Homeಚಳವಳಿರಾಜ್ಯದ ಪಾಲಿನ ಹಣ ಕೊಡದಿದ್ದರೆ ನಾವು ತೆರಿಗೆ ಕಟ್ಟುವುದಿಲ್ಲ: ಕನ್ನಡಿಗರ ಆಕ್ರೋಶ

ರಾಜ್ಯದ ಪಾಲಿನ ಹಣ ಕೊಡದಿದ್ದರೆ ನಾವು ತೆರಿಗೆ ಕಟ್ಟುವುದಿಲ್ಲ: ಕನ್ನಡಿಗರ ಆಕ್ರೋಶ

ಕರ ನಿರಾಕರಣೆ ಎಂದರೆ ನಾವು ಜಿಎಸ್‌ಟಿ ಬಿಲ್ ಇರುವ ಯಾವುದೇ ವಸ್ತುಗಳನ್ನು ಕೊಳ್ಳುವುದಿಲ್ಲ. ನಾವು ರೈತರಿಂದ ನೇರವಾಗಿ ಕೊಳ್ಳುತ್ತೇವೆ. ನೇಕಾರರಿಂದ ನೇಯ್ದ ಬಟ್ಟೆಯನ್ನು ಕೊಂಡುಕೊಳ್ಳುತ್ತೇವೆ.. ಈ ರೀತಿಯಾಗಿ ಎಲ್ಲೆಡೆ ಜಾಗೃತಿ ಮೂಡಿಸುತ್ತೇವೆ.

- Advertisement -
- Advertisement -

ಕನ್ನಡ ನಾಡಿಗೆ ನ್ಯಾಯಸಮ್ಮತವಾಗಿ ಬರಬೇಕಾದ GST ಪರಿಹಾರ, ನೆರೆ ಪರಿಹಾರ, SDRF ಹಾಗೂ NSRF ನಿಧಿ ನೀಡದೇ ಮಲತಾಯಿ ಧೋರಣೆ ತಳೆದಿರುವ ಭಾರತ ಒಕ್ಕೂಟ ಸರ್ಕಾರದ ನಡೆ ಖಂಡಿನೀಯ. ರಾಜ್ಯದ ಪಾಲಿನ GST, ನೆರೆ ಪರಿಹಾರ ಕೊಡಿ, ಇಲ್ಲದಿದ್ದರೆ ನಾವು ತೆರಿಗೆ ಕಟ್ಟುವುದಿಲ್ಲ! ಎಂದು ಕನ್ನಡಿಗರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಇಂದು ಬೆಂಗಳೂರಿನ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಮುಂದೆ ಕನ್ನಡ ಚಳವಳಿ ಕೇಂದ್ರ ಸಮಿತಿ ಹಾಗೂ ಕನ್ನಡ ರಣಧೀರರ ಪರ ಸಹಭಾಗಿತ್ವದಲ್ಲಿ ‘ಕರ ನಿರಾಕರಣೆ ಚಳವಳಿ’ ಎಂಬ ವಿನೂತನ ವಿಭಿನ್ನ ಸತ್ಯಾಗ್ರಹ ಚಳವಳಿ ಹಮ್ಮಿಕೊಳ್ಳಲಾಗಿದೆ.

ಕರ ನಿರಾಕರಣೆ ಎಂದರೆ ನಾವು ಜಿಎಸ್‌ಟಿ ಬಿಲ್ ಇರುವ ಯಾವುದೇ ವಸ್ತುಗಳನ್ನು ಕೊಳ್ಳುವುದಿಲ್ಲ. ನಾವು ರೈತರಿಂದ ನೇರವಾಗಿ ಕೊಳ್ಳುತ್ತೇವೆ. ನೇಕಾರರಿಂದ ನೇಯ್ದ ಬಟ್ಟೆಯನ್ನು ಕೊಂಡುಕೊಳ್ಳುತ್ತೇವೆ.. ಈ ರೀತಿಯಾಗಿ ಎಲ್ಲೆಡೆ ಜಾಗೃತಿ ಮೂಡಿಸುತ್ತೇವೆ. ಕೊನೆಗೆ ತೆರಿಗೆ ಕಟ್ಟದೇ ಪ್ರತಿರೋಧ ಒಡ್ಡುತ್ತೇವೆ ಎಂದು ಕನ್ನಡ ರಣಧೀರರ ಪಡೆಯ ಚೇತನ್ ಗೌಡ ತಿಳಿಸಿದ್ದಾರೆ.

