Homeಮುಖಪುಟನಿಮ್ಮನ್ನು ಸಂಹಾರ ಮಾಡುತ್ತೀವಿ: ಎಚ್‌ಡಿಕೆ, ಅಮೀನ್‌ ಮಟ್ಟು, ಪ್ರಕಾಶ್‌ರಾಜ್‌ ಹೆಸರನ್ನೊಳಗೊಂಡ ನಿಜಗುಣಾನಂದ ಸ್ವಾಮಿಗಳಿಗೆ ಬಂದ ಬೆದರಿಕೆ...

ನಿಮ್ಮನ್ನು ಸಂಹಾರ ಮಾಡುತ್ತೀವಿ: ಎಚ್‌ಡಿಕೆ, ಅಮೀನ್‌ ಮಟ್ಟು, ಪ್ರಕಾಶ್‌ರಾಜ್‌ ಹೆಸರನ್ನೊಳಗೊಂಡ ನಿಜಗುಣಾನಂದ ಸ್ವಾಮಿಗಳಿಗೆ ಬಂದ ಬೆದರಿಕೆ ಪತ್ರ..

ದಾವಣಗೆರೆಯಿಂದ ಈ ಅನಾಮಧೇಯ ಪೋಸ್ಟ್‌ ಬಂದಿದ್ದು, ನಿಜಗುಣಾನಂದ ಸ್ವಾಮಿಗಳು ಕೂಡಲೇ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

- Advertisement -
- Advertisement -

ನಿಜಗುಣಾನಂದ ಸ್ವಾಮಿಗಳೆ, ನಿಮ್ಮನ್ನು ಮತ್ತು ನಿಮ್ಮ ಜೊತೆ ಇರುವ ಧರ್ಮದ್ರೋಹಿಗಳನ್ನು, ದೇಶದ್ರೋಹಿಗಳನ್ನು 2020ರ, ಜನವರಿ 29 ಸಂಹಾರ ಮಾಡುತ್ತೇವೆ ಎಂಬ 15ಜನರ ಹೆಸರುಗಳ ಪಟ್ಟಿ ಇರುವ ಬೆದರಿಕೆ ಪತ್ರವೊಂದನ್ನು ನಿಜಗುಣಾನಂದ ಸ್ವಾಮಿಗಳಿಗೆ ಕಳಿಸಲಾಗಿದೆ.

ಈ ಕುರಿತು ಲೇಖಕ, ಚಿಂತಕ ಯೋಗೇಶ್‌ ಮಾಸ್ಟರ್‌ ಸಾಮಾಜಿಕ ಜಾಲತಾಣದಲ್ಲಿ ಆ ಪತ್ರವನ್ನು ಹಂಚಿಕೊಂಡಿದ್ದು ಅದರಲ್ಲಿ “ನಿಮ್ಮಗಳ ಸಂಹಾರಕ್ಕೆ ಮುಹೂರ್ತ ನಿಶ್ಚಯವಾಗಿದೆ. ನಿಮ್ಮ ಅಂತಿಮ ಯಾತ್ರೆಗೆ ಸಿದ್ದರಾಗಿ. ನಿಮ್ಮನ್ನು ಮಾತ್ರವಲ್ಲ, ಮುಂದೆ ನೋಡಿ ನಿಮ್ಮ ಜೊತೆ ಅಂತಿಮ ಯಾತ್ರೆಗೆ ಇವರುಗಳನ್ನು ನೀವು ಸಿದ್ದ ಮಾಡಬೇಕು” ಎಂದು 15 ಜನರನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ದಾವಣಗೆರೆಯಿಂದ ಈ ಅನಾಮಧೇಯ ಪೋಸ್ಟ್‌ ಬಂದಿದ್ದು, ನಿಜಗುಣಾನಂದ ಸ್ವಾಮಿಗಳು ಕೂಡಲೇ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪತ್ರದಲ್ಲಿ ಭಜರಂಗದಳದ ಮಾಜಿ ನಾಯಕರಾದ ಮಹೇಂದ್ರ ಕುಮಾರ್‌, ನಿಜಗುಣಾನಂದ ಸ್ವಾಮಿಗಳು, ನಿಡುಮಾಮಿಡಿ ವೀರಭದ್ರ ಚನ್ನಮಲ್ಲ ಸ್ವಾಮಿ, ಚಿತ್ರನಟ ಪ್ರಕಾಶ್‌ ರಾಜ್‌, ಜ್ಞಾನಪ್ರಕಾಶ್‌ ಸ್ವಾಮಿ, ನಟ ಚೇತನ್‌, ಹಿರಿಯ ಲೇಖಕಿ ಬಿ.ಟಿ ಲಲಿತಾನಾಯಕ್‌, ಪ್ರೊ.ಮಹೇಶ್‌ ಚಂದ್ರ ಗುರು, ಪ್ರೊ ಕೆ.ಎಸ್‌ ಭಗವಾನ್‌, ಹಿರಿಯ ಪತ್ರಕರ್ತರಾದ ದಿನೇಶ್‌ ಅಮೀನ್‌ ಮಟ್ಟು, ಹಿರಿಯ ಸಾಹಿತಿ ಚಂಪಾ, ಲೇಖಕರಾದ ಯೋಗೇಶ್‌ ಮಾಸ್ಟರ್‌(ಢುಂಡಿ ಗಣೇಶ್‌), ಅಗ್ನಿ ಶ್ರೀಧರ್‌, ಸಿಪಿಎಂ ನಾಯಕಿ ಬೃಂದಾ ಕಾರಟ್‌ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು ಹೆಸರನ್ನು ಸೂಚಿಸಿ ಇಷ್ಟು ಜನರನ್ನು ಸಂಹಾರ ಮಾಡುತ್ತೀವಿ ಎಂದು ಬರೆಯಲಾಗಿದೆ.

