Homeಚಳವಳಿರಾಜ್ಯದ ಪಾಲಿನ ಹಣ ಕೊಡದಿದ್ದರೆ ನಾವು ತೆರಿಗೆ ಕಟ್ಟುವುದಿಲ್ಲ: ಕನ್ನಡಿಗರ ಆಕ್ರೋಶ

ರಾಜ್ಯದ ಪಾಲಿನ ಹಣ ಕೊಡದಿದ್ದರೆ ನಾವು ತೆರಿಗೆ ಕಟ್ಟುವುದಿಲ್ಲ: ಕನ್ನಡಿಗರ ಆಕ್ರೋಶ

ಕರ ನಿರಾಕರಣೆ ಎಂದರೆ ನಾವು ಜಿಎಸ್‌ಟಿ ಬಿಲ್ ಇರುವ ಯಾವುದೇ ವಸ್ತುಗಳನ್ನು ಕೊಳ್ಳುವುದಿಲ್ಲ. ನಾವು ರೈತರಿಂದ ನೇರವಾಗಿ ಕೊಳ್ಳುತ್ತೇವೆ. ನೇಕಾರರಿಂದ ನೇಯ್ದ ಬಟ್ಟೆಯನ್ನು ಕೊಂಡುಕೊಳ್ಳುತ್ತೇವೆ.. ಈ ರೀತಿಯಾಗಿ ಎಲ್ಲೆಡೆ ಜಾಗೃತಿ ಮೂಡಿಸುತ್ತೇವೆ.

- Advertisement -
- Advertisement -

ಕನ್ನಡ ನಾಡಿಗೆ ನ್ಯಾಯಸಮ್ಮತವಾಗಿ ಬರಬೇಕಾದ GST ಪರಿಹಾರ, ನೆರೆ ಪರಿಹಾರ, SDRF ಹಾಗೂ NSRF ನಿಧಿ ನೀಡದೇ ಮಲತಾಯಿ ಧೋರಣೆ ತಳೆದಿರುವ ಭಾರತ ಒಕ್ಕೂಟ ಸರ್ಕಾರದ ನಡೆ ಖಂಡಿನೀಯ. ರಾಜ್ಯದ ಪಾಲಿನ GST, ನೆರೆ ಪರಿಹಾರ ಕೊಡಿ, ಇಲ್ಲದಿದ್ದರೆ ನಾವು ತೆರಿಗೆ ಕಟ್ಟುವುದಿಲ್ಲ! ಎಂದು ಕನ್ನಡಿಗರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಇಂದು ಬೆಂಗಳೂರಿನ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಮುಂದೆ ಕನ್ನಡ ಚಳವಳಿ ಕೇಂದ್ರ ಸಮಿತಿ ಹಾಗೂ ಕನ್ನಡ ರಣಧೀರರ ಪರ ಸಹಭಾಗಿತ್ವದಲ್ಲಿ ‘ಕರ ನಿರಾಕರಣೆ ಚಳವಳಿ’ ಎಂಬ ವಿನೂತನ ವಿಭಿನ್ನ ಸತ್ಯಾಗ್ರಹ ಚಳವಳಿ ಹಮ್ಮಿಕೊಳ್ಳಲಾಗಿದೆ.

ಕರ ನಿರಾಕರಣೆ ಎಂದರೆ ನಾವು ಜಿಎಸ್‌ಟಿ ಬಿಲ್ ಇರುವ ಯಾವುದೇ ವಸ್ತುಗಳನ್ನು ಕೊಳ್ಳುವುದಿಲ್ಲ. ನಾವು ರೈತರಿಂದ ನೇರವಾಗಿ ಕೊಳ್ಳುತ್ತೇವೆ. ನೇಕಾರರಿಂದ ನೇಯ್ದ ಬಟ್ಟೆಯನ್ನು ಕೊಂಡುಕೊಳ್ಳುತ್ತೇವೆ.. ಈ ರೀತಿಯಾಗಿ ಎಲ್ಲೆಡೆ ಜಾಗೃತಿ ಮೂಡಿಸುತ್ತೇವೆ. ಕೊನೆಗೆ ತೆರಿಗೆ ಕಟ್ಟದೇ ಪ್ರತಿರೋಧ ಒಡ್ಡುತ್ತೇವೆ ಎಂದು ಕನ್ನಡ ರಣಧೀರರ ಪಡೆಯ ಚೇತನ್ ಗೌಡ ತಿಳಿಸಿದ್ದಾರೆ.

