Homeಕರ್ನಾಟಕ"ಬಿಜೆಪಿ, ಆರ್‌ಎಸ್‌ಎಸ್‌ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗಲ್ಲ-ಬಗ್ಗಲ್ಲ": ಭಾಷಣ ವೇಳೆ ಗದ್ದಲ ಎಬ್ಬಿಸಿದ ಬಿಜೆಪಿ ಕಾರ್ಯಕರ್ತರ...

“ಬಿಜೆಪಿ, ಆರ್‌ಎಸ್‌ಎಸ್‌ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗಲ್ಲ-ಬಗ್ಗಲ್ಲ”: ಭಾಷಣ ವೇಳೆ ಗದ್ದಲ ಎಬ್ಬಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ನಾವು ಬಿಜೆಪಿ-ಆರ್‌ಎಸ್‌ಎಸ್‌ನ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದರು.

ಬೆಳಗಾವಿಯಲ್ಲಿ ಎಐಸಿಸಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿಯ ದೇಶ ವಿರೋಧಿ ಆಡಳಿತ, ಜನ ವಿರೋಧಿ ಕ್ರಮಗಳನ್ನು ಖಂಡಿಸಿ ಭಾಷಣ ಮಾಡುವ ವೇಳೆ ಅಡ್ಡಿಪಡಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಸಿಎಂ ಬಿಜೆಪಿ-ಆರ್‌ಎಸ್‌ಎಸ್‌ಗೆ ನೇರ ಸವಾಲೆಸೆದರು.

ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಾ, ಭಾರತೀಯರ ಬದುಕನ್ನು ಬೆಲೆ ಏರಿಕೆಯಲ್ಲಿ ಬೇಯಿಸುತ್ತಾ, ಭಾರತೀಯ ಸಮಾಜವನ್ನು ಛಿದ್ರಗೊಳಿಸುತ್ತಾ, ಬಿರುಕು ಮೂಡಿಸುತ್ತಾ ಜನದ್ರೋಹಿಯಾಗಿ ವರ್ತಿಸುತ್ತಿರುವುದು ಬಿಟ್ಟರೆ ಬೇರೆ ಏನು ಮಾಡಿದ್ದೀರಿ ತೋರಿಸಿ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ಭಾರತೀಯರು ಬ್ರಿಟಿಷರ ವಿರುದ್ಧ ಪ್ರಾಣತ್ಯಾಗ ಮಾಡಿ ಹೋರಾಡುತ್ತಿದ್ದಾಗ ನೀವು ಸಂಘ ಪರಿವಾರದವರು ಏನು ಕಡೆದು ಕಟ್ಟೆ ಹಾಕ್ತಿದ್ರಿ? ಸ್ವಾತಂತ್ರ್ಯ ಹೋರಾಟಕ್ಕೆ ಏಕೆ ಬರಲಿಲ್ಲ? ಏನ್ ಮಾಡ್ತಾ ಕೂತಿದ್ರಿ? ಆಗ ಎಂದು ಪ್ರಶ್ನಿಸಿದರು.

ಮೊನ್ನೆ ಕಾಶ್ಮೀರದಲ್ಲಿ ಕರ್ನಾಟಕದ ಮೂವರು ಸೇರಿದಂತೆ ಅಮಾಯಕ ಭಾರತೀಯರನ್ನು ರಾಜಾರೋಷವಾಗಿ ಗನ್‌ಗಳ ಸಮೇತ ಬಂದು ಅಮಾನುಷವಾಗಿ ಹತ್ಯೆ ಮಾಡಿ ಹೋದರಲ್ಲಾ, ಇದು ಕೇಂದ್ರ ಸರ್ಕಾರದ ಭದ್ರತಾ ಲೋಪ ಅಲ್ಲವೇ? ಭಾರತೀಯರಿಗೆ ರಕ್ಷಣೆ ಕೊಡುವುದರಲ್ಲಿ ವಿಫಲ ಆಗಿರುವುದನ್ನು ನಾವು ಭಾರತೀಯರು ಪ್ರಶ್ನಿಸಬಾರದಾ? ಪ್ರಶ್ನಿಸಿದರೆ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸ್ತೀರಾ? ಎಂದು ಸಿಎಂ ಕಿಡಿಕಾರಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 52 ವರ್ಷಗಳ ಕಾಲ ಆರ್‌ಎಸ್‌ಎಸ್‌ ಕಚೇರಿ ಮೇಲೆ ಭಾರತದ ಬಾವುಟ ಹಾರಿಸಲೇ ಇಲ್ಲ ನೀವು.ಇದಕ್ಕೂ ನಾಚಿಕೆ ಆಗುವುದಿಲ್ಲವೇ ನಿಮಗೆ ಎಂದು ಪ್ರಶ್ನಿಸಿದರು.

ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಆಧುನಿಕ ಭಾರತ ನಿರ್ಮಾಣದವರೆಗೂ ಬಿಜೆಪಿ, ಸಂಘ ಪರಿವಾರದ ಕೊಡುಗೆ ಏನಿದೆ? ನಾಚಿಕೆ ಇಲ್ಲದೆ ದೇಶಭಕ್ತಿ ಬಗ್ಗೆ ಮಾತಾಡ್ತೀರಾ. ಭಾರತೀಯ ಸಮಾಜವನ್ನು ಬಿರುಕು ಮೂಡಿಸಿದ್ದು ಬಿಟ್ಟರೆ ಇಷ್ಟು ವರ್ಷಗಳ ನಿಮ್ಮ ಕೊಡುಗೆ ಭಾರತಕ್ಕೆ ಏನು ಎಂಬುವುದನ್ನು ದೇಶದ ಜನಕ್ಕೆ ವಿವರಿಸಿ ಎಂದು ಸವಾಲು ಹಾಕಿದರು.

ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಅತ್ಯಂತ ಶ್ರೀಮಂತರ ಮೇಲೆ 32% ಟ್ಯಾಕ್ಸ್ ಇತ್ತು. ಮೋದಿ ಬಂದ ಮೇಲೆ ಅತ್ಯಂತ ಶ್ರೀಮಂತರ ಮೇಲಿನ ತೆರಿಗೆಯನ್ನು ಶೇ25 ಇಳಿಸಿದಿರಿ. ಬಡವರು, ಮಧ್ಯಮ ವರ್ಗದವರ ಮೇಲಿನ ತೆರಿಗೆಯನ್ನು ಹೆಚ್ಚಿಸಿದಿರಿ. ನಾಚಿಕೆ ಆಗುತ್ತಿಲ್ಲ ನಿಮಗೆ? ಬಡವರ, ಮಧ್ಯಮ ವರ್ಗದವರ ವಿರೋಧಿ ಬಿಜೆಪಿಯ ಆಡಳಿತವನ್ನು ಪ್ರಶ್ನಿಸಬಾರದಾ? ಭಾರತೀಯರನ್ನು ನಿರಂತರ ಸುಳ್ಳುಗಳಲ್ಲಿ ಇನ್ನೂ ಎಷ್ಟು ವರ್ಷ ಮರಳು ಮಾಡ್ತೀರಿ? ಸತ್ಯ ಹೇಳಿ ಎಂದರು.

ಭಾರತದ ಸ್ವಾತಂತ್ರ್ಯಕ್ಕೆ ಪ್ರಾಣ ತ್ಯಾಗ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಹೋರಾಟ ಹೊಸದಲ್ಲ.ಬ್ರಿಟಿಷರನ್ನೇ ಒದ್ದೋಡಿಸಿದ ನಮಗೆ ನೀವು ಬಿಜೆಪಿ-ಆರ್‌ಎಸ್‌ಎಸ್‌ ಎದುರಿಸಿ ನಿಲ್ಲುವ ಶಕ್ತಿ ಇದೆ ಎಂದು ಹೇಳಿದರು.

