Homeಚಳವಳಿರಾಜ್ಯದ ಪಾಲಿನ ಹಣ ಕೊಡದಿದ್ದರೆ ನಾವು ತೆರಿಗೆ ಕಟ್ಟುವುದಿಲ್ಲ: ಕನ್ನಡಿಗರ ಆಕ್ರೋಶ

ರಾಜ್ಯದ ಪಾಲಿನ ಹಣ ಕೊಡದಿದ್ದರೆ ನಾವು ತೆರಿಗೆ ಕಟ್ಟುವುದಿಲ್ಲ: ಕನ್ನಡಿಗರ ಆಕ್ರೋಶ

ಕರ ನಿರಾಕರಣೆ ಎಂದರೆ ನಾವು ಜಿಎಸ್‌ಟಿ ಬಿಲ್ ಇರುವ ಯಾವುದೇ ವಸ್ತುಗಳನ್ನು ಕೊಳ್ಳುವುದಿಲ್ಲ. ನಾವು ರೈತರಿಂದ ನೇರವಾಗಿ ಕೊಳ್ಳುತ್ತೇವೆ. ನೇಕಾರರಿಂದ ನೇಯ್ದ ಬಟ್ಟೆಯನ್ನು ಕೊಂಡುಕೊಳ್ಳುತ್ತೇವೆ.. ಈ ರೀತಿಯಾಗಿ ಎಲ್ಲೆಡೆ ಜಾಗೃತಿ ಮೂಡಿಸುತ್ತೇವೆ.

- Advertisement -
- Advertisement -

ಕನ್ನಡ ನಾಡಿಗೆ ನ್ಯಾಯಸಮ್ಮತವಾಗಿ ಬರಬೇಕಾದ GST ಪರಿಹಾರ, ನೆರೆ ಪರಿಹಾರ, SDRF ಹಾಗೂ NSRF ನಿಧಿ ನೀಡದೇ ಮಲತಾಯಿ ಧೋರಣೆ ತಳೆದಿರುವ ಭಾರತ ಒಕ್ಕೂಟ ಸರ್ಕಾರದ ನಡೆ ಖಂಡಿನೀಯ. ರಾಜ್ಯದ ಪಾಲಿನ GST, ನೆರೆ ಪರಿಹಾರ ಕೊಡಿ, ಇಲ್ಲದಿದ್ದರೆ ನಾವು ತೆರಿಗೆ ಕಟ್ಟುವುದಿಲ್ಲ! ಎಂದು ಕನ್ನಡಿಗರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಇಂದು ಬೆಂಗಳೂರಿನ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಮುಂದೆ ಕನ್ನಡ ಚಳವಳಿ ಕೇಂದ್ರ ಸಮಿತಿ ಹಾಗೂ ಕನ್ನಡ ರಣಧೀರರ ಪರ ಸಹಭಾಗಿತ್ವದಲ್ಲಿ ‘ಕರ ನಿರಾಕರಣೆ ಚಳವಳಿ’ ಎಂಬ ವಿನೂತನ ವಿಭಿನ್ನ ಸತ್ಯಾಗ್ರಹ ಚಳವಳಿ ಹಮ್ಮಿಕೊಳ್ಳಲಾಗಿದೆ.

ಕರ ನಿರಾಕರಣೆ ಎಂದರೆ ನಾವು ಜಿಎಸ್‌ಟಿ ಬಿಲ್ ಇರುವ ಯಾವುದೇ ವಸ್ತುಗಳನ್ನು ಕೊಳ್ಳುವುದಿಲ್ಲ. ನಾವು ರೈತರಿಂದ ನೇರವಾಗಿ ಕೊಳ್ಳುತ್ತೇವೆ. ನೇಕಾರರಿಂದ ನೇಯ್ದ ಬಟ್ಟೆಯನ್ನು ಕೊಂಡುಕೊಳ್ಳುತ್ತೇವೆ.. ಈ ರೀತಿಯಾಗಿ ಎಲ್ಲೆಡೆ ಜಾಗೃತಿ ಮೂಡಿಸುತ್ತೇವೆ. ಕೊನೆಗೆ ತೆರಿಗೆ ಕಟ್ಟದೇ ಪ್ರತಿರೋಧ ಒಡ್ಡುತ್ತೇವೆ ಎಂದು ಕನ್ನಡ ರಣಧೀರರ ಪಡೆಯ ಚೇತನ್ ಗೌಡ ತಿಳಿಸಿದ್ದಾರೆ.