“ದಕ್ಷಿಣದ ರಾಜ್ಯಗಳ ಮೇಲಿನ ಹಿಂದಿ ಹೇರಿಕೆ ಹಾಗೂ ಭಾಷಾತಾರತಮ್ಯ ನೀತಿಯನ್ನು ಭಾರತದ ಒಕ್ಕೂಟ ಸರ್ಕಾರವು ನಿಲ್ಲಿಸಬೇಕು. ರಾಷ್ಟ್ರೀಯ ಶಿಕ್ಷಣ ನೀತಿ-2020ಯನ್ನು ಕೈಬಿಡಬೇಕು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಮತ್ತು ಪರಿಷ್ಕೃತ ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು. ಅನಿಯಂತ್ರಿತ ವಲಸೆ ನಿಯಂತ್ರಣ ಕಾಯ್ದೆ (ILP) ಜಾರಿಯಾಗಬೇಕು. ಜೊತೆಗೆ ಭೂಸುಧಾರಣಾ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಗಳನ್ನು ಕೈಬಿಡುವಂತೆ ಕನ್ನಡಿಗರು ಒತ್ತಾಯಿಸಿದ್ದಾರೆ.

“ಕರ್ನಾಟಕ ರಾಜ್ಯವು ಭಾರತದ ಒಕ್ಕೂಟ ಸರ್ಕಾರಕ್ಕೆ  2014-15ರಲ್ಲಿ 60,595 ಕೋಟಿ, 2015-16ರಲ್ಲಿ 72,040ಕೋಟಿ, 2016-17 ರಲ್ಲಿ 85,920 ಕೋಟಿ, 2017-18 ರಲ್ಲಿ 98,460 ಕೋಟಿ ಮತ್ತು 2018-19 ರಲ್ಲಿ 1,19,796 ಕೋಟಿ ರೂಗಳನ್ನು ತೆರಿಗೆಯಾಗಿ ನೀಡಿದೆ. ಆದರೆ ಇಷ್ಟೊಂದು ತೆರಿಗೆ ಕಟ್ಟಿದರು ಭಿಕ್ಷೆ ಬೇಡುವ ಪರಿಸ್ಥಿತಿ ಎದುರಾಗಿದೆ. ನಮ್ಮದೇ ಹಣವನ್ನು ನಮಗೆ ಕೊಡಲು ಹಿಂಜರಿಕೆಯೇಕೆ? ಕಳೆದ ವರ್ಷಗಳಲ್ಲಿ ಸರಾಸರಿ 100 ಪ್ರತಿಶತ ಹೆಚ್ಚಿನ ತೆರಿಗೆಯನ್ನು ನೀಡಿದ್ದೇವೆ. ಇದಕ್ಕೆ ನಮಗೆ ಸಿಕ್ಕ ಉಡುಗೊರೆಯೆಂದರೆ ನಮ್ಮ ಪಾಲಿನ 11,324 ಕೋಟಿ ರೂ ಜಿಎಸ್‌ಟಿ ಪರಿಹಾರ ಹಣ ಕೊಡದೇ ಆರ್‌ಬಿಐನಿಂದ ಸಾಲ ಪಡೆಯಿರಿ ಎಂದು ಹೇಳುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯ ಲೈವ್ ನೋಡಿ

ಬೆಂಗಳೂರು: ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಕನ್ನಡ ರಣಧೀರ ಪಡೆ ಮತ್ತು ಕನ್ನಡ ಚಳವಳಿ ಕೇಂದ್ರ ಸಮಿತಿ ವತಿಯಿಂದ "ಕರೆ ನಿರಾಕರಣೆ ಸತ್ಯಾಗ್ರಹ"

