Homeಮುಖಪುಟನಿಮ್ಮನ್ನು ಸಂಹಾರ ಮಾಡುತ್ತೀವಿ: ಎಚ್‌ಡಿಕೆ, ಅಮೀನ್‌ ಮಟ್ಟು, ಪ್ರಕಾಶ್‌ರಾಜ್‌ ಹೆಸರನ್ನೊಳಗೊಂಡ ನಿಜಗುಣಾನಂದ ಸ್ವಾಮಿಗಳಿಗೆ ಬಂದ ಬೆದರಿಕೆ...

ನಿಮ್ಮನ್ನು ಸಂಹಾರ ಮಾಡುತ್ತೀವಿ: ಎಚ್‌ಡಿಕೆ, ಅಮೀನ್‌ ಮಟ್ಟು, ಪ್ರಕಾಶ್‌ರಾಜ್‌ ಹೆಸರನ್ನೊಳಗೊಂಡ ನಿಜಗುಣಾನಂದ ಸ್ವಾಮಿಗಳಿಗೆ ಬಂದ ಬೆದರಿಕೆ ಪತ್ರ..

ದಾವಣಗೆರೆಯಿಂದ ಈ ಅನಾಮಧೇಯ ಪೋಸ್ಟ್‌ ಬಂದಿದ್ದು, ನಿಜಗುಣಾನಂದ ಸ್ವಾಮಿಗಳು ಕೂಡಲೇ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

- Advertisement -
- Advertisement -

ನಿಜಗುಣಾನಂದ ಸ್ವಾಮಿಗಳೆ, ನಿಮ್ಮನ್ನು ಮತ್ತು ನಿಮ್ಮ ಜೊತೆ ಇರುವ ಧರ್ಮದ್ರೋಹಿಗಳನ್ನು, ದೇಶದ್ರೋಹಿಗಳನ್ನು 2020ರ, ಜನವರಿ 29 ಸಂಹಾರ ಮಾಡುತ್ತೇವೆ ಎಂಬ 15ಜನರ ಹೆಸರುಗಳ ಪಟ್ಟಿ ಇರುವ ಬೆದರಿಕೆ ಪತ್ರವೊಂದನ್ನು ನಿಜಗುಣಾನಂದ ಸ್ವಾಮಿಗಳಿಗೆ ಕಳಿಸಲಾಗಿದೆ.

ಈ ಕುರಿತು ಲೇಖಕ, ಚಿಂತಕ ಯೋಗೇಶ್‌ ಮಾಸ್ಟರ್‌ ಸಾಮಾಜಿಕ ಜಾಲತಾಣದಲ್ಲಿ ಆ ಪತ್ರವನ್ನು ಹಂಚಿಕೊಂಡಿದ್ದು ಅದರಲ್ಲಿ “ನಿಮ್ಮಗಳ ಸಂಹಾರಕ್ಕೆ ಮುಹೂರ್ತ ನಿಶ್ಚಯವಾಗಿದೆ. ನಿಮ್ಮ ಅಂತಿಮ ಯಾತ್ರೆಗೆ ಸಿದ್ದರಾಗಿ. ನಿಮ್ಮನ್ನು ಮಾತ್ರವಲ್ಲ, ಮುಂದೆ ನೋಡಿ ನಿಮ್ಮ ಜೊತೆ ಅಂತಿಮ ಯಾತ್ರೆಗೆ ಇವರುಗಳನ್ನು ನೀವು ಸಿದ್ದ ಮಾಡಬೇಕು” ಎಂದು 15 ಜನರನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ದಾವಣಗೆರೆಯಿಂದ ಈ ಅನಾಮಧೇಯ ಪೋಸ್ಟ್‌ ಬಂದಿದ್ದು, ನಿಜಗುಣಾನಂದ ಸ್ವಾಮಿಗಳು ಕೂಡಲೇ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪತ್ರದಲ್ಲಿ ಭಜರಂಗದಳದ ಮಾಜಿ ನಾಯಕರಾದ ಮಹೇಂದ್ರ ಕುಮಾರ್‌, ನಿಜಗುಣಾನಂದ ಸ್ವಾಮಿಗಳು, ನಿಡುಮಾಮಿಡಿ ವೀರಭದ್ರ ಚನ್ನಮಲ್ಲ ಸ್ವಾಮಿ, ಚಿತ್ರನಟ ಪ್ರಕಾಶ್‌ ರಾಜ್‌, ಜ್ಞಾನಪ್ರಕಾಶ್‌ ಸ್ವಾಮಿ, ನಟ ಚೇತನ್‌, ಹಿರಿಯ ಲೇಖಕಿ ಬಿ.ಟಿ ಲಲಿತಾನಾಯಕ್‌, ಪ್ರೊ.ಮಹೇಶ್‌ ಚಂದ್ರ ಗುರು, ಪ್ರೊ ಕೆ.ಎಸ್‌ ಭಗವಾನ್‌, ಹಿರಿಯ ಪತ್ರಕರ್ತರಾದ ದಿನೇಶ್‌ ಅಮೀನ್‌ ಮಟ್ಟು, ಹಿರಿಯ ಸಾಹಿತಿ ಚಂಪಾ, ಲೇಖಕರಾದ ಯೋಗೇಶ್‌ ಮಾಸ್ಟರ್‌(ಢುಂಡಿ ಗಣೇಶ್‌), ಅಗ್ನಿ ಶ್ರೀಧರ್‌, ಸಿಪಿಎಂ ನಾಯಕಿ ಬೃಂದಾ ಕಾರಟ್‌ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು ಹೆಸರನ್ನು ಸೂಚಿಸಿ ಇಷ್ಟು ಜನರನ್ನು ಸಂಹಾರ ಮಾಡುತ್ತೀವಿ ಎಂದು ಬರೆಯಲಾಗಿದೆ.