“ದಕ್ಷಿಣದ ರಾಜ್ಯಗಳ ಮೇಲಿನ ಹಿಂದಿ ಹೇರಿಕೆ ಹಾಗೂ ಭಾಷಾತಾರತಮ್ಯ ನೀತಿಯನ್ನು ಭಾರತದ ಒಕ್ಕೂಟ ಸರ್ಕಾರವು ನಿಲ್ಲಿಸಬೇಕು. ರಾಷ್ಟ್ರೀಯ ಶಿಕ್ಷಣ ನೀತಿ-2020ಯನ್ನು ಕೈಬಿಡಬೇಕು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಮತ್ತು ಪರಿಷ್ಕೃತ ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು. ಅನಿಯಂತ್ರಿತ ವಲಸೆ ನಿಯಂತ್ರಣ ಕಾಯ್ದೆ (ILP) ಜಾರಿಯಾಗಬೇಕು. ಜೊತೆಗೆ ಭೂಸುಧಾರಣಾ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಗಳನ್ನು ಕೈಬಿಡುವಂತೆ ಕನ್ನಡಿಗರು ಒತ್ತಾಯಿಸಿದ್ದಾರೆ.

“ಕರ್ನಾಟಕ ರಾಜ್ಯವು ಭಾರತದ ಒಕ್ಕೂಟ ಸರ್ಕಾರಕ್ಕೆ  2014-15ರಲ್ಲಿ 60,595 ಕೋಟಿ, 2015-16ರಲ್ಲಿ 72,040ಕೋಟಿ, 2016-17 ರಲ್ಲಿ 85,920 ಕೋಟಿ, 2017-18 ರಲ್ಲಿ 98,460 ಕೋಟಿ ಮತ್ತು 2018-19 ರಲ್ಲಿ 1,19,796 ಕೋಟಿ ರೂಗಳನ್ನು ತೆರಿಗೆಯಾಗಿ ನೀಡಿದೆ. ಆದರೆ ಇಷ್ಟೊಂದು ತೆರಿಗೆ ಕಟ್ಟಿದರು ಭಿಕ್ಷೆ ಬೇಡುವ ಪರಿಸ್ಥಿತಿ ಎದುರಾಗಿದೆ. ನಮ್ಮದೇ ಹಣವನ್ನು ನಮಗೆ ಕೊಡಲು ಹಿಂಜರಿಕೆಯೇಕೆ? ಕಳೆದ ವರ್ಷಗಳಲ್ಲಿ ಸರಾಸರಿ 100 ಪ್ರತಿಶತ ಹೆಚ್ಚಿನ ತೆರಿಗೆಯನ್ನು ನೀಡಿದ್ದೇವೆ. ಇದಕ್ಕೆ ನಮಗೆ ಸಿಕ್ಕ ಉಡುಗೊರೆಯೆಂದರೆ ನಮ್ಮ ಪಾಲಿನ 11,324 ಕೋಟಿ ರೂ ಜಿಎಸ್‌ಟಿ ಪರಿಹಾರ ಹಣ ಕೊಡದೇ ಆರ್‌ಬಿಐನಿಂದ ಸಾಲ ಪಡೆಯಿರಿ ಎಂದು ಹೇಳುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯ ಲೈವ್ ನೋಡಿ

ಬೆಂಗಳೂರು: ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಕನ್ನಡ ರಣಧೀರ ಪಡೆ ಮತ್ತು ಕನ್ನಡ ಚಳವಳಿ ಕೇಂದ್ರ ಸಮಿತಿ ವತಿಯಿಂದ "ಕರೆ ನಿರಾಕರಣೆ ಸತ್ಯಾಗ್ರಹ"

