Homeಕರ್ನಾಟಕಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

ಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

ರಾಜ್ಯದ ವಿಧಾನಪರಿಷತ್ತಿನಲ್ಲಿ ಭೂಮಿ ಕಿತ್ತುಕೊಳ್ಳುವ ಈ ಮಸೂದೆ ಅಂಗೀಕಾರವಾಗಲು ಬಿಡಬಾರದು. ಮಂಡನೆ ಮಾಡಲೂ ಬಿಡಬಾರದು. ಅಲ್ಲಿ ಬಿಜೆಪಿಗೆ ಬಹುಮತವಿಲ್ಲ. ಹಾಗಾಗಿ ಜೆಡಿಎಸ್ ಸದಸ್ಯರು ಮತ್ತು ನಮ್ಮ ಪಕ್ಷದ ಸದಸ್ಯರೂ ಇದನ್ನು ವಿರೋಧಿಸಬೇಕು.

- Advertisement -
- Advertisement -

ಉಳುವವನೇ ಭೂಮಿಯ ಒಡೆಯ ಎಂದು ದೇವರಾಜ ಅರಸು ಕಾಲದಲ್ಲಿ ಕಾನೂನು ತರಲಾಯಿತು. ಆದರೆ ಈಗ ದುಡ್ಡಿದ್ದವನೇ ಭೂಮಿಯ ಒಡೆಯ ಎಂಬ ಕಾನೂನು ತರಲು ಹೊರಟಿದ್ದಾರೆ. ಇದನ್ನು ರೈತರ ಮಕ್ಕಳಾದ ನಾವು ಒಪ್ಪಲು ಸಾಧ್ಯವಿಲ್ಲ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ರೈತ-ದಲಿತ-ಕಾರ್ಮಿಕ ಐಕ್ಯ ಹೋರಾಟದ ಜನತಾ ಅಧಿವೇಶನದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ರೈತರು ಮಾತ್ರ ಭೂಮಿ ಕೊಳ್ಳಬಹುದು ಎಂಬ ಕಾನೂನು 1974ರಿಂದ ಜಾರಿಗೆ ಬಂದಿತು. ಭೂಮಿ ಕೊಳ್ಳುವ ಮೀತಿಯನ್ನೂ ನಿರ್ಧರಿಸಲಾಗಿತ್ತು. ಆದರೆ ಈಗಿನ ಸರ್ಕಾರ ಈ ಎರಡನ್ನೂ ತೆಗೆದುಹಾಕಿ, ಜಮೀನ್ದಾರಿ ಪದ್ಧತಿ ಮತ್ತೆ ಮುನ್ನೆಲೆಗೆ ಬರುವಂತೆ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೆ ಕೃಷಿ ವಲಯದಲ್ಲಿ ಆದಾಯ ಹೆಚ್ಚಾಗಿತ್ತು. ಕೈಗಾರಿಕಾ ವಲಯ ಮತ್ತು ಸೇವಾ ವಲಯಗಳ ಪಾಲು ಕಡಿಮೆಯಿತ್ತು. ಆದರೆ ಬರುಬರುತ್ತಾ ಕೃಷಿ ಆದಾಯ ಕಡಿಮೆಯಾಗಿ, ಕೈಗಾರಿಕಾ ಮತ್ತು ಸೇವಾ ವಲಯದ ಆದಾಯ ಹೆಚ್ಚಾಯಿತು. ಆದರೆ ಇಂದು ಎಲ್ಲದರ ಆದಾಯವೂ ಕಡಿಮೆಯಾಗಿದೆ ಇದಕ್ಕೆಲ್ಲ ಮೋದಿ ಸರ್ಕಾರದ ಅವೈಜ್ಞಾನಿಕ ನೀತಿಗಳೇ ಕಾರಣ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಸಣ್ಣ ರೈತರು ತಮ್ಮ ಜಮೀನನ್ನು ಮಾರಿ, ಅದೇ ಜಮೀನಿನಲ್ಲಿ ಈಗ ಕೂಲಿ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಗಳು ನಿರ್ಮಾಣ ಆಗುವುದನ್ನು ತಡೆಯಬೇಕು. ಹಾಗಾಗಿ ಭೂಮಿಗಾಗಿನ ನಿಮ್ಮ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆಯೆಂದು ಅವರು ಘೋಷಿಸಿದರು.

ನರೇಂದ್ರಮೋದಿಯವರ ಆಡಳಿತದಲ್ಲಿ ಸರ್ವಾಧಿಕಾರ ಮತ್ತು ಪ್ರಜಾಪ್ರಭುತ್ವದ ನಡುವೆ ಸಮರ ನಡೆಯುತ್ತಿದೆ. ನಮ್ಮ ಧ್ವನಿಯನ್ನು ದಮನಿಸಲು ಮೋದಿ ಸರ್ಕಾರ ಮುಂದಾಗಿದೆ. ರಾಜ್ಯಸಭೆಯ ಸದಸ್ಯರನ್ನು ಅಮಾನತುಗೊಳಿಸಿ ಮಸೂದೆ ಪಾಸು ಮಾಡುವ ಅಗತ್ಯವೇನಿತ್ತು ಎಂದು ಅವರು ಪ್ರಶ್ನಿಸಿದರು.

ರಾಜ್ಯದ ವಿಧಾನಪರಿಷತ್ತಿನಲ್ಲಿ ಭೂಮಿ ಕಿತ್ತುಕೊಳ್ಳುವ ಈ ಮಸೂದೆ ಅಂಗೀಕಾರವಾಗಲು ಬಿಡಬಾರದು. ಮಂಡನೆ ಮಾಡಲೂ ಬಿಡಬಾರದು. ಅಲ್ಲಿ ಬಿಜೆಪಿಗೆ ಬಹುಮತವಿಲ್ಲ. ಹಾಗಾಗಿ ಜೆಡಿಎಸ್ ಸದಸ್ಯರು ಮತ್ತು ನಮ್ಮ ಪಕ್ಷದ ಸದಸ್ಯರೂ ಇದನ್ನು ವಿರೋಧಿಸಬೇಕು ಎಂದು ಅವರು ಕರೆ ನೀಡಿದರು.

ಭೂಮಿಯ ಹಕ್ಕು ರೈತರದ್ದು .ಭೂಮಿಯ ಹಕ್ಕು ಕಾರ್ಮಿಕರದ್ದು, ದಲಿತರದ್ದು, ಬಡವರದ್ದು. ಯಾವತ್ತಿಗೂ ಭೂಮಿಯ ಹಕ್ಕನ್ನು ಬಿಟ್ಟುಕೊಡಬಾರದು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.


ಇದನ್ನೂ ಓದಿ: ಅಂಬೇಡ್ಕರ್ ಕನಸಿನ ಭೂ ಹಂಚಿಕೆ ಜಾರಿಯಾಗಲಿ: ನೂರ್ ಶ್ರೀಧರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...