Homeಮುಖಪುಟಒಬಿಸಿಗಳಿಗೆ ರಾಜಕೀಯ ಮೀಸಲಾತಿ ನೀಡಿಯೇ ಚುನಾವಣೆಗೆ ಹೋಗುತ್ತೇವೆ: ಯೋಗಿ ಆದಿತ್ಯನಾಥ್

ಒಬಿಸಿಗಳಿಗೆ ರಾಜಕೀಯ ಮೀಸಲಾತಿ ನೀಡಿಯೇ ಚುನಾವಣೆಗೆ ಹೋಗುತ್ತೇವೆ: ಯೋಗಿ ಆದಿತ್ಯನಾಥ್

- Advertisement -
- Advertisement -

“ಉತ್ತರ ಪ್ರದೇಶ ರಾಜ್ಯವು ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿಗಳಿಗೆ) ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡಲಿದೆ ಮತ್ತು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಅಡಿಯಲ್ಲಿ ಸಮೀಕ್ಷೆ ನಡೆಸಲಾಗುತ್ತದೆ” ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

“ಸಮೀಕ್ಷೆ ಮತ್ತು ಮೀಸಲಾತಿ ನೀಡುವ ಮೊದಲು ಚುನಾವಣೆ ನಡೆಸುವುದಿಲ್ಲ. ಅಗತ್ಯ ಬಿದ್ದರೆ ರಾಜ್ಯವು ತಕ್ಷಣವೇ ಚುನಾವಣೆ ಅಧಿಸೂಚನೆಗೆ ಅಲಹಾಬಾದ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಹೋಗಲಿದೆ” ಎಂದಿದ್ದಾರೆ.

“ನಾವು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಆಧಾರದ ಮೇಲೆ ಒಬಿಸಿಗಳ ಸಮೀಕ್ಷೆ ನಡೆಸುವ ಆಯೋಗವನ್ನು ರಚಿಸುತ್ತೇವೆ. ಒಬಿಸಿಗಳಿಗೆ ಮೀಸಲಾತಿ ನೀಡದೆ ನಾವು ಚುನಾವಣೆಗೆ ಹೋಗುವುದಿಲ್ಲ. ಅಗತ್ಯವಿದ್ದರೆ, ಹೈಕೋರ್ಟ್ ಆದೇಶದ ವಿರುದ್ಧ ನಾವು ಸುಪ್ರೀಂ ಕೋರ್ಟ್ಗೆ ಹೋಗುತ್ತೇವೆ” ಎಂದು ಆದಿತ್ಯನಾಥ್ ಹೇಳಿದ್ದಾರೆ.

ಸುಪ್ರೀಂಕೋರ್ಟ್ ಆದೇಶದ ಅನ್ವಯ ಒಬಿಸಿಗಳಿಗೆ ಮೀಸಲಾತಿ ಹಂಚದೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಸಂಬಂಧ ಹೊರಡಿಸಲಾಗಿದ್ದ ರಾಜ್ಯ ಸರ್ಕಾರದ ಕರಡು ಅಧಿಸೂಚನೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಅಲಹಾಬಾದ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳಾದ ಡಿ.ಕೆ.ಉಪಾಧ್ಯಾಯ, ಸೌರವ್ ಲಾವಾನಿಯಾ ಅವರ ವಿಭಾಗೀಯ ಪೀಠವು ಒಬಿಸಿಗಳಿಗೆ ಸುಪ್ರೀಂಕೋರ್ಟ್ ಆದೇಶದಂತೆ ಮೀಸಲಾತಿ ನೀಡಬೇಕೆಂದು ಹೇಳಿದೆ. ಡಿಸೆಂಬರ್ 5 ರ ರಾಜ್ಯದ ಕರಡು ಅಧಿಸೂಚನೆಯನ್ನು ವಜಾಗೊಳಿಸಿದೆ.

ರಾಜ್ಯದ 17 ಮುನ್ಸಿಪಲ್ ಕಾರ್ಪೊರೇಷನ್‌ಗಳ ಮೇಯರ್‌ಗಳು, 200 ಮುನ್ಸಿಪಲ್ ಕೌನ್ಸಿಲ್‌ಗಳು ಮತ್ತು 545 ನಗರ ಪಂಚಾಯತ್‌ಗಳ ಅಧ್ಯಕ್ಷರಿಗೆ ಮೀಸಲಾತಿ ಸ್ಥಾನಗಳ ತಾತ್ಕಾಲಿಕ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿತು. 2017ರ ಚುನಾವಣೆಗಳಲ್ಲಿ ಒದಗಿಸಿದಂತೆ ಸುಮಾರು 30 ಪ್ರತಿಶತದಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿತ್ತು.

