Homeಮುಖಪುಟಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

ಸರ್ಕಾರ ಮಾಡಿದ ಕುತಂತ್ರಗಳಿಂದಾಗಿ ಈಗ ನಮ್ಮ ಹೋರಾಟ ಸಾವು ಅಥವಾ ಗೆಲುವಿನ ಹೋರಾಟವಾಗಿದೆ. ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ.

- Advertisement -
- Advertisement -

ಹತ್ತನೇ ತರಗತಿಯವರೆಗೆ ವಿದ್ಯಾಭ್ಯಾಸ ಪಡೆದು, ಮಗಳನ್ನು ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಕಳಿಸಿರುವ 57 ವರ್ಷದ ರೈತರಾದ ಗುರ್ತೇಜ್ ಸಿಂಗ್ ಕಳೆದ ಐದು ತಿಂಗಳಿನಿಂದ ರೈತ ಹೋರಾಟದ ಪ್ರತಿನಿಧಿಯಾಗಿದ್ದಾರೆ. ಪಂಜಾಬ್ ರಾಜ್ಯದ ಮೊಗ್ಗಾ ಜಿಲ್ಲೆಯ ರತಿನ್ಯಾ ಗ್ರಾಮದ ಇವರ ಕುಟುಂಬದ ಮೂಲ ಕೆಲಸವೇ ಕೃಷಿಯಾಗಿದೆ.

ರೈತ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿರುವ ಗುರ್ತೇಜ್ ಸಿಂಗ್ ಅವರ ಕುಟುಂಬದ ಸದಸ್ಯರು 5 ಮಂದಿ. ತಂದೆ, ಹೆಂಡತಿ, ಒಬ್ಬ ಮಗ ಮತ್ತು ಮಗಳೊಡನೆ ತಮ್ಮ ಗ್ರಾಮದಲ್ಲಿ ಗೋದಿ, ಭತ್ತ ಬೆಳೆಯುತ್ತಾ ನೆಮ್ಮದಿಯ ಜೀವನ ಸಾಗಿಸುತ್ತಿದ್ದವರು, ಇಂದು ಸಿಂಘು ಗಡಿಯಲ್ಲಿ ಚಳಿ, ಮಳೆ, ಧೂಳಿನಲ್ಲಿ ಟ್ರ್ಯಾಲಿಯಲ್ಲಿ ವಾಸಿಸುತ್ತಿದ್ದಾರೆ.

“ಮನೆಯಲ್ಲಿ ಎಲ್ಲರೂ ವಿದ್ಯಾವಂತರಿದ್ದೇವೆ. ನಮಗೂ ಕಾನೂನುಗಳ ಅರಿವಿದೆ. ಮನೆಗೆ ಹೋಗಬೇಕು ಎಂದು ಅನ್ನಿಸುತ್ತದೆ. ಆದರೆ, ಹೋರಾಟಕ್ಕಿಂತ ಮನೆ ದೊಡ್ಡದಲ್ಲ. ಮೊದಲು ಈ ಮೂರು ಕರಾಳ ಕಾನೂನುಗಳ ವಿರುದ್ಧ ಹೋರಾಡಿ ಗೆಲ್ಲುತ್ತೇವೆ. ಇಷ್ಟು ದಿನಗಳ ಹೋರಾಟ ಬೇರೆ. ಈಗೀನ ಹೋರಾಟವೇ ಬೇರೆ. ಸರ್ಕಾರ ಮಾಡಿದ ಕುತಂತ್ರಗಳಿಂದಾಗಿ ಈಗ ನಮ್ಮ ಹೋರಾಟ ಸಾವು ಅಥವಾ ಗೆಲುವಿನ ಹೋರಾಟವಾಗಿದೆ. ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ. ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳುವವರೆಗೂ ನಾವ್ಯಾರೂ ಹೋಗುವುದಿಲ್ಲ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಗುರ್ತೇಜ್ ಸಿಂಗ್ ಮಗ ಪದವಿ ಪಡೆದು ಚಂಢಿಗಡದಲ್ಲಿ ಸೋಲಾರ್ ಪ್ಲಾಂಟ್ ಕಂಪನಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಮಗಳು ಪಂಜಾಬಿನಲ್ಲಿಯೇ ದ್ವೀತಿಯ ಪಿಯುಸಿ ಮುಗಿಸಿ ಕೆನಡಾದಲ್ಲಿ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ತೆರಳಿದ್ದಾರೆ. ಗುರ್ತೇಜ್ ಸಿಂಗ್ ಅವರ ತಮ್ಮ ಕೆನಡಾದಲ್ಲಿ ಹಲವು ವರ್ಷಗಳಿಂದ ನೆಲೆಸಿದ್ದು ಅಲ್ಲಿಯೇ ತಮ್ಮ ಉದ್ಯಮ ಶುರು ಮಾಡಿದ್ದಾರೆ.

