Homeಮುಖಪುಟನನಗೆ ಕಳುಹಿಸಿರುವ ಸಮನ್ಸ್‌ಗಳ ಸಂಖ್ಯೆಯಷ್ಟು ಹೊಸ ಶಾಲೆಗಳನ್ನು ತೆರೆಯುತ್ತೇವೆ: ಕೇಜ್ರಿವಾಲ್

ನನಗೆ ಕಳುಹಿಸಿರುವ ಸಮನ್ಸ್‌ಗಳ ಸಂಖ್ಯೆಯಷ್ಟು ಹೊಸ ಶಾಲೆಗಳನ್ನು ತೆರೆಯುತ್ತೇವೆ: ಕೇಜ್ರಿವಾಲ್

- Advertisement -
- Advertisement -

‘ಗುಣಮಟ್ಟದ ಶಿಕ್ಷಣ ನೀಡುವುದು ತಮ್ಮ ಸರ್ಕಾರದ ಗುರಿಯಾಗಿದೆ. ತನಿಖಾ ಸಂಸ್ಥೆಗಳು ನನಗೆ ಕಳುಹಿಸಿರುವ ಸಮನ್ಸ್‌ಗಳ ಸಂಖ್ಯೆಯಷ್ಟು ಶಾಲೆಗಳನ್ನು ನಗರದಲ್ಲಿ ತೆರೆಯಲಾಗುವುದು’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.

ಮಯೂರ್ ವಿಹಾರ್ ಹಂತ 3ರಲ್ಲಿ ಸರ್ಕಾರಿ ಶಾಲಾ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡಿದ ನಂತರ ಮಾತನಾಡಿದ ಕೇಜ್ರಿವಾಲ್, ‘ದೇಶದ ದೊಡ್ಡ ಭಯೋತ್ಪಾದಕ ಎಂಬಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತನ್ನ ಎಲ್ಲ ತನಿಖಾ ಸಂಸ್ಥೆಗಳನ್ನು ನನ್ನ ವಿರುದ್ಧ ಛೂಬಿಟ್ಟಿದೆ’ ಎಂದು ಆರೋಪಿಸಿದರು.

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 17 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ.

ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗಾಗಿ ಕೇಂದ್ರ ಏಜೆನ್ಸಿಯು ತನ್ನ ವಿರುದ್ಧ ಹೊರಡಿಸಿದ ಐದು ಸಮನ್ಸ್‌ಗಳನ್ನು ಕೇಜ್ರಿವಾಲ್ ನಿರ್ಲಕ್ಷಿಸಿದ್ದಾರೆ. ‘ಎಲ್ಲ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರಿಂದ ಒಂದು ಪೀಳಿಗೆಯೊಳಗೆ ಬಡತನ ನಿರ್ಮೂಲನೆಯಾಗುತ್ತದೆ. ಆ ಗುರಿಯನ್ನು ಸಾಧಿಸಲು ದೆಹಲಿಯಲ್ಲಿ ಹೆಚ್ಚು ಶಾಲೆಗಳನ್ನು ತೆರೆಯುತ್ತಿದ್ದೇವೆ’ ಎಂದು ಹೇಳಿದರು.

‘ರಾಷ್ಟ್ರ ರಾಜಧಾನಿಯ ಸರ್ಕಾರಿ ಶಾಲೆಗಳ ಸ್ಥಿತಿ, ಶಿಕ್ಷಣವು ಮೊದಲು ಹತಾಶವಾಗಿತ್ತು ಮತ್ತು ಬಡ ಜನರ ಮಕ್ಕಳಿಗೆ ಭವಿಷ್ಯವಿರಲಿಲ್ಲ. ದೆಹಲಿಯಲ್ಲಿ ಎಎಪಿ ಸರ್ಕಾರ ರಚನೆಯಾದ ನಂತರ ನಾವು ಹಲವಾರು ಭವ್ಯವಾದ ಶಾಲೆಗಳನ್ನು ತೆರೆದಿದ್ದೇವೆ. ಬುರಾರಿ, ರೋಹಿಣಿ ಮತ್ತು ಪಾಲಂ ಸೇರಿದಂತೆ ಹಲವಾರು ಹೊಸ ಶಾಲೆಗಳನ್ನು ಇತ್ತೀಚೆಗೆ ಉದ್ಘಾಟಿಸಲಾಗಿದೆ, ಇದರಲ್ಲಿ 1.5 ಲಕ್ಷ ಮಕ್ಕಳು ಶಿಕ್ಷಣ ಪಡೆಯುತ್ತಾರೆ’ ಎಂದು ಅವರು ಹೇಳಿದರು.