ನಾಲ್ಕು ಮೇಯರ್ ಸ್ಥಾನಗಳು (ಅಲಿಗಢ್, ಮಥುರಾ-ವೃಂದಾವನ, ಮೀರತ್ ಮತ್ತು ಪ್ರಯಾಗ್ರಾಜ್) ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾಗಿತ್ತು. ಅಲ್ಲದೆ, 200 ಮುನಿಸಿಪಲ್ ಕೌನ್ಸಿಲ್‌ಗಳಲ್ಲಿ ಅಧ್ಯಕ್ಷ ಸ್ಥಾನಗಳು ಒಬಿಸಿಗಳಿಗೆ, 545 ನಗರ ಪಂಚಾಯತ್‌ಗಳಲ್ಲಿ 147 ಅಧ್ಯಕ್ಷ ಸ್ಥಾನಗಳನ್ನು ಒಬಿಸಿ ಅಭ್ಯರ್ಥಿಗಳಿಗೆ ಮೀಸಲಿಡಲಾಗಿತ್ತು.

ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ಕಡ್ಡಾಯ ಸಮೀಕ್ಷೆಯಿಲ್ಲದೆ ಒಬಿಸಿಗಳಿಗೆ ಮೀಸಲಾತಿ ನೀಡುವ ಯೋಜನೆಗೆ ವಿರೋಧ ವ್ಯಕ್ತವಾಗಿತ್ತು. ವಿರೋಧ ಪಕ್ಷಗಳಾದ ಎಸ್‌ಪಿ, ಬಿಎಸ್‌ಪಿ ಸರ್ಕಾರದ ನಡೆಯನ್ನು ಟೀಕಿಸಿವೆ.

ಸರ್ಕಾರದ ಕ್ರಮವನ್ನು ಆಕ್ಷೇಪಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಯಿತು. ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನ ಸೂತ್ರವನ್ನು ಅನುಸರಿಸಬೇಕು ಮತ್ತು ಮೀಸಲಾತಿ ನಿಗದಿಪಡಿಸುವ ಮೊದಲು ಒಬಿಸಿಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಲು ಆಯೋಗವನ್ನು ರಚಿಸಬೇಕು ಎಂದು ಅರ್ಜಿದಾರರು ಪ್ರತಿಪಾದಿಸಿದ್ದರು.

ಇದನ್ನೂ ಓದಿರಿ: ತೀರ್ಥಹಳ್ಳಿ: ನಾಡಗೀತೆ ತಿರುಚಿದ ವ್ಯಕ್ತಿಯಿಂದ ಕುವೆಂಪು ಕುರಿತು ಉಪನ್ಯಾಸ; ಕಾರ್ಯಕ್ರಮ ನಡೆಸದಂತೆ ಜನರ ಎಚ್ಚರಿಕೆ

ಒಬಿಸಿ ಕೋಟಾದ ಶೇಕಡಾವಾರು ಪ್ರಮಾಣವನ್ನು ನಿರ್ಧರಿಸುವ ಮೊದಲು ಒಬಿಸಿಗಳ ಕುರಿತು ಸಮಕಾಲೀನ ಡೇಟಾವನ್ನು ಹೊಂದಲು ರಾಜ್ಯಗಳು ‘ಟ್ರಿಪಲ್ ಟೆಸ್ಟ್ ಸಮೀಕ್ಷೆ’ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತು. ರಾಜಕೀಯ ಕೋಟಾದ ಮಾನದಂಡವು ಉದ್ಯೋಗ ಮತ್ತು ಶಿಕ್ಷಣದ ಮಾನದಂಡಕ್ಕಿಂತ ಭಿನ್ನವಾಗಿದೆ. ಹಿಂದುಳಿದಿರುವಿಕೆಯ ಸ್ವರೂಪ ಮತ್ತು ಮಾದರಿಗಳನ್ನು ಸರಿಪಡಿಸಲು ಸಮೀಕ್ಷೆಯ ಅಗತ್ಯವಿದೆ ಎಂದು ವಾದಿಸಲಾಗಿತ್ತು.

ತ್ರಿವಳಿ ಪರೀಕ್ಷಾ ಸೂತ್ರದ ಪ್ರಕಾರ ರಾಜ್ಯಗಳು ಆಯೋಗವನ್ನು ನೇಮಿಸಬೇಕು, ಸಮುದಾಯದ ಮೇಲೆ ಪ್ರಮಾಣೀಕರಿಸಬಹುದಾದ ಡೇಟಾವನ್ನು ಸಂಗ್ರಹಿಸಬೇಕು ಮತ್ತು ಪ್ರತಿ ಸೀಟಿನಲ್ಲಿ ಒಟ್ಟು ಮೀಸಲಾತಿ ಶೇಕಡಾ 50 ಕ್ಕಿಂತ ಹೆಚ್ಚಿಲ್ಲದ ರೀತಿಯಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಹಂಚಬೇಕು.

ತ್ರಿವಳಿ ಪರೀಕ್ಷಾ ಸೂತ್ರದಂತೆ ಕ್ಷಿಪ್ರ ಸಮೀಕ್ಷೆ ನಡೆಸಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಮಾಡಿದ್ದ ವಾದವನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ತಳ್ಳಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...