Homeಮುಖಪುಟಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ: ಡಿ.ಕೆ ಶಿವಕುಮಾರ್

ಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ: ಡಿ.ಕೆ ಶಿವಕುಮಾರ್

- Advertisement -
- Advertisement -

ಪೇ ಸಿಎಂ ಅಭಿಯಾನದ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಮುಜುಗರ ತಂದಿಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತರ ಬಂಧನವನ್ನು ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರವರು, ನಮ್ಮ ಶಾಸಕರೆಲ್ಲರೂ ಸೇರಿ ಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ.

ಮುಖ್ಯಮಂತ್ರಿಗಳು ಪೋಸ್ಟರ್ ವಿಚಾರಕ್ಕೆ ಇಷ್ಟು ತಲೆ ಕೆಡಿಸಿಕೊಂಡು ಗಾಬರಿಯಾಗಿರುವುದು ಏಕೆ? ಈ ಪೋಸ್ಟರ್ ಅಂಟಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವುದು ಏಕೆ? ಬಿಜೆಪಿ ಅವರು ನಮ್ಮ ಬಗ್ಗೆಯೂ ಕ್ಯೂಆರ್ ಕೋಡ್ ಹಾಕಿದ್ದಾರೆ. ನಾನು ವಿಚಾರಣೆಗೆ ಹೋದ ಸಮಯದಲ್ಲಿ ನಾನು ಕಂಬಿ ಹಿಂದೆ ಇರುವಂತೆ ಮಾಧ್ಯಮಗಳು ಫೋಟೋ ಹಾಕಿದ್ದರು. ಹಾಗೆಂದು ನಾನು ಅವರ ವಿರುದ್ಧ ದೂರು ನೀಡಲು ಸಾಧ್ಯವೇ? ಎಂದು ಅವರು ಪ್ರಶ್ನಿಸಿದ್ದಾರೆ.

ರಾಜಕೀಯದಲ್ಲಿ ಇರುವವರನ್ನು ಜನ ಪ್ರಶ್ನಿಸುವುದು, ಟೀಕಿಸುವುದು ಸಹಜ. ಅಧಿಕಾರದಲ್ಲಿ ಇರುವವರು ಇದನ್ನು ಜೀರ್ಣಿಸಿಕೊಳ್ಳಬೇಕು. ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾಧ್ಯಮಗಳು ವರದಿ ಮಾಡಿವೆ. ಗುತ್ತಿಗೆದಾರರು ಆರೋಪ ಮಾಡಿದ್ದಾರೆ. ನಮ್ಮ ಅಭಿಯಾನದಲ್ಲಿ 8 ಸಾವಿರಕ್ಕೂ ಹೆಚ್ಚು ಮಂದಿ, ನಾವು ಭ್ರಷ್ಟಾಚಾರಕ್ಕೆ ಬಲಿಯಾಗಿದ್ದೇವೆ ಎಂದು ತಿಳಿಸಿದ್ದಾರೆ. ಹೀಗಾಗಿ ಪಕ್ಷದ ವತಿಯಿಂದ ನಾವೇ ಟೋಲ್ ಸಂಖ್ಯೆ ನೀಡಿ ನೋಂದಣಿ ಮಾಡಿಕೊಳ್ಳಲು ಹೇಳಿದ್ದೆವು ಎಂದು ತಿಳಿಸಿದ್ದಾರೆ.

