಲ್ಕು ಮೇಯರ್ ಸ್ಥಾನಗಳು (ಅಲಿಗಢ್, ಮಥುರಾ-ವೃಂದಾವನ, ಮೀರತ್ ಮತ್ತು ಪ್ರಯಾಗ್ರಾಜ್) ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾಗಿತ್ತು. ಅಲ್ಲದೆ, 200 ಮುನಿಸಿಪಲ್ ಕೌನ್ಸಿಲ್‌ಗಳಲ್ಲಿ ಅಧ್ಯಕ್ಷ ಸ್ಥಾನಗಳು ಒಬಿಸಿಗಳಿಗೆ, 545 ನಗರ ಪಂಚಾಯತ್‌ಗಳಲ್ಲಿ 147 ಅಧ್ಯಕ್ಷ ಸ್ಥಾನಗಳನ್ನು ಒಬಿಸಿ ಅಭ್ಯರ್ಥಿಗಳಿಗೆ ಮೀಸಲಿಡಲಾಗಿತ್ತು.

ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ಕಡ್ಡಾಯ ಸಮೀಕ್ಷೆಯಿಲ್ಲದೆ ಒಬಿಸಿಗಳಿಗೆ ಮೀಸಲಾತಿ ನೀಡುವ ಯೋಜನೆಗೆ ವಿರೋಧ ವ್ಯಕ್ತವಾಗಿತ್ತು. ವಿರೋಧ ಪಕ್ಷಗಳಾದ ಎಸ್‌ಪಿ, ಬಿಎಸ್‌ಪಿ ಸರ್ಕಾರದ ನಡೆಯನ್ನು ಟೀಕಿಸಿವೆ.

ಸರ್ಕಾರದ ಕ್ರಮವನ್ನು ಆಕ್ಷೇಪಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಯಿತು. ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನ ಸೂತ್ರವನ್ನು ಅನುಸರಿಸಬೇಕು ಮತ್ತು ಮೀಸಲಾತಿ ನಿಗದಿಪಡಿಸುವ ಮೊದಲು ಒಬಿಸಿಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಲು ಆಯೋಗವನ್ನು ರಚಿಸಬೇಕು ಎಂದು ಅರ್ಜಿದಾರರು ಪ್ರತಿಪಾದಿಸಿದ್ದರು.

ಇದನ್ನೂ ಓದಿರಿ: ತೀರ್ಥಹಳ್ಳಿ: ನಾಡಗೀತೆ ತಿರುಚಿದ ವ್ಯಕ್ತಿಯಿಂದ ಕುವೆಂಪು ಕುರಿತು ಉಪನ್ಯಾಸ; ಕಾರ್ಯಕ್ರಮ ನಡೆಸದಂತೆ ಜನರ ಎಚ್ಚರಿಕೆ

ಒಬಿಸಿ ಕೋಟಾದ ಶೇಕಡಾವಾರು ಪ್ರಮಾಣವನ್ನು ನಿರ್ಧರಿಸುವ ಮೊದಲು ಒಬಿಸಿಗಳ ಕುರಿತು ಸಮಕಾಲೀನ ಡೇಟಾವನ್ನು ಹೊಂದಲು ರಾಜ್ಯಗಳು ‘ಟ್ರಿಪಲ್ ಟೆಸ್ಟ್ ಸಮೀಕ್ಷೆ’ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತು. ರಾಜಕೀಯ ಕೋಟಾದ ಮಾನದಂಡವು ಉದ್ಯೋಗ ಮತ್ತು ಶಿಕ್ಷಣದ ಮಾನದಂಡಕ್ಕಿಂತ ಭಿನ್ನವಾಗಿದೆ. ಹಿಂದುಳಿದಿರುವಿಕೆಯ ಸ್ವರೂಪ ಮತ್ತು ಮಾದರಿಗಳನ್ನು ಸರಿಪಡಿಸಲು ಸಮೀಕ್ಷೆಯ ಅಗತ್ಯವಿದೆ ಎಂದು ವಾದಿಸಲಾಗಿತ್ತು.

ತ್ರಿವಳಿ ಪರೀಕ್ಷಾ ಸೂತ್ರದ ಪ್ರಕಾರ ರಾಜ್ಯಗಳು ಆಯೋಗವನ್ನು ನೇಮಿಸಬೇಕು, ಸಮುದಾಯದ ಮೇಲೆ ಪ್ರಮಾಣೀಕರಿಸಬಹುದಾದ ಡೇಟಾವನ್ನು ಸಂಗ್ರಹಿಸಬೇಕು ಮತ್ತು ಪ್ರತಿ ಸೀಟಿನಲ್ಲಿ ಒಟ್ಟು ಮೀಸಲಾತಿ ಶೇಕಡಾ 50 ಕ್ಕಿಂತ ಹೆಚ್ಚಿಲ್ಲದ ರೀತಿಯಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಹಂಚಬೇಕು.

ತ್ರಿವಳಿ ಪರೀಕ್ಷಾ ಸೂತ್ರದಂತೆ ಕ್ಷಿಪ್ರ ಸಮೀಕ್ಷೆ ನಡೆಸಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಮಾಡಿದ್ದ ವಾದವನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ತಳ್ಳಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...