Homeಮುಖಪುಟಜಾತಿಗಣತಿ ವರದಿ ಸ್ವೀಕರಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ಜಾತಿಗಣತಿ ವರದಿ ಸ್ವೀಕರಿಸುತ್ತೇವೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ 2015ರ ಏಪ್ರಿಲ್-ಮೇ ತಿಂಗಳಿನಲ್ಲಿ ನಡೆದಿರುವ ಕರ್ನಾಟಕ ರಾಜ್ಯದ ಜಾತಿಗಣತಿ ವರದಿಯನ್ನು ಸ್ವೀಕರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಹಲವು ಶತಮಾನಗಳಿಂದ ಅವಕಾಶ ವಂಚಿತರಾದವರಿಗೆ ಈಗ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು. ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ವಸ್ತು ಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಜಾತಿಗಣತಿಯ ಹಿನ್ನೆಲೆ

ಸಾವಿರಾರು ಜಾತಿಗಳಿಂದ ಕೂಡಿರುವ ಭಾರತದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ 1931ರ ಜನಗಣತಿಯೊಂದಿಗೆ ಜಾತಿಗಣತಿಯೂ ನಡೆದಿತ್ತು. ಅದಾಗಿ 90 ವರ್ಷ ಕಳೆದರೂ ದೇಶಾದ್ಯಂತ ಜಾತಿ ಗಣತಿ ನಡೆದೇ ಇಲ್ಲ. 1991ರ ನಂತರ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಬಿಸಿ ಮೀಸಲಾತಿ ಜಾರಿಯಾದ ನಂತರ ಜಾತಿಗಣತಿ ನಡೆಯಬೇಕೆಂದು ದೊಡ್ಡ ಒತ್ತಾಯಗಳು ಕೇಳಿಬಂದಿದ್ದರಿಂದ 2003-04ರಲ್ಲಿ ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಜಾತಿಗಣತಿಯ ಪೈಲೆಟ್ ಪ್ರಾಜೆಕ್ಟ್ ನಡೆಸಲು 21.5 ಕೋಟಿ ರೂ ಬಿಡುಗಡೆ ಮಾಡಿತ್ತು. ಆಗ ಕರ್ನಾಟಕದಲ್ಲಿ ಸಿದ್ದರಾಮಯ್ಯನವರು ಉಪ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರಾಗಿದ್ದರು. ಆಗ ಕರ್ನಾಟಕ ಸರ್ಕಾರ 1.5 ಕೋಟಿ ನೀಡಿತ್ತು. ಆದರೆ ಆಗಿನ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ಅದು ನಡೆಯಲಿಲ್ಲ. ನಂತರ ಮನಮೋಹನ್ ಸಿಂಗ್ ನೇತೃತ್ವದಲ್ಲಿ 2011ರ ನಂತರ ಪ್ರತ್ಯೇಕವಾಗಿ ಜಾತಿಗಣತಿ ನಡೆಸಲು ಮುಂದಾದರೂ ಅದು ಕೂಡ ನಡೆಯದೇ ನೆನೆಗುದ್ದಿಗೆ ಬಿದ್ದಿತು.

2013ರಲ್ಲಿ ಸಿದ್ದರಾಮಯ್ಯನವರು ಕರ್ನಾಟಕದ ಮುಖ್ಯಮಂತ್ರಿಯಾದಾಗ ಜಾತಿಗಣತಿಗಾಗಿ ಬಜೆಟ್‌ನಲ್ಲಿ 187 ಕೋಟಿ ರೂ ಬಿಡುಗಡೆ ಮಾಡಿದ್ದರು. ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ 2015ರ ಏಪ್ರಿಲ್-ಮೇ ತಿಂಗಳಿನಲ್ಲಿ 162 ಕೋಟಿ ರೂ ಖರ್ಚಿನಲ್ಲಿ ಜಾತಿಗಣತಿ ನಡೆದಿದ್ದು, ಸಮೀಕ್ಷಾ ವರದಿ ಸಿದ್ಧವಾಗಿದೆ. ಆದರೆ ಆ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗವು ಇದುವರೆಗೂ ಸರ್ಕಾರಕ್ಕೆ ಸಲ್ಲಿಸಿಲ್ಲ. ಸಿದ್ದರಾಮಯ್ಯ, ಕುಮಾರಸ್ವಾಮಿ, ಯಡಿಯೂರಪ್ಪ ಮತ್ತು ಬಸವರಾಜ್ ಬೊಮ್ಮಾಯಿ ಈ ನಾಲ್ವರು ಸಿಎಂಗಳು ಸಹ ವರದಿ ಸ್ವೀಕರಿಸದ ಕಾರಣ ಅದು ಆಯೋಗದ ಬಳಿಯೇ ಉಳಿದುಕೊಂಡಿದೆ. ಸದ್ಯ ಆ ವರದಿಯನ್ನು ಸ್ವೀಕರಿಸಿ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಕರ್ನಾಟಕ ಮಾದರಿಯಲ್ಲಿ ಬಿಹಾರ ರಾಜ್ಯದಲ್ಲಿ ಜಾತಿ ಗಣತಿ ನಡೆಸಲು ಅಲ್ಲಿನ ಸರ್ಕಾರ ನಿರ್ಧರಿಸಿದೆ. ಆದರೆ ಪಾಟ್ನಾ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಮುಂದಿನ ವಿಚಾರಣೆಯನ್ನು ಜುಲೈ 03ಕ್ಕೆ ನಿಗಧಿಗೊಳಿಸಿದೆ.

ಬಿಹಾರದ ಮಹಾಘಟಬಂಧನ ಸರ್ಕಾರ ರಾಜ್ಯದಲ್ಲಿ ಜಾತಿ ಗಣತಿ ನಡೆಸುವ ನಿರ್ಧಾರ ಕೈಗೊಂಡಿತ್ತು. ಎರಡು ಹಂತಗಳಲ್ಲಿ ಮನೆ ಮನೆ ಸರ್ವೇ ನಡೆಸುತ್ತಿದ್ದು ಜನವರಿಯಲ್ಲಿ ಮೊದಲ ಹಂತದ ಜಾತಿಗಣತಿ ಮುಗಿದಿದ್ದು, ಈ ಏಪ್ರಿಲ್-ಮೇ ತಿಂಗಳಿನಲ್ಲಿ ಎರಡನೇ ಹಂತದ ಗಣತಿ ನಡೆಯುತ್ತಿತ್ತು. ಈ ಯೋಜನೆಗೆ ಸುಮಾರು 500 ಕೋಟಿ ರೂ ಮೀಸಲಿಡಲಾಗಿದೆ.

ಆದರೆ ಜಾತಿ ಗಣತಿ ನಡೆಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ. ಬಿಹಾರ ಸರ್ಕಾರ ಈ ಗಣತಿಯಲ್ಲಿ ಸೂಕ್ತ ನಡಾವಳಿಗಳನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರದ ಜಾತಿ ಆಧಾರಿತ ಸಮೀಕ್ಷೆಯನ್ನು ಪ್ರಶ್ನಿಸಿ ಯೂತ್ ಫಾರ್ ಈಕ್ವಾಲಿಟಿ ಸೇರಿದಂತೆ ಮೂರು ಅರ್ಜಿಗಳನ್ನು ಸಲ್ಲಿಸಲಾಗಿತ್ತು.

ಇದನ್ನೂ ಓದಿ: ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆಗೆ ರಾಹುಲ್‌, ಖರ್ಗೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...