Homeಕರ್ನಾಟಕಶೀಘ್ರದಲ್ಲೆ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ' ಜಾರಿ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ಶೀಘ್ರದಲ್ಲೆ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ’ ಜಾರಿ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಶೀಘ್ರದಲ್ಲೆ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-2022’ ಕಾಯ್ದೆಯನ್ನು ಜಾರಿ ಮಾಡುತ್ತೇವೆ; ಅಲ್ಲಿಯವರೆಗೆ ಶಾಂತಿಯುತವಾಗಿದ್ದು ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡಪರ ಸಂಘನೆಗಳ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಇಂದು ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ‘ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು, 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು. ಕಾಯ್ದೆ ಜಾರಿ ಮಾಡುತ್ತೇವೆ; ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮನವಿ ಮಾಡುತ್ತೇನೆ’ ಎಂದು ಹೇಳಿದ್ದಾರೆ.

‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6) ರ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಇದಕ್ಕೂ ಮೊದಲು 2018ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು’ ಎಂದು ಅವರು ಹೇಳಿದ್ದಾರೆ.

‘ಈ ಕಾಯ್ದೆಯ ನಿಯಮ 17(6) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲ್ಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿ ಇರತಕ್ಕದ್ದು ಎಂದಿದೆ. ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಯಮಿಸಲಾದಂತೆ ಇರತಕ್ಕದ್ದು ಎಂದು ತಿಳಿಸಲಾಗಿದೆ. ಇದನ್ನು ಸಹ ಅನುಷ್ಠಾನಗೊಳಿಸಲಾಗುವುದು’ ಎಂದಿದ್ದಾರೆ.

‘ಈ ಕಾಯ್ದೆಯ ಅಧಿಸೂಚನೆ ಹೊರಡಿಸಲು ಹಾಗೂ ನಿಯಮಗಳನ್ನು ರೂಪಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ. ಆದರೆ, ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳ ಬಯಸುತ್ತೇನೆ’ ಎಂದು ಎಚ್ಚರಿಕೆ ನೀಡಿದ್ದಾರೆ.

‘3-3-2022ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯವು ಪ್ರತಿಭಟನೆಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತ್ರ ನಡೆಸಬೇಕು, ರಾಜ್ಯ ಸರ್ಕಾರವು ಇದನ್ನು ಖಾತರಿಪಡಿಸಬೇಕು ಎಂದು ಸ್ಪಷ್ಟವಾದ ಆದೇಶ ಹೊರಡಿಸಿದೆ. ಸಂಘಟನೆಯಿರಲಿ, ವ್ಯಕ್ತಿಗಳಿರಲಿ, ಖಾಸಗಿ ಸಂಸ್ಥೆಗಳಿರಲಿ ಯಾರೇ ಆಗಲಿ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ’ ಎಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ಶಿಕ್ಷಣ ಸಚಿವರ ತವರಿನಲ್ಲೇ ಬೆಳಕಿಗೆ ಬಂತು ಮತ್ತೊಂದು ಪ್ರಕರಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...