ಕೈಬರಹದಲ್ಲಿ ಪತ್ರ ಬರೆಯಲಾಗಿದ್ದು ಸಾಕಷ್ಟು ಅಕ್ಷರದೋಷ, ಕಾಗುಣಿತ ದೋಷಗಳಿವೆ. ಪತ್ರವನ್ನು ನಿಜಗುಣಾನಂದ ಸ್ವಾಮಿಗಳಿಗೆ ಬರೆಯಲಾಗಿದೆ.

ಈ ಕುರಿತು ಲೇಖಕರಾದ ಯೋಗೇಶ್‌ ಮಾಸ್ಟರ್‌ ನಾನುಗೌರಿ.ಕಾಂನೊಂದಿಗೆ ಮಾತನಾಡಿ, “ಮೊನ್ನೆ ತಾನೇ ಆದಿತ್ಯ ರಾ‌ವ್‌ ಎಂಬ ವ್ಯಕ್ತಿ ಬಾಂಬ್‌ ಇಟ್ಟು ಸಿಕ್ಕಿಬಿದ್ದಿದ್ದಾನೆ. ಇಂದು ಈ ಪತ್ರ ಬಂದಿದೆ ಅಂದರೆ ರಾಜ್ಯದಲ್ಲಿ ಮತ್ತು ದೇಶದಲ್ಲಿ ಬಲಪಂಥೀಯ ಶಕ್ತಿಗಳು ಯಾವ ಮಟ್ಟಕ್ಕೆ ಹೆದರಿದ್ದಾರೆ ಎಂದು ತಿಳಿಯುತ್ತದೆ. ಬಲಪಂಥೀಯ ನಾಯಕರಾಡುವ ಹಿಂಸಾತ್ಮಕ ಮಾತುಗಳಿಗೆ ಇಂತಹ ಬ್ರೈನ್‌ ವಾಶ್‌ ಆದವರು ಬಲಿಯಾಗಿ ಈ ರೀತಿಯ ಪತ್ರ ಬರೆಯುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರನ್ನು ಪಟ್ಟಿಗೆ ಸೇರಿಸಿದ್ದಾರೆಂದರೆ ಅವರ ಅಸಹನೆ ಪ್ರಮಾಣ ಊಹಿಸಿ” ಎಂದು ಹೇಳಿದ್ದಾರೆ.

ಪಟ್ಟಿಯಲ್ಲಿರುವ ಬಹುತೇಕ ಹೆಸರುಗಳು ಪ್ರಗತಿಪರ ಜನಪರ ನಾಯಕರಾಗಿದ್ದಾರೆ. ಅದಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಸಿಎಎ, ಎನ್‌ಆರ್‌ಸಿ ವಿರುದ್ಧ ಮತ್ತು ಬಿಜೆಪಿಯ ವಿರುದ್ಧ ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕೆ ಏರುದನಿಯಲ್ಲಿ ಮಾತನಾಡುತ್ತಿದ್ದಾರೆ. ಅದಕ್ಕಾಗಿಯೇ ಅವರನ್ನು ಸಹ ಪಟ್ಟಿಯಲ್ಲಿ ಸೇರಿಸಲಾಗಿದೆ ಎನ್ನಲಾಗುತ್ತಿದೆ.

ಒಟ್ಟಿನಲ್ಲಿ ಸುಮ್ಮನೆ ಬೆದರಿಕೆಗೇಂದೇ ಪತ್ರ ಬರೆದಿದ್ದರೂ ಸಹ ಇದನ್ನು ನಿರ್ಲಕ್ಷಿಸದೇ ಪೊಲೀಸರು ಕಾರ್ಯಪ್ರವೃತ್ತರಾಗಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ಬೆದರಿಕೆ ಹಾಕಿರುವವರನ್ನು ಈ ಕೂಡಲೇ ಬಂಧಿಸಿ, ನ್ಯಾಯಾಂಗದ ವಶಕ್ಕೆ ಒಪ್ಪಿಸಬೇಕು.

  2. ಈ ಧರ್ಮದ ನಶೆ ಏರಿಸಿಕೊಂಡು ಕೊಲ್ಲುವಷ್ಟು ಧೈರ್ಯ ಮಾಡಿರುವ ಕೀಚಕರು ವಧೆ ಮಾಡುವವರು ಯಾರೂ ಇಲ್ಲವೇ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...