“ದಕ್ಷಿಣದ ರಾಜ್ಯಗಳ ಮೇಲಿನ ಹಿಂದಿ ಹೇರಿಕೆ ಹಾಗೂ ಭಾಷಾತಾರತಮ್ಯ ನೀತಿಯನ್ನು ಭಾರತದ ಒಕ್ಕೂಟ ಸರ್ಕಾರವು ನಿಲ್ಲಿಸಬೇಕು. ರಾಷ್ಟ್ರೀಯ ಶಿಕ್ಷಣ ನೀತಿ-2020ಯನ್ನು ಕೈಬಿಡಬೇಕು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಮತ್ತು ಪರಿಷ್ಕೃತ ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು. ಅನಿಯಂತ್ರಿತ ವಲಸೆ ನಿಯಂತ್ರಣ ಕಾಯ್ದೆ (ILP) ಜಾರಿಯಾಗಬೇಕು. ಜೊತೆಗೆ ಭೂಸುಧಾರಣಾ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಗಳನ್ನು ಕೈಬಿಡುವಂತೆ ಕನ್ನಡಿಗರು ಒತ್ತಾಯಿಸಿದ್ದಾರೆ.

“ಕರ್ನಾಟಕ ರಾಜ್ಯವು ಭಾರತದ ಒಕ್ಕೂಟ ಸರ್ಕಾರಕ್ಕೆ  2014-15ರಲ್ಲಿ 60,595 ಕೋಟಿ, 2015-16ರಲ್ಲಿ 72,040ಕೋಟಿ, 2016-17 ರಲ್ಲಿ 85,920 ಕೋಟಿ, 2017-18 ರಲ್ಲಿ 98,460 ಕೋಟಿ ಮತ್ತು 2018-19 ರಲ್ಲಿ 1,19,796 ಕೋಟಿ ರೂಗಳನ್ನು ತೆರಿಗೆಯಾಗಿ ನೀಡಿದೆ. ಆದರೆ ಇಷ್ಟೊಂದು ತೆರಿಗೆ ಕಟ್ಟಿದರು ಭಿಕ್ಷೆ ಬೇಡುವ ಪರಿಸ್ಥಿತಿ ಎದುರಾಗಿದೆ. ನಮ್ಮದೇ ಹಣವನ್ನು ನಮಗೆ ಕೊಡಲು ಹಿಂಜರಿಕೆಯೇಕೆ? ಕಳೆದ ವರ್ಷಗಳಲ್ಲಿ ಸರಾಸರಿ 100 ಪ್ರತಿಶತ ಹೆಚ್ಚಿನ ತೆರಿಗೆಯನ್ನು ನೀಡಿದ್ದೇವೆ. ಇದಕ್ಕೆ ನಮಗೆ ಸಿಕ್ಕ ಉಡುಗೊರೆಯೆಂದರೆ ನಮ್ಮ ಪಾಲಿನ 11,324 ಕೋಟಿ ರೂ ಜಿಎಸ್‌ಟಿ ಪರಿಹಾರ ಹಣ ಕೊಡದೇ ಆರ್‌ಬಿಐನಿಂದ ಸಾಲ ಪಡೆಯಿರಿ ಎಂದು ಹೇಳುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯ ಲೈವ್ ನೋಡಿ

ಬೆಂಗಳೂರು: ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಕನ್ನಡ ರಣಧೀರ ಪಡೆ ಮತ್ತು ಕನ್ನಡ ಚಳವಳಿ ಕೇಂದ್ರ ಸಮಿತಿ ವತಿಯಿಂದ "ಕರೆ ನಿರಾಕರಣೆ ಸತ್ಯಾಗ್ರಹ"

