Homeಚಳವಳಿರಾಜ್ಯದ ಪಾಲಿನ ಹಣ ಕೊಡದಿದ್ದರೆ ನಾವು ತೆರಿಗೆ ಕಟ್ಟುವುದಿಲ್ಲ: ಕನ್ನಡಿಗರ ಆಕ್ರೋಶ

ರಾಜ್ಯದ ಪಾಲಿನ ಹಣ ಕೊಡದಿದ್ದರೆ ನಾವು ತೆರಿಗೆ ಕಟ್ಟುವುದಿಲ್ಲ: ಕನ್ನಡಿಗರ ಆಕ್ರೋಶ

ಕರ ನಿರಾಕರಣೆ ಎಂದರೆ ನಾವು ಜಿಎಸ್‌ಟಿ ಬಿಲ್ ಇರುವ ಯಾವುದೇ ವಸ್ತುಗಳನ್ನು ಕೊಳ್ಳುವುದಿಲ್ಲ. ನಾವು ರೈತರಿಂದ ನೇರವಾಗಿ ಕೊಳ್ಳುತ್ತೇವೆ. ನೇಕಾರರಿಂದ ನೇಯ್ದ ಬಟ್ಟೆಯನ್ನು ಕೊಂಡುಕೊಳ್ಳುತ್ತೇವೆ.. ಈ ರೀತಿಯಾಗಿ ಎಲ್ಲೆಡೆ ಜಾಗೃತಿ ಮೂಡಿಸುತ್ತೇವೆ.

- Advertisement -
- Advertisement -

ಕನ್ನಡ ನಾಡಿಗೆ ನ್ಯಾಯಸಮ್ಮತವಾಗಿ ಬರಬೇಕಾದ GST ಪರಿಹಾರ, ನೆರೆ ಪರಿಹಾರ, SDRF ಹಾಗೂ NSRF ನಿಧಿ ನೀಡದೇ ಮಲತಾಯಿ ಧೋರಣೆ ತಳೆದಿರುವ ಭಾರತ ಒಕ್ಕೂಟ ಸರ್ಕಾರದ ನಡೆ ಖಂಡಿನೀಯ. ರಾಜ್ಯದ ಪಾಲಿನ GST, ನೆರೆ ಪರಿಹಾರ ಕೊಡಿ, ಇಲ್ಲದಿದ್ದರೆ ನಾವು ತೆರಿಗೆ ಕಟ್ಟುವುದಿಲ್ಲ! ಎಂದು ಕನ್ನಡಿಗರು ಪ್ರತಿಭಟನೆಗೆ ಮುಂದಾಗಿದ್ದಾರೆ.

ಇಂದು ಬೆಂಗಳೂರಿನ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಮುಂದೆ ಕನ್ನಡ ಚಳವಳಿ ಕೇಂದ್ರ ಸಮಿತಿ ಹಾಗೂ ಕನ್ನಡ ರಣಧೀರರ ಪರ ಸಹಭಾಗಿತ್ವದಲ್ಲಿ ‘ಕರ ನಿರಾಕರಣೆ ಚಳವಳಿ’ ಎಂಬ ವಿನೂತನ ವಿಭಿನ್ನ ಸತ್ಯಾಗ್ರಹ ಚಳವಳಿ ಹಮ್ಮಿಕೊಳ್ಳಲಾಗಿದೆ.

ಕರ ನಿರಾಕರಣೆ ಎಂದರೆ ನಾವು ಜಿಎಸ್‌ಟಿ ಬಿಲ್ ಇರುವ ಯಾವುದೇ ವಸ್ತುಗಳನ್ನು ಕೊಳ್ಳುವುದಿಲ್ಲ. ನಾವು ರೈತರಿಂದ ನೇರವಾಗಿ ಕೊಳ್ಳುತ್ತೇವೆ. ನೇಕಾರರಿಂದ ನೇಯ್ದ ಬಟ್ಟೆಯನ್ನು ಕೊಂಡುಕೊಳ್ಳುತ್ತೇವೆ.. ಈ ರೀತಿಯಾಗಿ ಎಲ್ಲೆಡೆ ಜಾಗೃತಿ ಮೂಡಿಸುತ್ತೇವೆ. ಕೊನೆಗೆ ತೆರಿಗೆ ಕಟ್ಟದೇ ಪ್ರತಿರೋಧ ಒಡ್ಡುತ್ತೇವೆ ಎಂದು ಕನ್ನಡ ರಣಧೀರರ ಪಡೆಯ ಚೇತನ್ ಗೌಡ ತಿಳಿಸಿದ್ದಾರೆ.

