Homeಮುಖಪುಟನಿಮ್ಮನ್ನು ಸಂಹಾರ ಮಾಡುತ್ತೀವಿ: ಎಚ್‌ಡಿಕೆ, ಅಮೀನ್‌ ಮಟ್ಟು, ಪ್ರಕಾಶ್‌ರಾಜ್‌ ಹೆಸರನ್ನೊಳಗೊಂಡ ನಿಜಗುಣಾನಂದ ಸ್ವಾಮಿಗಳಿಗೆ ಬಂದ ಬೆದರಿಕೆ...

ನಿಮ್ಮನ್ನು ಸಂಹಾರ ಮಾಡುತ್ತೀವಿ: ಎಚ್‌ಡಿಕೆ, ಅಮೀನ್‌ ಮಟ್ಟು, ಪ್ರಕಾಶ್‌ರಾಜ್‌ ಹೆಸರನ್ನೊಳಗೊಂಡ ನಿಜಗುಣಾನಂದ ಸ್ವಾಮಿಗಳಿಗೆ ಬಂದ ಬೆದರಿಕೆ ಪತ್ರ..

ದಾವಣಗೆರೆಯಿಂದ ಈ ಅನಾಮಧೇಯ ಪೋಸ್ಟ್‌ ಬಂದಿದ್ದು, ನಿಜಗುಣಾನಂದ ಸ್ವಾಮಿಗಳು ಕೂಡಲೇ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

- Advertisement -
- Advertisement -

ನಿಜಗುಣಾನಂದ ಸ್ವಾಮಿಗಳೆ, ನಿಮ್ಮನ್ನು ಮತ್ತು ನಿಮ್ಮ ಜೊತೆ ಇರುವ ಧರ್ಮದ್ರೋಹಿಗಳನ್ನು, ದೇಶದ್ರೋಹಿಗಳನ್ನು 2020ರ, ಜನವರಿ 29 ಸಂಹಾರ ಮಾಡುತ್ತೇವೆ ಎಂಬ 15ಜನರ ಹೆಸರುಗಳ ಪಟ್ಟಿ ಇರುವ ಬೆದರಿಕೆ ಪತ್ರವೊಂದನ್ನು ನಿಜಗುಣಾನಂದ ಸ್ವಾಮಿಗಳಿಗೆ ಕಳಿಸಲಾಗಿದೆ.

ಈ ಕುರಿತು ಲೇಖಕ, ಚಿಂತಕ ಯೋಗೇಶ್‌ ಮಾಸ್ಟರ್‌ ಸಾಮಾಜಿಕ ಜಾಲತಾಣದಲ್ಲಿ ಆ ಪತ್ರವನ್ನು ಹಂಚಿಕೊಂಡಿದ್ದು ಅದರಲ್ಲಿ “ನಿಮ್ಮಗಳ ಸಂಹಾರಕ್ಕೆ ಮುಹೂರ್ತ ನಿಶ್ಚಯವಾಗಿದೆ. ನಿಮ್ಮ ಅಂತಿಮ ಯಾತ್ರೆಗೆ ಸಿದ್ದರಾಗಿ. ನಿಮ್ಮನ್ನು ಮಾತ್ರವಲ್ಲ, ಮುಂದೆ ನೋಡಿ ನಿಮ್ಮ ಜೊತೆ ಅಂತಿಮ ಯಾತ್ರೆಗೆ ಇವರುಗಳನ್ನು ನೀವು ಸಿದ್ದ ಮಾಡಬೇಕು” ಎಂದು 15 ಜನರನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ದಾವಣಗೆರೆಯಿಂದ ಈ ಅನಾಮಧೇಯ ಪೋಸ್ಟ್‌ ಬಂದಿದ್ದು, ನಿಜಗುಣಾನಂದ ಸ್ವಾಮಿಗಳು ಕೂಡಲೇ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪತ್ರದಲ್ಲಿ ಭಜರಂಗದಳದ ಮಾಜಿ ನಾಯಕರಾದ ಮಹೇಂದ್ರ ಕುಮಾರ್‌, ನಿಜಗುಣಾನಂದ ಸ್ವಾಮಿಗಳು, ನಿಡುಮಾಮಿಡಿ ವೀರಭದ್ರ ಚನ್ನಮಲ್ಲ ಸ್ವಾಮಿ, ಚಿತ್ರನಟ ಪ್ರಕಾಶ್‌ ರಾಜ್‌, ಜ್ಞಾನಪ್ರಕಾಶ್‌ ಸ್ವಾಮಿ, ನಟ ಚೇತನ್‌, ಹಿರಿಯ ಲೇಖಕಿ ಬಿ.ಟಿ ಲಲಿತಾನಾಯಕ್‌, ಪ್ರೊ.ಮಹೇಶ್‌ ಚಂದ್ರ ಗುರು, ಪ್ರೊ ಕೆ.ಎಸ್‌ ಭಗವಾನ್‌, ಹಿರಿಯ ಪತ್ರಕರ್ತರಾದ ದಿನೇಶ್‌ ಅಮೀನ್‌ ಮಟ್ಟು, ಹಿರಿಯ ಸಾಹಿತಿ ಚಂಪಾ, ಲೇಖಕರಾದ ಯೋಗೇಶ್‌ ಮಾಸ್ಟರ್‌(ಢುಂಡಿ ಗಣೇಶ್‌), ಅಗ್ನಿ ಶ್ರೀಧರ್‌, ಸಿಪಿಎಂ ನಾಯಕಿ ಬೃಂದಾ ಕಾರಟ್‌ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು ಹೆಸರನ್ನು ಸೂಚಿಸಿ ಇಷ್ಟು ಜನರನ್ನು ಸಂಹಾರ ಮಾಡುತ್ತೀವಿ ಎಂದು ಬರೆಯಲಾಗಿದೆ.