Posted by Naanu Gauri on Thursday, October 1, 2020

ಇಡೀ ಭಾರತ ಒಕ್ಕೂಟದಲ್ಲಿಯೇ 2ನೇ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ನಮ್ಮದು. ಆದರೆ ನಮ್ಮ ಪಾಲಿನ ಹಣ ಕೇಳಲು ರಾಜ್ಯ ಸರ್ಕಾರ ವಿಫಲವಾಗಿದೆ. ಮುಖ್ಯಮಂತ್ರಿಗಳು ತಾವೇ ಭ್ರಷ್ಟರಾಗಿದ್ದುಕೊಂಡು ಹೈಕಮಾಂಡ್ ಎದುರು ಜೀ ಹುಜೂರ್ ಎನ್ನುತ್ತಿದ್ದಾರೆ. ಇನ್ನು ಇಲ್ಲಿಂದ ಆಯ್ಕೆಯಾದ  ಸಂಸದರು ಯಾವುದಕ್ಕೂ ಪ್ರಯೋಜನವಿಲ್ಲವೆಂದು ಹೋರಾಟಕಾರರು ಆಕ್ರೋಶ ಹೊರಹಾಕಿದ್ದಾರೆ.

ಕರ ನಿರಾಕರಣೆ ಮುಖೇನ ನಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಪಡೆಯಲು ನಾಡಿನ ಜನತೆ ಮುಂದಾಗಬೇಕು, ಅಧಿಕಾರ ಹಣ ಲಾಲಸೆಗಳಿಗೆ ಕನ್ನಡದ ಅಸ್ಮಿತೆಯನ್ನು ಅಡಮಾನವಿಟ್ಟಿರುವ ನಾಡದ್ರೋಹಿಗಳ ವಿರುದ್ಧ ನಮ್ಮ ಹೋರಾಟ ನಿತ್ಯ ನಿರಂತರವಾಗಿರಬೇಕು. ನಾಡಿನ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವ ಹಾಗೂ ನಾಡಿನ ಸರ್ಕಾರದ ಉದ್ಯಮ, ನೆಲ, ಜಲಗಳನ್ನು ಮಾರಾಟಕ್ಕಿಟ್ಟಿರುವ, ನಮಗೆ ಬರಬೇಕಾದ ಪಾಲನ್ನು ಪಡೆಯಲಾಗದೆ ನಮ್ಮ ಭೂಮಿಯನ್ನು ಮಾರುತ್ತಿರುವ ರಣಹೇಡಿ ಸರ್ಕಾರದ ನಡೆಯನ್ನು ಕನ್ನಡ ಚಳವಳಿ ಕೇಂದ್ರ ಸಮಿತಿ ಹಾಗೂ ಕನ್ನಡ ರಣಧೀರರ ಪಡೆ ಜಂಟಿಯಾಗಿ ತೀವ್ರವಾಗಿ ಖಂಡಿಸುತ್ತದೆ ಎಂದು ಹೋರಾಟಗಾರರು ಹೇಳಿದರು.

ಇದೇ ಸಂದರ್ಭದಲ್ಲಿ ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷರಾದ ಶ್ರೀ ಗುರುದೇವ್ ನಾರಾಯಣ ಕುಮಾರ್ ಮಾತನಾಡಿ “ನಮ್ಮ ನಾಡಿನ ತೆರಿಗೆ ಪಡೆಯುವ ಭಾರತ ಒಕ್ಕೂಟ ಸರ್ಕಾರ ನಮಗೆ ನೀಡಬೇಕಾದ ನ್ಯಾಯಸಮ್ಮತ ಹಣ ನೀಡದೆ, ಕನ್ನಡಿಗರನ್ನು ಎರಡನೇ ದರ್ಜೆ ಪ್ರಜೆಗಳಂತೆ ಕಾಣುತ್ತಿರುವುದು ತೀರಾ ಖಂಡನೀಯ. ನಾಡಿನ ನೆಲ ಸಂಸ್ಕೃತಿಗೆ ಬೆಲೆ ನೀಡದೆ, ಹಿಂದಿ ಹೇರಿಕೆ ಮಾಡುತ್ತಿರುವ ನೀತಿಯನ್ನು ಖಂಡಿಸಿ, ಭಾರತ ಒಕ್ಕೂಟ ಸರ್ಕಾರ ತನ್ನ ಮಲತಾಯಿ ಧೋರಣೆ ಮುಂದುವರಿಸಿದಲ್ಲಿ ಮಗದೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಾರಣವಾಗಲಿದೆ” ಎಂದು ಎಚ್ಚರಿಕೆ ನೀಡಿದರು.


ಇದನ್ನೂ ಓದಿ: ದೋಷಪೂರಿತ ಜಿಎಸ್‌ಟಿ ದೇಶದ ಆರ್ಥಿಕತೆಯನ್ನು ನಾಶಮಾಡಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...