ಕುಟಂಬದ ಮೂಲ ಕಾರ್ಯ ಕೃಷಿಯಾಗಿರುವುದರಿಂದ ಮನೆಯಲ್ಲಿ ಮೂರು ಎಮ್ಮೆ ಸೇರಿದಂತೆ ಒಂದು ಹಸುವನ್ನು ಗುರ್ತೇಜ್ ಸಿಂಗ್ ಸಾಕಿಕೊಂಡಿದ್ದಾರೆ. ಗೋದಿ, ಭತ್ತದ ಜೊತೆಗೆ ಎಮ್ಮೆಗೆ ಬೇಕಾದ ಹಸಿರು ಹುಲ್ಲು ಬೆಳೆಯುತ್ತಾರೆ. ಆದರೆ ಈ ಎಮ್ಮೆ ಹಾಲನ್ನು ಇವರು ಮಾರುವುದಿಲ್ಲ. ಮನೆಯವರ ಬಳಕೆಗೆ ಬಳಸಿಕೊಳ್ಳಲಾಗುತ್ತದೆ. ಅಕ್ಕ ಪಕ್ಕದಲ್ಲಿ ಎಮ್ಮೆ ಇಲ್ಲದವರಿಗೆ ಹಾಲು ನೀಡಲಾಗುತ್ತದೆ ಎಂದು ವಿವರಿಸುತ್ತಾರೆ.

ಮನೆಯ ಹಿರಿಯ ಸದಸ್ಯರಾಗಿರುವ ಗುರ್ತೇಜ್ ಸಿಂಗ್ ಅವರ ತಂದೆ 85 ವರ್ಷದವರಾಗಿದ್ದು, ಈಗಲೂ ಚಟುವಟಿಕೆಯಿಂದ ಹೊಲದ ಕೆಲಸ ನಿರ್ವಹಿಸುತ್ತಾರೆ. ಗುರ್ತೇಜ್ ಸಿಂಗ್ ಪ್ರತಿಭಟನೆಗೆ ಬಂದಾಗಿನಿಂದ ಮನೆಯ ಎಲ್ಲ ಕೆಲಸಗಳನ್ನೂ ಅವರೆ ನೋಡಿಕೊಳ್ಳುತ್ತಿದ್ದಾರೆ. ತಮ್ಮ ತಂದೆಗೆ ಪ್ರತಿದಿನ ಕನಿಷ್ಠ ಎರಡು ಲೀಟರ್ ಹಾಲು ಬೇಕಾಗುತ್ತದೆ. ಹಾಲಿನ ಉತ್ಪನ್ನಗಳಿಲ್ಲದೆ ಇವರಿಗೆ ಊಟ ಸೇರುವುದಿಲ್ಲ ಎಂದು ಗುರ್ತೇಜ್ ಸಿಂಗ್ ನಸುನಗುತ್ತಾರೆ. ಇದು ಅವರ ಆರೋಗ್ಯದ ಗುಟ್ಟು ಕೂಡ ಎನ್ನುತ್ತಾರೆ.

ಹೋರಾಟಕ್ಕೆ ಬಂದ ಗುರ್ತೇಜ್ ಸಿಂಗ್ ಅವರಿಗೆ ತಂದೆಯ ಬೆಂಬಲ ಹೆಚ್ಚಾಗಿದೆಯಂತೆ. ಈ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ನಂತರ ಮನೆಗೆ ಬರಲು ತಿಳಿಸಿದ್ದಾರೆ. ನನ್ನ ಮಗ ಕೂಡ ಹಲವು ಬಾರಿ ರಜೆ ತೆಗೆದುಕೊಂಡು ಇಲ್ಲಿಗೆ ಬಂದು ಹೋರಾಟಕ್ಕೆ ಬೆಂಬಲ ನೀಡಿದ್ದಾರೆ ಎಂದು ರೈತ ಗುರ್ತೇಜ್ ಸಿಂಗ್ ತಿಳಿಸುತ್ತಾರೆ.

