Homeಕರ್ನಾಟಕಶೀಘ್ರದಲ್ಲೆ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ' ಜಾರಿ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ಶೀಘ್ರದಲ್ಲೆ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ’ ಜಾರಿ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಶೀಘ್ರದಲ್ಲೆ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-2022’ ಕಾಯ್ದೆಯನ್ನು ಜಾರಿ ಮಾಡುತ್ತೇವೆ; ಅಲ್ಲಿಯವರೆಗೆ ಶಾಂತಿಯುತವಾಗಿದ್ದು ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡಪರ ಸಂಘನೆಗಳ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಇಂದು ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ‘ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು, 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು. ಕಾಯ್ದೆ ಜಾರಿ ಮಾಡುತ್ತೇವೆ; ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮನವಿ ಮಾಡುತ್ತೇನೆ’ ಎಂದು ಹೇಳಿದ್ದಾರೆ.

‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6) ರ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಇದಕ್ಕೂ ಮೊದಲು 2018ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು’ ಎಂದು ಅವರು ಹೇಳಿದ್ದಾರೆ.

‘ಈ ಕಾಯ್ದೆಯ ನಿಯಮ 17(6) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲ್ಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿ ಇರತಕ್ಕದ್ದು ಎಂದಿದೆ. ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಯಮಿಸಲಾದಂತೆ ಇರತಕ್ಕದ್ದು ಎಂದು ತಿಳಿಸಲಾಗಿದೆ. ಇದನ್ನು ಸಹ ಅನುಷ್ಠಾನಗೊಳಿಸಲಾಗುವುದು’ ಎಂದಿದ್ದಾರೆ.

‘ಈ ಕಾಯ್ದೆಯ ಅಧಿಸೂಚನೆ ಹೊರಡಿಸಲು ಹಾಗೂ ನಿಯಮಗಳನ್ನು ರೂಪಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ. ಆದರೆ, ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳ ಬಯಸುತ್ತೇನೆ’ ಎಂದು ಎಚ್ಚರಿಕೆ ನೀಡಿದ್ದಾರೆ.

‘3-3-2022ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯವು ಪ್ರತಿಭಟನೆಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತ್ರ ನಡೆಸಬೇಕು, ರಾಜ್ಯ ಸರ್ಕಾರವು ಇದನ್ನು ಖಾತರಿಪಡಿಸಬೇಕು ಎಂದು ಸ್ಪಷ್ಟವಾದ ಆದೇಶ ಹೊರಡಿಸಿದೆ. ಸಂಘಟನೆಯಿರಲಿ, ವ್ಯಕ್ತಿಗಳಿರಲಿ, ಖಾಸಗಿ ಸಂಸ್ಥೆಗಳಿರಲಿ ಯಾರೇ ಆಗಲಿ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ’ ಎಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ಶಿಕ್ಷಣ ಸಚಿವರ ತವರಿನಲ್ಲೇ ಬೆಳಕಿಗೆ ಬಂತು ಮತ್ತೊಂದು ಪ್ರಕರಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...