“ದಕ್ಷಿಣದ ರಾಜ್ಯಗಳ ಮೇಲಿನ ಹಿಂದಿ ಹೇರಿಕೆ ಹಾಗೂ ಭಾಷಾತಾರತಮ್ಯ ನೀತಿಯನ್ನು ಭಾರತದ ಒಕ್ಕೂಟ ಸರ್ಕಾರವು ನಿಲ್ಲಿಸಬೇಕು. ರಾಷ್ಟ್ರೀಯ ಶಿಕ್ಷಣ ನೀತಿ-2020ಯನ್ನು ಕೈಬಿಡಬೇಕು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಮತ್ತು ಪರಿಷ್ಕೃತ ಸರೋಜಿನಿ ಮಹಿಷಿ ವರದಿ ಜಾರಿಗೆ ತರಬೇಕು. ಅನಿಯಂತ್ರಿತ ವಲಸೆ ನಿಯಂತ್ರಣ ಕಾಯ್ದೆ (ILP) ಜಾರಿಯಾಗಬೇಕು. ಜೊತೆಗೆ ಭೂಸುಧಾರಣಾ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಗಳನ್ನು ಕೈಬಿಡುವಂತೆ ಕನ್ನಡಿಗರು ಒತ್ತಾಯಿಸಿದ್ದಾರೆ.

“ಕರ್ನಾಟಕ ರಾಜ್ಯವು ಭಾರತದ ಒಕ್ಕೂಟ ಸರ್ಕಾರಕ್ಕೆ  2014-15ರಲ್ಲಿ 60,595 ಕೋಟಿ, 2015-16ರಲ್ಲಿ 72,040ಕೋಟಿ, 2016-17 ರಲ್ಲಿ 85,920 ಕೋಟಿ, 2017-18 ರಲ್ಲಿ 98,460 ಕೋಟಿ ಮತ್ತು 2018-19 ರಲ್ಲಿ 1,19,796 ಕೋಟಿ ರೂಗಳನ್ನು ತೆರಿಗೆಯಾಗಿ ನೀಡಿದೆ. ಆದರೆ ಇಷ್ಟೊಂದು ತೆರಿಗೆ ಕಟ್ಟಿದರು ಭಿಕ್ಷೆ ಬೇಡುವ ಪರಿಸ್ಥಿತಿ ಎದುರಾಗಿದೆ. ನಮ್ಮದೇ ಹಣವನ್ನು ನಮಗೆ ಕೊಡಲು ಹಿಂಜರಿಕೆಯೇಕೆ? ಕಳೆದ ವರ್ಷಗಳಲ್ಲಿ ಸರಾಸರಿ 100 ಪ್ರತಿಶತ ಹೆಚ್ಚಿನ ತೆರಿಗೆಯನ್ನು ನೀಡಿದ್ದೇವೆ. ಇದಕ್ಕೆ ನಮಗೆ ಸಿಕ್ಕ ಉಡುಗೊರೆಯೆಂದರೆ ನಮ್ಮ ಪಾಲಿನ 11,324 ಕೋಟಿ ರೂ ಜಿಎಸ್‌ಟಿ ಪರಿಹಾರ ಹಣ ಕೊಡದೇ ಆರ್‌ಬಿಐನಿಂದ ಸಾಲ ಪಡೆಯಿರಿ ಎಂದು ಹೇಳುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆಯ ಲೈವ್ ನೋಡಿ

ಬೆಂಗಳೂರು: ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಕನ್ನಡ ರಣಧೀರ ಪಡೆ ಮತ್ತು ಕನ್ನಡ ಚಳವಳಿ ಕೇಂದ್ರ ಸಮಿತಿ ವತಿಯಿಂದ "ಕರೆ ನಿರಾಕರಣೆ ಸತ್ಯಾಗ್ರಹ"

