Homeಮುಖಪುಟಒಬಿಸಿಗಳಿಗೆ ರಾಜಕೀಯ ಮೀಸಲಾತಿ ನೀಡಿಯೇ ಚುನಾವಣೆಗೆ ಹೋಗುತ್ತೇವೆ: ಯೋಗಿ ಆದಿತ್ಯನಾಥ್

ಒಬಿಸಿಗಳಿಗೆ ರಾಜಕೀಯ ಮೀಸಲಾತಿ ನೀಡಿಯೇ ಚುನಾವಣೆಗೆ ಹೋಗುತ್ತೇವೆ: ಯೋಗಿ ಆದಿತ್ಯನಾಥ್

- Advertisement -
- Advertisement -

“ಉತ್ತರ ಪ್ರದೇಶ ರಾಜ್ಯವು ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿಗಳಿಗೆ) ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡಲಿದೆ ಮತ್ತು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಅಡಿಯಲ್ಲಿ ಸಮೀಕ್ಷೆ ನಡೆಸಲಾಗುತ್ತದೆ” ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.

“ಸಮೀಕ್ಷೆ ಮತ್ತು ಮೀಸಲಾತಿ ನೀಡುವ ಮೊದಲು ಚುನಾವಣೆ ನಡೆಸುವುದಿಲ್ಲ. ಅಗತ್ಯ ಬಿದ್ದರೆ ರಾಜ್ಯವು ತಕ್ಷಣವೇ ಚುನಾವಣೆ ಅಧಿಸೂಚನೆಗೆ ಅಲಹಾಬಾದ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಹೋಗಲಿದೆ” ಎಂದಿದ್ದಾರೆ.

“ನಾವು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಆಧಾರದ ಮೇಲೆ ಒಬಿಸಿಗಳ ಸಮೀಕ್ಷೆ ನಡೆಸುವ ಆಯೋಗವನ್ನು ರಚಿಸುತ್ತೇವೆ. ಒಬಿಸಿಗಳಿಗೆ ಮೀಸಲಾತಿ ನೀಡದೆ ನಾವು ಚುನಾವಣೆಗೆ ಹೋಗುವುದಿಲ್ಲ. ಅಗತ್ಯವಿದ್ದರೆ, ಹೈಕೋರ್ಟ್ ಆದೇಶದ ವಿರುದ್ಧ ನಾವು ಸುಪ್ರೀಂ ಕೋರ್ಟ್ಗೆ ಹೋಗುತ್ತೇವೆ” ಎಂದು ಆದಿತ್ಯನಾಥ್ ಹೇಳಿದ್ದಾರೆ.

ಸುಪ್ರೀಂಕೋರ್ಟ್ ಆದೇಶದ ಅನ್ವಯ ಒಬಿಸಿಗಳಿಗೆ ಮೀಸಲಾತಿ ಹಂಚದೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಸಂಬಂಧ ಹೊರಡಿಸಲಾಗಿದ್ದ ರಾಜ್ಯ ಸರ್ಕಾರದ ಕರಡು ಅಧಿಸೂಚನೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಅಲಹಾಬಾದ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಗಳಾದ ಡಿ.ಕೆ.ಉಪಾಧ್ಯಾಯ, ಸೌರವ್ ಲಾವಾನಿಯಾ ಅವರ ವಿಭಾಗೀಯ ಪೀಠವು ಒಬಿಸಿಗಳಿಗೆ ಸುಪ್ರೀಂಕೋರ್ಟ್ ಆದೇಶದಂತೆ ಮೀಸಲಾತಿ ನೀಡಬೇಕೆಂದು ಹೇಳಿದೆ. ಡಿಸೆಂಬರ್ 5 ರ ರಾಜ್ಯದ ಕರಡು ಅಧಿಸೂಚನೆಯನ್ನು ವಜಾಗೊಳಿಸಿದೆ.

ರಾಜ್ಯದ 17 ಮುನ್ಸಿಪಲ್ ಕಾರ್ಪೊರೇಷನ್‌ಗಳ ಮೇಯರ್‌ಗಳು, 200 ಮುನ್ಸಿಪಲ್ ಕೌನ್ಸಿಲ್‌ಗಳು ಮತ್ತು 545 ನಗರ ಪಂಚಾಯತ್‌ಗಳ ಅಧ್ಯಕ್ಷರಿಗೆ ಮೀಸಲಾತಿ ಸ್ಥಾನಗಳ ತಾತ್ಕಾಲಿಕ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿತು. 2017ರ ಚುನಾವಣೆಗಳಲ್ಲಿ ಒದಗಿಸಿದಂತೆ ಸುಮಾರು 30 ಪ್ರತಿಶತದಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿತ್ತು.

