Homeಮುಖಪುಟಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ: ಡಿ.ಕೆ ಶಿವಕುಮಾರ್

ಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ: ಡಿ.ಕೆ ಶಿವಕುಮಾರ್

- Advertisement -
- Advertisement -

ಪೇ ಸಿಎಂ ಅಭಿಯಾನದ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಮುಜುಗರ ತಂದಿಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತರ ಬಂಧನವನ್ನು ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರವರು, ನಮ್ಮ ಶಾಸಕರೆಲ್ಲರೂ ಸೇರಿ ಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ.

ಮುಖ್ಯಮಂತ್ರಿಗಳು ಪೋಸ್ಟರ್ ವಿಚಾರಕ್ಕೆ ಇಷ್ಟು ತಲೆ ಕೆಡಿಸಿಕೊಂಡು ಗಾಬರಿಯಾಗಿರುವುದು ಏಕೆ? ಈ ಪೋಸ್ಟರ್ ಅಂಟಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವುದು ಏಕೆ? ಬಿಜೆಪಿ ಅವರು ನಮ್ಮ ಬಗ್ಗೆಯೂ ಕ್ಯೂಆರ್ ಕೋಡ್ ಹಾಕಿದ್ದಾರೆ. ನಾನು ವಿಚಾರಣೆಗೆ ಹೋದ ಸಮಯದಲ್ಲಿ ನಾನು ಕಂಬಿ ಹಿಂದೆ ಇರುವಂತೆ ಮಾಧ್ಯಮಗಳು ಫೋಟೋ ಹಾಕಿದ್ದರು. ಹಾಗೆಂದು ನಾನು ಅವರ ವಿರುದ್ಧ ದೂರು ನೀಡಲು ಸಾಧ್ಯವೇ? ಎಂದು ಅವರು ಪ್ರಶ್ನಿಸಿದ್ದಾರೆ.

ರಾಜಕೀಯದಲ್ಲಿ ಇರುವವರನ್ನು ಜನ ಪ್ರಶ್ನಿಸುವುದು, ಟೀಕಿಸುವುದು ಸಹಜ. ಅಧಿಕಾರದಲ್ಲಿ ಇರುವವರು ಇದನ್ನು ಜೀರ್ಣಿಸಿಕೊಳ್ಳಬೇಕು. ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾಧ್ಯಮಗಳು ವರದಿ ಮಾಡಿವೆ. ಗುತ್ತಿಗೆದಾರರು ಆರೋಪ ಮಾಡಿದ್ದಾರೆ. ನಮ್ಮ ಅಭಿಯಾನದಲ್ಲಿ 8 ಸಾವಿರಕ್ಕೂ ಹೆಚ್ಚು ಮಂದಿ, ನಾವು ಭ್ರಷ್ಟಾಚಾರಕ್ಕೆ ಬಲಿಯಾಗಿದ್ದೇವೆ ಎಂದು ತಿಳಿಸಿದ್ದಾರೆ. ಹೀಗಾಗಿ ಪಕ್ಷದ ವತಿಯಿಂದ ನಾವೇ ಟೋಲ್ ಸಂಖ್ಯೆ ನೀಡಿ ನೋಂದಣಿ ಮಾಡಿಕೊಳ್ಳಲು ಹೇಳಿದ್ದೆವು ಎಂದು ತಿಳಿಸಿದ್ದಾರೆ.