Posted by Naanu Gauri on Thursday, October 1, 2020

ಇಡೀ ಭಾರತ ಒಕ್ಕೂಟದಲ್ಲಿಯೇ 2ನೇ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ನಮ್ಮದು. ಆದರೆ ನಮ್ಮ ಪಾಲಿನ ಹಣ ಕೇಳಲು ರಾಜ್ಯ ಸರ್ಕಾರ ವಿಫಲವಾಗಿದೆ. ಮುಖ್ಯಮಂತ್ರಿಗಳು ತಾವೇ ಭ್ರಷ್ಟರಾಗಿದ್ದುಕೊಂಡು ಹೈಕಮಾಂಡ್ ಎದುರು ಜೀ ಹುಜೂರ್ ಎನ್ನುತ್ತಿದ್ದಾರೆ. ಇನ್ನು ಇಲ್ಲಿಂದ ಆಯ್ಕೆಯಾದ  ಸಂಸದರು ಯಾವುದಕ್ಕೂ ಪ್ರಯೋಜನವಿಲ್ಲವೆಂದು ಹೋರಾಟಕಾರರು ಆಕ್ರೋಶ ಹೊರಹಾಕಿದ್ದಾರೆ.

ಕರ ನಿರಾಕರಣೆ ಮುಖೇನ ನಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಪಡೆಯಲು ನಾಡಿನ ಜನತೆ ಮುಂದಾಗಬೇಕು, ಅಧಿಕಾರ ಹಣ ಲಾಲಸೆಗಳಿಗೆ ಕನ್ನಡದ ಅಸ್ಮಿತೆಯನ್ನು ಅಡಮಾನವಿಟ್ಟಿರುವ ನಾಡದ್ರೋಹಿಗಳ ವಿರುದ್ಧ ನಮ್ಮ ಹೋರಾಟ ನಿತ್ಯ ನಿರಂತರವಾಗಿರಬೇಕು. ನಾಡಿನ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವ ಹಾಗೂ ನಾಡಿನ ಸರ್ಕಾರದ ಉದ್ಯಮ, ನೆಲ, ಜಲಗಳನ್ನು ಮಾರಾಟಕ್ಕಿಟ್ಟಿರುವ, ನಮಗೆ ಬರಬೇಕಾದ ಪಾಲನ್ನು ಪಡೆಯಲಾಗದೆ ನಮ್ಮ ಭೂಮಿಯನ್ನು ಮಾರುತ್ತಿರುವ ರಣಹೇಡಿ ಸರ್ಕಾರದ ನಡೆಯನ್ನು ಕನ್ನಡ ಚಳವಳಿ ಕೇಂದ್ರ ಸಮಿತಿ ಹಾಗೂ ಕನ್ನಡ ರಣಧೀರರ ಪಡೆ ಜಂಟಿಯಾಗಿ ತೀವ್ರವಾಗಿ ಖಂಡಿಸುತ್ತದೆ ಎಂದು ಹೋರಾಟಗಾರರು ಹೇಳಿದರು.

ಇದೇ ಸಂದರ್ಭದಲ್ಲಿ ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷರಾದ ಶ್ರೀ ಗುರುದೇವ್ ನಾರಾಯಣ ಕುಮಾರ್ ಮಾತನಾಡಿ “ನಮ್ಮ ನಾಡಿನ ತೆರಿಗೆ ಪಡೆಯುವ ಭಾರತ ಒಕ್ಕೂಟ ಸರ್ಕಾರ ನಮಗೆ ನೀಡಬೇಕಾದ ನ್ಯಾಯಸಮ್ಮತ ಹಣ ನೀಡದೆ, ಕನ್ನಡಿಗರನ್ನು ಎರಡನೇ ದರ್ಜೆ ಪ್ರಜೆಗಳಂತೆ ಕಾಣುತ್ತಿರುವುದು ತೀರಾ ಖಂಡನೀಯ. ನಾಡಿನ ನೆಲ ಸಂಸ್ಕೃತಿಗೆ ಬೆಲೆ ನೀಡದೆ, ಹಿಂದಿ ಹೇರಿಕೆ ಮಾಡುತ್ತಿರುವ ನೀತಿಯನ್ನು ಖಂಡಿಸಿ, ಭಾರತ ಒಕ್ಕೂಟ ಸರ್ಕಾರ ತನ್ನ ಮಲತಾಯಿ ಧೋರಣೆ ಮುಂದುವರಿಸಿದಲ್ಲಿ ಮಗದೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಾರಣವಾಗಲಿದೆ” ಎಂದು ಎಚ್ಚರಿಕೆ ನೀಡಿದರು.


ಇದನ್ನೂ ಓದಿ: ದೋಷಪೂರಿತ ಜಿಎಸ್‌ಟಿ ದೇಶದ ಆರ್ಥಿಕತೆಯನ್ನು ನಾಶಮಾಡಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...