ಕೈಬರಹದಲ್ಲಿ ಪತ್ರ ಬರೆಯಲಾಗಿದ್ದು ಸಾಕಷ್ಟು ಅಕ್ಷರದೋಷ, ಕಾಗುಣಿತ ದೋಷಗಳಿವೆ. ಪತ್ರವನ್ನು ನಿಜಗುಣಾನಂದ ಸ್ವಾಮಿಗಳಿಗೆ ಬರೆಯಲಾಗಿದೆ.

ಈ ಕುರಿತು ಲೇಖಕರಾದ ಯೋಗೇಶ್‌ ಮಾಸ್ಟರ್‌ ನಾನುಗೌರಿ.ಕಾಂನೊಂದಿಗೆ ಮಾತನಾಡಿ, “ಮೊನ್ನೆ ತಾನೇ ಆದಿತ್ಯ ರಾ‌ವ್‌ ಎಂಬ ವ್ಯಕ್ತಿ ಬಾಂಬ್‌ ಇಟ್ಟು ಸಿಕ್ಕಿಬಿದ್ದಿದ್ದಾನೆ. ಇಂದು ಈ ಪತ್ರ ಬಂದಿದೆ ಅಂದರೆ ರಾಜ್ಯದಲ್ಲಿ ಮತ್ತು ದೇಶದಲ್ಲಿ ಬಲಪಂಥೀಯ ಶಕ್ತಿಗಳು ಯಾವ ಮಟ್ಟಕ್ಕೆ ಹೆದರಿದ್ದಾರೆ ಎಂದು ತಿಳಿಯುತ್ತದೆ. ಬಲಪಂಥೀಯ ನಾಯಕರಾಡುವ ಹಿಂಸಾತ್ಮಕ ಮಾತುಗಳಿಗೆ ಇಂತಹ ಬ್ರೈನ್‌ ವಾಶ್‌ ಆದವರು ಬಲಿಯಾಗಿ ಈ ರೀತಿಯ ಪತ್ರ ಬರೆಯುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರನ್ನು ಪಟ್ಟಿಗೆ ಸೇರಿಸಿದ್ದಾರೆಂದರೆ ಅವರ ಅಸಹನೆ ಪ್ರಮಾಣ ಊಹಿಸಿ” ಎಂದು ಹೇಳಿದ್ದಾರೆ.

ಪಟ್ಟಿಯಲ್ಲಿರುವ ಬಹುತೇಕ ಹೆಸರುಗಳು ಪ್ರಗತಿಪರ ಜನಪರ ನಾಯಕರಾಗಿದ್ದಾರೆ. ಅದಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಸಿಎಎ, ಎನ್‌ಆರ್‌ಸಿ ವಿರುದ್ಧ ಮತ್ತು ಬಿಜೆಪಿಯ ವಿರುದ್ಧ ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕೆ ಏರುದನಿಯಲ್ಲಿ ಮಾತನಾಡುತ್ತಿದ್ದಾರೆ. ಅದಕ್ಕಾಗಿಯೇ ಅವರನ್ನು ಸಹ ಪಟ್ಟಿಯಲ್ಲಿ ಸೇರಿಸಲಾಗಿದೆ ಎನ್ನಲಾಗುತ್ತಿದೆ.

ಒಟ್ಟಿನಲ್ಲಿ ಸುಮ್ಮನೆ ಬೆದರಿಕೆಗೇಂದೇ ಪತ್ರ ಬರೆದಿದ್ದರೂ ಸಹ ಇದನ್ನು ನಿರ್ಲಕ್ಷಿಸದೇ ಪೊಲೀಸರು ಕಾರ್ಯಪ್ರವೃತ್ತರಾಗಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಬೆದರಿಕೆ ಹಾಕಿರುವವರನ್ನು ಈ ಕೂಡಲೇ ಬಂಧಿಸಿ, ನ್ಯಾಯಾಂಗದ ವಶಕ್ಕೆ ಒಪ್ಪಿಸಬೇಕು.

  2. ಈ ಧರ್ಮದ ನಶೆ ಏರಿಸಿಕೊಂಡು ಕೊಲ್ಲುವಷ್ಟು ಧೈರ್ಯ ಮಾಡಿರುವ ಕೀಚಕರು ವಧೆ ಮಾಡುವವರು ಯಾರೂ ಇಲ್ಲವೇ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...