‘ದೆಹಲಿಯ ಪ್ರತಿ ಮಗುವು ಉಚಿತ ಮತ್ತು ಗುಣಮಟ್ಟದ ಶಿಕ್ಷಣವನ್ನು ಪಡೆಯುತ್ತಾರೆ, ಹಳೆಯ ಕಟ್ಟಡಗಳ ಬದಲಿಗೆ ಹೊಸ ಶಾಲಾ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಹೊಸ ಪ್ರಯೋಗಾಲಯಗಳು, ಗ್ರಂಥಾಲಯಗಳು, ಎಲಿವೇಟರ್‌ಗಳು ಮತ್ತು ಚಟುವಟಿಕೆ ಕೊಠಡಿಗಳು ಸೇರಿದಂತೆ ಅತ್ಯುತ್ತಮ ಮೂಲಸೌಕರ್ಯಗಳನ್ನು ಹೊಂದಿರುತ್ತವೆ’ ಎಂದರು.

‘ಎಲ್ಲಾ ಮಕ್ಕಳಿಗೆ ಶಿಕ್ಷಣವನ್ನು ಒದಗಿಸುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಕನಸನ್ನು ನಾವು ಈಡೇರಿಸುತ್ತಿದ್ದೇವೆ. ಎರಡು ವರ್ಷಗಳ ಹಿಂದೆ ಪಡಿತರವನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆಯನ್ನು ತಮ್ಮ ಸರ್ಕಾರ ಪ್ರಸ್ತಾಪಿಸಿದೆ. ಆದರೆ, ಕೇಂದ್ರವು ಅದಕ್ಕೆ ಅವಕಾಶ ನೀಡಲಿಲ್ಲ. ಅವರು ಲೆಫ್ಟಿನೆಂಟ್ ಜನರಲ್ ಮೂಲಕ ಅದನ್ನು ತಡೆದರು. ಆದರೆ ನಾವು ಶನಿವಾರದಿಂದ ಪಂಜಾಬ್‌ನಲ್ಲಿ ಪಡಿತರವನ್ನು ಮನೆ ಬಾಗಿಲಿಗೆ ತಲುಪಿಸಲಿದ್ದೇವೆ’ ಎಂದು ಘೋಷಿಸಿದರು.

‘ಪಂಜಾಬ್‌ನಲ್ಲಿ ಈ ಯೋಜನೆಯನ್ನು ಪ್ರಾರಂಭಿಸಿದ ನಂತರ, ಇದನ್ನು ದೆಹಲಿಯಲ್ಲೂ ಮಾಡಬಹುದು ಮತ್ತು ಅದನ್ನು ನಿಲ್ಲಿಸಲು ಕೇಂದ್ರಕ್ಕೆ ಸಾಧ್ಯವಾಗುವುದಿಲ್ಲ. ಎಎಪಿ ಸರ್ಕಾರದ ಕೆಲಸದಲ್ಲಿ ಕೇಂದ್ರವು ಹಲವು ಅಡೆತಡೆಗಳನ್ನು ಸೃಷ್ಟಿಸಿದೆ, ದೆಹಲಿ ಅರ್ಧ ಮಾತ್ರ ರಾಜ್ಯವಾಗಿದೆ’ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

‘ಅದು ಪೂರ್ಣ ರಾಜ್ಯವಾಗಲಿ ಎಂದು ನಾನು ಹೇಳಿದೆ. ಆದರೆ, ಅವರು ಏನನ್ನೂ ಮಾಡುವುದಿಲ್ಲ ಅಥವಾ ನನಗೆ ಮಾಡಲು ಬಿಡುವುದಿಲ್ಲ. ಕೇಸರಿ ಆಡಳಿತವಿರುವ ರಾಜ್ಯಗಳಲ್ಲಿ ಈ ಸೌಲಭ್ಯಗಳು ದುಬಾರಿ ಮತ್ತು ಕಳಪೆ ಗುಣಮಟ್ಟದ್ದಾಗಿರುವಾಗ ದೆಹಲಿಯಲ್ಲಿ ಜನರಿಗೆ ಉಚಿತ ವಿದ್ಯುತ್, ಆರೋಗ್ಯ ಮತ್ತು ಶಿಕ್ಷಣವನ್ನು ಒದಗಿಸಿದ್ದರೂ ಭಾರತೀಯ ಜನತಾ ಪಕ್ಷ (ಬಿಜೆಪಿ) ನಮ್ಮನ್ನು “ಕಳ್ಳ” ಎಂದು ಲೇಬಲ್ ಮಾಡಿದೆ’ ಎಂದು ಕೇಜ್ರಿವಾಲ್ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ; ಚರಣ್ ಸಿಂಗ್, ಪಿವಿ ನರಸಿಂಹರಾವ್, ಎಂ.ಎಸ್.ಸ್ವಾಮಿನಾಥನ್ ಅವರಿಗೆ ಭಾರತ ರತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...