Homeರೈತ ಹೋರಾಟಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್‌ ನಡೆಸಿಯೇ ತೀರುತ್ತೇವೆ: ರೈತ ಮುಖಂಡರ ಒಕ್ಕೊರಲ ಘೋಷಣೆ

ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್‌ ನಡೆಸಿಯೇ ತೀರುತ್ತೇವೆ: ರೈತ ಮುಖಂಡರ ಒಕ್ಕೊರಲ ಘೋಷಣೆ

ಸಾವಿರಾರು ಟ್ರ್ಯಾಕ್ಟರ್‌ಗಳು-ವಾಹನಗಳೊಂದಿಗೆ 20,000 ಕ್ಕೂ ಅಧಿಕ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಗಣರಾಜ್ಯೋತ್ಸವದಂದು ಬೆಂಗಳೂರಿನಲ್ಲಿ ಶಾಂತಿಯುತ ಟ್ರ್ಯಾಕ್ಟರ್ ಪರೇಡ್‌ ನಡೆಸಿಯೇ ತೀರುತ್ತೇವೆ ಎಂದು ಸಂಯುಕ್ತ ಹೋರಾಟ – ಕರ್ನಾಟಕದ ರೈತ ಮುಖಂಡರು ಘೋಷಿಸಿದ್ದಾರೆ.

ಇಂದು ನಗರದ ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಚಾಮರಸ ಮಾಲಿಪಾಟೀಲ್, ದ.ಸ.ಸಂ (ಅಂಬೇಡ್ಕರ್ ವಾದ)ಯ ಮಾವಳ್ಳಿ ಶಂಕರ್, ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷರಾದ ನಿತ್ಯಾನಂದ ಸ್ವಾಮಿ, ಕಾರ್ಮಿಕ ಒಕ್ಕೂಟದ ಕೆ.ವಿ ಭಟ್, ರೈತ ಮುಖಂಡರಾದ ಜೆ.ಎಂ ವೀರಸಂಗಯ್ಯ ಮುಂತಾದವರು ಭಾಗವಹಿಸಿ ಸಾವಿರಾರು ಟ್ರ್ಯಾಕ್ಟರ್‌ಗಳು-ವಾಹನಗಳೊಂದಿಗೆ 20,000 ಕ್ಕೂ ಅಧಿಕ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಚಾಮರಸ ಮಾಲಿಪಾಟೀಲ್ ಮಾತನಾಡಿ “ಮುಂಬೈ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದ ರೈತರು ಸೇರಿದಂತೆ ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರಿನಿಂದ ಅತಿ ಹೆಚ್ಚಿನ ರೈತರು ನಾಳೆಯ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಆದರೆ ಟ್ರ್ಯಾಕ್ಟರ್‌ಗಳನ್ನು ಎಲ್ಲೆಡೆ ಪೊಲೀಸರು ತಡೆಯುತ್ತಿದ್ದು ಇದನ್ನು ನಾವು ಖಂಡಿಸುತ್ತೇವೆ. ಏನೇ ಸಮಸ್ಯೆಗಳಿದ್ದರೆ ಪೊಲೀಸ್ ಅಧಿಕಾರಿಗಳು ನಮ್ಮೊಂದಿಗೆ ಚರ್ಚೆ ಮಾಡಲಿ. ಆದರೆ ನಿರ್ಬಂಧ ಹಾಕಲು ಪೊಲೀಸರು ಮುಂದಾದರೆ ಪರಿಸ್ಥಿತಿ ಕೈಮೀರುತ್ತದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಸರ್ಕಾರವೇ ಜವಾಬ್ದಾರಿ” ಎಂದಿದ್ದಾರೆ.

ಮಾವಳ್ಳಿ ಶಂಕರ್‌ರವರು ಮಾತನಾಡಿ “ನಾವು ಈಗಾಗಲೇ ಬೆಂಗಳೂರು ಪೊಲೀಸ್ ಮುಖ್ಯಸ್ಥರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇವೆ. ಯಾವುದೇ ಕಾರಣಕ್ಕೂ ಹಿಂಸೆಗೆ ಅವಕಾಶ ಕೊಡುವುದಿಲ್ಲ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗೆ ಕುದುಂಟು ಮಾಡುವುದಿಲ್ಲ ಎಂದು ಸಭೆಯಲ್ಲಿ ನಮ್ಮ ಸ್ಪಷ್ಟ ಅಭಿಪ್ರಾಯ ತಿಳಿಸಿದ್ದೇವೆ. ಎಲ್ಲಾ ರೈತರು ನಗರದ ರೈಲ್ವೇ ಸ್ಟೇಷನ್ ಬಳಿ ಸೇರಿ ಅಲ್ಲಿಂದ ಫ್ರೀಡಂ ಪಾರ್ಕ್ ವರೆಗೂ ಮೆರವಣಿಗೆ ನಡೆಸುತ್ತೇವೆ. ಅಲ್ಲಿ ಶತಾಯುಷಿ ಎಚ್.ಎಸ್ ದೊರೆಸ್ವಾಮಿಯವರು ಧ್ವಜಾರೋಹಣ ನಡೆಸಲಿದ್ದಾರೆ ಎಂದು ತಿಳಿಸಿದ್ದೇವೆ. ಆದರೆ ಪೊಲೀಸರು ಟ್ರ್ಯಾಕ್ಟರ್ ತಡೆದರೆ, ಡೀಸೆಲ್ ಹಾಕಲು ನಿರಾಕರಿಸಿರುತ್ತಿರುವುದನ್ನು ನೋಡಿದರೆ ನಾಗರೀಕ ಹೋರಾಟವನ್ನು ಸರ್ಕಾರ ದಮನ ಮಾಡುತ್ತಿರುವುದು ಕಂಡುಬಂದಿದೆ. ನಾವು ಶಾಂತಿಯುತವಾಗಿ ನಮ್ಮ ಹೋರಾಟ ಮುಂದುವರೆಸುತ್ತೇವೆ’ ಎಂದಿದ್ದಾರೆ.

