HomeಅಂಕಣಗಳುKarnataka against SIRಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

- Advertisement -
- Advertisement -

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ ಹಿಂದ್ ಕಾರ್ಯದರ್ಶಿ ಯೂಸುಫ್ ಕನ್ನಿ ಹೇಳಿದರು.

ಎಸ್‌ಐಆರ್ ವಿರೋಧಿ ಒಕ್ಕೂಟದಿಂದ ವಿಜಯಪುರದ ಖಾಸಗಿ ಹೋಟೆಲ್‌ನಲ್ಲಿ ಶನಿವಾರ (ಜೂ.13) ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಎಸ್‌ಐಆರ್‌ನ ಲೋಪದೋಷಗಳಿಗೆ ಸಂಬಂಧಪಟ್ಟಂತೆ ಚುನಾವಣಾ ಆಯೋಗಕ್ಕೆ ನಾವು ಹಲವು ಪ್ರಶ್ನೆಗಳನ್ನು ಕೇಳಿದ್ದೇವೆ. ಈ ವಿಚಾರವಾಗಿ ಆಯೋಗ ಬಹಿರಂಗ ಚರ್ಚೆಗೆ ಬರಲಿ ಎಂದು ಆಗ್ರಹಿಸಿದರು.

ಚುನಾವಣಾ ಆಯೋಗ ಎಸ್‌ಐಆರ್ ಘೋಷಣೆ ಮಾಡುವಾಗ ನಕಲಿ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಪ್ರಕ್ರಿಯೆ ಎಂದು ಹೇಳಿತ್ತು. ಆದರೆ, ಈಗಾಗಲೇ ಎಸ್‌ಐಆರ್ ನಡೆದಿರುವ ರಾಜ್ಯಗಳಲ್ಲಿ ಕ್ಷುಲ್ಲಕ ಕಾರಣಗಳಿಗೆ ಲಕ್ಷಾಂತರ ಜನರ ಸಾಂವಿಧಾನಿಕ ಹಕ್ಕು ಕಿತ್ತುಕೊಂಡಿರುವುದನ್ನು ನಾವು ನೋಡಿದ್ದೇವೆ. ಹಾಗಾಗಿ, ಇಂತಹ ಅಸಾಂವಿಧಾನಿಕ ಪ್ರಕ್ರಿಯೆ ನಮ್ಮ ರಾಜ್ಯದಲ್ಲಿ ನಡೆಸುವುದು ಬೇಡ ಎಂದರು.

ಎಸ್‌ಐಆರ್‌ಗೆ ಸಂಬಂಧಪಟ್ಟಂತೆ ನಾವು ಈಗಾಗಲೇ ಚುನಾವಣಾ ಆಯೋಗದ ಎದುರು ಹಲವು ಬೇಡಿಕೆಗಳನ್ನು ಇಟ್ಟಿದ್ದೇವೆ. ಅವುಗಳಿಗೆ ಆಯೋಗ ಸ್ಪಂದಿಸಬೇಕು. ಇಲ್ಲದಿದ್ದರೆ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸುತ್ತೇವೆ ಎಂದು ತಿಳಿಸಿದರು.

ಎಸ್‌ಐಆರ್ ವಿರೋಧಿ ಒಕ್ಕೂಟದ ಪ್ರಮುಖರಾದ ಆರಿಫುಲ್ಲಾ ಮಾತನಾಡಿ, ಎಸ್‌ಐಆರ್‌ ಮತದಾರರ ಪಟ್ಟಿಯ ಸಾಮಾನ್ಯ ಪ್ರಕ್ರಿಯೆ ಅಲ್ಲ, ವಿಶೇಷ ಪರಿಷ್ಕರಣೆಯಾಗಿದೆ. ದೇಶದ ಜನರ ನಾಗರಿಕತ್ವ ನಿರ್ಧರಿಸಲು ಮುಂದಾಗಿರುವ ಈ ದೊಡ್ಡ ಪ್ರಕ್ರಿಯೆಗೆ ಸಂಸತ್ತಿನ ಅನುಮೋದನೆ ಪಡೆದಿಲ್ಲ, ಸರ್ಕಾರದಿಂದ ಯಾವುದೇ ಅಧಿಕೃತ ರಾಜಪತ್ರ ಪ್ರಕಟಿಸಿಲ್ಲ ಎಂದರು.