ನಾವು ಹಾಲಿನ ದರ 4ರೂ ಹೆಚ್ಚಿಸಿ, ಅದನ್ನು ಪೂರ್ತಿಯಾಗಿ ರೈತರಿಗೆ, ಗೋಪಾಲಕರಿಗೆ, ಗೋ ಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೀವಿ. ಇದರಲ್ಲಿ ಒಂದು ರೂಪಾಯಿ ಕೂಡ ಸರ್ಕಾರಕ್ಕೆ ಬರಲ್ಲ. ನಾವು 4 ರೂ ಹೆಚ್ಚಿಸಿದರೂ ಹಾಲಿನ‌ ದರ ಇಡೀ ದೇಶದಲ್ಲಿ ಕಡಿಮೆ ಇರುವುದು ನಮ್ಮ ರಾಜ್ಯದಲ್ಲಿ ಮಾತ್ರ. ಬಸ್ ದರ, ನೀರಿನ ದರ, ವಿದ್ಯುತ್ ದರ ಅಕ್ಕ ಪಕ್ಕದ ರಾಜ್ಯಗಳಿಗಿಂತ ಅತ್ಯಂತ ಕಡಿಮೆ ಇರುವುದು ನಮ್ಮ ರಾಜ್ಯದಲ್ಲಿ ಮಾತ್ರ. ನಿಮ್ಮ ಸುಳ್ಳು, ಅಪಪ್ರಚಾರ, ಬೆದರಿಕೆಗೆ ಈ ಸಿದ್ದರಾಮಯ್ಯ ಹೆದರುವವನಲ್ಲ. ನಿಮ್ಮನ್ನು ಮೆಟ್ಟಿ ನಿಲ್ತೀವಿ. ಕಾಂಗ್ರೆಸ್ ಪಕ್ಷಕ್ಕೆ ಆ ಶಕ್ತಿ ಇನ್ನೂ ಇದೆ ಎಂದರು.

ಅಕ್ಕಿ, ಎಣ್ಣೆ, ಚಿನ್ನ, ಬೆಳ್ಳಿ, ಗೊಬ್ಬರ, ಕಾಳು, ಬೇಳೆ, ಡೀಸೆಲ್, ಪೆಟ್ರೋಲ್, ಸಿಲಿಂಡರ್ ಎಲ್ಲದರ ಬೆಲೆ ಏರಿಸಿದ್ದೀರಿ.ಯಾವುದನ್ನು ಬಿಟ್ಟಿದ್ದೀರಿ ಹೇಳಿ ಕೇಳಿದರು.

ಕಚ್ಛಾ ತೈಲ ಬೆಲೆ ಕಡಿಮೆ ಇದ್ದಾಗಲೂ ಪೆಟ್ರೋಲ್, ಡೀಸೆಲ್ ಬೆಲೆ ಮಾತ್ರ ನಿರಂತರವಾಗಿ ಏರಿಕೆ ಮಾಡುತ್ತಲೇ ಇರುವುದು ಭಾರತೀಯರಿಗೆ ಬಿಜೆಪಿ ಬಗೆಯುತ್ತಿರುವ ಮಹಾದ್ರೋಹ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ನಿರಂತರವಾಗಿ ಭಾರತೀಯರನ್ನು ಸುಳ್ಳುಗಳ ಸರಮಾಲೆಯಲ್ಲಿ ಮುಳುಗಿಸಿ, ಸಮಾಜವನ್ನು ಬಿರುಕು ಮೂಡಿಸಿ ಕಾಲ ಕಳೆಯುತ್ತಿದೆ. ನಿಮಗೆ ತಕ್ಕ ಉತ್ತರ ಕೊಡುವ ಶಕ್ತಿ ನಮಗಿದೆ. ನಾವು ಉತ್ತರ ಕೊಡ್ತೀವಿ ಎಂದರು.

ಯುದ್ಧವೇ ಏಕೈಕ ಆಯ್ಕೆಯಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...