Homeಮುಖಪುಟನಿಮ್ಮನ್ನು ಸಂಹಾರ ಮಾಡುತ್ತೀವಿ: ಎಚ್‌ಡಿಕೆ, ಅಮೀನ್‌ ಮಟ್ಟು, ಪ್ರಕಾಶ್‌ರಾಜ್‌ ಹೆಸರನ್ನೊಳಗೊಂಡ ನಿಜಗುಣಾನಂದ ಸ್ವಾಮಿಗಳಿಗೆ ಬಂದ ಬೆದರಿಕೆ...

ನಿಮ್ಮನ್ನು ಸಂಹಾರ ಮಾಡುತ್ತೀವಿ: ಎಚ್‌ಡಿಕೆ, ಅಮೀನ್‌ ಮಟ್ಟು, ಪ್ರಕಾಶ್‌ರಾಜ್‌ ಹೆಸರನ್ನೊಳಗೊಂಡ ನಿಜಗುಣಾನಂದ ಸ್ವಾಮಿಗಳಿಗೆ ಬಂದ ಬೆದರಿಕೆ ಪತ್ರ..

ದಾವಣಗೆರೆಯಿಂದ ಈ ಅನಾಮಧೇಯ ಪೋಸ್ಟ್‌ ಬಂದಿದ್ದು, ನಿಜಗುಣಾನಂದ ಸ್ವಾಮಿಗಳು ಕೂಡಲೇ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

- Advertisement -
- Advertisement -

ನಿಜಗುಣಾನಂದ ಸ್ವಾಮಿಗಳೆ, ನಿಮ್ಮನ್ನು ಮತ್ತು ನಿಮ್ಮ ಜೊತೆ ಇರುವ ಧರ್ಮದ್ರೋಹಿಗಳನ್ನು, ದೇಶದ್ರೋಹಿಗಳನ್ನು 2020ರ, ಜನವರಿ 29 ಸಂಹಾರ ಮಾಡುತ್ತೇವೆ ಎಂಬ 15ಜನರ ಹೆಸರುಗಳ ಪಟ್ಟಿ ಇರುವ ಬೆದರಿಕೆ ಪತ್ರವೊಂದನ್ನು ನಿಜಗುಣಾನಂದ ಸ್ವಾಮಿಗಳಿಗೆ ಕಳಿಸಲಾಗಿದೆ.

ಈ ಕುರಿತು ಲೇಖಕ, ಚಿಂತಕ ಯೋಗೇಶ್‌ ಮಾಸ್ಟರ್‌ ಸಾಮಾಜಿಕ ಜಾಲತಾಣದಲ್ಲಿ ಆ ಪತ್ರವನ್ನು ಹಂಚಿಕೊಂಡಿದ್ದು ಅದರಲ್ಲಿ “ನಿಮ್ಮಗಳ ಸಂಹಾರಕ್ಕೆ ಮುಹೂರ್ತ ನಿಶ್ಚಯವಾಗಿದೆ. ನಿಮ್ಮ ಅಂತಿಮ ಯಾತ್ರೆಗೆ ಸಿದ್ದರಾಗಿ. ನಿಮ್ಮನ್ನು ಮಾತ್ರವಲ್ಲ, ಮುಂದೆ ನೋಡಿ ನಿಮ್ಮ ಜೊತೆ ಅಂತಿಮ ಯಾತ್ರೆಗೆ ಇವರುಗಳನ್ನು ನೀವು ಸಿದ್ದ ಮಾಡಬೇಕು” ಎಂದು 15 ಜನರನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ದಾವಣಗೆರೆಯಿಂದ ಈ ಅನಾಮಧೇಯ ಪೋಸ್ಟ್‌ ಬಂದಿದ್ದು, ನಿಜಗುಣಾನಂದ ಸ್ವಾಮಿಗಳು ಕೂಡಲೇ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪತ್ರದಲ್ಲಿ ಭಜರಂಗದಳದ ಮಾಜಿ ನಾಯಕರಾದ ಮಹೇಂದ್ರ ಕುಮಾರ್‌, ನಿಜಗುಣಾನಂದ ಸ್ವಾಮಿಗಳು, ನಿಡುಮಾಮಿಡಿ ವೀರಭದ್ರ ಚನ್ನಮಲ್ಲ ಸ್ವಾಮಿ, ಚಿತ್ರನಟ ಪ್ರಕಾಶ್‌ ರಾಜ್‌, ಜ್ಞಾನಪ್ರಕಾಶ್‌ ಸ್ವಾಮಿ, ನಟ ಚೇತನ್‌, ಹಿರಿಯ ಲೇಖಕಿ ಬಿ.ಟಿ ಲಲಿತಾನಾಯಕ್‌, ಪ್ರೊ.ಮಹೇಶ್‌ ಚಂದ್ರ ಗುರು, ಪ್ರೊ ಕೆ.ಎಸ್‌ ಭಗವಾನ್‌, ಹಿರಿಯ ಪತ್ರಕರ್ತರಾದ ದಿನೇಶ್‌ ಅಮೀನ್‌ ಮಟ್ಟು, ಹಿರಿಯ ಸಾಹಿತಿ ಚಂಪಾ, ಲೇಖಕರಾದ ಯೋಗೇಶ್‌ ಮಾಸ್ಟರ್‌(ಢುಂಡಿ ಗಣೇಶ್‌), ಅಗ್ನಿ ಶ್ರೀಧರ್‌, ಸಿಪಿಎಂ ನಾಯಕಿ ಬೃಂದಾ ಕಾರಟ್‌ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು ಹೆಸರನ್ನು ಸೂಚಿಸಿ ಇಷ್ಟು ಜನರನ್ನು ಸಂಹಾರ ಮಾಡುತ್ತೀವಿ ಎಂದು ಬರೆಯಲಾಗಿದೆ.