ಇನ್ನೊಂದು ಆಶ್ಚರ್ಯದ ವಿಷಯವೆಂದರೆ ಮೊಗ್ಗಾ ಜಿಲ್ಲೆಯ ರತಿನ್ಯಾ ಗ್ರಾಮದ ಸುಮಾರು 3 ಕಿಲೋ ಮೀಟರ್ ದೂರದಲ್ಲಿ ಅದಾನಿ ಕಂಪನಿಯ DAGURU ಸೈಲೋಸ್ (ಸಂಗ್ರಹಾಲಯ) ಐದು ವರ್ಷದಿಂದ ಕಾರ್ಯ ನಿರ್ವಹಿಸುತ್ತಿದ್ದು, ಇದೆ ರೈತರು ಅಲ್ಲಿಗೆ ತಮ್ಮ ಗೋದಿಯನ್ನು ಮಾರಾಟ ಮಾಡಿದ್ದಾರೆ.

ಗುರ್ತೇಜ್ ಸಿಂಗ್ ಹೇಳುವಂತೆ “ನಮಗೆ ಅದು ಅದಾನಿ ಕಂಪನಿ ಎಂದು ಗೊತ್ತಿರಲಿಲ್ಲ. ನಮ್ಮ ಗೋದಿಗೆ ಮೊದ ಮೊದಲು ಒಳ್ಳೆಯ ಬೆಲೆ ನೀಡಲಾಗುತ್ತಿತ್ತು. ಇತರ ರೈತರನ್ನು ಅಲ್ಲಿಗೆ ಕರೆತಂದವರಿಗೆ ಕಮಿಷನ್ ಕೂಡ ನೀಡಲಾಗುತ್ತಿತ್ತು. ಆದರೆ ಕೆಲ ತಿಂಗಳುಗಳ ನಂತರ ಸ್ಯಾಂಪಲ್ ನೋಡಿ ತೆಗೆದುಕೊಳ್ಳಲು ಶುರು ಮಾಡಿದರು. ಕೆಲವರನ್ನು ಗೋದಿ ಉತ್ತಮ ಕ್ವಾಲಿಟಿ ಹೊಂದಿಲ್ಲ ಎಂದು ವಾಪಸ್ ಕಳುಹಿಸುತ್ತಿದ್ದರು. ನಂತರ ಅದನ್ನು ಸರ್ಕಾರಿ ಮಂಡಿಯಲ್ಲಿ ಮಾರುತ್ತಿದ್ದೆವು” ಎಂದಿದ್ದಾರೆ.

“ದಾಸ್ತಾನಿನ ಒಳಗೆ ಸ್ಪೆಷಲ್ ಟ್ರೈನ್ ನಲ್ಲಿ ಗೋದಿಯನ್ನು ರಫ್ತು ಮಾಡುತ್ತಿದ್ದರು . ಕೇಂದ್ರ ಸರ್ಕಾರ ಕೃಷಿ ಕಾನೂನುಗಳನ್ನು ಜಾರಿಗೆ ತಂದ ಮೇಲೆ ಅದು ಅದಾನಿ ಕಂಪನಿ ಎಂಬುದು ನಮಗೂ ತಿಳಿಯಿತು. 5 ತಿಂಗಳಿನಿಂದ DAGURU ಕಂಪನಿಯನ್ನು ರೈತರು ಬಂದ್ ಮಾಡಿದ್ದಾರೆ. ಇದರ ಪಕ್ಕದಲ್ಲಿಯೇ ಅದಾನಿಯವರ ರೈಸ್ ಕಂಪನಿಯ ತುಂಬಾ ದೊಡ್ಡ ಘಟಕ ಇದೆ. ಕಳೆದ ಐದು ತಿಂಗಳಿನಿಂದ ಈ ಕಂಪನಿಗಳನ್ನು ರೈತರು ಬಂದ್ ಮಾಡಿಸಿದ್ದಾರೆ” ಎಂದು ಗುರ್ತೇಜ್ ಸಿಂಗ್ ಮಾಹಿತಿ ನೀಡಿದ್ದಾರೆ.

