Homeಮುಖಪುಟನಿಮ್ಮನ್ನು ಸಂಹಾರ ಮಾಡುತ್ತೀವಿ: ಎಚ್‌ಡಿಕೆ, ಅಮೀನ್‌ ಮಟ್ಟು, ಪ್ರಕಾಶ್‌ರಾಜ್‌ ಹೆಸರನ್ನೊಳಗೊಂಡ ನಿಜಗುಣಾನಂದ ಸ್ವಾಮಿಗಳಿಗೆ ಬಂದ ಬೆದರಿಕೆ...

ನಿಮ್ಮನ್ನು ಸಂಹಾರ ಮಾಡುತ್ತೀವಿ: ಎಚ್‌ಡಿಕೆ, ಅಮೀನ್‌ ಮಟ್ಟು, ಪ್ರಕಾಶ್‌ರಾಜ್‌ ಹೆಸರನ್ನೊಳಗೊಂಡ ನಿಜಗುಣಾನಂದ ಸ್ವಾಮಿಗಳಿಗೆ ಬಂದ ಬೆದರಿಕೆ ಪತ್ರ..

ದಾವಣಗೆರೆಯಿಂದ ಈ ಅನಾಮಧೇಯ ಪೋಸ್ಟ್‌ ಬಂದಿದ್ದು, ನಿಜಗುಣಾನಂದ ಸ್ವಾಮಿಗಳು ಕೂಡಲೇ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

- Advertisement -
- Advertisement -

ನಿಜಗುಣಾನಂದ ಸ್ವಾಮಿಗಳೆ, ನಿಮ್ಮನ್ನು ಮತ್ತು ನಿಮ್ಮ ಜೊತೆ ಇರುವ ಧರ್ಮದ್ರೋಹಿಗಳನ್ನು, ದೇಶದ್ರೋಹಿಗಳನ್ನು 2020ರ, ಜನವರಿ 29 ಸಂಹಾರ ಮಾಡುತ್ತೇವೆ ಎಂಬ 15ಜನರ ಹೆಸರುಗಳ ಪಟ್ಟಿ ಇರುವ ಬೆದರಿಕೆ ಪತ್ರವೊಂದನ್ನು ನಿಜಗುಣಾನಂದ ಸ್ವಾಮಿಗಳಿಗೆ ಕಳಿಸಲಾಗಿದೆ.

ಈ ಕುರಿತು ಲೇಖಕ, ಚಿಂತಕ ಯೋಗೇಶ್‌ ಮಾಸ್ಟರ್‌ ಸಾಮಾಜಿಕ ಜಾಲತಾಣದಲ್ಲಿ ಆ ಪತ್ರವನ್ನು ಹಂಚಿಕೊಂಡಿದ್ದು ಅದರಲ್ಲಿ “ನಿಮ್ಮಗಳ ಸಂಹಾರಕ್ಕೆ ಮುಹೂರ್ತ ನಿಶ್ಚಯವಾಗಿದೆ. ನಿಮ್ಮ ಅಂತಿಮ ಯಾತ್ರೆಗೆ ಸಿದ್ದರಾಗಿ. ನಿಮ್ಮನ್ನು ಮಾತ್ರವಲ್ಲ, ಮುಂದೆ ನೋಡಿ ನಿಮ್ಮ ಜೊತೆ ಅಂತಿಮ ಯಾತ್ರೆಗೆ ಇವರುಗಳನ್ನು ನೀವು ಸಿದ್ದ ಮಾಡಬೇಕು” ಎಂದು 15 ಜನರನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ದಾವಣಗೆರೆಯಿಂದ ಈ ಅನಾಮಧೇಯ ಪೋಸ್ಟ್‌ ಬಂದಿದ್ದು, ನಿಜಗುಣಾನಂದ ಸ್ವಾಮಿಗಳು ಕೂಡಲೇ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪತ್ರದಲ್ಲಿ ಭಜರಂಗದಳದ ಮಾಜಿ ನಾಯಕರಾದ ಮಹೇಂದ್ರ ಕುಮಾರ್‌, ನಿಜಗುಣಾನಂದ ಸ್ವಾಮಿಗಳು, ನಿಡುಮಾಮಿಡಿ ವೀರಭದ್ರ ಚನ್ನಮಲ್ಲ ಸ್ವಾಮಿ, ಚಿತ್ರನಟ ಪ್ರಕಾಶ್‌ ರಾಜ್‌, ಜ್ಞಾನಪ್ರಕಾಶ್‌ ಸ್ವಾಮಿ, ನಟ ಚೇತನ್‌, ಹಿರಿಯ ಲೇಖಕಿ ಬಿ.ಟಿ ಲಲಿತಾನಾಯಕ್‌, ಪ್ರೊ.ಮಹೇಶ್‌ ಚಂದ್ರ ಗುರು, ಪ್ರೊ ಕೆ.ಎಸ್‌ ಭಗವಾನ್‌, ಹಿರಿಯ ಪತ್ರಕರ್ತರಾದ ದಿನೇಶ್‌ ಅಮೀನ್‌ ಮಟ್ಟು, ಹಿರಿಯ ಸಾಹಿತಿ ಚಂಪಾ, ಲೇಖಕರಾದ ಯೋಗೇಶ್‌ ಮಾಸ್ಟರ್‌(ಢುಂಡಿ ಗಣೇಶ್‌), ಅಗ್ನಿ ಶ್ರೀಧರ್‌, ಸಿಪಿಎಂ ನಾಯಕಿ ಬೃಂದಾ ಕಾರಟ್‌ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು ಹೆಸರನ್ನು ಸೂಚಿಸಿ ಇಷ್ಟು ಜನರನ್ನು ಸಂಹಾರ ಮಾಡುತ್ತೀವಿ ಎಂದು ಬರೆಯಲಾಗಿದೆ.