ಕೈಬರಹದಲ್ಲಿ ಪತ್ರ ಬರೆಯಲಾಗಿದ್ದು ಸಾಕಷ್ಟು ಅಕ್ಷರದೋಷ, ಕಾಗುಣಿತ ದೋಷಗಳಿವೆ. ಪತ್ರವನ್ನು ನಿಜಗುಣಾನಂದ ಸ್ವಾಮಿಗಳಿಗೆ ಬರೆಯಲಾಗಿದೆ.

ಈ ಕುರಿತು ಲೇಖಕರಾದ ಯೋಗೇಶ್‌ ಮಾಸ್ಟರ್‌ ನಾನುಗೌರಿ.ಕಾಂನೊಂದಿಗೆ ಮಾತನಾಡಿ, “ಮೊನ್ನೆ ತಾನೇ ಆದಿತ್ಯ ರಾ‌ವ್‌ ಎಂಬ ವ್ಯಕ್ತಿ ಬಾಂಬ್‌ ಇಟ್ಟು ಸಿಕ್ಕಿಬಿದ್ದಿದ್ದಾನೆ. ಇಂದು ಈ ಪತ್ರ ಬಂದಿದೆ ಅಂದರೆ ರಾಜ್ಯದಲ್ಲಿ ಮತ್ತು ದೇಶದಲ್ಲಿ ಬಲಪಂಥೀಯ ಶಕ್ತಿಗಳು ಯಾವ ಮಟ್ಟಕ್ಕೆ ಹೆದರಿದ್ದಾರೆ ಎಂದು ತಿಳಿಯುತ್ತದೆ. ಬಲಪಂಥೀಯ ನಾಯಕರಾಡುವ ಹಿಂಸಾತ್ಮಕ ಮಾತುಗಳಿಗೆ ಇಂತಹ ಬ್ರೈನ್‌ ವಾಶ್‌ ಆದವರು ಬಲಿಯಾಗಿ ಈ ರೀತಿಯ ಪತ್ರ ಬರೆಯುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರನ್ನು ಪಟ್ಟಿಗೆ ಸೇರಿಸಿದ್ದಾರೆಂದರೆ ಅವರ ಅಸಹನೆ ಪ್ರಮಾಣ ಊಹಿಸಿ” ಎಂದು ಹೇಳಿದ್ದಾರೆ.

ಪಟ್ಟಿಯಲ್ಲಿರುವ ಬಹುತೇಕ ಹೆಸರುಗಳು ಪ್ರಗತಿಪರ ಜನಪರ ನಾಯಕರಾಗಿದ್ದಾರೆ. ಅದಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಸಿಎಎ, ಎನ್‌ಆರ್‌ಸಿ ವಿರುದ್ಧ ಮತ್ತು ಬಿಜೆಪಿಯ ವಿರುದ್ಧ ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕೆ ಏರುದನಿಯಲ್ಲಿ ಮಾತನಾಡುತ್ತಿದ್ದಾರೆ. ಅದಕ್ಕಾಗಿಯೇ ಅವರನ್ನು ಸಹ ಪಟ್ಟಿಯಲ್ಲಿ ಸೇರಿಸಲಾಗಿದೆ ಎನ್ನಲಾಗುತ್ತಿದೆ.

ಒಟ್ಟಿನಲ್ಲಿ ಸುಮ್ಮನೆ ಬೆದರಿಕೆಗೇಂದೇ ಪತ್ರ ಬರೆದಿದ್ದರೂ ಸಹ ಇದನ್ನು ನಿರ್ಲಕ್ಷಿಸದೇ ಪೊಲೀಸರು ಕಾರ್ಯಪ್ರವೃತ್ತರಾಗಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಬೆದರಿಕೆ ಹಾಕಿರುವವರನ್ನು ಈ ಕೂಡಲೇ ಬಂಧಿಸಿ, ನ್ಯಾಯಾಂಗದ ವಶಕ್ಕೆ ಒಪ್ಪಿಸಬೇಕು.

  2. ಈ ಧರ್ಮದ ನಶೆ ಏರಿಸಿಕೊಂಡು ಕೊಲ್ಲುವಷ್ಟು ಧೈರ್ಯ ಮಾಡಿರುವ ಕೀಚಕರು ವಧೆ ಮಾಡುವವರು ಯಾರೂ ಇಲ್ಲವೇ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...