ರಾಯಚೂರು, ಬಳ್ಳಾರಿ ಜಿಲ್ಲೆಗಳಿಂದ ಒಂದು ತಂಡ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಂದ ಒಂದು ತಂಡ, ಮಡಿಕೇರಿ, ಮೈಸೂರು, ಮಂಡ್ಯ ಜಿಲ್ಲೆಗಳಿಂದ ರೈತರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಮೈಸೂರು ಮಾರ್ಗದಿಂದ ಬರುವ ರೈತರು ಬಿಡದಿ ಕೈಗಾರಿಕಾ ಜಂಕ್ಷನ್‌ನಲ್ಲಿ, ಉತ್ತರ ಕರ್ನಾಟಕದಿಂದ ಬರುವ ರೈತರು ತುಮಕೂರು-ನೈಸ್‌ರಸ್ತೆ ಜಂಕ್ಷನ್‌, ಚಿಕ್ಕಬಳ್ಳಾಪುರ ಕಡೆಯಿಂದ ಬರುವ ರೈತರು ದೇವನಹಳ್ಳಿ ನಂದಿ ಕ್ರಾಸ್‌ ಬಳಿ ಹಾಗೂ ಕೊಲಾರ ಕಡೆಯಿಂದ ಬರುವ ರೈತರು ಹೊಸಕೋಟೆ ಟೋಲ್‌ ಬಳಿ ಹಾಗೂ ಬೆಂಗಳೂರು ಸಿಟಿ ರೈಲ್ವೆ ಜಂಕ್ಷನ್‌ನಲ್ಲಿ ಜ. 26ರಂದು ಬೆಳಗ್ಗೆ 9 ಗಂಟೆಗೆ ಸೇರಲಿದ್ದಾರೆ.

ಇಲ್ಲಿಂದ ಹೊರಡಲಿರುವ ರೈತರು ಮಧ್ಯಾಹ್ನ 12.30ಕ್ಕೆ ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನೆರೆಯಲಿದ್ದಾರೆ. ಉದ್ಯಾನದಲ್ಲಿ ನಡೆಯಲಿರುವ ಬೃಹತ್‌ ಸಮಾವೇಶದಲ್ಲಿ ಕೃಷಿ ಕಾಯ್ದೆಗಳಿಂದ ರೈತರಿಗೆ ಆಗುತ್ತಿರುವ ಅನ್ಯಾಯ ಜಾರಿಗೊಳಿಸುತ್ತಿರುವ ಪಟ್ಟು ಹಿಡಿದಿರುವ ಸರ್ಕಾರದ ರೈತ ವಿರೋಧಿ ಧೋರಣೆ ಕುರಿತು ಚರ್ಚೆ ನಡೆಯಲಿವೆ.

ಈ ನಡುವೆ ಟ್ರ್ಯಾಕ್ಟರ್ ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ನಗರ ಪೋಲಿಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ. ಇದಕ್ಕೆ ರೈತ ಮುಖಂಡರು ಕಿಡಿಕಾರಿದ್ದು, ಕೇಂದ್ರ ಸರ್ಕಾರವೇ ಟ್ರ್ಯಾಕ್ಟರ್ ‌ಪೆರೇಡ್ ಗೆ ಅವಕಾಶ ಕೊಟ್ಟಿದೆ. ದೆಹಲಿಯಲ್ಲಿಯೇ ಟ್ರ್ಯಾಕ್ಟರ್ ಪರೇಡ್ ನಡೆಯುತ್ತೆ ಅಂದ ಮೇಲೆ ರಾಜ್ಯ ಸರ್ಕಾರ ಏಕೆ ಅನುಮತಿ ಕೊಡಲ್ಲಾ? ನಾವು ನಾಳೆ‌ ಟ್ರ್ಯಾಕ್ಟರ್ ಪೆರೇಡ್ ಮಾಡೇ ಮಾಡುತ್ತೇವೆ. ಟ್ಯಾಕ್ಟರ್ ಪೆರೇಡ್ ಇಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮ್ಮನ್ನು ತಡೆದರೆ ಉಗ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಈ ಕುರಿತು ಇಂದು ಸಂಜೆ 4 ಗಂಟೆಗೆ ಐಜಿಪಿಯವರು ರೈತ ಮುಖಂಡರೊಂದಿಗೆ ಮತ್ತೊಂದು ಸುತ್ತಿನ ಸಭೆ ಕರೆದಿದ್ದಾರೆ. ಪೊಲೀಸರು ಅನುಮತಿ ನೀಡದಿದ್ದರೆ ಇಂದು ಸಂಜೆಯಿಂದಲೇ ಡಿಸಿಪಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತೇವೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.


ಇದನ್ನೂ ಓದಿ: ಪೊಲೀಸರು ರೈತರ ಟ್ರ್ಯಾಕ್ಟರ್‌ಗಳನ್ನು ತಡೆದರೆ ರಾಜ್ಯಾದ್ಯಂತ ರಸ್ತೆ ಬಂದ್: ಬಡಗಲಪುರ ನಾಗೇಂದ್ರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...