ನಾಲ್ಕು ಮೇಯರ್ ಸ್ಥಾನಗಳು (ಅಲಿಗಢ್, ಮಥುರಾ-ವೃಂದಾವನ, ಮೀರತ್ ಮತ್ತು ಪ್ರಯಾಗ್ರಾಜ್) ಒಬಿಸಿ ಅಭ್ಯರ್ಥಿಗಳಿಗೆ ಮೀಸಲಾಗಿತ್ತು. ಅಲ್ಲದೆ, 200 ಮುನಿಸಿಪಲ್ ಕೌನ್ಸಿಲ್‌ಗಳಲ್ಲಿ ಅಧ್ಯಕ್ಷ ಸ್ಥಾನಗಳು ಒಬಿಸಿಗಳಿಗೆ, 545 ನಗರ ಪಂಚಾಯತ್‌ಗಳಲ್ಲಿ 147 ಅಧ್ಯಕ್ಷ ಸ್ಥಾನಗಳನ್ನು ಒಬಿಸಿ ಅಭ್ಯರ್ಥಿಗಳಿಗೆ ಮೀಸಲಿಡಲಾಗಿತ್ತು.

ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ಕಡ್ಡಾಯ ಸಮೀಕ್ಷೆಯಿಲ್ಲದೆ ಒಬಿಸಿಗಳಿಗೆ ಮೀಸಲಾತಿ ನೀಡುವ ಯೋಜನೆಗೆ ವಿರೋಧ ವ್ಯಕ್ತವಾಗಿತ್ತು. ವಿರೋಧ ಪಕ್ಷಗಳಾದ ಎಸ್‌ಪಿ, ಬಿಎಸ್‌ಪಿ ಸರ್ಕಾರದ ನಡೆಯನ್ನು ಟೀಕಿಸಿವೆ.

ಸರ್ಕಾರದ ಕ್ರಮವನ್ನು ಆಕ್ಷೇಪಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಯಿತು. ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ನ ಸೂತ್ರವನ್ನು ಅನುಸರಿಸಬೇಕು ಮತ್ತು ಮೀಸಲಾತಿ ನಿಗದಿಪಡಿಸುವ ಮೊದಲು ಒಬಿಸಿಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಲು ಆಯೋಗವನ್ನು ರಚಿಸಬೇಕು ಎಂದು ಅರ್ಜಿದಾರರು ಪ್ರತಿಪಾದಿಸಿದ್ದರು.

ಇದನ್ನೂ ಓದಿರಿ: ತೀರ್ಥಹಳ್ಳಿ: ನಾಡಗೀತೆ ತಿರುಚಿದ ವ್ಯಕ್ತಿಯಿಂದ ಕುವೆಂಪು ಕುರಿತು ಉಪನ್ಯಾಸ; ಕಾರ್ಯಕ್ರಮ ನಡೆಸದಂತೆ ಜನರ ಎಚ್ಚರಿಕೆ

ಒಬಿಸಿ ಕೋಟಾದ ಶೇಕಡಾವಾರು ಪ್ರಮಾಣವನ್ನು ನಿರ್ಧರಿಸುವ ಮೊದಲು ಒಬಿಸಿಗಳ ಕುರಿತು ಸಮಕಾಲೀನ ಡೇಟಾವನ್ನು ಹೊಂದಲು ರಾಜ್ಯಗಳು ‘ಟ್ರಿಪಲ್ ಟೆಸ್ಟ್ ಸಮೀಕ್ಷೆ’ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತು. ರಾಜಕೀಯ ಕೋಟಾದ ಮಾನದಂಡವು ಉದ್ಯೋಗ ಮತ್ತು ಶಿಕ್ಷಣದ ಮಾನದಂಡಕ್ಕಿಂತ ಭಿನ್ನವಾಗಿದೆ. ಹಿಂದುಳಿದಿರುವಿಕೆಯ ಸ್ವರೂಪ ಮತ್ತು ಮಾದರಿಗಳನ್ನು ಸರಿಪಡಿಸಲು ಸಮೀಕ್ಷೆಯ ಅಗತ್ಯವಿದೆ ಎಂದು ವಾದಿಸಲಾಗಿತ್ತು.

ತ್ರಿವಳಿ ಪರೀಕ್ಷಾ ಸೂತ್ರದ ಪ್ರಕಾರ ರಾಜ್ಯಗಳು ಆಯೋಗವನ್ನು ನೇಮಿಸಬೇಕು, ಸಮುದಾಯದ ಮೇಲೆ ಪ್ರಮಾಣೀಕರಿಸಬಹುದಾದ ಡೇಟಾವನ್ನು ಸಂಗ್ರಹಿಸಬೇಕು ಮತ್ತು ಪ್ರತಿ ಸೀಟಿನಲ್ಲಿ ಒಟ್ಟು ಮೀಸಲಾತಿ ಶೇಕಡಾ 50 ಕ್ಕಿಂತ ಹೆಚ್ಚಿಲ್ಲದ ರೀತಿಯಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ಹಂಚಬೇಕು.

ತ್ರಿವಳಿ ಪರೀಕ್ಷಾ ಸೂತ್ರದಂತೆ ಕ್ಷಿಪ್ರ ಸಮೀಕ್ಷೆ ನಡೆಸಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಮಾಡಿದ್ದ ವಾದವನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ತಳ್ಳಿ ಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...