Homeಮುಖಪುಟಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ: ಡಿ.ಕೆ ಶಿವಕುಮಾರ್

ಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ: ಡಿ.ಕೆ ಶಿವಕುಮಾರ್

- Advertisement -
- Advertisement -

ಪೇ ಸಿಎಂ ಅಭಿಯಾನದ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಮುಜುಗರ ತಂದಿಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತರ ಬಂಧನವನ್ನು ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರವರು, ನಮ್ಮ ಶಾಸಕರೆಲ್ಲರೂ ಸೇರಿ ಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ.

ಮುಖ್ಯಮಂತ್ರಿಗಳು ಪೋಸ್ಟರ್ ವಿಚಾರಕ್ಕೆ ಇಷ್ಟು ತಲೆ ಕೆಡಿಸಿಕೊಂಡು ಗಾಬರಿಯಾಗಿರುವುದು ಏಕೆ? ಈ ಪೋಸ್ಟರ್ ಅಂಟಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವುದು ಏಕೆ? ಬಿಜೆಪಿ ಅವರು ನಮ್ಮ ಬಗ್ಗೆಯೂ ಕ್ಯೂಆರ್ ಕೋಡ್ ಹಾಕಿದ್ದಾರೆ. ನಾನು ವಿಚಾರಣೆಗೆ ಹೋದ ಸಮಯದಲ್ಲಿ ನಾನು ಕಂಬಿ ಹಿಂದೆ ಇರುವಂತೆ ಮಾಧ್ಯಮಗಳು ಫೋಟೋ ಹಾಕಿದ್ದರು. ಹಾಗೆಂದು ನಾನು ಅವರ ವಿರುದ್ಧ ದೂರು ನೀಡಲು ಸಾಧ್ಯವೇ? ಎಂದು ಅವರು ಪ್ರಶ್ನಿಸಿದ್ದಾರೆ.

ರಾಜಕೀಯದಲ್ಲಿ ಇರುವವರನ್ನು ಜನ ಪ್ರಶ್ನಿಸುವುದು, ಟೀಕಿಸುವುದು ಸಹಜ. ಅಧಿಕಾರದಲ್ಲಿ ಇರುವವರು ಇದನ್ನು ಜೀರ್ಣಿಸಿಕೊಳ್ಳಬೇಕು. ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾಧ್ಯಮಗಳು ವರದಿ ಮಾಡಿವೆ. ಗುತ್ತಿಗೆದಾರರು ಆರೋಪ ಮಾಡಿದ್ದಾರೆ. ನಮ್ಮ ಅಭಿಯಾನದಲ್ಲಿ 8 ಸಾವಿರಕ್ಕೂ ಹೆಚ್ಚು ಮಂದಿ, ನಾವು ಭ್ರಷ್ಟಾಚಾರಕ್ಕೆ ಬಲಿಯಾಗಿದ್ದೇವೆ ಎಂದು ತಿಳಿಸಿದ್ದಾರೆ. ಹೀಗಾಗಿ ಪಕ್ಷದ ವತಿಯಿಂದ ನಾವೇ ಟೋಲ್ ಸಂಖ್ಯೆ ನೀಡಿ ನೋಂದಣಿ ಮಾಡಿಕೊಳ್ಳಲು ಹೇಳಿದ್ದೆವು ಎಂದು ತಿಳಿಸಿದ್ದಾರೆ.

