Homeರೈತ ಹೋರಾಟಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್‌ ನಡೆಸಿಯೇ ತೀರುತ್ತೇವೆ: ರೈತ ಮುಖಂಡರ ಒಕ್ಕೊರಲ ಘೋಷಣೆ

ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್‌ ನಡೆಸಿಯೇ ತೀರುತ್ತೇವೆ: ರೈತ ಮುಖಂಡರ ಒಕ್ಕೊರಲ ಘೋಷಣೆ

ಸಾವಿರಾರು ಟ್ರ್ಯಾಕ್ಟರ್‌ಗಳು-ವಾಹನಗಳೊಂದಿಗೆ 20,000 ಕ್ಕೂ ಅಧಿಕ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಗಣರಾಜ್ಯೋತ್ಸವದಂದು ಬೆಂಗಳೂರಿನಲ್ಲಿ ಶಾಂತಿಯುತ ಟ್ರ್ಯಾಕ್ಟರ್ ಪರೇಡ್‌ ನಡೆಸಿಯೇ ತೀರುತ್ತೇವೆ ಎಂದು ಸಂಯುಕ್ತ ಹೋರಾಟ – ಕರ್ನಾಟಕದ ರೈತ ಮುಖಂಡರು ಘೋಷಿಸಿದ್ದಾರೆ.

ಇಂದು ನಗರದ ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಚಾಮರಸ ಮಾಲಿಪಾಟೀಲ್, ದ.ಸ.ಸಂ (ಅಂಬೇಡ್ಕರ್ ವಾದ)ಯ ಮಾವಳ್ಳಿ ಶಂಕರ್, ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷರಾದ ನಿತ್ಯಾನಂದ ಸ್ವಾಮಿ, ಕಾರ್ಮಿಕ ಒಕ್ಕೂಟದ ಕೆ.ವಿ ಭಟ್, ರೈತ ಮುಖಂಡರಾದ ಜೆ.ಎಂ ವೀರಸಂಗಯ್ಯ ಮುಂತಾದವರು ಭಾಗವಹಿಸಿ ಸಾವಿರಾರು ಟ್ರ್ಯಾಕ್ಟರ್‌ಗಳು-ವಾಹನಗಳೊಂದಿಗೆ 20,000 ಕ್ಕೂ ಅಧಿಕ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಚಾಮರಸ ಮಾಲಿಪಾಟೀಲ್ ಮಾತನಾಡಿ “ಮುಂಬೈ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದ ರೈತರು ಸೇರಿದಂತೆ ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರಿನಿಂದ ಅತಿ ಹೆಚ್ಚಿನ ರೈತರು ನಾಳೆಯ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಆದರೆ ಟ್ರ್ಯಾಕ್ಟರ್‌ಗಳನ್ನು ಎಲ್ಲೆಡೆ ಪೊಲೀಸರು ತಡೆಯುತ್ತಿದ್ದು ಇದನ್ನು ನಾವು ಖಂಡಿಸುತ್ತೇವೆ. ಏನೇ ಸಮಸ್ಯೆಗಳಿದ್ದರೆ ಪೊಲೀಸ್ ಅಧಿಕಾರಿಗಳು ನಮ್ಮೊಂದಿಗೆ ಚರ್ಚೆ ಮಾಡಲಿ. ಆದರೆ ನಿರ್ಬಂಧ ಹಾಕಲು ಪೊಲೀಸರು ಮುಂದಾದರೆ ಪರಿಸ್ಥಿತಿ ಕೈಮೀರುತ್ತದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಸರ್ಕಾರವೇ ಜವಾಬ್ದಾರಿ” ಎಂದಿದ್ದಾರೆ.

ಮಾವಳ್ಳಿ ಶಂಕರ್‌ರವರು ಮಾತನಾಡಿ “ನಾವು ಈಗಾಗಲೇ ಬೆಂಗಳೂರು ಪೊಲೀಸ್ ಮುಖ್ಯಸ್ಥರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇವೆ. ಯಾವುದೇ ಕಾರಣಕ್ಕೂ ಹಿಂಸೆಗೆ ಅವಕಾಶ ಕೊಡುವುದಿಲ್ಲ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗೆ ಕುದುಂಟು ಮಾಡುವುದಿಲ್ಲ ಎಂದು ಸಭೆಯಲ್ಲಿ ನಮ್ಮ ಸ್ಪಷ್ಟ ಅಭಿಪ್ರಾಯ ತಿಳಿಸಿದ್ದೇವೆ. ಎಲ್ಲಾ ರೈತರು ನಗರದ ರೈಲ್ವೇ ಸ್ಟೇಷನ್ ಬಳಿ ಸೇರಿ ಅಲ್ಲಿಂದ ಫ್ರೀಡಂ ಪಾರ್ಕ್ ವರೆಗೂ ಮೆರವಣಿಗೆ ನಡೆಸುತ್ತೇವೆ. ಅಲ್ಲಿ ಶತಾಯುಷಿ ಎಚ್.ಎಸ್ ದೊರೆಸ್ವಾಮಿಯವರು ಧ್ವಜಾರೋಹಣ ನಡೆಸಲಿದ್ದಾರೆ ಎಂದು ತಿಳಿಸಿದ್ದೇವೆ. ಆದರೆ ಪೊಲೀಸರು ಟ್ರ್ಯಾಕ್ಟರ್ ತಡೆದರೆ, ಡೀಸೆಲ್ ಹಾಕಲು ನಿರಾಕರಿಸಿರುತ್ತಿರುವುದನ್ನು ನೋಡಿದರೆ ನಾಗರೀಕ ಹೋರಾಟವನ್ನು ಸರ್ಕಾರ ದಮನ ಮಾಡುತ್ತಿರುವುದು ಕಂಡುಬಂದಿದೆ. ನಾವು ಶಾಂತಿಯುತವಾಗಿ ನಮ್ಮ ಹೋರಾಟ ಮುಂದುವರೆಸುತ್ತೇವೆ’ ಎಂದಿದ್ದಾರೆ.