ಕೈಬರಹದಲ್ಲಿ ಪತ್ರ ಬರೆಯಲಾಗಿದ್ದು ಸಾಕಷ್ಟು ಅಕ್ಷರದೋಷ, ಕಾಗುಣಿತ ದೋಷಗಳಿವೆ. ಪತ್ರವನ್ನು ನಿಜಗುಣಾನಂದ ಸ್ವಾಮಿಗಳಿಗೆ ಬರೆಯಲಾಗಿದೆ.

ಈ ಕುರಿತು ಲೇಖಕರಾದ ಯೋಗೇಶ್‌ ಮಾಸ್ಟರ್‌ ನಾನುಗೌರಿ.ಕಾಂನೊಂದಿಗೆ ಮಾತನಾಡಿ, “ಮೊನ್ನೆ ತಾನೇ ಆದಿತ್ಯ ರಾ‌ವ್‌ ಎಂಬ ವ್ಯಕ್ತಿ ಬಾಂಬ್‌ ಇಟ್ಟು ಸಿಕ್ಕಿಬಿದ್ದಿದ್ದಾನೆ. ಇಂದು ಈ ಪತ್ರ ಬಂದಿದೆ ಅಂದರೆ ರಾಜ್ಯದಲ್ಲಿ ಮತ್ತು ದೇಶದಲ್ಲಿ ಬಲಪಂಥೀಯ ಶಕ್ತಿಗಳು ಯಾವ ಮಟ್ಟಕ್ಕೆ ಹೆದರಿದ್ದಾರೆ ಎಂದು ತಿಳಿಯುತ್ತದೆ. ಬಲಪಂಥೀಯ ನಾಯಕರಾಡುವ ಹಿಂಸಾತ್ಮಕ ಮಾತುಗಳಿಗೆ ಇಂತಹ ಬ್ರೈನ್‌ ವಾಶ್‌ ಆದವರು ಬಲಿಯಾಗಿ ಈ ರೀತಿಯ ಪತ್ರ ಬರೆಯುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರನ್ನು ಪಟ್ಟಿಗೆ ಸೇರಿಸಿದ್ದಾರೆಂದರೆ ಅವರ ಅಸಹನೆ ಪ್ರಮಾಣ ಊಹಿಸಿ” ಎಂದು ಹೇಳಿದ್ದಾರೆ.

ಪಟ್ಟಿಯಲ್ಲಿರುವ ಬಹುತೇಕ ಹೆಸರುಗಳು ಪ್ರಗತಿಪರ ಜನಪರ ನಾಯಕರಾಗಿದ್ದಾರೆ. ಅದಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಸಿಎಎ, ಎನ್‌ಆರ್‌ಸಿ ವಿರುದ್ಧ ಮತ್ತು ಬಿಜೆಪಿಯ ವಿರುದ್ಧ ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕೆ ಏರುದನಿಯಲ್ಲಿ ಮಾತನಾಡುತ್ತಿದ್ದಾರೆ. ಅದಕ್ಕಾಗಿಯೇ ಅವರನ್ನು ಸಹ ಪಟ್ಟಿಯಲ್ಲಿ ಸೇರಿಸಲಾಗಿದೆ ಎನ್ನಲಾಗುತ್ತಿದೆ.

ಒಟ್ಟಿನಲ್ಲಿ ಸುಮ್ಮನೆ ಬೆದರಿಕೆಗೇಂದೇ ಪತ್ರ ಬರೆದಿದ್ದರೂ ಸಹ ಇದನ್ನು ನಿರ್ಲಕ್ಷಿಸದೇ ಪೊಲೀಸರು ಕಾರ್ಯಪ್ರವೃತ್ತರಾಗಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಬೆದರಿಕೆ ಹಾಕಿರುವವರನ್ನು ಈ ಕೂಡಲೇ ಬಂಧಿಸಿ, ನ್ಯಾಯಾಂಗದ ವಶಕ್ಕೆ ಒಪ್ಪಿಸಬೇಕು.

  2. ಈ ಧರ್ಮದ ನಶೆ ಏರಿಸಿಕೊಂಡು ಕೊಲ್ಲುವಷ್ಟು ಧೈರ್ಯ ಮಾಡಿರುವ ಕೀಚಕರು ವಧೆ ಮಾಡುವವರು ಯಾರೂ ಇಲ್ಲವೇ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...