ನಮ್ಮ ವಿರುದ್ಧ ಟ್ವೀಟ್ ಮಾಡಿದವರನ್ನೂ ಬಂಧಿಸಿ: ಸಿದ್ದರಾಮಯ್ಯ ಆಗ್ರಹ

“ನ್ಯಾಯ ಎಲ್ಲರಿಗೂ ಒಂದೇ ಇರಬೇಕು. ಅವರ ಬಗ್ಗೆ ಪೋಸ್ಟರ್ ಅಂಟಿಸಿದ್ದಾರೆ ಅನ್ನೋ ಕಾರಣಕ್ಕೆ ನಮ್ಮವರ ಬಂಧನವಾದರೆ, ನಮ್ಮವಿರುದ್ಧ ಟ್ವಿಟ್ ಮಾಡಿರುವವರನ್ನೂ ಅರೆಸ್ಟ್ ಮಾಡಿಸಿ’ ಎಂದು ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯನವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಕಾಂಗ್ರೆಸ್ ಪಕ್ಷದಿಂದ 40% ಕಮಿಷನ್ ಆಂದೋಲನ ನಡೆಯುತ್ತಿದೆ. ನಾನು, ಡಿಕೆಶಿ, ಹರಿಪ್ರಸಾದ್ ಎಲ್ಲರೂ ಆಂದೋಲನ ಮಾಡಿದ್ದೇವೆ. ಅದರ ಅಂಗವಾಗಿ ನಿನ್ನೆ ನಮ್ಮ ಕಾರ್ಯಕರ್ತರು ಪೋಸ್ಟರ್ ಅಂಟಿಸಿದ್ದಾರೆ. ಇವೆಲ್ಲಾ ತಪ್ಪು ಕೆಲಸವೇ? ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡೋದು ತಪ್ಪಾ? ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತೋದು ತಪ್ಪಾ?’ ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿಯವರು ಸುಳ್ಳು ಆರೋಪ ಮಾಡಿದ್ದಾರೆ. ನಮ್ಮ ಬಗ್ಗೆಯೂ ‘ಯಾರಿಗೂ ಬೇಡವಾದವರು’ ಅಂತ ಪೋಸ್ಟ‌ ಅಂಟಿಸಿದ್ದಾರೆ ಅಲ್ವಾ, ಹೀಗಿದ್ದ ಮೇಲೆ ಅವರನ್ನು ಯಾಕೆ ಅರೆಸ್ಟ್ ಮಾಡಿಲ್ಲ?” ಎಂದು ಸಿದ್ದರಾಮಯ್ಯ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.

“ನಮ್ಮ ಸಾಮಾಜಿಕ ಜಾಲತಾಣ ವಿಭಾಗದ ಮಾಜಿ ಅಧ್ಯಕ್ಷ ನಾಯ್ಡು ಅವರನ್ನು ರಾತ್ರಿ ಬಂಧನ ಮಾಡಿದ್ದಾರೆ. ಅರ್ಧ ರಾತ್ರಿ ಕಾರ್ಯಾಚರಣೆ ಮಾಡಲು ಅವರೇನು ಕೊಲೆ ಅಥವಾ ಕಳ್ಳತನ ಮಾಡಿದ್ರಾ? ಇವರ ಮೇಲೆ ಕ್ರಮ ತೆಗೆದುಕೊಳ್ಳುವ ಸರ್ಕಾರದವರು ತೆಲಂಗಾಣದಲ್ಲಿ ಪೋಸ್ಟರ್ ಅಂಟಿಸಿದ್ದವರ ವಿರುದ್ಧ ಏನು ಶಿಸ್ತುಕ್ರಮ ಜರುಗಿಸಿದ್ದಾರೆಂದು ಹೇಳಲಿ” ಎಂದು ವಿಪಕ್ಷ ನಾಯಕರು ಕಿಡಿ ಕಾರಿದರು.

‘ಭ್ರಷ್ಟಾಚಾರದ ವಿಚಾರದಲ್ಲಿ ಇಷ್ಟೊಂದು ಸೀರಿಯಸ್ ಆಗಿ ಮಾತನಾಡುವ ಇವರು, ಕೆಂಪಣ್ಣ ಪತ್ರ ಬರೆದು ಇಷ್ಟು ದಿನವಾದರೂ ಯಾಕೆ ತನಿಖೆ ಮಾಡಿಸಲಿಲ್ಲ? ಯಡಿಯೂರಪ್ಪನವರ ಆಪ್ತನ ಮೆಲೆ ದಾಳಿಯಾದಾಗ ದಾಖಲೆ ಸಿಕ್ಕಿತ್ತು, ಆವಾಗ ತನಿಖೆ ಮಾಡಿಸಬೇಕಿತ್ತಲ್ವಾ? ಇದು ಯಾವುದೂ ಜನರಿಗೆ ತಲುಪದಂತೆ ಸದ್ದಿಲ್ಲದೆ ಮುಚ್ಚಿ ಹಾಕುವ ಕೆಲಸ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಪೇ ಸಿಎಂ ಪೋಸ್ಟರ್ ಅಂಟಿಸಿದ ಆರೋಪದ ಮೇಲೆ ಪೊಲೀಸರು ಮಧ್ಯರಾತ್ರಿ ಕಾಂಗ್ರೆಸ್ ಕಾರ್ಯಕರ್ತರಾದ ಗಗನ್ ಯಾದವ್ ಮತ್ತು ಬಿ.ಆರ್ ನಾಯ್ಡು ಎಂಬುವವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....