ಕೈಬರಹದಲ್ಲಿ ಪತ್ರ ಬರೆಯಲಾಗಿದ್ದು ಸಾಕಷ್ಟು ಅಕ್ಷರದೋಷ, ಕಾಗುಣಿತ ದೋಷಗಳಿವೆ. ಪತ್ರವನ್ನು ನಿಜಗುಣಾನಂದ ಸ್ವಾಮಿಗಳಿಗೆ ಬರೆಯಲಾಗಿದೆ.

ಈ ಕುರಿತು ಲೇಖಕರಾದ ಯೋಗೇಶ್‌ ಮಾಸ್ಟರ್‌ ನಾನುಗೌರಿ.ಕಾಂನೊಂದಿಗೆ ಮಾತನಾಡಿ, “ಮೊನ್ನೆ ತಾನೇ ಆದಿತ್ಯ ರಾ‌ವ್‌ ಎಂಬ ವ್ಯಕ್ತಿ ಬಾಂಬ್‌ ಇಟ್ಟು ಸಿಕ್ಕಿಬಿದ್ದಿದ್ದಾನೆ. ಇಂದು ಈ ಪತ್ರ ಬಂದಿದೆ ಅಂದರೆ ರಾಜ್ಯದಲ್ಲಿ ಮತ್ತು ದೇಶದಲ್ಲಿ ಬಲಪಂಥೀಯ ಶಕ್ತಿಗಳು ಯಾವ ಮಟ್ಟಕ್ಕೆ ಹೆದರಿದ್ದಾರೆ ಎಂದು ತಿಳಿಯುತ್ತದೆ. ಬಲಪಂಥೀಯ ನಾಯಕರಾಡುವ ಹಿಂಸಾತ್ಮಕ ಮಾತುಗಳಿಗೆ ಇಂತಹ ಬ್ರೈನ್‌ ವಾಶ್‌ ಆದವರು ಬಲಿಯಾಗಿ ಈ ರೀತಿಯ ಪತ್ರ ಬರೆಯುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರನ್ನು ಪಟ್ಟಿಗೆ ಸೇರಿಸಿದ್ದಾರೆಂದರೆ ಅವರ ಅಸಹನೆ ಪ್ರಮಾಣ ಊಹಿಸಿ” ಎಂದು ಹೇಳಿದ್ದಾರೆ.

ಪಟ್ಟಿಯಲ್ಲಿರುವ ಬಹುತೇಕ ಹೆಸರುಗಳು ಪ್ರಗತಿಪರ ಜನಪರ ನಾಯಕರಾಗಿದ್ದಾರೆ. ಅದಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಸಿಎಎ, ಎನ್‌ಆರ್‌ಸಿ ವಿರುದ್ಧ ಮತ್ತು ಬಿಜೆಪಿಯ ವಿರುದ್ಧ ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕೆ ಏರುದನಿಯಲ್ಲಿ ಮಾತನಾಡುತ್ತಿದ್ದಾರೆ. ಅದಕ್ಕಾಗಿಯೇ ಅವರನ್ನು ಸಹ ಪಟ್ಟಿಯಲ್ಲಿ ಸೇರಿಸಲಾಗಿದೆ ಎನ್ನಲಾಗುತ್ತಿದೆ.

ಒಟ್ಟಿನಲ್ಲಿ ಸುಮ್ಮನೆ ಬೆದರಿಕೆಗೇಂದೇ ಪತ್ರ ಬರೆದಿದ್ದರೂ ಸಹ ಇದನ್ನು ನಿರ್ಲಕ್ಷಿಸದೇ ಪೊಲೀಸರು ಕಾರ್ಯಪ್ರವೃತ್ತರಾಗಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಬೆದರಿಕೆ ಹಾಕಿರುವವರನ್ನು ಈ ಕೂಡಲೇ ಬಂಧಿಸಿ, ನ್ಯಾಯಾಂಗದ ವಶಕ್ಕೆ ಒಪ್ಪಿಸಬೇಕು.

  2. ಈ ಧರ್ಮದ ನಶೆ ಏರಿಸಿಕೊಂಡು ಕೊಲ್ಲುವಷ್ಟು ಧೈರ್ಯ ಮಾಡಿರುವ ಕೀಚಕರು ವಧೆ ಮಾಡುವವರು ಯಾರೂ ಇಲ್ಲವೇ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....