ರಾಯಚೂರು, ಬಳ್ಳಾರಿ ಜಿಲ್ಲೆಗಳಿಂದ ಒಂದು ತಂಡ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಂದ ಒಂದು ತಂಡ, ಮಡಿಕೇರಿ, ಮೈಸೂರು, ಮಂಡ್ಯ ಜಿಲ್ಲೆಗಳಿಂದ ರೈತರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಮೈಸೂರು ಮಾರ್ಗದಿಂದ ಬರುವ ರೈತರು ಬಿಡದಿ ಕೈಗಾರಿಕಾ ಜಂಕ್ಷನ್‌ನಲ್ಲಿ, ಉತ್ತರ ಕರ್ನಾಟಕದಿಂದ ಬರುವ ರೈತರು ತುಮಕೂರು-ನೈಸ್‌ರಸ್ತೆ ಜಂಕ್ಷನ್‌, ಚಿಕ್ಕಬಳ್ಳಾಪುರ ಕಡೆಯಿಂದ ಬರುವ ರೈತರು ದೇವನಹಳ್ಳಿ ನಂದಿ ಕ್ರಾಸ್‌ ಬಳಿ ಹಾಗೂ ಕೊಲಾರ ಕಡೆಯಿಂದ ಬರುವ ರೈತರು ಹೊಸಕೋಟೆ ಟೋಲ್‌ ಬಳಿ ಹಾಗೂ ಬೆಂಗಳೂರು ಸಿಟಿ ರೈಲ್ವೆ ಜಂಕ್ಷನ್‌ನಲ್ಲಿ ಜ. 26ರಂದು ಬೆಳಗ್ಗೆ 9 ಗಂಟೆಗೆ ಸೇರಲಿದ್ದಾರೆ.

ಇಲ್ಲಿಂದ ಹೊರಡಲಿರುವ ರೈತರು ಮಧ್ಯಾಹ್ನ 12.30ಕ್ಕೆ ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನೆರೆಯಲಿದ್ದಾರೆ. ಉದ್ಯಾನದಲ್ಲಿ ನಡೆಯಲಿರುವ ಬೃಹತ್‌ ಸಮಾವೇಶದಲ್ಲಿ ಕೃಷಿ ಕಾಯ್ದೆಗಳಿಂದ ರೈತರಿಗೆ ಆಗುತ್ತಿರುವ ಅನ್ಯಾಯ ಜಾರಿಗೊಳಿಸುತ್ತಿರುವ ಪಟ್ಟು ಹಿಡಿದಿರುವ ಸರ್ಕಾರದ ರೈತ ವಿರೋಧಿ ಧೋರಣೆ ಕುರಿತು ಚರ್ಚೆ ನಡೆಯಲಿವೆ.

ಈ ನಡುವೆ ಟ್ರ್ಯಾಕ್ಟರ್ ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ನಗರ ಪೋಲಿಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ. ಇದಕ್ಕೆ ರೈತ ಮುಖಂಡರು ಕಿಡಿಕಾರಿದ್ದು, ಕೇಂದ್ರ ಸರ್ಕಾರವೇ ಟ್ರ್ಯಾಕ್ಟರ್ ‌ಪೆರೇಡ್ ಗೆ ಅವಕಾಶ ಕೊಟ್ಟಿದೆ. ದೆಹಲಿಯಲ್ಲಿಯೇ ಟ್ರ್ಯಾಕ್ಟರ್ ಪರೇಡ್ ನಡೆಯುತ್ತೆ ಅಂದ ಮೇಲೆ ರಾಜ್ಯ ಸರ್ಕಾರ ಏಕೆ ಅನುಮತಿ ಕೊಡಲ್ಲಾ? ನಾವು ನಾಳೆ‌ ಟ್ರ್ಯಾಕ್ಟರ್ ಪೆರೇಡ್ ಮಾಡೇ ಮಾಡುತ್ತೇವೆ. ಟ್ಯಾಕ್ಟರ್ ಪೆರೇಡ್ ಇಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮ್ಮನ್ನು ತಡೆದರೆ ಉಗ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಈ ಕುರಿತು ಇಂದು ಸಂಜೆ 4 ಗಂಟೆಗೆ ಐಜಿಪಿಯವರು ರೈತ ಮುಖಂಡರೊಂದಿಗೆ ಮತ್ತೊಂದು ಸುತ್ತಿನ ಸಭೆ ಕರೆದಿದ್ದಾರೆ. ಪೊಲೀಸರು ಅನುಮತಿ ನೀಡದಿದ್ದರೆ ಇಂದು ಸಂಜೆಯಿಂದಲೇ ಡಿಸಿಪಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತೇವೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.


ಇದನ್ನೂ ಓದಿ: ಪೊಲೀಸರು ರೈತರ ಟ್ರ್ಯಾಕ್ಟರ್‌ಗಳನ್ನು ತಡೆದರೆ ರಾಜ್ಯಾದ್ಯಂತ ರಸ್ತೆ ಬಂದ್: ಬಡಗಲಪುರ ನಾಗೇಂದ್ರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...