Homeರೈತ ಹೋರಾಟಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್‌ ನಡೆಸಿಯೇ ತೀರುತ್ತೇವೆ: ರೈತ ಮುಖಂಡರ ಒಕ್ಕೊರಲ ಘೋಷಣೆ

ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್‌ ನಡೆಸಿಯೇ ತೀರುತ್ತೇವೆ: ರೈತ ಮುಖಂಡರ ಒಕ್ಕೊರಲ ಘೋಷಣೆ

ಸಾವಿರಾರು ಟ್ರ್ಯಾಕ್ಟರ್‌ಗಳು-ವಾಹನಗಳೊಂದಿಗೆ 20,000 ಕ್ಕೂ ಅಧಿಕ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಗಣರಾಜ್ಯೋತ್ಸವದಂದು ಬೆಂಗಳೂರಿನಲ್ಲಿ ಶಾಂತಿಯುತ ಟ್ರ್ಯಾಕ್ಟರ್ ಪರೇಡ್‌ ನಡೆಸಿಯೇ ತೀರುತ್ತೇವೆ ಎಂದು ಸಂಯುಕ್ತ ಹೋರಾಟ – ಕರ್ನಾಟಕದ ರೈತ ಮುಖಂಡರು ಘೋಷಿಸಿದ್ದಾರೆ.

ಇಂದು ನಗರದ ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಚಾಮರಸ ಮಾಲಿಪಾಟೀಲ್, ದ.ಸ.ಸಂ (ಅಂಬೇಡ್ಕರ್ ವಾದ)ಯ ಮಾವಳ್ಳಿ ಶಂಕರ್, ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷರಾದ ನಿತ್ಯಾನಂದ ಸ್ವಾಮಿ, ಕಾರ್ಮಿಕ ಒಕ್ಕೂಟದ ಕೆ.ವಿ ಭಟ್, ರೈತ ಮುಖಂಡರಾದ ಜೆ.ಎಂ ವೀರಸಂಗಯ್ಯ ಮುಂತಾದವರು ಭಾಗವಹಿಸಿ ಸಾವಿರಾರು ಟ್ರ್ಯಾಕ್ಟರ್‌ಗಳು-ವಾಹನಗಳೊಂದಿಗೆ 20,000 ಕ್ಕೂ ಅಧಿಕ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಚಾಮರಸ ಮಾಲಿಪಾಟೀಲ್ ಮಾತನಾಡಿ “ಮುಂಬೈ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದ ರೈತರು ಸೇರಿದಂತೆ ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರಿನಿಂದ ಅತಿ ಹೆಚ್ಚಿನ ರೈತರು ನಾಳೆಯ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಆದರೆ ಟ್ರ್ಯಾಕ್ಟರ್‌ಗಳನ್ನು ಎಲ್ಲೆಡೆ ಪೊಲೀಸರು ತಡೆಯುತ್ತಿದ್ದು ಇದನ್ನು ನಾವು ಖಂಡಿಸುತ್ತೇವೆ. ಏನೇ ಸಮಸ್ಯೆಗಳಿದ್ದರೆ ಪೊಲೀಸ್ ಅಧಿಕಾರಿಗಳು ನಮ್ಮೊಂದಿಗೆ ಚರ್ಚೆ ಮಾಡಲಿ. ಆದರೆ ನಿರ್ಬಂಧ ಹಾಕಲು ಪೊಲೀಸರು ಮುಂದಾದರೆ ಪರಿಸ್ಥಿತಿ ಕೈಮೀರುತ್ತದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಸರ್ಕಾರವೇ ಜವಾಬ್ದಾರಿ” ಎಂದಿದ್ದಾರೆ.

ಮಾವಳ್ಳಿ ಶಂಕರ್‌ರವರು ಮಾತನಾಡಿ “ನಾವು ಈಗಾಗಲೇ ಬೆಂಗಳೂರು ಪೊಲೀಸ್ ಮುಖ್ಯಸ್ಥರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇವೆ. ಯಾವುದೇ ಕಾರಣಕ್ಕೂ ಹಿಂಸೆಗೆ ಅವಕಾಶ ಕೊಡುವುದಿಲ್ಲ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗೆ ಕುದುಂಟು ಮಾಡುವುದಿಲ್ಲ ಎಂದು ಸಭೆಯಲ್ಲಿ ನಮ್ಮ ಸ್ಪಷ್ಟ ಅಭಿಪ್ರಾಯ ತಿಳಿಸಿದ್ದೇವೆ. ಎಲ್ಲಾ ರೈತರು ನಗರದ ರೈಲ್ವೇ ಸ್ಟೇಷನ್ ಬಳಿ ಸೇರಿ ಅಲ್ಲಿಂದ ಫ್ರೀಡಂ ಪಾರ್ಕ್ ವರೆಗೂ ಮೆರವಣಿಗೆ ನಡೆಸುತ್ತೇವೆ. ಅಲ್ಲಿ ಶತಾಯುಷಿ ಎಚ್.ಎಸ್ ದೊರೆಸ್ವಾಮಿಯವರು ಧ್ವಜಾರೋಹಣ ನಡೆಸಲಿದ್ದಾರೆ ಎಂದು ತಿಳಿಸಿದ್ದೇವೆ. ಆದರೆ ಪೊಲೀಸರು ಟ್ರ್ಯಾಕ್ಟರ್ ತಡೆದರೆ, ಡೀಸೆಲ್ ಹಾಕಲು ನಿರಾಕರಿಸಿರುತ್ತಿರುವುದನ್ನು ನೋಡಿದರೆ ನಾಗರೀಕ ಹೋರಾಟವನ್ನು ಸರ್ಕಾರ ದಮನ ಮಾಡುತ್ತಿರುವುದು ಕಂಡುಬಂದಿದೆ. ನಾವು ಶಾಂತಿಯುತವಾಗಿ ನಮ್ಮ ಹೋರಾಟ ಮುಂದುವರೆಸುತ್ತೇವೆ’ ಎಂದಿದ್ದಾರೆ.

