HomeಅಂಕಣಗಳುKarnataka against SIRಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

- Advertisement -
- Advertisement -

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ ಹಿಂದ್ ಕಾರ್ಯದರ್ಶಿ ಯೂಸುಫ್ ಕನ್ನಿ ಹೇಳಿದರು.

ಎಸ್‌ಐಆರ್ ವಿರೋಧಿ ಒಕ್ಕೂಟದಿಂದ ವಿಜಯಪುರದ ಖಾಸಗಿ ಹೋಟೆಲ್‌ನಲ್ಲಿ ಶನಿವಾರ (ಜೂ.13) ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಎಸ್‌ಐಆರ್‌ನ ಲೋಪದೋಷಗಳಿಗೆ ಸಂಬಂಧಪಟ್ಟಂತೆ ಚುನಾವಣಾ ಆಯೋಗಕ್ಕೆ ನಾವು ಹಲವು ಪ್ರಶ್ನೆಗಳನ್ನು ಕೇಳಿದ್ದೇವೆ. ಈ ವಿಚಾರವಾಗಿ ಆಯೋಗ ಬಹಿರಂಗ ಚರ್ಚೆಗೆ ಬರಲಿ ಎಂದು ಆಗ್ರಹಿಸಿದರು.

ಚುನಾವಣಾ ಆಯೋಗ ಎಸ್‌ಐಆರ್ ಘೋಷಣೆ ಮಾಡುವಾಗ ನಕಲಿ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಪ್ರಕ್ರಿಯೆ ಎಂದು ಹೇಳಿತ್ತು. ಆದರೆ, ಈಗಾಗಲೇ ಎಸ್‌ಐಆರ್ ನಡೆದಿರುವ ರಾಜ್ಯಗಳಲ್ಲಿ ಕ್ಷುಲ್ಲಕ ಕಾರಣಗಳಿಗೆ ಲಕ್ಷಾಂತರ ಜನರ ಸಾಂವಿಧಾನಿಕ ಹಕ್ಕು ಕಿತ್ತುಕೊಂಡಿರುವುದನ್ನು ನಾವು ನೋಡಿದ್ದೇವೆ. ಹಾಗಾಗಿ, ಇಂತಹ ಅಸಾಂವಿಧಾನಿಕ ಪ್ರಕ್ರಿಯೆ ನಮ್ಮ ರಾಜ್ಯದಲ್ಲಿ ನಡೆಸುವುದು ಬೇಡ ಎಂದರು.

ಎಸ್‌ಐಆರ್‌ಗೆ ಸಂಬಂಧಪಟ್ಟಂತೆ ನಾವು ಈಗಾಗಲೇ ಚುನಾವಣಾ ಆಯೋಗದ ಎದುರು ಹಲವು ಬೇಡಿಕೆಗಳನ್ನು ಇಟ್ಟಿದ್ದೇವೆ. ಅವುಗಳಿಗೆ ಆಯೋಗ ಸ್ಪಂದಿಸಬೇಕು. ಇಲ್ಲದಿದ್ದರೆ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸುತ್ತೇವೆ ಎಂದು ತಿಳಿಸಿದರು.

ಎಸ್‌ಐಆರ್ ವಿರೋಧಿ ಒಕ್ಕೂಟದ ಪ್ರಮುಖರಾದ ಆರಿಫುಲ್ಲಾ ಮಾತನಾಡಿ, ಎಸ್‌ಐಆರ್‌ ಮತದಾರರ ಪಟ್ಟಿಯ ಸಾಮಾನ್ಯ ಪ್ರಕ್ರಿಯೆ ಅಲ್ಲ, ವಿಶೇಷ ಪರಿಷ್ಕರಣೆಯಾಗಿದೆ. ದೇಶದ ಜನರ ನಾಗರಿಕತ್ವ ನಿರ್ಧರಿಸಲು ಮುಂದಾಗಿರುವ ಈ ದೊಡ್ಡ ಪ್ರಕ್ರಿಯೆಗೆ ಸಂಸತ್ತಿನ ಅನುಮೋದನೆ ಪಡೆದಿಲ್ಲ, ಸರ್ಕಾರದಿಂದ ಯಾವುದೇ ಅಧಿಕೃತ ರಾಜಪತ್ರ ಪ್ರಕಟಿಸಿಲ್ಲ ಎಂದರು.