Posted by Naanu Gauri on Thursday, October 1, 2020

ಇಡೀ ಭಾರತ ಒಕ್ಕೂಟದಲ್ಲಿಯೇ 2ನೇ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ನಮ್ಮದು. ಆದರೆ ನಮ್ಮ ಪಾಲಿನ ಹಣ ಕೇಳಲು ರಾಜ್ಯ ಸರ್ಕಾರ ವಿಫಲವಾಗಿದೆ. ಮುಖ್ಯಮಂತ್ರಿಗಳು ತಾವೇ ಭ್ರಷ್ಟರಾಗಿದ್ದುಕೊಂಡು ಹೈಕಮಾಂಡ್ ಎದುರು ಜೀ ಹುಜೂರ್ ಎನ್ನುತ್ತಿದ್ದಾರೆ. ಇನ್ನು ಇಲ್ಲಿಂದ ಆಯ್ಕೆಯಾದ  ಸಂಸದರು ಯಾವುದಕ್ಕೂ ಪ್ರಯೋಜನವಿಲ್ಲವೆಂದು ಹೋರಾಟಕಾರರು ಆಕ್ರೋಶ ಹೊರಹಾಕಿದ್ದಾರೆ.

ಕರ ನಿರಾಕರಣೆ ಮುಖೇನ ನಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಪಡೆಯಲು ನಾಡಿನ ಜನತೆ ಮುಂದಾಗಬೇಕು, ಅಧಿಕಾರ ಹಣ ಲಾಲಸೆಗಳಿಗೆ ಕನ್ನಡದ ಅಸ್ಮಿತೆಯನ್ನು ಅಡಮಾನವಿಟ್ಟಿರುವ ನಾಡದ್ರೋಹಿಗಳ ವಿರುದ್ಧ ನಮ್ಮ ಹೋರಾಟ ನಿತ್ಯ ನಿರಂತರವಾಗಿರಬೇಕು. ನಾಡಿನ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವ ಹಾಗೂ ನಾಡಿನ ಸರ್ಕಾರದ ಉದ್ಯಮ, ನೆಲ, ಜಲಗಳನ್ನು ಮಾರಾಟಕ್ಕಿಟ್ಟಿರುವ, ನಮಗೆ ಬರಬೇಕಾದ ಪಾಲನ್ನು ಪಡೆಯಲಾಗದೆ ನಮ್ಮ ಭೂಮಿಯನ್ನು ಮಾರುತ್ತಿರುವ ರಣಹೇಡಿ ಸರ್ಕಾರದ ನಡೆಯನ್ನು ಕನ್ನಡ ಚಳವಳಿ ಕೇಂದ್ರ ಸಮಿತಿ ಹಾಗೂ ಕನ್ನಡ ರಣಧೀರರ ಪಡೆ ಜಂಟಿಯಾಗಿ ತೀವ್ರವಾಗಿ ಖಂಡಿಸುತ್ತದೆ ಎಂದು ಹೋರಾಟಗಾರರು ಹೇಳಿದರು.

ಇದೇ ಸಂದರ್ಭದಲ್ಲಿ ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷರಾದ ಶ್ರೀ ಗುರುದೇವ್ ನಾರಾಯಣ ಕುಮಾರ್ ಮಾತನಾಡಿ “ನಮ್ಮ ನಾಡಿನ ತೆರಿಗೆ ಪಡೆಯುವ ಭಾರತ ಒಕ್ಕೂಟ ಸರ್ಕಾರ ನಮಗೆ ನೀಡಬೇಕಾದ ನ್ಯಾಯಸಮ್ಮತ ಹಣ ನೀಡದೆ, ಕನ್ನಡಿಗರನ್ನು ಎರಡನೇ ದರ್ಜೆ ಪ್ರಜೆಗಳಂತೆ ಕಾಣುತ್ತಿರುವುದು ತೀರಾ ಖಂಡನೀಯ. ನಾಡಿನ ನೆಲ ಸಂಸ್ಕೃತಿಗೆ ಬೆಲೆ ನೀಡದೆ, ಹಿಂದಿ ಹೇರಿಕೆ ಮಾಡುತ್ತಿರುವ ನೀತಿಯನ್ನು ಖಂಡಿಸಿ, ಭಾರತ ಒಕ್ಕೂಟ ಸರ್ಕಾರ ತನ್ನ ಮಲತಾಯಿ ಧೋರಣೆ ಮುಂದುವರಿಸಿದಲ್ಲಿ ಮಗದೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಾರಣವಾಗಲಿದೆ” ಎಂದು ಎಚ್ಚರಿಕೆ ನೀಡಿದರು.


ಇದನ್ನೂ ಓದಿ: ದೋಷಪೂರಿತ ಜಿಎಸ್‌ಟಿ ದೇಶದ ಆರ್ಥಿಕತೆಯನ್ನು ನಾಶಮಾಡಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...