Homeರೈತ ಹೋರಾಟಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್‌ ನಡೆಸಿಯೇ ತೀರುತ್ತೇವೆ: ರೈತ ಮುಖಂಡರ ಒಕ್ಕೊರಲ ಘೋಷಣೆ

ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್‌ ನಡೆಸಿಯೇ ತೀರುತ್ತೇವೆ: ರೈತ ಮುಖಂಡರ ಒಕ್ಕೊರಲ ಘೋಷಣೆ

ಸಾವಿರಾರು ಟ್ರ್ಯಾಕ್ಟರ್‌ಗಳು-ವಾಹನಗಳೊಂದಿಗೆ 20,000 ಕ್ಕೂ ಅಧಿಕ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಗಣರಾಜ್ಯೋತ್ಸವದಂದು ಬೆಂಗಳೂರಿನಲ್ಲಿ ಶಾಂತಿಯುತ ಟ್ರ್ಯಾಕ್ಟರ್ ಪರೇಡ್‌ ನಡೆಸಿಯೇ ತೀರುತ್ತೇವೆ ಎಂದು ಸಂಯುಕ್ತ ಹೋರಾಟ – ಕರ್ನಾಟಕದ ರೈತ ಮುಖಂಡರು ಘೋಷಿಸಿದ್ದಾರೆ.

ಇಂದು ನಗರದ ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಚಾಮರಸ ಮಾಲಿಪಾಟೀಲ್, ದ.ಸ.ಸಂ (ಅಂಬೇಡ್ಕರ್ ವಾದ)ಯ ಮಾವಳ್ಳಿ ಶಂಕರ್, ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷರಾದ ನಿತ್ಯಾನಂದ ಸ್ವಾಮಿ, ಕಾರ್ಮಿಕ ಒಕ್ಕೂಟದ ಕೆ.ವಿ ಭಟ್, ರೈತ ಮುಖಂಡರಾದ ಜೆ.ಎಂ ವೀರಸಂಗಯ್ಯ ಮುಂತಾದವರು ಭಾಗವಹಿಸಿ ಸಾವಿರಾರು ಟ್ರ್ಯಾಕ್ಟರ್‌ಗಳು-ವಾಹನಗಳೊಂದಿಗೆ 20,000 ಕ್ಕೂ ಅಧಿಕ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಚಾಮರಸ ಮಾಲಿಪಾಟೀಲ್ ಮಾತನಾಡಿ “ಮುಂಬೈ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕದ ರೈತರು ಸೇರಿದಂತೆ ಚಾಮರಾಜನಗರ, ಮೈಸೂರು, ಕೊಡಗು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರಿನಿಂದ ಅತಿ ಹೆಚ್ಚಿನ ರೈತರು ನಾಳೆಯ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಆದರೆ ಟ್ರ್ಯಾಕ್ಟರ್‌ಗಳನ್ನು ಎಲ್ಲೆಡೆ ಪೊಲೀಸರು ತಡೆಯುತ್ತಿದ್ದು ಇದನ್ನು ನಾವು ಖಂಡಿಸುತ್ತೇವೆ. ಏನೇ ಸಮಸ್ಯೆಗಳಿದ್ದರೆ ಪೊಲೀಸ್ ಅಧಿಕಾರಿಗಳು ನಮ್ಮೊಂದಿಗೆ ಚರ್ಚೆ ಮಾಡಲಿ. ಆದರೆ ನಿರ್ಬಂಧ ಹಾಕಲು ಪೊಲೀಸರು ಮುಂದಾದರೆ ಪರಿಸ್ಥಿತಿ ಕೈಮೀರುತ್ತದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಸರ್ಕಾರವೇ ಜವಾಬ್ದಾರಿ” ಎಂದಿದ್ದಾರೆ.

ಮಾವಳ್ಳಿ ಶಂಕರ್‌ರವರು ಮಾತನಾಡಿ “ನಾವು ಈಗಾಗಲೇ ಬೆಂಗಳೂರು ಪೊಲೀಸ್ ಮುಖ್ಯಸ್ಥರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇವೆ. ಯಾವುದೇ ಕಾರಣಕ್ಕೂ ಹಿಂಸೆಗೆ ಅವಕಾಶ ಕೊಡುವುದಿಲ್ಲ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗೆ ಕುದುಂಟು ಮಾಡುವುದಿಲ್ಲ ಎಂದು ಸಭೆಯಲ್ಲಿ ನಮ್ಮ ಸ್ಪಷ್ಟ ಅಭಿಪ್ರಾಯ ತಿಳಿಸಿದ್ದೇವೆ. ಎಲ್ಲಾ ರೈತರು ನಗರದ ರೈಲ್ವೇ ಸ್ಟೇಷನ್ ಬಳಿ ಸೇರಿ ಅಲ್ಲಿಂದ ಫ್ರೀಡಂ ಪಾರ್ಕ್ ವರೆಗೂ ಮೆರವಣಿಗೆ ನಡೆಸುತ್ತೇವೆ. ಅಲ್ಲಿ ಶತಾಯುಷಿ ಎಚ್.ಎಸ್ ದೊರೆಸ್ವಾಮಿಯವರು ಧ್ವಜಾರೋಹಣ ನಡೆಸಲಿದ್ದಾರೆ ಎಂದು ತಿಳಿಸಿದ್ದೇವೆ. ಆದರೆ ಪೊಲೀಸರು ಟ್ರ್ಯಾಕ್ಟರ್ ತಡೆದರೆ, ಡೀಸೆಲ್ ಹಾಕಲು ನಿರಾಕರಿಸಿರುತ್ತಿರುವುದನ್ನು ನೋಡಿದರೆ ನಾಗರೀಕ ಹೋರಾಟವನ್ನು ಸರ್ಕಾರ ದಮನ ಮಾಡುತ್ತಿರುವುದು ಕಂಡುಬಂದಿದೆ. ನಾವು ಶಾಂತಿಯುತವಾಗಿ ನಮ್ಮ ಹೋರಾಟ ಮುಂದುವರೆಸುತ್ತೇವೆ’ ಎಂದಿದ್ದಾರೆ.