ನಮ್ಮ ವಿರುದ್ಧ ಟ್ವೀಟ್ ಮಾಡಿದವರನ್ನೂ ಬಂಧಿಸಿ: ಸಿದ್ದರಾಮಯ್ಯ ಆಗ್ರಹ

“ನ್ಯಾಯ ಎಲ್ಲರಿಗೂ ಒಂದೇ ಇರಬೇಕು. ಅವರ ಬಗ್ಗೆ ಪೋಸ್ಟರ್ ಅಂಟಿಸಿದ್ದಾರೆ ಅನ್ನೋ ಕಾರಣಕ್ಕೆ ನಮ್ಮವರ ಬಂಧನವಾದರೆ, ನಮ್ಮವಿರುದ್ಧ ಟ್ವಿಟ್ ಮಾಡಿರುವವರನ್ನೂ ಅರೆಸ್ಟ್ ಮಾಡಿಸಿ’ ಎಂದು ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯನವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಕಾಂಗ್ರೆಸ್ ಪಕ್ಷದಿಂದ 40% ಕಮಿಷನ್ ಆಂದೋಲನ ನಡೆಯುತ್ತಿದೆ. ನಾನು, ಡಿಕೆಶಿ, ಹರಿಪ್ರಸಾದ್ ಎಲ್ಲರೂ ಆಂದೋಲನ ಮಾಡಿದ್ದೇವೆ. ಅದರ ಅಂಗವಾಗಿ ನಿನ್ನೆ ನಮ್ಮ ಕಾರ್ಯಕರ್ತರು ಪೋಸ್ಟರ್ ಅಂಟಿಸಿದ್ದಾರೆ. ಇವೆಲ್ಲಾ ತಪ್ಪು ಕೆಲಸವೇ? ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡೋದು ತಪ್ಪಾ? ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತೋದು ತಪ್ಪಾ?’ ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿಯವರು ಸುಳ್ಳು ಆರೋಪ ಮಾಡಿದ್ದಾರೆ. ನಮ್ಮ ಬಗ್ಗೆಯೂ ‘ಯಾರಿಗೂ ಬೇಡವಾದವರು’ ಅಂತ ಪೋಸ್ಟ‌ ಅಂಟಿಸಿದ್ದಾರೆ ಅಲ್ವಾ, ಹೀಗಿದ್ದ ಮೇಲೆ ಅವರನ್ನು ಯಾಕೆ ಅರೆಸ್ಟ್ ಮಾಡಿಲ್ಲ?” ಎಂದು ಸಿದ್ದರಾಮಯ್ಯ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.

“ನಮ್ಮ ಸಾಮಾಜಿಕ ಜಾಲತಾಣ ವಿಭಾಗದ ಮಾಜಿ ಅಧ್ಯಕ್ಷ ನಾಯ್ಡು ಅವರನ್ನು ರಾತ್ರಿ ಬಂಧನ ಮಾಡಿದ್ದಾರೆ. ಅರ್ಧ ರಾತ್ರಿ ಕಾರ್ಯಾಚರಣೆ ಮಾಡಲು ಅವರೇನು ಕೊಲೆ ಅಥವಾ ಕಳ್ಳತನ ಮಾಡಿದ್ರಾ? ಇವರ ಮೇಲೆ ಕ್ರಮ ತೆಗೆದುಕೊಳ್ಳುವ ಸರ್ಕಾರದವರು ತೆಲಂಗಾಣದಲ್ಲಿ ಪೋಸ್ಟರ್ ಅಂಟಿಸಿದ್ದವರ ವಿರುದ್ಧ ಏನು ಶಿಸ್ತುಕ್ರಮ ಜರುಗಿಸಿದ್ದಾರೆಂದು ಹೇಳಲಿ” ಎಂದು ವಿಪಕ್ಷ ನಾಯಕರು ಕಿಡಿ ಕಾರಿದರು.

‘ಭ್ರಷ್ಟಾಚಾರದ ವಿಚಾರದಲ್ಲಿ ಇಷ್ಟೊಂದು ಸೀರಿಯಸ್ ಆಗಿ ಮಾತನಾಡುವ ಇವರು, ಕೆಂಪಣ್ಣ ಪತ್ರ ಬರೆದು ಇಷ್ಟು ದಿನವಾದರೂ ಯಾಕೆ ತನಿಖೆ ಮಾಡಿಸಲಿಲ್ಲ? ಯಡಿಯೂರಪ್ಪನವರ ಆಪ್ತನ ಮೆಲೆ ದಾಳಿಯಾದಾಗ ದಾಖಲೆ ಸಿಕ್ಕಿತ್ತು, ಆವಾಗ ತನಿಖೆ ಮಾಡಿಸಬೇಕಿತ್ತಲ್ವಾ? ಇದು ಯಾವುದೂ ಜನರಿಗೆ ತಲುಪದಂತೆ ಸದ್ದಿಲ್ಲದೆ ಮುಚ್ಚಿ ಹಾಕುವ ಕೆಲಸ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಪೇ ಸಿಎಂ ಪೋಸ್ಟರ್ ಅಂಟಿಸಿದ ಆರೋಪದ ಮೇಲೆ ಪೊಲೀಸರು ಮಧ್ಯರಾತ್ರಿ ಕಾಂಗ್ರೆಸ್ ಕಾರ್ಯಕರ್ತರಾದ ಗಗನ್ ಯಾದವ್ ಮತ್ತು ಬಿ.ಆರ್ ನಾಯ್ಡು ಎಂಬುವವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...