Homeರಾಷ್ಟ್ರೀಯಧಾರ್ಮಿಕ ನಂಬಿಕೆಗಳಲ್ಲಿ ಹಸ್ತಕ್ಷೇಪವಿಲ್ಲ, ಆದರೆ ತಮಿಳರನ್ನು ವಿಭಜಿಸಲು ಧರ್ಮ ಬಳಸಿದರೆ ವಿರೋಧಿಸುತ್ತೇವೆ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ....

ಧಾರ್ಮಿಕ ನಂಬಿಕೆಗಳಲ್ಲಿ ಹಸ್ತಕ್ಷೇಪವಿಲ್ಲ, ಆದರೆ ತಮಿಳರನ್ನು ವಿಭಜಿಸಲು ಧರ್ಮ ಬಳಸಿದರೆ ವಿರೋಧಿಸುತ್ತೇವೆ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್

- Advertisement -
- Advertisement -

ಜನರ ಧಾರ್ಮಿಕ ನಂಬಿಕೆಗಳಲ್ಲಿ ತಮ್ಮ ಸರ್ಕಾರ ಎಂದಿಗೂ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌, “ಆದರೆ, ತಮಿಳರನ್ನು ವಿಭಜಿಸಲು ಧರ್ಮವನ್ನು ಒಂದು ಸಾಧನವಾಗಿ ಬಳಸುವುದನ್ನು ವಿರೋಧಿಸುತ್ತೇವೆ” ಎಂದು ಸೋಮವಾರ ಹೇಳಿದ್ದಾರೆ.

ಉತ್ತರ ಅಮೆರಿಕಾದ ತಮಿಳು ಸಂಗಮ್ಸ್ ಫೆಡರೇಶನ್ (FeTNA) ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ಟಾಲಿನ್ ಅವರು, ವಿಭಜಕ ಶಕ್ತಿಗಳು ಹೆಚ್ಚುತ್ತಿದ್ದು, ತಮಿಳರನ್ನು ಜಾತಿ ಮತ್ತು ಧರ್ಮದ ಆಧಾರದ ಮೇಲೆ ವಿಭಜಿಸಲು ಪ್ರಯತ್ನಿಸುತ್ತಿರುವಾಗ, ಅಂತಹ ಶಕ್ತಿಗಳ ವಿರುದ್ಧ ತಮಿಳರನ್ನು ಒಗ್ಗೂಡಿಸುವ ಶಕ್ತಿ ತಮಿಳು ಭಾಷೆಗೆ ಇದೆ ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಧರ್ಮದ ಸೋಗುಗಳನ್ನು ಸೋಲಿಸುವ ಶಕ್ತಿ ಭಾಷೆಗೆ ಮಾತ್ರ ಇದೆ. ನಾನು ಇಲ್ಲಿ ಧರ್ಮದ ಬಗ್ಗೆ ಹೇಳುತ್ತಿರುವುದರಿಂದ ಯಾರ ಧಾರ್ಮಿಕ ನಂಬಿಕೆಯನ್ನೂ ಉಲ್ಲೇಖಿಸುವುದಿಲ್ಲ. ಧಾರ್ಮಿಕ ನಂಬಿಕೆಯು ಪ್ರತಿಯೊಬ್ಬ ವ್ಯಕ್ತಿಯ ನಂಬಿಕೆ, ಆಯ್ಕೆ ಮತ್ತು ಹಕ್ಕು. ಅದರಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಅದೇ ಸಮಯದಲ್ಲಿ, ತಮಿಳರನ್ನು ವಿಭಜಿಸುವ ಸಾಧನವಾಗಿ ಧರ್ಮವನ್ನು ಬಳಸಿದಾಗ ನಾವು ಅದನ್ನು ವಿರೋಧಿಸುತ್ತೇವೆ” ಎಂದು ಸ್ಟಾಲಿನ್‌ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡಿಗೆ ಅನ್ಯಾಯ; ಮೋದಿ ಇದ್ದ ವೇದಿಕೆಯಲ್ಲೇ ಸ್ಟಾಲಿನ್‌ ಹೇಳಿಕೆ; ಅಣ್ಣಾಮಲೈಗೆ ಬೇಸರ

ಆದರೆ, ಈ ಹೇಳಿಕೆ ಜಾತಿಗೆ ಅನ್ವಯಿಸುವುದಿಲ್ಲ ಎಂದು ಹೇಳಿದ ಅವರು, “ಜಾತಿಯು ತಮಿಳು ಸಮುದಾಯವನ್ನು ವಿಭಜಿಸುವ ಪ್ರಾಥಮಿಕ ಅಂಶವಾಗಿದೆ” ಎಂದು ಪ್ರತಿಪಾದಿಸಿದ್ದಾರೆ.

‘ಎಲ್ಲರಿಗೂ ಎಲ್ಲವೂ’ ಎಂಬ ಪರಿಕಲ್ಪನೆಯನ್ನು ಒಪ್ಪಿಕೊಳ್ಳದವರು ಮಾತ್ರ ದ್ರಾವಿಡ ಚಳವಳಿಯನ್ನು ವಿರೋಧಿಸುತ್ತಿದ್ದಾರೆ ಎಂದು ಪ್ರತಿಪಾದಿಸಿದ ಸ್ಟಾಲಿನ್, “ಅವರು ‘ದ್ರಾವಿಡಂ’ ಪದದ ಜೊತೆಜೊತೆಗೆ ಈ ಸರಕಾರವನ್ನೂ ವಿರೋಧಿಸಿದವರು” ಎಂದು ಹೇಳಿದ್ದಾರೆ.

“ಒಂದು ಕಾಲದಲ್ಲಿ ಸಮುದಾಯ ಮತ್ತು ಪ್ರಾದೇಶಿಕ ಅಭಿವ್ಯಕ್ತಿ ಮತ್ತು ಭಾಷೆಯನ್ನು ಉಲ್ಲೇಖಿಸಿದ ‘ದ್ರಾವಿಡ’ ಎಂಬ ಪದವು ನಂತರದ ಕಾಲದಲ್ಲಿ ರಾಜಕೀಯ ತತ್ತ್ವಶಾಸ್ತ್ರವಾಗಿ ಉಲ್ಲೇಖವಾಗುತ್ತಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಸರ್ಕಾರಿ ಬಸ್‌ ಹತ್ತಿ ಜನರ ಸಮಸ್ಯೆ ಆಲಿಸಿದ ತಮಿಳುನಾಡು ಸಿಎಂ ಸ್ಟಾಲಿನ್!

“ಈ ತತ್ವವೂ ‘ಎಲ್ಲರಿಗೂ ಎಲ್ಲವೂ’ ಎಂದು ಪ್ರತಿಪಾದಿಸುವ ರಾಜಕೀಯ ತತ್ತ್ವಶಾಸ್ತ್ರವನ್ನು ಉಲ್ಲೇಖಿಸುತ್ತದೆ. ಇದನ್ನು ವಿರೋಧಿಸುವವರು ‘ಎಲ್ಲರಿಗೂ ಎಲ್ಲವೂ’ ಮತ್ತು ದ್ರಾವಿಡ ಚಳವಳಿಯನ್ನು ವಿರೋಧಿಸುವವರು” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...