ರಾಯಚೂರು, ಬಳ್ಳಾರಿ ಜಿಲ್ಲೆಗಳಿಂದ ಒಂದು ತಂಡ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಂದ ಒಂದು ತಂಡ, ಮಡಿಕೇರಿ, ಮೈಸೂರು, ಮಂಡ್ಯ ಜಿಲ್ಲೆಗಳಿಂದ ರೈತರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಮೈಸೂರು ಮಾರ್ಗದಿಂದ ಬರುವ ರೈತರು ಬಿಡದಿ ಕೈಗಾರಿಕಾ ಜಂಕ್ಷನ್‌ನಲ್ಲಿ, ಉತ್ತರ ಕರ್ನಾಟಕದಿಂದ ಬರುವ ರೈತರು ತುಮಕೂರು-ನೈಸ್‌ರಸ್ತೆ ಜಂಕ್ಷನ್‌, ಚಿಕ್ಕಬಳ್ಳಾಪುರ ಕಡೆಯಿಂದ ಬರುವ ರೈತರು ದೇವನಹಳ್ಳಿ ನಂದಿ ಕ್ರಾಸ್‌ ಬಳಿ ಹಾಗೂ ಕೊಲಾರ ಕಡೆಯಿಂದ ಬರುವ ರೈತರು ಹೊಸಕೋಟೆ ಟೋಲ್‌ ಬಳಿ ಹಾಗೂ ಬೆಂಗಳೂರು ಸಿಟಿ ರೈಲ್ವೆ ಜಂಕ್ಷನ್‌ನಲ್ಲಿ ಜ. 26ರಂದು ಬೆಳಗ್ಗೆ 9 ಗಂಟೆಗೆ ಸೇರಲಿದ್ದಾರೆ.

ಇಲ್ಲಿಂದ ಹೊರಡಲಿರುವ ರೈತರು ಮಧ್ಯಾಹ್ನ 12.30ಕ್ಕೆ ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನೆರೆಯಲಿದ್ದಾರೆ. ಉದ್ಯಾನದಲ್ಲಿ ನಡೆಯಲಿರುವ ಬೃಹತ್‌ ಸಮಾವೇಶದಲ್ಲಿ ಕೃಷಿ ಕಾಯ್ದೆಗಳಿಂದ ರೈತರಿಗೆ ಆಗುತ್ತಿರುವ ಅನ್ಯಾಯ ಜಾರಿಗೊಳಿಸುತ್ತಿರುವ ಪಟ್ಟು ಹಿಡಿದಿರುವ ಸರ್ಕಾರದ ರೈತ ವಿರೋಧಿ ಧೋರಣೆ ಕುರಿತು ಚರ್ಚೆ ನಡೆಯಲಿವೆ.

ಈ ನಡುವೆ ಟ್ರ್ಯಾಕ್ಟರ್ ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ನಗರ ಪೋಲಿಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ. ಇದಕ್ಕೆ ರೈತ ಮುಖಂಡರು ಕಿಡಿಕಾರಿದ್ದು, ಕೇಂದ್ರ ಸರ್ಕಾರವೇ ಟ್ರ್ಯಾಕ್ಟರ್ ‌ಪೆರೇಡ್ ಗೆ ಅವಕಾಶ ಕೊಟ್ಟಿದೆ. ದೆಹಲಿಯಲ್ಲಿಯೇ ಟ್ರ್ಯಾಕ್ಟರ್ ಪರೇಡ್ ನಡೆಯುತ್ತೆ ಅಂದ ಮೇಲೆ ರಾಜ್ಯ ಸರ್ಕಾರ ಏಕೆ ಅನುಮತಿ ಕೊಡಲ್ಲಾ? ನಾವು ನಾಳೆ‌ ಟ್ರ್ಯಾಕ್ಟರ್ ಪೆರೇಡ್ ಮಾಡೇ ಮಾಡುತ್ತೇವೆ. ಟ್ಯಾಕ್ಟರ್ ಪೆರೇಡ್ ಇಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮ್ಮನ್ನು ತಡೆದರೆ ಉಗ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಈ ಕುರಿತು ಇಂದು ಸಂಜೆ 4 ಗಂಟೆಗೆ ಐಜಿಪಿಯವರು ರೈತ ಮುಖಂಡರೊಂದಿಗೆ ಮತ್ತೊಂದು ಸುತ್ತಿನ ಸಭೆ ಕರೆದಿದ್ದಾರೆ. ಪೊಲೀಸರು ಅನುಮತಿ ನೀಡದಿದ್ದರೆ ಇಂದು ಸಂಜೆಯಿಂದಲೇ ಡಿಸಿಪಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತೇವೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.


ಇದನ್ನೂ ಓದಿ: ಪೊಲೀಸರು ರೈತರ ಟ್ರ್ಯಾಕ್ಟರ್‌ಗಳನ್ನು ತಡೆದರೆ ರಾಜ್ಯಾದ್ಯಂತ ರಸ್ತೆ ಬಂದ್: ಬಡಗಲಪುರ ನಾಗೇಂದ್ರ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...