ನಮ್ಮ ವಿರುದ್ಧ ಟ್ವೀಟ್ ಮಾಡಿದವರನ್ನೂ ಬಂಧಿಸಿ: ಸಿದ್ದರಾಮಯ್ಯ ಆಗ್ರಹ

“ನ್ಯಾಯ ಎಲ್ಲರಿಗೂ ಒಂದೇ ಇರಬೇಕು. ಅವರ ಬಗ್ಗೆ ಪೋಸ್ಟರ್ ಅಂಟಿಸಿದ್ದಾರೆ ಅನ್ನೋ ಕಾರಣಕ್ಕೆ ನಮ್ಮವರ ಬಂಧನವಾದರೆ, ನಮ್ಮವಿರುದ್ಧ ಟ್ವಿಟ್ ಮಾಡಿರುವವರನ್ನೂ ಅರೆಸ್ಟ್ ಮಾಡಿಸಿ’ ಎಂದು ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯನವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಕಾಂಗ್ರೆಸ್ ಪಕ್ಷದಿಂದ 40% ಕಮಿಷನ್ ಆಂದೋಲನ ನಡೆಯುತ್ತಿದೆ. ನಾನು, ಡಿಕೆಶಿ, ಹರಿಪ್ರಸಾದ್ ಎಲ್ಲರೂ ಆಂದೋಲನ ಮಾಡಿದ್ದೇವೆ. ಅದರ ಅಂಗವಾಗಿ ನಿನ್ನೆ ನಮ್ಮ ಕಾರ್ಯಕರ್ತರು ಪೋಸ್ಟರ್ ಅಂಟಿಸಿದ್ದಾರೆ. ಇವೆಲ್ಲಾ ತಪ್ಪು ಕೆಲಸವೇ? ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡೋದು ತಪ್ಪಾ? ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತೋದು ತಪ್ಪಾ?’ ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿಯವರು ಸುಳ್ಳು ಆರೋಪ ಮಾಡಿದ್ದಾರೆ. ನಮ್ಮ ಬಗ್ಗೆಯೂ ‘ಯಾರಿಗೂ ಬೇಡವಾದವರು’ ಅಂತ ಪೋಸ್ಟ‌ ಅಂಟಿಸಿದ್ದಾರೆ ಅಲ್ವಾ, ಹೀಗಿದ್ದ ಮೇಲೆ ಅವರನ್ನು ಯಾಕೆ ಅರೆಸ್ಟ್ ಮಾಡಿಲ್ಲ?” ಎಂದು ಸಿದ್ದರಾಮಯ್ಯ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.

“ನಮ್ಮ ಸಾಮಾಜಿಕ ಜಾಲತಾಣ ವಿಭಾಗದ ಮಾಜಿ ಅಧ್ಯಕ್ಷ ನಾಯ್ಡು ಅವರನ್ನು ರಾತ್ರಿ ಬಂಧನ ಮಾಡಿದ್ದಾರೆ. ಅರ್ಧ ರಾತ್ರಿ ಕಾರ್ಯಾಚರಣೆ ಮಾಡಲು ಅವರೇನು ಕೊಲೆ ಅಥವಾ ಕಳ್ಳತನ ಮಾಡಿದ್ರಾ? ಇವರ ಮೇಲೆ ಕ್ರಮ ತೆಗೆದುಕೊಳ್ಳುವ ಸರ್ಕಾರದವರು ತೆಲಂಗಾಣದಲ್ಲಿ ಪೋಸ್ಟರ್ ಅಂಟಿಸಿದ್ದವರ ವಿರುದ್ಧ ಏನು ಶಿಸ್ತುಕ್ರಮ ಜರುಗಿಸಿದ್ದಾರೆಂದು ಹೇಳಲಿ” ಎಂದು ವಿಪಕ್ಷ ನಾಯಕರು ಕಿಡಿ ಕಾರಿದರು.

‘ಭ್ರಷ್ಟಾಚಾರದ ವಿಚಾರದಲ್ಲಿ ಇಷ್ಟೊಂದು ಸೀರಿಯಸ್ ಆಗಿ ಮಾತನಾಡುವ ಇವರು, ಕೆಂಪಣ್ಣ ಪತ್ರ ಬರೆದು ಇಷ್ಟು ದಿನವಾದರೂ ಯಾಕೆ ತನಿಖೆ ಮಾಡಿಸಲಿಲ್ಲ? ಯಡಿಯೂರಪ್ಪನವರ ಆಪ್ತನ ಮೆಲೆ ದಾಳಿಯಾದಾಗ ದಾಖಲೆ ಸಿಕ್ಕಿತ್ತು, ಆವಾಗ ತನಿಖೆ ಮಾಡಿಸಬೇಕಿತ್ತಲ್ವಾ? ಇದು ಯಾವುದೂ ಜನರಿಗೆ ತಲುಪದಂತೆ ಸದ್ದಿಲ್ಲದೆ ಮುಚ್ಚಿ ಹಾಕುವ ಕೆಲಸ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಪೇ ಸಿಎಂ ಪೋಸ್ಟರ್ ಅಂಟಿಸಿದ ಆರೋಪದ ಮೇಲೆ ಪೊಲೀಸರು ಮಧ್ಯರಾತ್ರಿ ಕಾಂಗ್ರೆಸ್ ಕಾರ್ಯಕರ್ತರಾದ ಗಗನ್ ಯಾದವ್ ಮತ್ತು ಬಿ.ಆರ್ ನಾಯ್ಡು ಎಂಬುವವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...