ಎಸ್ಐಆರ್ ನಮೂನೆಯಲ್ಲಿ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವ್ಯತ್ಯಾಸವಿದೆ. ಇದಕ್ಕೆ ನಮ್ಮ ವಿರೋಧವಿದೆ. ಈ ಮೊದಲು ಸರ್ಕಾರ ಬಂದು ಮತದಾರರ ಪಟ್ಟಿ ತಯಾರಿಸುತಿತ್ತು, ಈಗ ನಾವೇ ಮಾಡಬೇಕಂತೆ. ಚುನಾವಣಾ ಆಯೋಗ ಏನೇ ತಪ್ಪು ಮಾಡಿದರೂ ಪ್ರಶ್ನಿಸುವ ಅಧಿಕಾರ ಕಿತ್ತುಕೊಳ್ಳಲಾಗಿದೆ. ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಮಾರ್ಪಡಿಸಿರುವುದು ಇವೆಲ್ಲ ಅವ್ಯವಸ್ಥೆಗಳ ಮೂಲ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆಯನ್ನೇ ಬದಲಿಸಿ, ಅವರಿಗೆ ಬೇಕಾದವರನ್ನು ನೇಮಿಸಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಐಆರ್‌ ಮೂಲಕ ವಲಸೆ ಕಾರ್ಮಿಕರನ್ನು ನುಸುಳುಕೋರರು ಎಂದು ಹಣೆಪಟ್ಟಿ ಕಟ್ಟಲಾಗ್ತಿದೆ. ರಾಜ್ಯದಿಂದ ರಾಜ್ಯಕ್ಕೆ ವಲಸೆ ಬಂದವರು ನುಸುಳುಕೋರರಲ್ಲ, ಅವರೂ ನಮ್ಮ ದೇಶದವರು. ಬಡ ಕೂಲಿ ಕಾರ್ಮಿಕರು, ದಲಿತರು, ಆದಿವಾಸಿಗಳು ಎಲ್ಲಿಂದ ದಾಖಲೆಗಳನ್ನು ತರಬೇಕು ಎಂದು ಪ್ರಶ್ನಿಸಿದರು.

ಸ್ಥಳೀಯ ಕಾಂಗ್ರೆಸ್ ಮುಖಂಡ ರಫೀಕ್ ಅಹ್ಮದ್ ಮಾತನಾಡಿ, ಎಸ್‌ಐಆರ್ ಮೂಲಕ ದೇಶದ ಪ್ರಜೆಗಳನ್ನು ಹೊರಗಿಟ್ಟು ಚುನಾವಣೆ ನಡೆಸಲಾಗುತ್ತಿದೆ. ಇದನ್ನು ಯಾವುದೇ ಕಾರಣಕ್ಕೆ ಒಪ್ಪಲು ಸಾಧ್ಯವಿಲ್ಲ. ಎಸ್‌ಐಆರ್‌ ವೇಳೆ ಮತದಾರರ ಪಟ್ಟಿಯಿಂದ ಹೊರಬಿದ್ದರೆ ಸರಿಪಡಿಸಿಕೊಳ್ಳಲು ಅವಕಾಶ ಇದೆ ಎಂದು ಹೇಳಲಾಗ್ತಿದೆ. ಆದರೆ, ಸಮಸ್ಯೆಗಳನ್ನು ಸರಿಪಡಿಸಿಕೊಳ್ಳುವ ಮೊದಲೇ ಚುನಾವಣೆ ನಡೆದಿರುವ ಉದಾಹರಣೆಗಳನ್ನು ನಾವು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ನೋಡಿದ್ದೇವೆ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...