“ಸದ್ಯ ಊರಿನಲ್ಲಿ ಗೋದಿ ಹಾಕಿದ್ದೇವೆ. ಎಲ್ಲವನ್ನು ತಂದೆ ನೋಡಿಕೊಳ್ಳುತ್ತಿದ್ದಾರೆ. ಏಪ್ರಿಲ್ ತಿಂಗಳವರೆಗೆ ಏನು ಕೆಲಸವಿಲ್ಲ. ಏನಾದರೂ ಬೇರೆ ಇದ್ದರೆ ಅಕ್ಕಪಕ್ಕದವರು ನೋಡಿಕೊಳ್ಳುತ್ತಾರೆ. ಒಂದೆರೆಡು ಸಲಿ ಆದರೂ ಮನೆಗೆ ಬಂದು ಹೋಗಿ ಎಂದು ಹೆಂಡತಿ, ಮಗ ಕರೆಯುತ್ತಾರೆ. ನನ್ನ ಹೆಂಡತಿಯ ಸಂಬಂಧಿಯ ಎಂಗೇಜ್ಮೆಂಟ್ ಇತ್ತು. ನಾನು ಹೋಗಲಿಲ್ಲ, ಮದುವೆಗೂ ಹೋಗಲಿಲ್ಲ, ಕಾಲಿನ ಗಾಯದ ಸಬೂಬು ಹೇಳಿ ತಪ್ಪಿಸಿಕೊಂಡೆ. ಆದರೆ ತಂದೆ ಮಾತ್ರ ಇಲ್ಲಿಯೇ ಇದ್ದು ಗೆದ್ದು ಬರಲು ಹೇಳುತ್ತಾರೆ” ಎಂದು ತಿಳಿಸಿದ್ದಾರೆ.

“ನನ್ನ ತಮ್ಮ ಕೆನಡಾದಲ್ಲಿ ಕೆಲಸ ಮಾಡುತ್ತಾರೆ. ಹೋರಾಟದಲ್ಲಿ ತೊಡಗಿಸಿಕೊಂಡು ಚಳಿಯಲ್ಲಿ ಕುಳಿತಿರುವ ರೈತರಿಗಾಗ ಬೆಚ್ಚಗಿನ ಶಾಲುಗಳನ್ನು ಹಂಚಲು ಕಳಿಸಿದ್ದರು. ಇನ್ನೂ ನಮ್ಮ ಊರಿನಿಂದ ಪ್ರತಿಭಟನೆ ಬೆಂಬಲಿಸಲು ಬರುವವರಿಗೆ ಅವರ ಬೈಕ್, ಟ್ರ್ಯಾಕ್ಟರ್‌ಗಳಿಗೆ ಪೆಟ್ರೋಲ್ ಹಾಕಿಸಿಕೊಳ್ಳಲು ಹಣ ನೀಡುತ್ತಿದ್ದಾರೆ. ಊರಿನಿಂದ ಎಲ್ಲರೂ ಸಿಂಘುಗೆ ಬರಲು ಪ್ರೋತ್ಸಾಹ ನೀಡುತ್ತಿದ್ದಾರೆ” ಎಂದು ಗುರ್ತೇಜ್ ಸಿಂಗ್ ಹೇಳಿದ್ದಾರೆ.

ದೆಹಲಿಯ ಸಿಂಘು ಗಡಿಯಲ್ಲಿ ನವೆಂಬರ್ 26 ರಿಂದ ಟ್ರ್ಯಾಲಿಯಲ್ಲಿ ವಾಸ ಮಾಡುತ್ತಾ, ರೈತ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಗುರ್ತೇಜ್ ಸಿಂಗ್, ಹೊರ ರಾಜ್ಯಗಳಿಂದ ಬರುವ ಜನರಿಗೆ ತಮ್ಮ ಟ್ರ್ಯಾಲಿಗಳಲ್ಲಿ ಉಳಿಯಲು ವ್ಯವಸ್ಥೆ ಮಾಡುತ್ತಾರೆ. ಟೆಂಟ್‌ಗಳಿಲ್ಲದಿದ್ದರೇ ಅವರಿಗೆ ಟೆಂಟ್, ವಿದ್ಯುತ್ ವ್ಯವಸ್ಥೆ ಮಾಡುತ್ತಾರೆ. ಕರ್ನಾಟಕದಿಂದ ಟ್ರ್ಯಾಕ್ಟರ್ ಪೆರೇಡ್‌ಗಾಗಿ ಬಂದಿದ್ದ 20ಕ್ಕೂ ಹೆಚ್ಚು ಜನರಿಗೆ ಸ್ನಾನದ ವ್ಯವಸ್ಥೆ, ಉಳಿಯಲು ವ್ಯವಸ್ಥೆಯನ್ನು ಗುರ್ತೇಜ್ ಸಿಂಗ್ ನೋಡಿಕೊಂಡಿದ್ದರು.

– ಮಮತ ಎಂ


ಇದನ್ನೂ ಓದಿ: ಮಥುರಾ, ಬಾಗ್‌ಪತ್‌ನಲ್ಲಿ ಬೃಹತ್ ಮಹಾಪಂಚಾಯತ್‌: ಬಿಜೆಪಿಗೆ ಸಾಮಾಜಿಕ ಬಹಿಷ್ಕಾರ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...