Posted by Naanu Gauri on Thursday, October 1, 2020

ಇಡೀ ಭಾರತ ಒಕ್ಕೂಟದಲ್ಲಿಯೇ 2ನೇ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ ನಮ್ಮದು. ಆದರೆ ನಮ್ಮ ಪಾಲಿನ ಹಣ ಕೇಳಲು ರಾಜ್ಯ ಸರ್ಕಾರ ವಿಫಲವಾಗಿದೆ. ಮುಖ್ಯಮಂತ್ರಿಗಳು ತಾವೇ ಭ್ರಷ್ಟರಾಗಿದ್ದುಕೊಂಡು ಹೈಕಮಾಂಡ್ ಎದುರು ಜೀ ಹುಜೂರ್ ಎನ್ನುತ್ತಿದ್ದಾರೆ. ಇನ್ನು ಇಲ್ಲಿಂದ ಆಯ್ಕೆಯಾದ  ಸಂಸದರು ಯಾವುದಕ್ಕೂ ಪ್ರಯೋಜನವಿಲ್ಲವೆಂದು ಹೋರಾಟಕಾರರು ಆಕ್ರೋಶ ಹೊರಹಾಕಿದ್ದಾರೆ.

ಕರ ನಿರಾಕರಣೆ ಮುಖೇನ ನಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಪಡೆಯಲು ನಾಡಿನ ಜನತೆ ಮುಂದಾಗಬೇಕು, ಅಧಿಕಾರ ಹಣ ಲಾಲಸೆಗಳಿಗೆ ಕನ್ನಡದ ಅಸ್ಮಿತೆಯನ್ನು ಅಡಮಾನವಿಟ್ಟಿರುವ ನಾಡದ್ರೋಹಿಗಳ ವಿರುದ್ಧ ನಮ್ಮ ಹೋರಾಟ ನಿತ್ಯ ನಿರಂತರವಾಗಿರಬೇಕು. ನಾಡಿನ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವ ಹಾಗೂ ನಾಡಿನ ಸರ್ಕಾರದ ಉದ್ಯಮ, ನೆಲ, ಜಲಗಳನ್ನು ಮಾರಾಟಕ್ಕಿಟ್ಟಿರುವ, ನಮಗೆ ಬರಬೇಕಾದ ಪಾಲನ್ನು ಪಡೆಯಲಾಗದೆ ನಮ್ಮ ಭೂಮಿಯನ್ನು ಮಾರುತ್ತಿರುವ ರಣಹೇಡಿ ಸರ್ಕಾರದ ನಡೆಯನ್ನು ಕನ್ನಡ ಚಳವಳಿ ಕೇಂದ್ರ ಸಮಿತಿ ಹಾಗೂ ಕನ್ನಡ ರಣಧೀರರ ಪಡೆ ಜಂಟಿಯಾಗಿ ತೀವ್ರವಾಗಿ ಖಂಡಿಸುತ್ತದೆ ಎಂದು ಹೋರಾಟಗಾರರು ಹೇಳಿದರು.

ಇದೇ ಸಂದರ್ಭದಲ್ಲಿ ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷರಾದ ಶ್ರೀ ಗುರುದೇವ್ ನಾರಾಯಣ ಕುಮಾರ್ ಮಾತನಾಡಿ “ನಮ್ಮ ನಾಡಿನ ತೆರಿಗೆ ಪಡೆಯುವ ಭಾರತ ಒಕ್ಕೂಟ ಸರ್ಕಾರ ನಮಗೆ ನೀಡಬೇಕಾದ ನ್ಯಾಯಸಮ್ಮತ ಹಣ ನೀಡದೆ, ಕನ್ನಡಿಗರನ್ನು ಎರಡನೇ ದರ್ಜೆ ಪ್ರಜೆಗಳಂತೆ ಕಾಣುತ್ತಿರುವುದು ತೀರಾ ಖಂಡನೀಯ. ನಾಡಿನ ನೆಲ ಸಂಸ್ಕೃತಿಗೆ ಬೆಲೆ ನೀಡದೆ, ಹಿಂದಿ ಹೇರಿಕೆ ಮಾಡುತ್ತಿರುವ ನೀತಿಯನ್ನು ಖಂಡಿಸಿ, ಭಾರತ ಒಕ್ಕೂಟ ಸರ್ಕಾರ ತನ್ನ ಮಲತಾಯಿ ಧೋರಣೆ ಮುಂದುವರಿಸಿದಲ್ಲಿ ಮಗದೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಾರಣವಾಗಲಿದೆ” ಎಂದು ಎಚ್ಚರಿಕೆ ನೀಡಿದರು.


ಇದನ್ನೂ ಓದಿ: ದೋಷಪೂರಿತ ಜಿಎಸ್‌ಟಿ ದೇಶದ ಆರ್ಥಿಕತೆಯನ್ನು ನಾಶಮಾಡಿದೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...