ಎಸ್ಐಆರ್ ನಮೂನೆಯಲ್ಲಿ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವ್ಯತ್ಯಾಸವಿದೆ. ಇದಕ್ಕೆ ನಮ್ಮ ವಿರೋಧವಿದೆ. ಈ ಮೊದಲು ಸರ್ಕಾರ ಬಂದು ಮತದಾರರ ಪಟ್ಟಿ ತಯಾರಿಸುತಿತ್ತು, ಈಗ ನಾವೇ ಮಾಡಬೇಕಂತೆ. ಚುನಾವಣಾ ಆಯೋಗ ಏನೇ ತಪ್ಪು ಮಾಡಿದರೂ ಪ್ರಶ್ನಿಸುವ ಅಧಿಕಾರ ಕಿತ್ತುಕೊಳ್ಳಲಾಗಿದೆ. ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಮಾರ್ಪಡಿಸಿರುವುದು ಇವೆಲ್ಲ ಅವ್ಯವಸ್ಥೆಗಳ ಮೂಲ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆಯನ್ನೇ ಬದಲಿಸಿ, ಅವರಿಗೆ ಬೇಕಾದವರನ್ನು ನೇಮಿಸಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಐಆರ್‌ ಮೂಲಕ ವಲಸೆ ಕಾರ್ಮಿಕರನ್ನು ನುಸುಳುಕೋರರು ಎಂದು ಹಣೆಪಟ್ಟಿ ಕಟ್ಟಲಾಗ್ತಿದೆ. ರಾಜ್ಯದಿಂದ ರಾಜ್ಯಕ್ಕೆ ವಲಸೆ ಬಂದವರು ನುಸುಳುಕೋರರಲ್ಲ, ಅವರೂ ನಮ್ಮ ದೇಶದವರು. ಬಡ ಕೂಲಿ ಕಾರ್ಮಿಕರು, ದಲಿತರು, ಆದಿವಾಸಿಗಳು ಎಲ್ಲಿಂದ ದಾಖಲೆಗಳನ್ನು ತರಬೇಕು ಎಂದು ಪ್ರಶ್ನಿಸಿದರು.

ಸ್ಥಳೀಯ ಕಾಂಗ್ರೆಸ್ ಮುಖಂಡ ರಫೀಕ್ ಅಹ್ಮದ್ ಮಾತನಾಡಿ, ಎಸ್‌ಐಆರ್ ಮೂಲಕ ದೇಶದ ಪ್ರಜೆಗಳನ್ನು ಹೊರಗಿಟ್ಟು ಚುನಾವಣೆ ನಡೆಸಲಾಗುತ್ತಿದೆ. ಇದನ್ನು ಯಾವುದೇ ಕಾರಣಕ್ಕೆ ಒಪ್ಪಲು ಸಾಧ್ಯವಿಲ್ಲ. ಎಸ್‌ಐಆರ್‌ ವೇಳೆ ಮತದಾರರ ಪಟ್ಟಿಯಿಂದ ಹೊರಬಿದ್ದರೆ ಸರಿಪಡಿಸಿಕೊಳ್ಳಲು ಅವಕಾಶ ಇದೆ ಎಂದು ಹೇಳಲಾಗ್ತಿದೆ. ಆದರೆ, ಸಮಸ್ಯೆಗಳನ್ನು ಸರಿಪಡಿಸಿಕೊಳ್ಳುವ ಮೊದಲೇ ಚುನಾವಣೆ ನಡೆದಿರುವ ಉದಾಹರಣೆಗಳನ್ನು ನಾವು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ನೋಡಿದ್ದೇವೆ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...