Homeಮುಖಪುಟಜಾತಿಗಣತಿ ವರದಿ ಸ್ವೀಕರಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ಜಾತಿಗಣತಿ ವರದಿ ಸ್ವೀಕರಿಸುತ್ತೇವೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ 2015ರ ಏಪ್ರಿಲ್-ಮೇ ತಿಂಗಳಿನಲ್ಲಿ ನಡೆದಿರುವ ಕರ್ನಾಟಕ ರಾಜ್ಯದ ಜಾತಿಗಣತಿ ವರದಿಯನ್ನು ಸ್ವೀಕರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಹಲವು ಶತಮಾನಗಳಿಂದ ಅವಕಾಶ ವಂಚಿತರಾದವರಿಗೆ ಈಗ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು. ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ವಸ್ತು ಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಜಾತಿಗಣತಿಯ ಹಿನ್ನೆಲೆ

ಸಾವಿರಾರು ಜಾತಿಗಳಿಂದ ಕೂಡಿರುವ ಭಾರತದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ 1931ರ ಜನಗಣತಿಯೊಂದಿಗೆ ಜಾತಿಗಣತಿಯೂ ನಡೆದಿತ್ತು. ಅದಾಗಿ 90 ವರ್ಷ ಕಳೆದರೂ ದೇಶಾದ್ಯಂತ ಜಾತಿ ಗಣತಿ ನಡೆದೇ ಇಲ್ಲ. 1991ರ ನಂತರ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಬಿಸಿ ಮೀಸಲಾತಿ ಜಾರಿಯಾದ ನಂತರ ಜಾತಿಗಣತಿ ನಡೆಯಬೇಕೆಂದು ದೊಡ್ಡ ಒತ್ತಾಯಗಳು ಕೇಳಿಬಂದಿದ್ದರಿಂದ 2003-04ರಲ್ಲಿ ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಜಾತಿಗಣತಿಯ ಪೈಲೆಟ್ ಪ್ರಾಜೆಕ್ಟ್ ನಡೆಸಲು 21.5 ಕೋಟಿ ರೂ ಬಿಡುಗಡೆ ಮಾಡಿತ್ತು. ಆಗ ಕರ್ನಾಟಕದಲ್ಲಿ ಸಿದ್ದರಾಮಯ್ಯನವರು ಉಪ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರಾಗಿದ್ದರು. ಆಗ ಕರ್ನಾಟಕ ಸರ್ಕಾರ 1.5 ಕೋಟಿ ನೀಡಿತ್ತು. ಆದರೆ ಆಗಿನ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ಅದು ನಡೆಯಲಿಲ್ಲ. ನಂತರ ಮನಮೋಹನ್ ಸಿಂಗ್ ನೇತೃತ್ವದಲ್ಲಿ 2011ರ ನಂತರ ಪ್ರತ್ಯೇಕವಾಗಿ ಜಾತಿಗಣತಿ ನಡೆಸಲು ಮುಂದಾದರೂ ಅದು ಕೂಡ ನಡೆಯದೇ ನೆನೆಗುದ್ದಿಗೆ ಬಿದ್ದಿತು.

2013ರಲ್ಲಿ ಸಿದ್ದರಾಮಯ್ಯನವರು ಕರ್ನಾಟಕದ ಮುಖ್ಯಮಂತ್ರಿಯಾದಾಗ ಜಾತಿಗಣತಿಗಾಗಿ ಬಜೆಟ್‌ನಲ್ಲಿ 187 ಕೋಟಿ ರೂ ಬಿಡುಗಡೆ ಮಾಡಿದ್ದರು. ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ 2015ರ ಏಪ್ರಿಲ್-ಮೇ ತಿಂಗಳಿನಲ್ಲಿ 162 ಕೋಟಿ ರೂ ಖರ್ಚಿನಲ್ಲಿ ಜಾತಿಗಣತಿ ನಡೆದಿದ್ದು, ಸಮೀಕ್ಷಾ ವರದಿ ಸಿದ್ಧವಾಗಿದೆ. ಆದರೆ ಆ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗವು ಇದುವರೆಗೂ ಸರ್ಕಾರಕ್ಕೆ ಸಲ್ಲಿಸಿಲ್ಲ. ಸಿದ್ದರಾಮಯ್ಯ, ಕುಮಾರಸ್ವಾಮಿ, ಯಡಿಯೂರಪ್ಪ ಮತ್ತು ಬಸವರಾಜ್ ಬೊಮ್ಮಾಯಿ ಈ ನಾಲ್ವರು ಸಿಎಂಗಳು ಸಹ ವರದಿ ಸ್ವೀಕರಿಸದ ಕಾರಣ ಅದು ಆಯೋಗದ ಬಳಿಯೇ ಉಳಿದುಕೊಂಡಿದೆ. ಸದ್ಯ ಆ ವರದಿಯನ್ನು ಸ್ವೀಕರಿಸಿ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಕರ್ನಾಟಕ ಮಾದರಿಯಲ್ಲಿ ಬಿಹಾರ ರಾಜ್ಯದಲ್ಲಿ ಜಾತಿ ಗಣತಿ ನಡೆಸಲು ಅಲ್ಲಿನ ಸರ್ಕಾರ ನಿರ್ಧರಿಸಿದೆ. ಆದರೆ ಪಾಟ್ನಾ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಮುಂದಿನ ವಿಚಾರಣೆಯನ್ನು ಜುಲೈ 03ಕ್ಕೆ ನಿಗಧಿಗೊಳಿಸಿದೆ.

ಬಿಹಾರದ ಮಹಾಘಟಬಂಧನ ಸರ್ಕಾರ ರಾಜ್ಯದಲ್ಲಿ ಜಾತಿ ಗಣತಿ ನಡೆಸುವ ನಿರ್ಧಾರ ಕೈಗೊಂಡಿತ್ತು. ಎರಡು ಹಂತಗಳಲ್ಲಿ ಮನೆ ಮನೆ ಸರ್ವೇ ನಡೆಸುತ್ತಿದ್ದು ಜನವರಿಯಲ್ಲಿ ಮೊದಲ ಹಂತದ ಜಾತಿಗಣತಿ ಮುಗಿದಿದ್ದು, ಈ ಏಪ್ರಿಲ್-ಮೇ ತಿಂಗಳಿನಲ್ಲಿ ಎರಡನೇ ಹಂತದ ಗಣತಿ ನಡೆಯುತ್ತಿತ್ತು. ಈ ಯೋಜನೆಗೆ ಸುಮಾರು 500 ಕೋಟಿ ರೂ ಮೀಸಲಿಡಲಾಗಿದೆ.

ಆದರೆ ಜಾತಿ ಗಣತಿ ನಡೆಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ. ಬಿಹಾರ ಸರ್ಕಾರ ಈ ಗಣತಿಯಲ್ಲಿ ಸೂಕ್ತ ನಡಾವಳಿಗಳನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರದ ಜಾತಿ ಆಧಾರಿತ ಸಮೀಕ್ಷೆಯನ್ನು ಪ್ರಶ್ನಿಸಿ ಯೂತ್ ಫಾರ್ ಈಕ್ವಾಲಿಟಿ ಸೇರಿದಂತೆ ಮೂರು ಅರ್ಜಿಗಳನ್ನು ಸಲ್ಲಿಸಲಾಗಿತ್ತು.

ಇದನ್ನೂ ಓದಿ: ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆಗೆ ರಾಹುಲ್‌, ಖರ್ಗೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...