ರಾಯಚೂರು, ಬಳ್ಳಾರಿ ಜಿಲ್ಲೆಗಳಿಂದ ಒಂದು ತಂಡ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಂದ ಒಂದು ತಂಡ, ಮಡಿಕೇರಿ, ಮೈಸೂರು, ಮಂಡ್ಯ ಜಿಲ್ಲೆಗಳಿಂದ ರೈತರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಮೈಸೂರು ಮಾರ್ಗದಿಂದ ಬರುವ ರೈತರು ಬಿಡದಿ ಕೈಗಾರಿಕಾ ಜಂಕ್ಷನ್‌ನಲ್ಲಿ, ಉತ್ತರ ಕರ್ನಾಟಕದಿಂದ ಬರುವ ರೈತರು ತುಮಕೂರು-ನೈಸ್‌ರಸ್ತೆ ಜಂಕ್ಷನ್‌, ಚಿಕ್ಕಬಳ್ಳಾಪುರ ಕಡೆಯಿಂದ ಬರುವ ರೈತರು ದೇವನಹಳ್ಳಿ ನಂದಿ ಕ್ರಾಸ್‌ ಬಳಿ ಹಾಗೂ ಕೊಲಾರ ಕಡೆಯಿಂದ ಬರುವ ರೈತರು ಹೊಸಕೋಟೆ ಟೋಲ್‌ ಬಳಿ ಹಾಗೂ ಬೆಂಗಳೂರು ಸಿಟಿ ರೈಲ್ವೆ ಜಂಕ್ಷನ್‌ನಲ್ಲಿ ಜ. 26ರಂದು ಬೆಳಗ್ಗೆ 9 ಗಂಟೆಗೆ ಸೇರಲಿದ್ದಾರೆ.

ಇಲ್ಲಿಂದ ಹೊರಡಲಿರುವ ರೈತರು ಮಧ್ಯಾಹ್ನ 12.30ಕ್ಕೆ ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನೆರೆಯಲಿದ್ದಾರೆ. ಉದ್ಯಾನದಲ್ಲಿ ನಡೆಯಲಿರುವ ಬೃಹತ್‌ ಸಮಾವೇಶದಲ್ಲಿ ಕೃಷಿ ಕಾಯ್ದೆಗಳಿಂದ ರೈತರಿಗೆ ಆಗುತ್ತಿರುವ ಅನ್ಯಾಯ ಜಾರಿಗೊಳಿಸುತ್ತಿರುವ ಪಟ್ಟು ಹಿಡಿದಿರುವ ಸರ್ಕಾರದ ರೈತ ವಿರೋಧಿ ಧೋರಣೆ ಕುರಿತು ಚರ್ಚೆ ನಡೆಯಲಿವೆ.

ಈ ನಡುವೆ ಟ್ರ್ಯಾಕ್ಟರ್ ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ನಗರ ಪೋಲಿಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ. ಇದಕ್ಕೆ ರೈತ ಮುಖಂಡರು ಕಿಡಿಕಾರಿದ್ದು, ಕೇಂದ್ರ ಸರ್ಕಾರವೇ ಟ್ರ್ಯಾಕ್ಟರ್ ‌ಪೆರೇಡ್ ಗೆ ಅವಕಾಶ ಕೊಟ್ಟಿದೆ. ದೆಹಲಿಯಲ್ಲಿಯೇ ಟ್ರ್ಯಾಕ್ಟರ್ ಪರೇಡ್ ನಡೆಯುತ್ತೆ ಅಂದ ಮೇಲೆ ರಾಜ್ಯ ಸರ್ಕಾರ ಏಕೆ ಅನುಮತಿ ಕೊಡಲ್ಲಾ? ನಾವು ನಾಳೆ‌ ಟ್ರ್ಯಾಕ್ಟರ್ ಪೆರೇಡ್ ಮಾಡೇ ಮಾಡುತ್ತೇವೆ. ಟ್ಯಾಕ್ಟರ್ ಪೆರೇಡ್ ಇಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮ್ಮನ್ನು ತಡೆದರೆ ಉಗ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಈ ಕುರಿತು ಇಂದು ಸಂಜೆ 4 ಗಂಟೆಗೆ ಐಜಿಪಿಯವರು ರೈತ ಮುಖಂಡರೊಂದಿಗೆ ಮತ್ತೊಂದು ಸುತ್ತಿನ ಸಭೆ ಕರೆದಿದ್ದಾರೆ. ಪೊಲೀಸರು ಅನುಮತಿ ನೀಡದಿದ್ದರೆ ಇಂದು ಸಂಜೆಯಿಂದಲೇ ಡಿಸಿಪಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತೇವೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.


ಇದನ್ನೂ ಓದಿ: ಪೊಲೀಸರು ರೈತರ ಟ್ರ್ಯಾಕ್ಟರ್‌ಗಳನ್ನು ತಡೆದರೆ ರಾಜ್ಯಾದ್ಯಂತ ರಸ್ತೆ ಬಂದ್: ಬಡಗಲಪುರ ನಾಗೇಂದ್ರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...